ದಿನದ ಸುದ್ದಿ
ಲಾಕ್ ಡೌನ್ ತೀರದ ಸಂಕಷ್ಟ ; ಮಂಗಳಮುಖಿಯರ ಸಮಸ್ಯೆಗೆ ಜಿ.ಪಂ ಸದಸ್ಯ ಬಸವಂತಪ್ಪ ಸ್ಪಂದನೆ
ಸುದ್ದಿದಿನ,ದಾವಣಗೆರೆ : “ನನಗೆ ವಯಸ್ಸಾಗಿದೆ, ಶುಗರ್ ಇದೆ, ಕೈ,ಕಾಲು ನೋವು ಹೊರಹೋಗಲು ಆಗುತ್ತಿಲ್ಲ, ಅಂಗಡಿಗಳು ಲಾಕ್ಡೌನ್ ಆಗಿರುವುದರಿಂದ ಕಲೆಕ್ಷನ್ ಕೂಡ ಇಲ್ಲ. ಶುಭ ಕಾರ್ಯಗಳಲ್ಲಿ ಚೂರು-ಪಾರು ಹಣ ಸಿಗುತ್ತಿತ್ತು. ಆ ದುಡಿಮೆಯೋ ಇಲ್ಲ. ಹೇಗೋ ಹಸಿವು ನೀಗಿಸಿಕೊಳ್ಳುತ್ತೇವೆ. ಆದರೆ ಮಾತ್ರೆ ತೆಗೆದುಕೊಳ್ಳಲು ಹಣವೂ ನಮ್ಮಲ್ಲಿ ಇಲ್ಲದ ಕಾರಣ ಪರದಾಡಬೇಕಾದ ಸ್ಥಿತಿ ಇದೆ“. ಹೌದು, ಇಂತಹ ಮಾತುಗಳನ್ನು ನಗರದಿಂದ ಆರೇಳು-ಕಿಲೋ ಮೀಟರ್ ದೂರದಲ್ಲಿನ ಮಲ್ಲಶೆಟ್ಟಿಹಳ್ಳಿ ಹೋಗುವ ದಾರಿಯಲ್ಲಿರುವ ಮನೆಯೊಂದರಲ್ಲಿ ವಾಸವಾಗಿರುವ ಮಂಗಳಮುಖಿ ನಂದನಮ್ಮ ನೋವಿನಿಂದ ನುಡಿಯುತ್ತಾರೆ.
ಲಾಕ್ ಡೌನ್ ಒಂದು ಕಡೆ ಕೂಲಿ ಕಾರ್ಮಿಕರು, ಅಸಂಘಟಿತರ ವಲಯದ ಆರ್ಥಿಕತೆಯನ್ನು ಮಕಾಡೆ ಮಲಗಿಸಿದೆ. ಆದರೆ ಈ ವಲಯವನ್ನೇ ನಂಬಿಕೊಂಡು ಬದುಕುತ್ತಿದ್ದ ಮಂಗಳಮುಖಿಯರ ಪಾಡು ಹೇಳತೀರದ್ದಾಗಿದೆ. ಕೆಲವರಿಗೆ ಬಿಪಿ ಇದ್ದರೆ, ಇನ್ನೂ ಕೆಲವರಿಗೆ ಶುಗರ್ ಸೇರಿದಂತೆ ದೇಹಕ್ಕೆ ಸಂಬಂಧಿಸಿದ ಕಾಯಿಲೆಗಳು ಇದೆ. ಆದರೆ ಅವುಗಳನ್ನು ಗುಣಪಡಿಸಿಕೊಳ್ಳಲು ಅವರ ಬಳಿ ಹಣ ಇಲ್ಲ.
ನಮಗೆ ಅಂಗಡಿ ಮಾಲೀಕರೇ ಧಣಿಗಳು. ಆ ಧಣಿಗಳೇ ಈಗ ಅಂಗಡಿ ಬಾಗಿಲು ಹಾಕಿದ್ದಾರೆ.ಅವರೇ ಈಗ ಕಷ್ಟದಲ್ಲಿದ್ದಾರೆ. ಇಂತದ್ದರಲ್ಲಿ ನಮ್ಮ ಕಷ್ಟ ಯಾವ ಲೆಕ್ಕ. ಅವರು ಚೆನ್ನಾಗಿ ಇದ್ದರೇ, ನಾವು ಚೆನ್ನಾಗಿ ಇರುತ್ತೇವೆ.
ಆದರೀಗ ಅವರೂ ಚೆನ್ನಾಗಿಲ್ಲ, ನಾವೂ ಚೆನ್ನಾಗಿಲ್ಲ. ನಾವು ಕೂಡ ಮನುಷ್ಯರು, ಹೊಟ್ಟೆಪಾಡಿಗಾಗಿ ಜನರ ಬಳಿ ಭಿಕ್ಷೆ ಬೇಡುತ್ತೇವೆ. ಆದರೀಗ ಅದು ಇಲ್ಲ. ನ್ಯಾಯದ ಮೂಲಕ ದುಡಿಯುತ್ತಿದ್ದೇವೆ. ಕೆಲವರು ನಮ್ಮನ್ನು ಕೆಟ್ಟದಾಗಿ ನೋಡುತ್ತಾರೆ. ಆದ್ದರಿಂದ ಸರಕಾರ ನಮ್ಮ ಧ್ವನಿ ಕೇಳಿಸಿಕೊಂಡು ನಮಗೆ ಸೂರು, ಪಡಿತರ, ಆರೋಗ್ಯ ಕಾರ್ಡ್ ನೀಡಬೇಕು ಎಂದು ಮಂಗಳಮುಖಿಯರು ಒತ್ತಾಯಿಸುತ್ತಾರೆ.
ಜಿಲ್ಲೆಯಲ್ಲಿ ಅಂದಾಜು 200ಕ್ಕೂ ಹೆಚ್ಚು ಮಂಗಳಮುಖಿಯರು ಇದ್ದು, ಹಲವರು ಉಚ್ಚಂಗಿ ದುರ್ಗ, ಬಾಡಾಕ್ರಾಸ್, ಮಂಡಿಪೇಟೆ,ಹಳೆಪೇಟೆ, ಜಯದೇವಸರ್ಕಲ್, ಜನದಟ್ಟಣೆ ಪ್ರದೇಶದಲ್ಲಿ ಹೋಗಿ ಜನರು ಕೊಟ್ಟ ಹಣವನ್ನು ತೆಗೆದುಕೊಳ್ಳುತ್ತಿದ್ದರು. ಆದರೀಗ ಕೊರೊನಾ ಸೊಂಕು ಹಿನ್ನೆಲೆಯಲ್ಲಿ ಯಾರು ಕೂಡ ಹೊರಗೆ ಬರುತ್ತಿಲ್ಲದ ಕಾರಣ ಅವರ ಬಳಿ ಹಣವೇ ಇಲ್ಲವಾಗಿದೆ.
ಅಂಗಡಿಗಳು ಬಾಗಿಲು ತೆಗೆದಿದ್ದ ವೇಳೆ ಪ್ರತಿ ದಿನ 200 ರೂ. ನಿಂದ 300 ರೂ. ಸಂಪಾದಿಸುತ್ತಿದ್ದರು. ಅಲ್ಲದೇ ಶುಭಸಮಾರಂಭಗಳಲ್ಲಿಯೂ ಅವರಿಗೆ ಹೆಚ್ಚು ಹಣ ಬರುತ್ತಿತ್ತು. ಎಲ್ಲರೂ ಒಟ್ಟುಗೂಡಿ ಜೀವನ ನಡೆಸುತ್ತಿದ್ದರು. ಆದರೀಗ ಕೈಯಲ್ಲಿ ಹಣವಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಅವರ ರೋಧನೆ ಹೇಳತೀರದ್ದಾಗಿದೆ.
ಗೋಡೌನ್ ರೀತಿಯಲ್ಲಿ ಇರುವ ಮನೆಯಲ್ಲಿ ಏಳರಿಂದ-ಎಂಟು ಜನ ಒಟ್ಟಿಗೆ ಇದ್ದಾರೆ. ಶೌಚಾಲಯ ಒಂದೇ ಇದೆ. ಓಡಾಡುವುದಕ್ಕೆ ಸಾರಿಗೆ ಸೌಲಭ್ಯವೂ ಇಲ್ಲ. ಬಿಪಿಎಲ್ ಕಾರ್ಡ್ ಸೌಲಭ್ಯವು ಇಲ್ಲದ ಕಾರಣ ಪಡಿತರ ಸಿಗುವುದು ಕಷ್ಟವಾಗಿದೆ. ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಕೊಡುವ ಆಹಾರವನ್ನೇ ಸದ್ಯ ಉಪಯೋಗಿಸುತ್ತಿದ್ದಾರೆ. ಇದು ಕೂಡ ಕೆಲವೇ ದಿನಗಳಲ್ಲಿ ಖಾಲಿಯಾಗಲಿದ್ದು, ಮುಂದೇನೂ ಎಂಬ ಪ್ರಶ್ನೆ ಸದ್ಯ ಉಳಿದಿದೆ.
- ನಾವು ಮಂಗಳಮುಖಿಯರು, ಭಿಕ್ಷೆ ಬೇಡುತ್ತಿದ್ದ ನಮಗೆ ಈಗ ಕೆಲಸವಿಲ್ಲ. ನನಗೆ ಶುಗರ್ ಇದೆ. ಶುಗರ್ ಮಾತ್ರೆ ತರೋದಕ್ಕೆ ಸಾರಿಗೆ ಸೌಲಭ್ಯವೂ ಇಲ್ಲ, ಹಣವೂ ಇಲ್ಲ. ಜಿಲ್ಲಾ ಪಂಚಾಯಿತಿ ಸದಸ್ಯ ಬಸವಂತಪ್ಪ ತಂದುಕೊಟ್ಟಿದ್ದಾರೆ. ಆದರೆ ನನ್ನಂತೆಯೇ ಅನೇಕರು ಕಾಯಿಲೆಯಿಂದ ಬಳಲುತ್ತಿದ್ದು, ಅವರ ನೆರವಿಗೆ ಸರಕಾರ ಬರಲಿ.
| ನಂದನಮ್ಮ, ಮಂಗಳಮುಖಿ
- ಮಂಗಳಮುಖಿಯರು ಹಸಿವಿನಿಂದ ಬಳಲುತ್ತಿದ್ದ ಕಾರಣ ಅವರಿಗೆ ಆಹಾರದ ಕಿಟ್ ನೀಡಲಾಗಿದೆ. ಮಂಗಳಮುಖಿಯೊಬ್ಬರು ಶುಗರ್ದಿಂದ ಬಳಲುತ್ತಿದ್ದು , ಅವರಿಗೆ ಸಿಟಿಯಿಂದ ತಂದು ಕೊಡಲಾಗಿದೆ.
| ಬಸವಂತಪ್ಪ, ಜಿಲ್ಲಾ ಪಂಚಾಯತ್ ಸದಸ್ಯ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ