ಕ್ರೀಡೆ
ಇಂದಿನಿಂದ ‘ಯುಎಸ್ ಓಪನ್ ಗ್ರ್ಯಾಂಡ್ ಸ್ಲಾಮ್’
ಸುದ್ದಿದಿನ, ನ್ಯೂಯಾರ್ಕ್: ಸೋಮವಾರ ದಿಂದ ಇಲ್ಲಿನ ಬಿಲ್ಲಿ ಜೀನ್ ಕಿಂಗ್ ರಾಷ್ಟ್ರೀಯ ಟೆನಿಸ್ ಸೆಂಟರ್ ನಲ್ಲಿ ಈ ವರ್ಷಾಂತ್ಯದ ಗ್ರ್ಯಾಂಡ್ ಸ್ಲಾಮ್ ಯುಎಸ್ ಓಪನ್ ಟೆನಿಸ್ ಟೂರ್ನಿ ನಡೆಯಲಿದೆ.
ಪುರುಷರ ವಿಭಾಗದಲ್ಲಿ ಸರ್ಬಿಯಾದ ನೊವಾಕ್ ಜೋಕೊವಿಚ್, ಕ್ಲೇ ಕೋರ್ಟ್ ಕಿಂಗ್ ಸ್ಪೇನ್ ನ ರಾಫೆಲ್ ನಡಾಲ್, ಸ್ವಿಜರ್ ಲೆಂಡ್ ನ ರೋಜರ್ ಫೆಡರರ್ ಮತ್ತು ಬ್ರಿಟನ್ನಿನ ಆ್ಯಂಡಿ ಮರ್ರೆ ಪ್ರಮುಖ ಆಟಗಾರರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಸ್ಪೇನ್ ಗೂಳಿ ರಾಫಾ-ಜೋಕೊಗೆ ನೇರ ಫೈಟ್
ಕ್ಲೇ ಕೋರ್ಟ್ ಕಿಂಗ್ ಎನಿಸಿರುವ ರಾಫೆಲ್ ನಡಾಲ್ ಮತ್ತು ಸರ್ಬಿಯಾದ ನೊವಾಕ್ ಜೋಕೊವಿಚ್ ಗೆ ಯುಎಸ್ ಓಪನ್ನಲ್ಲಿ ನೇರ ಹಣಾಹಣಿ ಏರ್ಪಡುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ.
ಫ್ರೆಂಚ್ ಓಪನ್ ಗೆದ್ದಿದ್ದ ನಡಾಲ್ ಈಗ ಯುಎಸ್ ಓಪನ್ನಲ್ಲಿ ಅದೇ ಪ್ರದರ್ಶನದ ಉತ್ಸಾಹಲ್ಲಿದ್ದಾರೆ. ಗಾಯದಿಂದ ಚೇತರಿಸಿಕೊಂಡ ಬಳಿಕ ಪ್ರಭಾವಿ ಪ್ರದರ್ಶನ ದಿಂದ ಗಮನ ಸೆಳೆಯುತ್ತಿರುವ ಜೋಕೊ ಪ್ರಶಸ್ತಿ ಗೆಲ್ಲುವ ನೆಚ್ಚಿನ ಆಟಗಾರ ಎನಿಸಿದ್ದಾರೆ. ಇತ್ತೀಚೆಗಷ್ಟೇ ಜೋಕೊ, ಸಿನ್ಸಿನಾಟಿ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸ್ವಿಸ್ ನ ಫೆಡರರ್ ಎದುರು ಗೆಲುವು ಸಾಧಿಸಿ ಟ್ರೋಫಿ ಜಯಿಸಿದ್ದರು. ಅಲ್ಲದೇ ವಿಂಬಲ್ಡನ್ ಕೂಡ ಜೋಕೊ ಮುಡಿಗೇರಿಸಿಕೊಂಡಿದ್ದರು. ಇದೀಗ ಯುಎಸ್ ಓಪನ್ ಜಯಿಸುವ ಮೂಲಕ ಮತ್ತೆ ಅಗ್ರ ಶ್ರೇಯಾಂಕ ಪಡೆಯುವ ಇರಾದೆ ಜೋಕೊ ಅವರದ್ದಾಗಿದೆ.
ಪ್ರಮುಖ ಟೂರ್ನಿಯ ನಿರ್ಣಾಯಕ ಸುತ್ತಿನಲ್ಲಿ ಸೋಲುತ್ತಿರುವ ಫೆಡರರ್ ಗೆ ಟೆನಿಸ್ ನಿಂದ ನಿವೃತ್ತಿ ಪಡೆಯುವಂತೆ ಅಭಿಮಾನಿಗಳು ಸಲಹೆ ನೀಡಿದ್ದಾರೆ. ಆದರೆ ಫೆಡರರ್ ಯುಎಸ್ ಓಪನ್ ಗೆಲ್ಲುವ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಲು ಕಾಯುತ್ತಿದ್ದಾರೆ.
ಕಳೆದ ಜನವರಿಯಿಂದ ಇಲ್ಲಿಯವರೆಗೂ ಟೆನಿಸ್ ನಿಂದ ದೂರ ಉಳಿದಿರುವ ಆ್ಯಂಡಿ ಮರ್ರೆಗೆ ಇದು ಈ ವರ್ಷದ ಮೊದಲ ಗ್ರ್ಯಾಂಡ್ ಸ್ಲಾಮ್ ಆಗಿದೆ. ಹಾಗೆ ಕಳೆದ 8 ತಿಂಗಳಿಂದ ಗಾಯದ ಸಮಸ್ಯೆಯಿಂದ ದೂರ ಉಳಿದಿದ್ದ ಸ್ಟಾನಿಸ್ಲಸ್ ವಾವ್ರಿಂಕಾ ಕೂಡಾ ಈ ಬಾರಿಯ ಯುಎಸ್ ಓಪನ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನೂ ಮಹಿಳಾ ವಿಭಾಗದಲ್ಲಿ ಸೆರೆನಾ ವಿಲಿಯಮ್ಸ್, ಸಿಮೊನಾ ಹಾಲೆಪ್, ಮರಿಯಾ ಶರಪೋವಾ, ಕರೋಲಿನಾ ವೋಜ್ನಿಯಾಕಿ, ಪ್ಲಿಸ್ಕೋವಾ, ಹಾಲಿ ಚಾಂಪಿಯನ್ ಅಮೆರಿಕದ ಸ್ಲೋನೆ ಸ್ಟೆಫನ್ಸ್ ಪ್ರಶಸ್ತಿ ರೇಸ್ ನಲ್ಲಿ ದ್ದಾರೆ.
ಈ ಬಾರಿ ಎಲ್ಲರ ಕಣ್ಣು ಸೆರೆನಾ ಮೇಲೆ ನೆಟ್ಟಿದೆ. ಏಕೆಂದರೆ ಸೆರೆನಾ ತಾಯಿಯಾದ ಬಳಿಕ 2 ನೇ ಗ್ರ್ಯಾಂಡ್ ಸ್ಲಾಮ್ ನಲ್ಲಿ ಆಡುತ್ತಿದ್ದಾರೆ. ಅಲ್ಲದೇ 6 ಬಾರಿ ಯುಎಸ್ ಓಪನ್ ಗೆದ್ದಿರುವ ಸೆರೆನಾ 7 ನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದಾರೆ. ಈ ಅಂಗಣದಲ್ಲಿ ಸೆರೆನಾ ಸಾಕಷ್ಟು ದಾಖಲೆಗಳನ್ನು ನಿರ್ಮಿಸಿದ್ದಾರೆ. 23 ಗ್ರ್ಯಾಂಡ್ ಸ್ಲಾಮ್ ಗೆದ್ದಿರುವ ಸೆರೆನಾ ಈ ಬಾರಿ ಯುಎಸ್ ಓಪನ್ ಚಾಂಪಿಯನ್ ಆದರೆ, ದಾಖಲೆ ಗ್ರ್ಯಾಂಡ್ ಸ್ಲಾಮ್ ಗೆದ್ದ ಆಟಗಾರ್ತಿ ಎನಿಸಲಿದ್ದಾರೆ.
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಅಭಿಮಾನಿಗಳೊಂದಿಗೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ‘ಸ್ಟಾರ್ ಟಾಕ್’ ಕಾರ್ಯಕ್ರಮ
ಸುದ್ದಿದಿನ,ಬೆಂಗಳೂರು : ಜಗತ್ತಿನ ಅತ್ಯುನ್ನತ ಅಥ್ಲೆಟ್ ಗಳಿಂದ ಸ್ಫೂರ್ತಿ ಪಡೆದ ಕ್ರೀಡಾ ಉಡುಪುಗಳ ಬ್ರಾಂಡ್ – ಪರಿಮ್ಯಾಚ್ ಸ್ಪೋರ್ಟ್ಸ್ ಬೆಂಗಳೂರಿನ ಮಂತ್ರಿ ಸ್ಟೋರ್ ಮಾಲ್ನಲ್ಲಿ ಭಾನುವಾರ ಖ್ಯಾತ ಕ್ರಿಕೆಟಿಗೆ ದಿನೇಶ್ ಕಾರ್ತಿಕ ಅವರೊಂದಿಗೆ ಅಭಿಮಾನಿಗಳ ಪ್ರತ್ಯೇಕ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಪರಿಮ್ಯಾಚ್ ಸ್ಪೋರ್ಟ್ಸ್ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿರುವ ದಿನೇಶ್ ಕಾರ್ತಿಕ್ ಅವರು ಅಭಿಮಾನಿಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡರಲ್ಲದೇ ಪ್ರಶೋತ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಗೂ ಸಂವಾದ ನಡೆಸಿದರು.
ಕ್ರಿಕೆಟ್ ಕ್ಷೇತ್ರದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ದಿನೇಶ್ ಕಾರ್ತಿಕ್ ಅವರ ಅಸಾಧಾರಣ ಕೌಶಲ್ಯಗಳಿಗೆ ಖ್ಯಾತಿ ಹೊಂದಿದ್ದಾರಲ್ಲದೇ ಅದರಲ್ಲೂ ಮುಖ್ಯವಾಗಿ ಪಂದ್ಯದ ಅಂತಿಮ ಓವರ್ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಹೆಸರಾಗಿದ್ದಾರೆ. ಭಾರರತದ ಅಂತಾರಾಷ್ಟ್ರೀಯ ಟಿ29 ತಂಡದಲ್ಲಿ ಕಾರ್ತಿಕ ಅತ್ಯಂತ ಪ್ರಮುಖ ಆಟಗಾರರಾಗಿದ್ದಾರೆ. ಅವರ ಅಸಾಧಾರಣ ವೇಗ ಮತ್ತು ಸ್ವಿಂಗ್ಗಳು ಜಗತ್ತಿನ ಕೆಲವು ಅಗ್ರ ಬ್ಯಾಟ್ಸ್ಮನ್ಗಳಿಗೆ ಸತತವಾಗಿ ಸವಾಲೆಸೆಯುತ್ತಿವೆ.
ಈ ಸಂದರ್ಭದಲ್ಲಿ ದಿನೇಶ್ ಕಾರ್ತಿಕ ಅವರು ಮುಂಬರಲಿರುವ ಕ್ರಿಕೆಟ್ ಋತುವಿಗೆ ತಮ್ಮ ವೈಯಕ್ತಿಕ ಗುರಿಗಳ ಕುರಿತು ಒಳನೋಟಗಳನ್ನು ಹಂಚಿಕೊಂಡರು. ಅಲ್ಲದೇ ಪ್ರದರ್ಶನದ ಒತ್ತಡವನ್ನು ಯಶಸ್ವಿಯಾಗಿ ನಿಭಾಯಿಸುವುದಕ್ಕಾಗಿ ಅಶ್ಲೀಟ್ಗಳು ಬಳಸಿಕೊಳ್ಳುವ ಕಾರ್ಯತಂತ್ರಗಳನ್ನು ಕುರಿತು ತಿಳಿಸಿದರು.
ಚರ್ಚೆಯ ಗಮನಾರ್ಹವಾದ ಮುಖ್ಯಾಂಶ ಎಂದರೆ ಅದು ಪರಿಮ್ಯಾಚ್ ಸ್ಪೋರ್ಟ್ಸ್ನೊಂದಿಗೆ ಅವರ ಪಾಲುದಾರಿಕೆ ಕುರಿತ ಚರ್ಚೆಯಾಗಿತ್ತು. ಇದರಲ್ಲಿ ಕಾರ್ತಿಕ್ ಅವರ ಕ್ರೀಡಾ ಮಹತ್ವಾಕಾಂಕ್ಷೆಗಳಿಗೆ ಬ್ರಾಂಡ್ನ ಅಚಲ ಬೆಂಬಲ ಕುರಿತು ಅವರು ಒತ್ತಿ ಹೇಳಿದರು. ತಮ್ಮ ಪ್ರತ್ಯೇಕವಾದ ಸ್ಪೋರ್ಟ್ಸ್ ವೇರ್ ಶ್ರೇಣಿಯಲ್ಲಿನ ಪೊಲೊ ಶರ್ಟ್ ಅನ್ನು ಕಾರ್ತಿಕ ಹೆಮ್ಮೆಯಿಂದ ಧರಿಸಿದ್ದರು. ಈ ಶ್ರೇಣಿ ಪರಿಮ್ಯಾಚ್ ಸ್ಪೋರ್ಟ್ಸ್ ನೊಂದಿಗೆ ಜಂಟಿ ಯೋಜನೆಯಾಗಿದೆ. ಕಾರ್ತಿಕ್ ಅವರಿಗೆ ಕ್ರೀಡೆ ಕುರಿತು ಇರುವ ಅಚಲ ಭಾವೋತ್ಸಾಹ ಮತ್ತು ಅವರ ಅನನ್ಯ ಶೈಲಿಯನ್ನು ಇದು ಬಿಂಬಿಸುತ್ತದೆ.
“ಡೇರ್ ಟು ಬಿ ಎ ಚಾಂಪಿಯನ್” ಎಂಬ ಹೊಸ ಬ್ರಾಂಡ್ ಅಭಿಯಾನಕ್ಕೆ ಸಮರ್ಪಿತವಾದ ಇತ್ತೀಚಿನ ಪರಿಮ್ಯಾಚ್ ಕ್ರೀಡಾ ಬ್ರಾಂಡ್ ವಿಡಿಯೋಗಾಗಿ ಚಿತ್ರೀಕರಣದ ಸಂದರ್ಭದಲ್ಲಿನ ತಮ್ಮ ಅನುಭವವನ್ನು ಕೂಡ ಅವರು ಹಂಚಿಕೊಂಡರು.
ಪರಿಮ್ಯಾಚ್ ಸ್ಪೋರ್ಟ್ಸ್ ಕುರಿತು : ಜಗತ್ತಿನ ಆಗ್ರಮಾನ್ಯ ಅಶ್ಲೀಟ್ಗಳಿಂದ ಸ್ಪೂರ್ತಿ ಪಡೆದ ಅತ್ಯುನ್ನತ ಗುಣಮಟ್ಟದ ಕ್ರೀಡಾ ಉಡುಪುಗಳ ಬ್ರಾಂಡ್ ಪರಿಮ್ಯಾಚ್ ಸ್ಪೋರ್ಟ್ಸ್ ಆಗಿದೆ.
ಪ್ರತಿ ಧೈರ್ಯಶಾಲಿ ಆಥೀಟ್ಗಳು ತಮ್ಮ ಗೆಲುವಿನ ಮಾರ್ಗದಲ್ಲಿ ಸಜ್ಜಾಗಿ ಇರುವಂತೆ ಇವುಗಳನ್ನು ವಿನ್ಯಾಸಗೊಳಿಸಲಾಗಿರುತ್ತದೆ. ಮೂಲವಾಗಿ ಕ್ರೀಡೆ ಕುರಿತ ಭಾವೋತ್ಸಾಹದೊಂದಿಗೆ ಪರಿಮ್ಯಾಚ್ ಸ್ಪೋರ್ಟ್ಸ್ ಪ್ರೊ-ಆನ್-ಫೀಲ್ಡ್ ಕಿಟ್ಗಳನ್ನು ಫುಟ್ಬಾಲ್ ಮತ್ತು ಕ್ರಿಕೆಟ್ ತಂಡಗಳಿಗಾಗಿ ಸೃಷ್ಟಿಸುತ್ತಿದೆ. ಜೊತೆಗೆ ಫ್ಯಾನ್ಗಳಿಗೆ ಪ್ರತಿದಿನದ ವರ್ಕ್ ಔಟ್ ಉಡುಪುಗಳ ಸಮಗ್ರ ಶೈಲಿಯನ್ನು ಸಾದರಪಡಿಸುತ್ತಿದೆ.
ಇದರ ಪ್ರತ್ಯೇಕ ವಿನ್ಯಾಸದೊಂದಿಗೆ ಈ ಉಡುಪುಗಳು ಗುಂಪಿನಲ್ಲಿ ಪ್ರತ್ಯೇಕವಾದ ಸ್ಥಾನ ಕಂಡುಕೊಳ್ಳುತ್ತವೆ. ಜಗತ್ತಿನ ಅಗ್ರ ಅಥ್ಲೆಟ್ಗಳು ಮತ್ತು ಅವರು ಕ್ರೀಡಾಂಗಣದಲ್ಲಿ ಗಳಿಸಿದ ವಿಜಯಗಳಿಂದ ಈ ಶ್ರೇಣಿ ಸ್ಫೂರ್ತಿ ಪಡೆದಿದೆ. ಕ್ರೀಡೆ ಕುರಿತಂತೆ ಭಾರತದ ಪ್ರೀತಿಯನ್ನು ವಿಸ್ತರಿಸುವ ಮತ್ತು ಅದನ್ನು ಸಂಪೂರ್ಣ ನೂತನ ಮಟ್ಟಕ್ಕೆ ತರುವ ಮಹತ್ವಾಕಾಂಕ್ಷೆಯ ಗುರಿ ಸಾಧಿಸುವ ಮಾರ್ಗದಲ್ಲಿ ಪರಿಮ್ಯಾಚ್ ಸ್ಪೋರ್ಟ್ಸ್ ಸಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಪೆಪ್ಪರ್ ಇಂಟರಾಕ್ಟಿವ್ ಕಮ್ಯುನಿಕೇಷನ್ಸ್,
- karishma@pepperinteractive.in। +91 98333 28499
– gl janaki@pepperinteractive.in। +91 97414 10688
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ವಾಲಿಬಾಲ್ ಪಂದ್ಯಾವಳಿ | ಹೊಸದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ
ಸುದ್ದಿದಿನ, ಹೊನ್ನಾಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಪುರುಷ ಮತ್ತು ಮಹಿಳೆಯರ ಪಂದ್ಯಾವಳಿಯನ್ನುಇದೇ 17-18 ರಂದು ಆಯೋಜಿಸಲಾಗಿತ್ತು.
ಈ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸದುರ್ಗ ಪ್ರಥಮ ಸ್ಥಾನ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ದ್ವಿತೀಯ ಸ್ಥಾನ, ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ತೃತೀಯ ಸ್ಥಾನ, ಶ್ರೀ ಶಿವಲಿಂಗೇಶ್ವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಗಿರಿ ನಾಲ್ಕನೇ ಸ್ಥಾನವನ್ನು ಪಡೆದು ಕಾಲೇಜಿಗೆ ಮತ್ತು ವಿಶ್ವ ವಿದ್ಯಾನಿಲಯಕ್ಕೆ ಕೀರ್ತಿ ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಜಿ ಧನಂಜಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.
ಈ ಸಮಾರಂಭದಲ್ಲಿ ಪ್ರೊ. ಡಿ ಸಿ ಪಾಟೀಲ್, ಗ್ರಂಥಪಾಲಕರಾದ ಪ್ರೊ. ಎಂ ನಾಗರಾಜ ನಾಯ್ಕ ಕ್ರೀಡಾ ಆಯೋಜಕರಾದ ಡಾ. ಹರೀಶ ಪಿ ಎಸ್, ಬೆಳ್ಳುಳ್ಳಿ ಕೊಟ್ರೇಶ, ಹೆಚ್ ವಿ ಗೀತಾ, ಅಮೂಲ್ಯ ಆರ್ ಹೆಚ್, ಡಾ. ಮಂಜುನಾಥ ಗುರು ವಿ ಜಿ ದಾವಣಗೆರೆ ವಿಶ್ವವಿದ್ಯಾನಿಲಯ ಕ್ರೀಡಾಧಿಕಾರಿಗಳಾದ ಡಾ. ವೀರಪ್ಪ ಬಿ ಹೆಚ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಡಾ. ಚಂದ್ರಶೇಖರ್ ಸಿ, ಡಾ. ರೇಖಾ ಎಂ ಆರ್, ಗಿರೀಶ್ ಎಂ ಎಸ್, ಬಾಲಚಂದ್ರಣ್ಣ ಬಿ. ಆರ್. ಕಲ್ಲೇಶಪ್ಪ ಹರೀಶ್ ಕೆ ಎಂ , ತೀರ್ಪುಗಾರರಾದ ಆಶಿಕ್ ಮತ್ತು ಕಲೀಲ್, ಇಬ್ರಾಹಿಂ ಜಾಫರ್ ಮುಖ್ಯ ಮುಖ್ಯ ತೀರ್ಪುಗಾರರಾದ ಪರಮೇಶ್ವರಪ್ಪ ಮತ್ತು ನಮ್ಮ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?