ದಿನದ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | ಯುವ ಮುಖಂಡ ರಾಘು ದೊಡ್ಡಮನಿ ಬಿಡುಗಡೆ
ಸುದ್ದಿದಿನ, ದಾವಣಗೆರೆ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಮಂಗಳವಾರ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಬುಧವಾರ ಜಾಮೀನಿನ ಮೂಲಕ ಬಿಡುಗಡೆಯಾದರು.
ಘಟನೆ ಹಿನ್ನೆಲೆ
ಗುಜರಾತ್ ವೈರಸ್, ಮೋದಿ ವೈರಸ್ ಎಂಬ ಪೋಸ್ಟ್ ಮಾಡಿ ಪ್ರಧಾನಿ ಮೋದಿಯವರನ್ನುಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದಾರೆಂದು ಮಂಗಳವಾರ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಅವರನ್ನು ವಿದ್ಯಾನಗರ ಪೊಲೀಸ್ ಠಾಣೆಯ ವಿನಯ್ ಎಂಬ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ಹಾಗೂ ಯುವ ಬಿಜೆಪಿಯ ಸಹ ದೂರಿನನ್ವಯ ಬಂದಿಸಲಾಗಿತ್ತು.
“ಶಿವಮೊಗ್ಗದಲ್ಲಿ ಪತ್ತೆಯಾದ ಎಂಟು ಮಂದಿ ಕೊರೋನಾ ಪಾಸಿಟಿವ್ ಸೊಂಕಿತರು ಗುಜರಾತಿನ ‘ನಮೋ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು!! ಇವಾಗ ಇದಕ್ಕೆ ಏನೆಂದು ಹೆಸರಿಡೋಣ? ‘ನಮೋ ವೈರಸ್’? ‘ಬಿಜೆಪಿ ವೈರಸ್’? ‘ಗುಜರಾತ್ ನಂಜು’? ಎಂದು ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಲತಾಣದಲ್ಲಿ ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ ತಪ್ಪು ಮಾಹಿತಿ ಹಾರಾಡುತ್ತಿದ್ದ ಈ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದಾವಣಗೆರೆಯ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಸರ್ ಹಾಗೂ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಇವರಿಗೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ರಾಘು ದೊಡ್ಡಮನಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೊರೋನಾ ಸೋಂಕನ್ನು ಒಂದು ಧರ್ಮವೊಂದಕ್ಕೆ ಕಟ್ಟುವ ಹಲವು ಪ್ರಯತ್ನಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದ್ದಾವೆ. ಮಾದ್ಯಮಗಳು ತಬ್ಲಿಕ್ ವೈರಸ್, ಗರ್ಭಿಣಿ ಕಂಠಕ, ನರ್ಸ್ ನಂಜು ಅಂತೆಲ್ಲಾ ಸುದ್ದಿ ಮಾಡಿದ್ದವು. ಆಗ ಪೊಲೀಸ್ ಇಲಾಖೆ ಯಾಕೆ ಅವರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಕಮೆಂಟ್ ಮಾಡುವುದರ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಫೇಸ್ ಬುಕ್ ಪೋಸ್ಟ್ ಗಳು
ರಾಘು ದೊಡ್ಡಮನಿ ಬಂಧನ ವಿರೋಧಿಸಿ ಹಲವು ಸಂಘಟನೆಗಳು ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಗಳು ಹೀಗಿವೆ.
1. “ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ. ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡಮಣಿ ಬೆಂಬಲಿಸುತ್ತಾ ಬಂದಿದ್ದಾರೆ.
ಈ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಪ್ರಕರಣವನ್ನು ಕೈ ಬಿಡಬೇಕೆಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದು ರಾಜ್ಯಾಧ್ಯಕ್ಷರಾದ ವಿಜಯ್ ತಳವಾರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2. ಹಾಗೆಯೇ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ. ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡ್ಡಮನಿ ಬೆಂಬಲಿಸುತ್ತಾ ಬಂದಿದ್ದಾರೆ.
ಕೊರೊನಾ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಬಂಧನ ಮತ್ತಿತರ ಅನಗತ್ಯ ಕ್ರಮವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.
ಈಗ ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ರಾಘು ದೊಡ್ಡಮನಿ ಮಾನವ ಬಂಧುತ್ವ ವೇದಿಕೆಯ ಸಕ್ರಿಯರಾಗಿ ಕೆಲಸ ಮಾಡಿದವರು. ದುರುದ್ದೇಶಿತ ಈ ಪ್ರಕರಣ ಅಭಿವ್ಯಕ್ತಿಯ ಮೇಲಿನ ಹಲ್ಲೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಧರ್ಮದ್ವೇಷದ ಹೇಳಿಕೆ ನೀಡುವವರನ್ನು ಬಂಧಿಸುವ ಬದಲು, ಧರ್ಮದ ದುರ್ಬಳಕೆ ಖಂಡಿಸಿದವರ ಮೇಲೆ ದೂರು ದಾಖಲಿಸಿರುವುದು ಪೋಲಿಸರ ಪಕ್ಷಪಾತದ ಧೋರಣೆ ಯನ್ನು ‘ಮಾನವ ಬಂಧುತ್ವ ವೇದಿಕೆ- ಕರ್ನಾಟಕ’ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಪೋಸ್ಟ್ ಮಾಡಿದ್ದಾರೆ.
“ಹತ್ತು ವರ್ಷಗಳಿಂದ ನಾನು ಜನಪರ ಕಾಳಜಿಯುಳ್ಳ ಕೆಲಸಗಳನ್ನು ಸಂಘಟನೆಗಳ ಮೂಲಕ ಮಾಡುತ್ತಾ ಬಂದಿದ್ದೇನೆ. ಆಳುವ ಸರ್ಕಾರಗಳ ಲೋಪದೋಷಗಳನ್ನು ಟೀಕಿಸುತ್ತಲೂ ಇರುತ್ತೇನೆ. ಇದು ನಮ್ಮ ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ. ನನ್ನ ಬಂಧನಕ್ಕೆ ಸಂಬಂಧಿಸಿದಂತೆ, ಹೋರಾಟದ ದನಿಗಳನ್ನು, ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಾನೂನಿನ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈ ಘಟನೆ ನನಗೆ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ ಬದಲಾವಣೆಯ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿ ಕೊಳ್ಳುವಂತೆ ಮಾಡಿದೆ”.
| ರಾಘು ದೊಡ್ಡಮನಿ, ಅಧ್ಯಕ್ಷರು
ಕರ್ನಾಟಕ ರಣಧೀರ ಪಡೆ
ದಾವಣಗೆರೆ ಜಿಲ್ಲಾ ಘಟಕ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಅಭಿಪ್ರಾಯಗಳನ್ನು ಓದಿ
https://www.facebook.com/raghu.doddamani.948
ಮಿತ್ರ ರಾಘು ದೊಡ್ಡಮನಿ ಸಮಾಜಿಕ ಕಳಕಳಿ ಇರುವ ನಾಯಕ ಇವರ ಮೇಲೆ ದಾಖಲಾದ ಪ್ರಕರಣ ವನ್ನು ಕೈ ಬಿಡಬೇಕು ಒಂದು ವೇಳೆ ಅವರು" ಯಾವ ನಂಜು' ಎಂಬ ಬಗ್ಗೆ…
Posted by Shaik Abidali Bavikatte on Wednesday, 20 May 2020
https://m.facebook.com/story.php?story_fbid=1174728689533045&id=100009877756258
https://m.facebook.com/story.php?story_fbid=3307387082613038&id=100000253368436
https://m.facebook.com/story.php?story_fbid=3221777811218777&id=100001597687948
https://m.facebook.com/story.php?story_fbid=2692513617520342&id=100002851899686
https://m.facebook.com/photo.php?fbid=2677375149214971&id=100008275358091&set=a.1788597198092775
https://m.facebook.com/story.php?story_fbid=1410836952434351&id=100005241791811
https://m.facebook.com/story.php?story_fbid=1410836952434351&id=100005241791811
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ
ಸುದ್ದಿದಿನ ಡೆಸ್ಕ್ : ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್.
ಈಗಾಗಲೇ ಅಕ್ಷಯ್ ಕುಮಾರ್, ಮೋಹನ್ ಬಾಬು, ಮೋಹನ್ ಲಾಲ್, ಶರತ್ಕುಮಾರ್ ಮುಂತಾದವರು ‘ಕಣ್ಣಪ್ಪ’ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್ ತಾರಾಬಳಗಕ್ಕೆ ಪ್ರಭಾಸ್ ಅವರ ಎಂಟ್ರಿಯೂ ಆಗಿದೆ.
ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಹಾಲಿವುಡ್ನ ಶೆಲ್ಡೋನ್ ಚಾವ್ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇದೇ 12 ರಂದು ದಾವಣಗೆರೆಯಲ್ಲಿ ಪಾರಂಪರಿಕ ಬೀಜೋತ್ಸವ; ಒಂದು ಸಾವಿರಕ್ಕೂ ಹೆಚ್ಚು ದೇಸಿ ಧಾನ್ಯಗಳ ಪ್ರದರ್ಶನ
ಸುದ್ದಿದಿನ, ದಾವಣಗೆರೆ : ದೇಸಿಯ ಬಿತ್ತನೆ ಬೀಜಗಳ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ 12ರಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಪಾರಂಪರಿಕ ಬೀಜೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ದೇವರಾಜ್ ಹೇಳಿದ್ದಾರೆ.
ಒಂದು ದಿನದ ಈ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ 30ಕ್ಕೂ ಹೆಚ್ಚಿನ ಬೀಜ ಸಂರಕ್ಷಕರ ತಂಡಗಳು ಪಾಲ್ಗೊಳ್ಳಲಿವೆ. ವಿವಿಧ ದೇಸಿ ತಳಿಗಳನ್ನು ಪ್ರದರ್ಶಿಸಲಾಗುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚಿನ ದೇಸಿ ಧಾನ್ಯ, ತರಕಾರಿ, ಕಾಳು, ಗೆಡ್ಡೆ ಗೆಣಸು, ಸೊಪ್ಪು ಮತ್ತು ಹಣ್ಣಿನ ತಳಿಗಳು ಪ್ರದರ್ಶನಗೊಳ್ಳಲಿವೆ.
ಗುಣಮಟ್ಟದ ಭತ್ತ, ಸಿರಿಧಾನ್ಯ ಮತ್ತು ತರಕಾರಿ ಬೀಜಗಳು ಮಾರಾಟಕ್ಕೆ ಸಿಗಲಿವೆ. ಕೆಂಪು ಬಣ್ಣದ ’ಸಿದ್ಧ ಹಲಸು’ ಮತ್ತು ಇತರೆ ಹಣ್ಣಿನ ಗಿಡಗಳು ಮಾರಾಟಕ್ಕೆ ಲಭ್ಯವಿರುತ್ತವೆ. ರೈತ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಭತ್ತದ ತಳಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕೋಲಾರದ ಬೀಜಮಾತೆ ಪಾಪಮ್ಮ ಮತ್ತು ಮೈಸೂರಿನ ಬೀಜಮಾತೆ ಪದ್ಮಾವತಮ್ಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ ಡಿಗ್ರಿ ಕಾಲೇಜಿನಲ್ಲಿ ಬಸವ ಜಯಂತಿ ಆಚರಣೆ
ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡುವುದರ ಮೂಲಕ ಬಸವ ಜಯಂತಿಯನ್ನು ಇಂದು ಬೆಳಗ್ಗೆ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿಜಿ ಅಮೃತೇಶ್ವರ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆತ್ಮಕತೆ | ಹಿಂದಿರುಗಿ ನೋಡುತ್ತಾಽ……
-
ದಿನದ ಸುದ್ದಿ4 days ago
ದಾವಣಗೆರೆ | ಲೋಕಸಭಾ ಚುನಾವಣೆ ; ಶೇ 70.94 ಮತದಾನ
-
ದಿನದ ಸುದ್ದಿ4 days ago
ಸಂಸತ್ತಿನ ಕಡೆಗೆ ಪ್ರಭಾ ನಡಿಗೆ
-
ದಿನದ ಸುದ್ದಿ4 days ago
ಹೊನ್ನಾಳಿಯಲ್ಲಿ ವಿಶೇಷಚೇತನರಿಂದ ಶೇ 100 ರಷ್ಟು ಮತದಾನ
-
ದಿನದ ಸುದ್ದಿ5 days ago
2ನೇ ಹಂತದ ಮತದಾನ ; ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ದಾವಣಗೆರೆ ಜಿಲ್ಲೆಯಲ್ಲಿ 63 ವಿಶೇಷ ಮತಗಟ್ಟೆಗಳ ಸ್ಥಾಪನೆ, ವಿಭಿನ್ನವಾಗಿ ಸಿದ್ದವಾಗಿರುವ ಮತಗಟ್ಟೆಗಳು
-
ದಿನದ ಸುದ್ದಿ4 days ago
ದಾವಣಗೆರೆ | ಲೋಕಸಭಾ ಚುನಾವಣೆ ; ಶೇ 23.79 ಮತದಾನ
-
ದಿನದ ಸುದ್ದಿ4 days ago
ಸೆಲ್ಫಿಯಲ್ಲಿ ಸೆರೆಯಾದ ಒಂದೇ ಕುಟುಂಬದ 38 ಮತದಾರರು