Connect with us

ದಿನದ ಸುದ್ದಿ

ದಾವಣಗೆರೆ | ಕೋವಿಡ್ ಹಿನ್ನೆಲೆ ನಷ್ಟ : ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಕೆಎಸ್‍ಆರ್‍ಟಿಸಿ ಕಾರ್ಯಾಚರಣೆ : ಕೆ ಎಸ್ ಆರ್ ಟಿ ಸಿ ನಿಮಗ ಅಧ್ಯಕ್ಷ ಚಂದ್ರಪ್ಪ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪ ಹೇಳಿದರು.

ಶುಕ್ರವಾರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿ ಡಿಪೋ ವೀಕ್ಷಣೆ ನಡೆಸಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯ ನೆರವು

ಕೆಎಸ್‍ಆರ್‍ಟಿಸಿ ಹಿಂದೆ ಲಾಭವೂ ಇಲ್ಲ. ನಷ್ಟವೂ ಇಲ್ಲವೆಂಬಂತೆ ಕಾರ್ಯಾಚರಣೆ ಮಾಡುತ್ತಿತ್ತು. ಕೋವಿಡ್ ಬಂದ ನಂತರ ರಾಜ್ಯಾದ್ಯಂತ ಅಂದಾಜು 1500 ಕೋಟಿ ನಷ್ಟ ಅನುಭವಿಸಿತು. ರಾಜ್ಯ ಸರ್ಕಾರ 1350 ಕೋಟಿ ಬಿಡುಗಡೆ ಮಾಡುವ ಮೂಲಕ ಅಧಿಕಾರಿ/ಸಿಬ್ಬಂದಿಗಳಿಗೆ ವೇತನ, ವಾಹನಗಳ ನಿರ್ವಹಣೆ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ನೌಕರರು ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆ ನಷ್ಟದಲ್ಲಿದ್ದರೂ ಸರ್ಕಾರ ವೇತನ ನೀಡುತ್ತಿದ್ದು, ಮುಖ್ಯಮಂತ್ರಿಗಳು ಅಭಿನಂದನೀಯ ಎಂದರು.

ಅಂತರರಾಜ್ಯ ಕಾರ್ಯಾಚರಣೆ

ಅಂತರ ರಾಜ್ಯ ಬಸ್ ಕಾರ್ಯಾಚರಣೆ ಆರಂಭವಾಗಿದ್ದು ಗೋವಾ, ಆಂಧ್ರ ಮತ್ತು ಈಗ ಮಹಾರಾಷ್ಟ್ರಕ್ಕೂ ಅನುಮತಿ ದೊರೆತಿದೆ. ಇದೀಗ ಶೇ.50 ಆದಾಯ ಬರುತ್ತಿದೆ. ಖಾಸಗಿ ಸಂಸ್ಥೆಗಳು ನಷ್ಟದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಿಲ್ಲಿಸಿವೆ. ಆದರೆ ರಾಜ್ಯ ರಸ್ತೆ ಸಾರಿಗೆಯ ಉದ್ದೇಶ ಸೇವೆ ಆಗಿದೆ. ನಷ್ಟದಲ್ಲಿಯೂ ಕೆಲಸ ಮಾಡುತ್ತಿದ್ದು, ಉತ್ತಮ ಸೇವೆಗಾಗಿ ನಮ್ಮ ಸಂಸ್ಥೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ ಎಂದರು.

ಮೂಲಭೂತ ಸೌಕರ್ಯಕ್ಕೆ ಒತ್ತು

ಬಸ್ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳು, ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಉತ್ತಮ ವ್ಯವಸ್ಥೆಗಳನ್ನು ಮಾಡಲಾಗುವುದು. ಜೊತೆಗೆ ರೈಲ್ವೇ ಮತ್ತು ವಿಮಾನ ನಿಲ್ದಾಣಗಳ ರೀತಿಯಲ್ಲಿ ಬಸ್‍ಗಳು ಇಷ್ಟೇ ಸಮಯಕ್ಕೆ ಬರುತ್ತವೆ ಎಂದು ಮಾಹಿತಿ ನೀಡುವ ಡಿಜಿಟಲ್ ಬೋರ್ಡ್‍ಗಳ ಅಳವಡಿಕೆ, ಗಣಕೀಕರಣ ವ್ಯವಸ್ಥೆ ಮಾಡಲಾಗುವುದು ಎಂದರು.

ಸಂಸ್ಥೆಗೆ ಸಾಲವಾದರೂ ಪರವಾಗಿಲ್ಲ. ನೌಕರರ ಮತ್ತು ಎಲ್ಲ ವರ್ಗದ ಜನರ ಹಿತ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ. ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಹೊಸ ಬಸ್‍ಗಳು ಮತ್ತು ಮಾರ್ಗಗಳಿಗೆ ಅವಕಾಶ ಇಲ್ಲವಾಗಿದೆ ಎಂದರು.

ದಾವಣಗೆರೆ ನಗರದಲ್ಲಿ ಪ್ರಸ್ತುತ ಒಟ್ಟು 40 ಬಸ್ ಓಡಾಡುತ್ತಿದ್ದು, ರೈತರು ಹಾಲು, ತರಕಾರಿ ಇತರೆ ಸಾಗಿಸಲು ಅನುಕೂಲವಾಗುವ ದೃಷ್ಟಿಯಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಬಸ್ ಕಾರ್ಯಾಚರಣೆ ವಿಸ್ತರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ದಾವಣಗೆರೆ ವಿಭಾಗದಲ್ಲಿ 21 ವೊಲ್ವೊ, 29 ರಾಜಹಂಸ, 06 ನಾನ್ ಎಸಿ ಸ್ಲೀಪರ್, 195 ಕರ್ನಾಟಕ ಸಾರಿಗೆ, 56 ನಗರ ಸಾರಿಗೆ ಸೇರಿದಂತೆ ಒಟ್ಟು 356 ಬಸ್‍ಗಳು ಕಾರ್ಯಾಚರಣೆ ಮಾಡುತ್ತಿವೆ. ವಿಭಾಗದಲ್ಲಿ ಒಟ್ಟು 1580 ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿ ವೇತನ ತಿಂಗಳಿಗೆ ಸರಾಸರಿ ರೂ.574.86 ಲಕ್ಷ, ಇಂಧನ ವೆಚ್ಚ ರೂ.502.85 ಲಕ್ಷ ಮತ್ತು ಇತರೆ ಖರ್ಚು ಸೇರಿದಂತೆ ಸರಾಸರಿ ರೂ.1405.65 ಲಕ್ಷ ವೆಚ್ಚವಾಗುತ್ತದೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ರೂ.96 ಕೋಟಿ ಮೊತ್ತದಲ್ಲಿ ಆಧುನಿಕ ಮಾದರಿ ಬಸ್ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯು ನವೆಂಬರ್ 2020 ರಿಂದ ಪ್ರಾರಂಭವಾಗಲಿದೆ. ಪ್ರಸ್ತುತವಿರುವ ಬಸ್ ನಿಲ್ದಾಣವನ್ನು ಸ್ಥಳಾಂತರಿಸಲು ಹೈಸ್ಕೂಲ್ ಮೈದಾನದಲ್ಲಿ ರೂ.2.86 ಕೋಟಿ ಮೊತ್ತದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದ್ದು ಮುಕ್ತಾಯ ಹಂತದಲ್ಲಿರುತ್ತದೆ.

ದಾವಣಗೆರೆ ನಗರ ಪ್ರದೇಶದಲ್ಲಿರುವ ಬೇತೂರು ರಸ್ತೆಯಲ್ಲಿನ ಸಂಸ್ಥೆಯ ನಿವೇಶನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.10.00 ಕೋಟಿ ಮೊತ್ತದಲ್ಲಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ದಾವಣಗೆರೆ ವಿಭಾಗೀಯ ಕಾರ್ಯಾಗಾರದಲ್ಲಿ ನಗರ ಸಾರಿಗೆ ಘಟಕ-2 ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚನ್ನಗಿರಿ ನಗರದಲ್ಲಿ ಬಸ್ ಘಟಕ ನಿರ್ಮಾಣಕ್ಕೆ ಈಗಾಗಲೇ ನಿವೇಶನ ಮಂಜೂರಾಗಿದ್ದು ಎಸ್‍ಡಿಪಿ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ರೂ.8.00 ಕೋಟಿ ಮೊತ್ತದಲ್ಲಿ ಘಟಕ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.

ಚಿಕ್ಕಮಗಳೂರು ಮಾರ್ಗ ಬಸ್ ಉದ್ಘಾಟನೆ

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂದು ನೂತನವಾಗಿ ಕಾರ್ಯಾಚರಣೆ ಪ್ರಾರಂಭಿಸಿದ ದಾವಣಗೆರೆಯಿಂದ ಬಾಡ, ಸಂತೆಬೆನ್ನೂರು, ಚನ್ನಗಿರಿ ಹಾಗೂ ಅಜ್ಜಂಪುರ ಮಾರ್ಗವಾಗಿ ಚಿಕ್ಕಮಗಳೂರಿಗೆ ಹೋಗುವ ಬಸ್‍ಗೆ ಕರ್ನಾಟಕ ರಾಜ್ಯ ರಸ್ತೆ ನಿಗಮದ ಅಧ್ಯಕ್ಷರಾದ ಚಂದ್ರಪ್ಪನವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕ.ರಾ.ರ.ಸಾ ನಿಗಮದ ವಿಭಾಗೀಯ ನಿಯಂತ್ರಾಣಾಧಿಕಾರಿ ಸಿದ್ದೇಶ್ವರ ಹೆಬ್ಬಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending