ದಿನದ ಸುದ್ದಿ
ಏನಿದು ‘ಹೆಲಿಕಾಪ್ಟರ್ ಮನಿ’..? ಮಿಸ್ ಮಾಡ್ದೆ ಓದಿ
ಕೊರೊನಾ ಬಂದ ಮೇಲೆ ಬಿಸಿನೆಸ್ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ.
ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೆಸಿಆರ್ ಈ ಸಲಹೆ ನೀಡಿದ್ದೇ ತಡ ದೇಶವ್ಯಾಪಿ ‘ಹೆಲಿಕಾಪ್ಟರ್ ಮನಿ’ ಬಗ್ಗೆ ಚರ್ಚೆ ನಡೆಯುತ್ತಿದೆ.
ಏನಿದು ಹೆಲಿಕಾಪ್ಟರ್ ಮನಿ..?
ಹೆಲಿಕಾಪ್ಟರ್ ಮೂಲಕ ಹಣವನ್ನು ಉದುರಿಸುವ ಕಲ್ಪನೆಗೆ ಹೆಲಿಕಾಪ್ಟರ್ ಮನಿ ಎಂದು ಕರೆಯಲಾಗುತ್ತದೆ. ಸುಲಭವಾಗಿ ಜನರಿಗೆ ತನ್ನ ಆರ್ಥಿಕ ನೀತಿಯ ಕಲ್ಪನೆ ಅರ್ಥವಾಗಲೆಂದು ಅಮೆರಿಕಾದ ಅರ್ಥಶಾಸ್ತ್ರಜ್ಞ ಮಿಲ್ಟನ್ ಫ್ರೈಡ್ಮ್ಯಾನ್ ಈ ಹೆಸರನ್ನು ನೀಡಿದ್ದಾರೆ. ಹೆಲಿಕಾಪ್ಟರ್ ನಿಂದ ಹಣವನ್ನು ಉದುರಿಸುವುದು ಅಂದರೆ ನಿಜ ಅರ್ಥದಲ್ಲಿ ಮೇಲಿನಿಂದ ಹಣ ಹಾಕುವುದಲ್ಲ. ಹೆಚ್ಚಿನ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಮುದ್ರಿಸಿ ಜನರ ಕೈಗೆ ಸಿಗುವುಂತೆ ಮಾಡುವುದೇ ಈ ಕಲ್ಪನೆಯ ತಿರುಳು.
ಆರ್ಬಿಐ ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿ ಕೇಂದ್ರ ಸರ್ಕಾರಕ್ಕೆ ನೀಡಬೇಕು. ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಣ ನೀಡುವುದರ ಜೊತೆ ಜನರ/ ನೆಲಕಚ್ಚಿರುವ ಉದ್ಯಮಗಳಿಗೆ ಪ್ಯಾಕೇಜ್ ಘೋಷಣೆ ಮಾಡಿ ಹಣ ತಲುಪುವಂತೆ ಮಾಡಬೇಕು. ಈ ರೀತಿ ದಿಢೀರ್ ಆಗಿ ಹಣದ ಹೊಳೆ ಹರಿದಾಗ ವ್ಯವಹಾರ ಹೆಚ್ಚಾಗುತ್ತದೆ. ಹಣಕಾಸು ವ್ಯವಹಾರ ಹೆಚ್ಚಾಗುತ್ತಿದ್ದಂತೆ ಆರ್ಥಿಕತೆ ಮೇಲಕ್ಕೆ ಏರಬಹುದು ಎಂಬ ಲೆಕ್ಕಾಚಾರ ಇದರಲ್ಲಿ ಅಡಗಿದೆ. ದೇಶದ ಶೇ.5ರಷ್ಟು ಜಿಡಿಪಿಯ ನೆರವನ್ನು ಇದರಿಂದ ಪಡೆಯಬಹುದು ಎಂದು ಆರ್ಥಿಕ ತಜ್ಞರು ಸಲಹೆ ನೀಡಿದ್ದಾರೆ.
ಇದು ಸಾಧ್ಯವೇ..?
ಒಂದು ದೇಶ ಸಿಕ್ಕಪಟ್ಟೆ ಕರೆನ್ಸಿ ನೋಟುಗಳನ್ನು ಮುದ್ರಿಸುವಂತಿಲ್ಲ. ಅದಕ್ಕೂ ಒಂದು ಮಾನದಂಡವಿದೆ. ದೇಶದ ಆರ್ಥಿಕ ಬೆಳವಣಿಗೆ ದರ(ಜಿಡಿಪಿ)ಯನ್ನು ಲೆಕ್ಕ ಹಾಕಲಾಗುತ್ತದೆ. ಇದರ ಜೊತೆ ಭದ್ರತೆಗಾಗಿ ಜೊತೆ ಚಿನ್ನವನ್ನು ಇಡಬೇಕಾಗುತ್ತದೆ. ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿದರೆ ವಸ್ತುವಿನ ಬೆಲೆ ದಿಢೀರ್ ಹೆಚ್ಚಾಗುತ್ತದೆ
‘ಹೆಲಿಕಾಪ್ಟರ್ ಮನಿ’ ಎಫೆಕ್ಟ್ ಏನು..?
ಬಹುತೇಕ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ದಿನನಿತ್ಯದ ಜೀವನ ದುಬಾರಿಯಾಗುತ್ತದೆ. ರೂಪಾಯಿ ಮೌಲ್ಯ ಕುಸಿಯುತ್ತದೆ ಹಣದುಬ್ಬರ ಉಂಟಾಗುತ್ತದೆ.
ಕೇಂದ್ರ ಸರ್ಕಾರ ಮಾಡಬಹುದೇ..?
ಮೋದಿ ಸರ್ಕಾರ ಭ್ರಷ್ಟಾಚಾರ, ಕಪ್ಪು ಹಣ, ಉಗ್ರಗಾಮಿ ಚಟುವಟಿಕೆಗಳನ್ನು ಮಟ್ಟ ಹಾಕಲು 2016ರ ನವೆಂಬರ್ ನಲ್ಲಿ 500, 1 ಸಾವಿರ ರೂ. ನೋಟುಗಳನ್ನು ನಿಷೇಧಿಸಿದೆ. ಇದರ ಬೆನ್ನಲ್ಲೇ ಬಿಡುಗಡೆಯಾದ 2 ಸಾವಿರ ರೂ. ನೋಟುಗಳ ಮುದ್ರಣವನ್ನು ಸಹ ಕಡಿಮೆ ಮಾಡಿದೆ. ಡಿಜಿಟಲ್ ವ್ಯವಹಾರಕ್ಕೆ ಸರ್ಕಾರ ಜಾಸ್ತಿ ಒತ್ತು ನೀಡುತ್ತಿರುವಾಗ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸುತ್ತಾ? ಇಲ್ಲವೋ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.
ಹಿಂದೆ ಜಾರಿ ಆಗಿದ್ಯಾ..?
ಆಫ್ರಿಕಾ ಖಂಡದಲ್ಲಿರುವ ಜಿಂಬಾಬ್ವೆ ಮತ್ತು ದಕ್ಷಿಣ ಅಮೆರಿಕ ಖಂಡದಲ್ಲಿರುವ ವೆನೆಜುವೆಲಾ ದೇಶಗಳು ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿತ್ತು. ಭಾರೀ ಪ್ರಮಾಣದಲ್ಲಿ ಮುದ್ರಿಸಿ ಪರಿಣಾಮ ಹಣಗಳು ಜನರ ಕೈಗೆ ಸೇರಿತ್ತು. ಪರಿಣಾಮ ವಸ್ತುಗಳ ಬೆಲೆ ಭಾರೀ ಏರಿಕೆ ಆಗಿತ್ತು. ಆಹಾರ ಪದಾರ್ಥಗಳನ್ನು ಖರೀದಿಸಲು ಮೂಟೆಗಟ್ಟಲೇ ಹಣವನ್ನು ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243