ಕ್ರೀಡೆ
ಭಾರತದ ಜಯದ ಗುರಿಗೆ 1 ವಿಕೆಟ್ ಬಾಕಿ

ಸುದ್ದಿದಿನ, ನಾಟಿಂಗ್ ಹ್ಯಾಮ್: ವೇಗಿ ಜಸ್ ಪ್ರೀತ್ ಬೂಮ್ರಾ ದಾಳಿಗೆ ತತ್ತರಿಸಿದ ಆತಿಥೇಯ ಇಂಗ್ಲೆಂಡ್ ತಂಡ, ಇಲ್ಲಿ ನಡೆಯುತ್ತಿರುವ 3 ನೇ ಟೆಸ್ಟ್ ನಲ್ಲಿ ಸೋಲಿನ ಸುಳಿಗೆ ಸಿಲುಕಿದೆ. ಮೊದಲ ಇನ್ನಿಂಗ್ಸ್ ನಲ್ಲಿ 168 ರನ್ ಗಳ ಮುನ್ನಡೆ ಯೊಂದಿಗೆ ದ್ವಿತೀಯ ಇನ್ನಿಂಗ್ಸ್ನಲ್ಲಿ 7 ವಿಕೆಟ್ ಗೆ 352 ಡಿಕ್ಲೇರ್ ಮಾಡಿಕೊಂಡಿದ್ದ ಭಾರತ, ಇಂಗ್ಲೆಂಡ್ ಗೆ ದಾಖಲೆಯ 521 ರನ್ ಗಳ ಗುರಿ ನೀಡಿತ್ತು.
4 ನೇ ದಿನವಾದ ಮಂಗಳವಾರ ವಿಕೆಟ್ ನಷ್ಟವಿಲ್ಲದೇ 23 ರನ್ ಗಳಿಂದ ದ್ವಿತೀಯ ಇನ್ನಿಂಗ್ಸ್ ಮುಂದುವರೆಸಿದ ಇಂಗ್ಲೆಂಡ್ ದಿನದಂತ್ಯಕ್ಕೆ 9 ವಿಕೆಟ್ ಗೆ 311 ರನ್ ಗಳಿಸಿತು. ಇಂಗ್ಲೆಂಡ್ ಇನ್ನೂ 210 ರನ್ ಗಳ ಹಿನ್ನಡೆಯಲ್ಲಿದೆ. 5 ನೇ ಮತ್ತು ಕೊನೆಯ ದಿನವಾದ ಬುಧವಾರ ಇಂಗ್ಲೆಂಡ್ 1 ವಿಕೆಟ್ ನಲ್ಲಿ 210 ರನ್ ಗಳ ಗುರಿ ತಲುಪುವುದು ಅಸಾಧ್ಯ ವಾಗಿದೆ.
ಅದ್ಭುತ ದಾಳಿ ಸಂಘಟಿಸಿದ ಯುವ ವೇಗಿ ಬೂಮ್ರಾ 85 ರನ್ ಗಳಿಗೆ 5 ವಿಕೆಟ್ ಕಿತ್ತು ಯಶಸ್ವಿ ಬೌಲರ್ ಎನಿಸಿದರು. ಇಂಗ್ಲೆಂಡ್ ಪರ ಜೋಸ್ ಬಟ್ಲರ್ 106, ಆಲ್ರೌಂಡರ್ ಬೆನ್ ಸ್ಟೋಕ್ಸ್ 62 ರನ್ ಗಳಿಸಿದರು. ಇದು ಸೇರಿದಂತೆ ಬಟ್ಲರ್ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ಒಂದರಲ್ಲಿ 8 ಬಾರಿ 60 ಕ್ಕೂ ಹೆಚ್ಚು ರನ್ ದಾಖಲಿಸಿದ ಶ್ರೇಯ ಪಡೆದರು.
ಸಂಕ್ಷಿಪ್ತ ಸ್ಕೋರ್
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ದಾವಣಗೆರೆ | ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019

ಸುದ್ದಿದಿನ,ದಾವಣಗೆರೆ : ಜಿಲ್ಲಾ ಪೊಲೀಸ್ ವತಿಯಿಂದ ಡಿ.09 ರಿಂದ 11 ರಂದು ರವರೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಡಿ.ಎ.ಆರ್, ದಾವಣಗೆರೆ ಇಲ್ಲಿ ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಡಿ.9 ರ ಬೆಳಿಗ್ಗೆ 8 ಗಂಟೆಗೆ ಇದೇ ಸ್ಥಳದಲ್ಲಿ ಉದ್ಘಾಟನಾ ಕಾರ್ಯಕ್ರಮವಿದ್ದು, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಶರಣಪ್ಪ.ವಿ.ಹಲಸೆ ಉದ್ಘಾಟಿಸುವರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಡಿ.11 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಗಿದ್ದು, ಮುಖ್ಯ ಅತಿಥಿಗಳಾಗಿ ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಅಮ್ರಿತ್ ಪಾಲ್ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ವೇಣುಗೋಪಾಲ್ ಗೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ : ನಗರದ ಕ್ರೀಡಾ ವಸತಿ ನಿಲಯದ ಕ್ರೀಡಾಪಟುವಾದ ವೇಣುಗೋಪಾಲ್ ಎಸ್ ಇವರು ಇತ್ತೀಚೆಗೆ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷದೊಳಗಿನ ಬಾಲಕರ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ಸ್ ಸ್ಪರ್ಧೆಯ 400 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.
ಡಿ.04 ರಿಂದ 08 ರವರೆಗೆ ಪಂಜಾಬ್ನ ಸಂಗ್ರೂರ್ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗೆ ರಾಜ್ಯ ತಂಡದಿಂದ ಇವರು ಆಯ್ಕೆಯಾಗಿರುತ್ತಾರೆ. ಈ ಕ್ರೀಡಾಪಟುವು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ಶ್ರೀನಿವಾಸ್ ಮತ್ತು ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಕಬಡ್ಡಿ ಪಂದ್ಯಾವಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ಗೆ ದ್ವಿತೀಯ ಸ್ಥಾನ

ಸುದ್ದಿದಿನ,ದಾವಣಗೆರೆ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಕ್ರೀಡಾಪಟುಗಳಿಗೆ ಪ್ರಾಂಶುಪಾಲರಾದ ತೂ.ಕ.ಶಂಕರಯ್ಯ, ವ್ಯವಸ್ಥಾಪಕ ಎಸ್.ಆರ್ ಭಜಂತ್ರಿ, ಪ್ರೊಪೆಸರುಗಳಾದ ಭೀಮಣ್ಣ ಸುಣಗಾರ್, ರುದ್ರಪ್ಪ, ಗೌರಮ್ಮ, ವಿರೇಶ, ಡಾ.ಮಂಜಣ್ಣ ಹಾಗೂ ಡಾ.ಶಾಂತಕುಮಾರಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ : ಎನ್ಕೌಂಟರ್ ಆದ ಆರೋಪಿಯ ಪತ್ನಿ
-
ಬಹಿರಂಗ3 days ago
ಜಾತಿಯಲ್ಲಿ ಕರಗಿಹೋದ ಮತ್ತೊಬ್ಬಳು ‘ಪ್ರಿಯಾಂಕ’
-
ರಾಜಕೀಯ7 days ago
ಮಹಾರಾಷ್ಟ್ರದ ಹೀನಾಯ ಸೋಲಿನಲ್ಲಿ ಬಟ್ಟಬಯಲಾದ ಬಿಜೆಪಿ-ಆರೆಸ್ಸೆಸ್
-
ಬಹಿರಂಗ6 days ago
ಕಾಮಾಟಿಪುರದ ದಲಿತ ಮಹಿಳೆಯರನ್ನುದ್ದೇಶಿಸಿ ಅಂಬೇಡ್ಕರ್
-
ರಾಜಕೀಯ7 days ago
ಅನರ್ಹರನ್ನು ತಿರಸ್ಕರಿಸಿ, ತಕ್ಕ ಪಾಠ ಕಲಿಸಿ : ಮತದಾರರಿಗೆ ಸಿದ್ದರಾಮಯ್ಯ ಮನವಿ
-
ಲೈಫ್ ಸ್ಟೈಲ್7 days ago
‘ನಾಗಾರ್ಜುನ ಆಯುರ್ವೇದ’ ಕಂಪನಿಯ ಹೊಸ ಉತ್ಪನ್ನ ಮಾರುಕಟ್ಟೆಗೆ
-
ದಿನದ ಸುದ್ದಿ7 days ago
ಕೆ.ಎಸ್. ಆರ್. ಟಿ.ಸಿ. ಬಸ್ ನಲ್ಲಿ ಹೆರಿಗೆ : ಮಾನವೀಯತೆ ಮೆರೆದ ಮಸ್ತಾನಬಿ ಮತ್ತು ಸಂಗಡಿಗರು
-
ಅಂತರಂಗ3 days ago
ತನ್ನಿಮಿತ್ತ : ಪುಸ್ತಕಗಳ ಮಧ್ಯೆ ಪ್ರಾಣ ಬಿಟ್ಟ ಅಂಬೇಡ್ಕರ್