Connect with us

ದಿನದ ಸುದ್ದಿ

ಯಾರು ಈ ಬಿ ಎಂ ಬಶೀರ್ ? ಏನಿದು ವಾರ್ತಾಭಾರತಿ ? ನಾಡು ನುಡಿಗೆ ಇವರ ಕೊಡುಗೆ ಏನು ?

Published

on

  • ರವಿರಾಜ್ ಗೌಡ

ಹಿರಿಯ ಪತ್ರಕರ್ತ ಬಿ ಎಂ ಬಶೀರ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸಿ ಬರೆದ ಎರಡೇ ಸಾಲಿನ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ಫೇಸ್ ಬುಕ್ ನಲ್ಲಿ ಯಾರು ಬಶೀರಾ ? ಬಶೀರನ ಸಾಧನೆಗಳು ಏನು ? ನಾವು ಮಾಡಿದ್ದಷ್ಟು ಹೋರಾಟಗಳನ್ನು ಬಶೀರ ಮಾಡಿದ್ದಾನಾ ? ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಳಲಾಗುತ್ತಿದೆ.

ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಜನಿಸಿದ ಬಿ ಎಂ ಬಶೀರರು ಪತ್ರಿಕೋದ್ಯಮ ಚಳುವಳಿ ಕಾರಣಕ್ಕಾಗಿಯೇ ಸಹೋದರ ಬಿ ಎಂ ರಶೀದರನ್ನು ಕಳೆದುಕೊಂಡರು. ಲಂಕೇಶ್ ನಲ್ಲಿ ಕೆಲಸ ಮಾಡುತ್ತಿದ್ದ ಬಿ ಎಂ ರಶೀದರ ಅನುಮಾಸ್ಪದ ಸಾವು ಬಿ ಎಂ ಬಶೀರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಿಲ್ಲ.‌ ಅಷ್ಟೊಂದು ಸೈದ್ದಾಂತಿಕ ಬದ್ದತೆ, ದೈರ್ಯವಂತಿಕೆ ಬಿ ಎಂ ಬಶೀರ್ ಗೆ ಇತ್ತು. ಪತ್ರಿಕೋಧ್ಯಮದಲ್ಲಿ ಜನಪರ ಚಳುವಳಿಗಳ ಜೊತೆ ನಿಂತ ಬಿ ಎಂ ಬಶೀರರು ನಾಡಿನ ಚಳುವಳಿಗಳ ಪ್ರಮುಖ ಭಾಗವೇ ಆಗಿದ್ದರು.

ಮುಂಬಯಿನ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ 5 ವರ್ಷಗಳ ಕಾಲ ದುಡಿದ ನಂತರ ಜನವಾಹಿನಿ ಪತ್ರಿಕೆಯಲ್ಲಿ ಹಿರಿಯ ಸಂಪಾದಕರಾಗಿ 5 ವರ್ಷ ಕೆಲಸ ಮಾಡಿದ್ದಾರೆ. ಪ್ರಸ್ತುತ “ವಾರ್ತಾ ಭಾರತಿ” ಕನ್ನಡ ದೈನಿಕದಲ್ಲಿ ಸುದ್ದಿ ಸಂಪಾದಕನಾಗಿ ಕಳೆದ ಹನ್ನೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಫೇಸ್ ಬುಕ್, ವಾಟ್ಸಪ್ ಗಳಂತಹ ಸಾಮಾಜಿಕ ಜಾಲತಾಣ ಇಲ್ಲದೇ ಇದ್ದ ಸಂದರ್ಭದಲ್ಲಿ ವಾರ್ತಾಭಾರತಿ ಪತ್ರಿಕೆ ಕನ್ನಡಿಗರು, ರೈತರ ಜೊತೆ ಗಟ್ಟಿಯಾಗಿ ನಿಂತಿತ್ತು.

ವಿಶೇಷ ಅರ್ಥಿಕ ವಲಯಕ್ಕೆ ಒಎನ್ ಜಿಸಿ ಕಂಪನಿಯು 3000 ಎಕರೆ ರೈತರ ಭೂಮಿ ಸ್ವಾಧೀನ ಮಾಡಿದಾಗ ರೈತರ ಜೊತೆ ನಿಂತ ಮೂರು ಪತ್ರಿಕೆಗಳಲ್ಲಿ ವಾರ್ತಾಭಾರತಿಯೂ ಒಂದು. ಅದಕ್ಕಾಗಿ ಅದು ನಷ್ಟ ಮಾಡಿಕೊಂಡಿದ್ದು ಕೋಟಿ ಕೋಟಿ ರೂಪಾಯಿಗಳ ಜಾಹೀರಾತು. ಎಲ್ಲಾ ಪತ್ರಿಕೆಗಳು ಮುಖಪುಟ ಜಾಹೀರಾತು ಹಾಕಿ ಕಂಪನಿ ಪರ ಇದ್ರೆ ವಾರ್ತಾಭಾರತಿ ಮಾತ್ರ ಅಭಿಯಾನದ ರೀತಿಯಲ್ಲಿ ರೈತರ ಪರ ನಿಂತಿತ್ತು.

ಕನ್ನಡ ಸಾಹಿತ್ಯ ಲೋಕಕ್ಕೆ ಬಿ ಎಂ ಬಶೀರರ ಕೊಡುಗೆಯೂ ಮಹತ್ವದ್ದು. ಕನ್ನಡದಲ್ಲಿ ಹನಿಗತೆ ಪ್ರಾಕಾರವನ್ನು ಸಮರ್ಥವಾಗಿ ಬಳಸುತ್ತಿರುವರಲ್ಲಿ ಬಶೀರರು ಪ್ರಮುಖರು. ಜೊತೆಗೆ ಉತ್ತಮ ಕವಿಯೂ ಹೌದು. ಮುಂಬಯಿ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಸಾಹಿತ್ಯದಲ್ಲಿ, ಚಿನ್ನದ ಪದಕದೊಂದಿಗೆ ಎಂ.ಎ. ಪದವಿ ಪಡೆದಿದ್ದ ಬಿ ಎಂ ಬಶೀರರು ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ಪ್ರವಾದಿಯ ಕನಸು (ಕವನ ಸಂಕಲನ), ಬಾಳೆಗಿಡ ಗೊನೆ ಹಾಕಿತು (ಕಥಾ ಸಂಕಲನ), ಅಂಗೈಯಲ್ಲಿ ಆಕಾಶ (ಹನಿಗತೆಗಳ ಸಂಕಲನ), ಬಾಡೂಟದ ಜೊತೆಗೆ ಗಾಂಧೀ ಜಯಂತಿ (ಲೇಖನಗಳ ಸಂಗ್ರಹ), ನನ್ನ ಮಸೀದಿ ಧ್ವಂಸಗೈದವರಿಗೆ ಕೃತಜ್ಞ-ಸೂಫಿ ಕಣ್ಣಲ್ಲಿ ಹನಿಗಳು(ಹನಿ ಕವಿತೆಗಳು), ಅಮ್ಮ ಹಚ್ಚಿದ ಒಲೆ(ಕವನ ಸಂಕಲನ) ಅವರ ಪ್ರಮುಖ ಪ್ರಕಟಿತ ಪುಸ್ತಕಗಳು. ಈ ರೀತಿಯ ಸಾಹಿತ್ಯ ಸೇವೆಗಾಗಿ ಮುದ್ದಣ ಕಾವ್ಯ ಪ್ರಶಸ್ತಿ, ಮೈಸೂರು ಚದುರಂಗ ಪ್ರತಿಷ್ಥಾನ ಪ್ರಶಸ್ತಿ, ಲಂಕೇಶ್ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ.

ಕರಾವಳಿಯ ಮುಸ್ಲಿಂ ಕೋಮುವಾದ ಮತ್ತು ಹಿಂದೂ ಕೋಮುವಾದವನ್ನು ಸಮಾನಾಗಿ ನೋಡುವ ಬಿ ಎಂ ಬಶೀರರು ಎರಡೂ ವರ್ಗಗಳಿಂದ ದಾಳಿಗೆ ಒಳಗಾದವರು. ಎರಡೂ ವಾದಿಗಳ ನೈತಿಕ ಪೊಲೀಸ್ ಗಿರಿ, ಹಿಡನ್ ಅಜೆಂಡಾಗಳನ್ನು ಪತ್ರಿಕೆಯ ಮೂಲಕ ಬಯಲುಗೊಳಿಸಿದವರು. ಎಲ್ಲಾ ಕನ್ನಡ ಪತ್ರಿಕೆಗಳು ಹಿಂದಿ ಗುಲಾಮಗಿರಿ, ಹಿಂದುತ್ವವಾದ, ಶ್ರೀಮಂತರ ಪರ ಇರೋ ಸಂಧರ್ಭದಲ್ಲಿ ಅದರ ಪ್ರವಾಹಕ್ಕೆ ಎದುರಾಗಿ ವಾರ್ತಾಭಾರತಿ ಹಾಗೋ ಹೀಗೋ ಈಜಾಡುತ್ತಾ ಜನರಿಗಾಗಿ ಹೋರಾಡುತ್ತಿದೆ. 25 ವರ್ಷದ ಸಾಹಿತ್ಯ ಮತ್ತು ಪತ್ರಿಕೋದ್ಯಮದ ಬದುಕಿನಲ್ಲಿ ಬಿ ಎಂ ಬಶೀರರು ಸಮಾಜಕ್ಕಾಗಿ ತನ್ನ ಕುಟುಂಬದವರನ್ನು, ಹಣವನ್ನು ಕಳೆದುಕೊಂಡರೇ ಹೊರತು ಬಂಗಲೆಗಳನ್ನು ಕಟ್ಟಲಿಲ್ಲ, ಆದಾಯದ ಮೂಲಕ್ಕಾಗಿ ಉದ್ಯಮಗಳನ್ನು ಸ್ಥಾಪಿಸಲಿಲ್ಲ. ಆದ್ದರಿಂದಲೇ ರಾಜಿರಹಿತ ಬದುಕು ಸಾದ್ಯವಾಯಿತು.

ಬಿ ಎಂ ಬಶೀರ್ ಮತ್ತು ಅವರ ಕುಟುಂಬದ ತ್ಯಾಗ, ಬಲಿದಾನದ ಇತಿಹಾಸ, ರಾಜಿರಹಿತ ಪತ್ರಿಕೋದ್ಯಮದ ಹಿನ್ನಲೆಯೇ ಒಂದು ದೊಡ್ಡ ಹೋರಾಟದ ಇತಿಹಾಸ. ಇಂತವರನ್ನು ಯಾವುದೋ ಆಶಯದ ಪ್ರತಿಕ್ರಿಯೆಯನ್ನು ತಿರುಚಿ ಗುರಿಯಾಗಿಸೋದು ಕನ್ನಡದ ಜನ ಚಳುವಳಿಗೆ ಮಾಡುವ ದ್ರೋಹವಲ್ಲದೆ ಇನ್ನೇನೂ ಅಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending