Connect with us

ದಿನದ ಸುದ್ದಿ

ಭಾರತ ಭಾಗ್ಯವಿಧಾತರೊಟ್ಟಿಗೆ ಹಂಸಲೇಖರ ಅನುಸಂಧಾನ

Published

on

  • ಹಾರೋಹಳ್ಳಿ ರವೀಂದ್ರ

ಮರ್ತ್ಯ ಸೇನ್ ಅವರಿಗೆ ನೊಬೆಲ್ ಬಂದಾಗ ಅವರು “ನಾನು ಹೊಸತೇನನ್ನು ಮಾಡಿಲ್ಲ, ಬಾಬಾಸಾಹೇಬರ ಆರ್ಥಿಕ ಸಿದ್ಧಾಂತಗಳನ್ನು ವಿಸ್ತರಿಸಿದ್ದೇನಷ್ಟೆ ಎಂದು ಹೇಳಿದರು. ಅಮೇರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯವು ತನ್ನ 250 ವರ್ಷಗಳ ಚರಿತ್ರೆಯಲ್ಲಿ ಶ್ರೇಷ್ಠ ವಿದ್ಯಾರ್ಥಿ ಯಾರು? ಎಂದು ಹುಡುಕಿದಾಗ ಅವರ ಕಣ್ಣಿಗೆ ಕಂಡಿದ್ದು ಅಂಬೇಡ್ಕರ್”. ಹೀಗೆ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ದಲಿತರಷ್ಟೆ ಅಲ್ಲದೆ, ದಲಿತೇತರರು ಹಾಗೂ ಭಾರತೀಯೇತರರು ಕೂಡ ಅತಿ ಹೆಚ್ಚು ಹುಡುಕಾಟ ನಡೆಸಿದ್ದಾರೆ.

2017 ರಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವದಲ್ಲಿತ್ತು. ಆ ವರ್ಷ ಡಾ. ಬಿ. ಆರ. ಅಂಬೇಡ್ಕರ್ ಅವರಿಗೆ 125 ನೇ ಜನ್ಮದಿನ. ಅವರ ನೆನಪಿನಾರ್ಥಕವಾಗಿ ಸರ್ಕಾರವು ವಾರ್ತಾಇಲಾಖೆಯ ಮೂಲಕ ‘ಭಾರತ ಭಾಗ್ಯವಿಧಾತ’ ಎಂಬ ಶೀರ್ಷಿಕೆಯಡಿ ಅಂಬೇಡ್ಕರ್ ಅವರ ಜೀವನ ಸಾಧನೆ ಕುರಿತು 1 ಗಂಟೆ 29 ನಿಮಿಷಗಳ ಧ್ವನಿ ಬೆಳಕು ದೃಶ್ಯ ರೂಪವನ್ನು ನಿರ್ಮಾಣ ಮಾಡಲಾಯಿತು.

ಅಂದು ಆ ರಂಗ ರೂಪಕ್ಕೆ ಬಿ. ಎಂ. ಗಿರಿರಾಜ್ ಅವರು ನಿರ್ದೇಶಕರಾಗಿದರೆ, ಶೀರ್ಷಿಕೆ ಗೀತೆ ರಚನೆಯನ್ನು ಕೆ. ವೈ. ನಾರಾಯಣಸ್ವಾಮಿ ಮಾಡಿದ್ದರು. ಇದರೊಟ್ಟಿಗೆ ಒಟ್ಟು 80 ಮಂದಿ ರಂಗ ಕಲಾವಿದರು ಕೆಲಸ ಮಾಡಿದರು. ಈ ಭಾರತ ಭಾಗ್ಯವಿಧಾತ ಧ್ವನಿ ಮತ್ತು ಬೆಳಕು ದೃಶ್ಯ ರಂಗದಲ್ಲಿ ಅಂಬೇಡ್ಕರ್ ಅವರ ಹಲವು ಸಾಧನೆಗಳನ್ನು ಘನೀಕರಿಸಲಾಯಿತು. ಭಾಕ್ರಾನಂಗಲ್ ಅಣೆಕಟ್ಟು, ಹಿರಾಕುಡ್ ಯೋಜನೆ, ರಿಸರ್ವ್ ಬ್ಯಾಂಕ್ ಸ್ಥಾಪನೆ, ಅಸ್ಪೃಶ್ಯತೆ ವಿರುದ್ಧ ಹೋರಾಟ, ಹಿಂದೂ ಕೋಡ್ ಬಿಲ್, ಕಾರ್ಮಿಕ ಚಳವಳಿ ಹಾಗೂ ಕಾನೂನು ಮಂತ್ರಿ ಹೀಗೆ ಮುಂತಾದ ವಿಚಾರಗಳನ್ನು ಅಲ್ಲಿ ತರಲಾಯಿತು.

ಈ ದೃಶ್ಯ ರಂಗರೂಪಕವು ಕರ್ನಾಟಕದಾದ್ಯಂತ ನಡೆಯಿತು. ಅದರ ಹಿಂದೆ ದಲಿತರು, ದಲಿತೇತರರು ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರು. ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಅವರೊಟ್ಟಿಗೆ ದಲಿತೇತರರ ಪಾತ್ರ ಎಷ್ಟಿತ್ತೊ ಇಂದು ಅವರ ವಿಚಾರಗಳೊಟ್ಟಿಗೆ ದಲಿತರನ್ನು ಹೊರತುಪಡಿಸಿದ ಹಲವಾರು ಜನಾಂಗಗಳು ಇಂದಿಗೂ ಸಾಗುತ್ತಿವೆ.

ವಾರ್ತಾ ಇಲಾಖೆಯಿಂದ ಮಾಡಿದ ಭಾರತ ಭಾಗ್ಯವಿಧಾತಕ್ಕೆ ಕವಿ ಡಾ. ಸಿದ್ಧಲಿಂಗಯ್ಯ, ಎಲ್. ಹನುಮಂತಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಎನ್. ಆರ್. ವಿಶು ಕುಮಾರ್ ರವರಂತವರು ಸಲಹಾ ಮಂಡಳಿಯಲ್ಲಿದ್ದರು. ಆದರೆ ಒಟ್ಟಾರೆ ಕಾರ್ಯಕ್ರಮದ ಗೌರವ ಸಲಹೆಗಾರರಾಗಿ ಹೆಸರಾಂತ ಸಂಗೀತಗಾರ ಡಾ. ಹಂಸಲೇಖ ಮತ್ತು ಸಿ. ಬಸವಲಿಂಗಯ್ಯನವರಿದ್ದರು.

ಕರ್ನಾಟಕದಲ್ಲಿ ಪ್ರತಿ ಜಿಲ್ಲೆ, ತಾಲ್ಲೂಕು ಮೂಲೆ ಮೂಲೆಗೆ ಭಾರತ ಭಾಗ್ಯವಿಧಾತ ತಲುಪುವುದರ ಹಿಂದೆ ಸಂಗೀತ ವಿದ್ವಾಂಸ ಹಂಸಲೇಖ ಅವರ ಶ್ರಮವನ್ನೂ ಕೂಡ ನೆನೆಯಬೇಕು. ಅಂಬೇಡ್ಕರ್ ಅವರು ಸಂಗೀತ, ಸಾಹಿತ್ಯ, ಚಲನಚಿತ್ರ, ರಂಗ ಪ್ರಯೋಗ ಹೀಗೆ ಹಲವು ಮಾಧ್ಯಮಗಳ ಮೂಲಕ ತಲುಪುತಿರುವುದಕ್ಕೆ ದಲಿತೇತರರ ಪಾತ್ರ ಮಹತ್ತರವಾದದ್ದು. ಬಹುತೇಕ ಇಂತಹ ಮಹಾನ್ ಕಾರ್ಯಗಳನ್ನು ದಲಿತರಿಗಿಂತ, ದಲಿತ ನಾಯಕರಿಗಿಂತ ದಲಿತೇತರರು ಮಾಡಿದ್ದೇ ಹೆಚ್ಚು. ಆದರೆ ನಾವು ಅವರನ್ನು ಕನಿಷ್ಠ ಸೌಜನ್ಯವನ್ನು ತೋರಿಸದೆ ದೂಷಿಸುತ್ತಲೇ ಕಾಲ ಕಳೆಯುತಿದ್ದೇವೆ.

ಹಂಸಲೇಖ ಅವರು ಅಂಬೇಡ್ಕರ್ ಅವರ ಬಗೆ ಒಂದೆರಡು ಮಾತನಾಡಿ ಪ್ರಚಾರಕ್ಕಾಗಿ ನಿಂತವರಲ್ಲ. ಗೌರವ ಸಲಹೆಗಾರರಾಗಿ ಮನೆ ಮನೆಗೆ ಅಂಬೇಡ್ಕರ್ ಅವರನ್ನು ತಲುಪಿಸಿದವರು. ಒಬ್ಬ ದಲಿತೇತರಾಗಿ ಹಂಸಲೇಖ ಅವರು ಭಾರತ ಭಾಗ್ಯವಿಧಾತರೊಂದಿಗೆ ನಡೆಸಿದ ರಂಗ ರೂಪಕ ಅನುಸಂಧಾನ. ಅವರ ಬಗ್ಗೆ ಹೇಳಲು ಸಾಕಷ್ಟಿದೆ, ಸದ್ಯಕ್ಕೆ ಇಷ್ಟು ಸಾಕು.

ಸೌಜನ್ಯ : ಫೇಸ್‌ಬುಕ್‌ (ಲೇಖರ ವಾಲ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending