ದಿನದ ಸುದ್ದಿ
ಸಾಧನೆ ಹಾದಿಯಲ್ಲಿ ‘ಪಾಳಾ’ ಗ್ರಾಮದ ವಿದ್ಯಾರ್ಥಿಗಳು..!
ಕೋವಿಡ್ ಕಾಲದಲ್ಲಿ ತಂತ್ರಜ್ಞಾನಗಳು ವರದಾನ ವಾದರೂ ಗ್ರಾಮೀಣ ಭಾಗದಲ್ಲಿನ ಮೂಲಸೌಕರ್ಯ ಕೊರತೆ ಆರ್ಥಿಕ ಕಾರಣಗಳು ಬಡ ವಿದ್ಯಾರ್ಥಿಗಳಿಗೆ ಹಲವು ಸಮಸ್ಯೆಗಳನ್ನು ಹುಟ್ಟುಹಾಕಿವೆ. ಇದನ್ನು ಸರಿಪಡಿಸುವಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಬೇಕಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶಗಳು ಸಿಕ್ಕಿದ್ದರೆ ಉತ್ತಮ ಸಾಧನೆ ಮಾಡಬಲ್ಲರು ಎಂಬುದಕ್ಕೆ ಈ ಬಾರಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸುವ ಮೂಲಕ ಸಾಧನೆಗೈದಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿಗಳು ಎಲ್ಲರ ಹುಬ್ಬೇರಿಸುವಂತೆ ಸಾಧನೆ ಮಾಡಿದ್ದಾರೆ.
ಸಂತೋಷದ ವಿಷಯ ಏನೆಂದರೆ ನಮ್ಮ ಗುಲ್ಬರ್ಗದ ಜಿಲ್ಲೆಯ ಪಾಳಾ ಗ್ರಾಮದ ವಿದ್ಯಾರ್ಥಿಗಳು ತಮ್ಮ-ತಮ್ಮ ಪರೀಕ್ಷೆಯಲ್ಲಿ ಉತ್ತಮವಾದ ಸಾಧನೆಯನ್ನು ಮಾಡಿದ್ದು ನಮ್ಮ ಗ್ರಾಮಕ್ಕೆ ಗೌರವವನ್ನು ತಂದುಕೊಟ್ಟಿದ್ದಾರೆ.
ಗ್ರಾಮೀಣ ಪ್ರದೇಶದ, ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಎಲ್ಲಿಯೂ ಸಲ್ಲದವರು ಇಲ್ಲಿ ಸಲ್ಲುತ್ತಾರೆ ಎಂದು ಹಂಗಿಸುವವರು ಇದ್ದಾರೆ. ಇಂತಹ ಮನಸ್ಥಿತಿಗಳಿಂದಾಗಿಯೇ ಸರ್ಕಾರಿ ಶಾಲೆಗಳೆಂದರೆ ಕೆಲವರಿಗೆ ಅಸಡ್ಡೆ. ಆದರೆ ಕಳೆದ ಎರಡು ವರ್ಷಗಳಿಂದ ಹೊರ ಬರುತ್ತಿರುವ ಪರೀಕ್ಷಾ ಫಲಿತಾಂಶ ಟೀಕಾಕಾರರಿಗೆ ಉತ್ತರ ನೀಡುವಂತಹ ವಾತಾವರಣ ಮೂಡಿಸುತ್ತಿದೆ.
ಸರ್ಕಾರಿ ಶಾಲೆಗಳ ಮಕ್ಕಳು ವಿಶೇಷವಾಗಿ ಗ್ರಾಮೀಣ ಸಮುದಾಯದ ವಿದ್ಯಾರ್ಥಿಗಳು ನಗರ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆಗೆ ಇಳಿದಿದ್ದಾರೆ. ಒಟ್ಟಾರೆ ಶೇಕಡಾವಾರು ಫಲಿತಾಂಶದಲ್ಲಿ ಕುಸಿತದ ಆತಂಕ ಎದುರಾದರೂ, ಗ್ರಾಮೀಣ ಪ್ರದೇಶಗಳ ಕನ್ನಡ ಶಾಲೆಗಳ ಮಕ್ಕಳ ಸಾಧನೆಯ ಫಲಿತಾಂಶ ಕನವರಿಕೆಯಿಂದ ಹೊರಬರುವಂತೆ ಮಾಡಿದೆ.
ಏನೇ ಆಗಲಿ ಈ ಬಾರಿ ಪಾಳಾ ಗ್ರಾಮದ ಉನ್ನತ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯಲ್ಲಿ ತಾವು ಪಡೆದುಕೊಂಡಿರುವ ಅಂಕಗಳನ್ನು ತಮ್ಮ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇತರರಿಗೆ ಮಾದರಿಯಾಗುವಂತೆ ಮಾಡಿದ್ದಾರೆ.
ವಿದ್ಯಾರ್ಥಿಗಳು ಕೇವಲ ಅಂಕವನ್ನು ಗಳಿಸುವುದಕ್ಕಾಗಿ ವಿದ್ಯಾಭ್ಯಾಸವನ್ನು ಮಾಡದೆ ಉತ್ತಮವಾದ ಜ್ಞಾನವನ್ನು ಸಂಪಾದಿಸುವುದಕ್ಕಾಗಿ ವಿದ್ಯಾಭ್ಯಾಸ ಮಾಡಬೇಕೆಂದು ಇತರರಿಗೆ ಮಾದರಿ ಆಗಬೇಕೆಂಬ ಗ್ರಾಮೀಣ ವಿದ್ಯಾರ್ಥಿಗಳ ಆಶಯ.
ನಮ್ಮ ಪಾಳಾ ಗ್ರಾಮದ ಶ್ರೀ ಡಾ. ಗುರುಮೂರ್ತಿ ಶಿವಾಚಾರ್ಯ ಮೂಲ ಕಟ್ಟಿಮನಿ ಹಿರೇಮಠ ಸಂಸ್ಥಾನ ಪಾಳಾ ಇವರು ಹಮ್ಮಿಕೊಂಡಿರುವ ಎಸೆಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಅತ್ಯಧಿಕ ಅಂಕವನ್ನು ಪಡೆದುಕೊಂಡಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆ ನಿರ್ಭಯ ಸಾಧಕ ಎಂಬ ಪ್ರಶಸ್ತಿ ಪ್ರದಾನ ನೀಡಿ ವಿದ್ಯಾರ್ಥಿಗಳಿಗೆ ಗೌರವವನ್ನು ಸಲ್ಲಿಸಲಾಯಿತು.
ಗ್ರಾಮೀಣ ಕನ್ನಡ ಶಾಲೆಗಳಲ್ಲಿ ಓದಿ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿರುವವರು ಅಂದಿನ ಗ್ರಹಿಕೆಯನ್ನು ಇಂದಿಗೂ ಮರೆತಿಲ್ಲ. ನಗರ ಪ್ರದೇಶದ ವಿದ್ಯಾರ್ಥಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಬಹುದು. ಆದರೆ ಮೂಲಶಿಕ್ಷಣವನ್ನು ಜ್ಞಾಪಿಸಿಕೊಳ್ಳುವವರು, ಸಂದರ್ಭ ಬಂದಾಗ ಅದನ್ನು ಹೊರ ಹಾಕುವವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೆ. ವ್ಯಾಕರಣ, ಸಂಧಿ-ಸಮಾಸ, ಅಲ್ಪಪ್ರಾಣ, ಮಹಾಪ್ರಾಣ ಇತ್ಯಾದಿ ಕಾಗುಣಿತ ವಿಷಯಗಳನ್ನು ಗ್ರಾಮೀಣ ವಿದ್ಯಾರ್ಥಿಗಳು ಚನ್ನಾಗಿ ಬಲ್ಲವರಿದ್ದಾರೆ. ಎಲ್ಲಿ ಹೋದರೂ ಸ್ಪಷ್ಟವಾಗಿ ಉಚ್ಚರಿಸುತ್ತಾರೆ.
ಮಾತುಗಳು ಮುಳ್ಳಿನಂತಿದ್ದೂರು ಮತ್ತೊಬ್ಬನನ್ನು ಎಚ್ಚರಿಸಿ ಸರಿದಾರಿಗೆ ತರುವ ಮುಳ್ಳಾಗಬೇಕೆ ವಿನಃ ಮನಸ್ಸು ಚುಚ್ಚುವ ಮುಳ್ಳಾಗಬಾರದು. ಯಾಕೆ ಈ ಮಾತನ್ನು ಹೇಳುತ್ತಿದ್ದೇನೆ ಎಂದರೆ
ಕೋರನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮನೆಯಲ್ಲಿ ಪೋಷಕರಿಗೆ ಆತಂಕ, ಮಕ್ಕಳು ಪರೀಕ್ಷೆ ಬರೆದು ಮನೆಗೆ ಬರುವ ತನಕ ಪೋಷಕರಲ್ಲಿ ಆತಂಕ ಮೂಡಿತ್ತು.
ಈ ಕೋರನ ಮಧ್ಯೆಯೂ ಪರೀಕ್ಷೆ ಬರೆದು ಸಾಧನೆ ಮಾಡಿದ್ದಾರೆ.
ಎಸೆಸೆಲ್ಸಿ ಎಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಕೀರ್ತಿ, ಶಿವಪುತ್ರ , ಪೂಜಾ , ಅಂಕಿತ , ಪವಿತ್ರ , ಈಶ್ವರ್ , ಮಾರುತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಳಾ ಹಾಗೂ ಸರಕಾರಿ ಪ್ರೌಢಶಾಲೆ ಮುಖ್ಯಗುರುಗಳಾದ ಮಾರುತಿ ಹುಜರತಿ ಹಾಗೂ
ನಾಗಲಾಂಬಿಕ ರವರು ಹಾಗೂ ಶಾಲಾ ವಿಭಾಗದ ಶಿಕ್ಷಕರು ಹಾಗೂ ಶಿಕ್ಷಕಿಯರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರೀತಿಪಾತ್ರರು ಆಗಿದ್ದಾರೆ.
– ರಾಣಪ್ಪ ಡಿ ಪಾಳಾ
ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ
ಮನೋವಿಜ್ಞಾನ ವಿಭಾಗ
ಮೋ 9663727268
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು