ದಿನದ ಸುದ್ದಿ
ಇ-ಕಾಮರ್ಸ್ ಡ್ರೋಣ್ ಬಳಕೆಗೆ ಅನುಮತಿ; ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್
ಸುದ್ದಿದಿನ ಡೆಸ್ಕ್: ಆನ್ಲೈನ್ನಲ್ಲಿ ಏನಾದ್ರು ಆರ್ಡರ್ ಮಾಡಿದರೆ ಇದನ್ನು ನಿಮಗೆ ತಲುಪಿಸಲು ಇನ್ಮುಂದೆ ನೀವು ಮನೆ ಬಾಗಿಲಿನಲ್ಲಿ ಡೆಲಿವರಿ ಬಾಯ್ ಬದಲು
ಡ್ರೋಣ್.ಗಾಗಿ ಕಾಯಬೇಕಾಗುತ್ತದೆ. ನಾಗರಿಕ ವಿಮಾನಯಾನ ಇಲಾಖೆಯು ಡ್ರೋಣ್ ನೀತಿ ಜಾರಿಗೆ ತಂದಿದ್ದು, ಕಮರ್ಷಿಯಲ್ ಬಳಕೆಗಾಗಿ ಅವಕಾಶ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳುವ ಇ- ಕಾಮರ್ಸ್ ಕಂಪನಿಗಳು ಡ್ರೋಣ್ ಬಳಸಿಕೊಂಡು ತಮ್ಮ ಉತ್ಪನ್ನ ಮಾರಾಟ ಮಾಡುವ ಸಾಧಗಯತೆ ಹೆಚ್ಚಾಗಿದೆ. ಇದರೊಂದಿಗೆ ಶೀಘ್ರ ಗ್ರಾಹಕರ ತಲುಪಿ ತಮ್ಮ ವಹಿವಾಟು ಹೆಚ್ಚಿಸಿಕೊಳ್ಳಲಿವೆ.
ಕೇಂದ್ರ ಸರ್ಕಾರ ವಿಮಾನಯಾನ ಇಲಾಖೆ ಇ- ಕಾಮರ್ಸ್ ಕಂಪನಿಗಳು ಡ್ರೋಣ್ ಬಳಕೆಯ ಯೋಜನೆಗೆ ಸಹಿ ಹಾಕಿದ್ದು, ಡಿಸೆಂಬರ್ ನಂತರ ಕಂಪನಿಗಳು ಇದರ ಪಡರದುಕೊಳ್ಳಲಿವೆ.
ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್
ಸರ್ಕಾರ ರಚಿಸಿರುವ ಡ್ರೋಣ್ ನೀತಿಯಲ್ಲಿ ಡ್ರೋಣ್ ಗಳನ್ನು ಐದು ಕ್ಯಾಟಗರಿಗಳಾಗಿ ವಿಂಗಡಿಸಿವೆ. ನ್ಯಾನೋ ಕ್ಯಾಟಗರಿಯಲ್ಲಿ 250ಗ್ರಾಂರಿಂದ 150 ಕೆಜಿ ತೂಕದವರೆಗಿನ ಡ್ರೋಣ್, ಮಕ್ಕಳು ಆಟಿಕೆಯಾಗಿ ಬಳಸುತ್ತಿರುವ 250ರಿಂದ 2 ಕೆಜಿ ತೂಕದ ಮೈಕ್ರೋ ಡ್ರೋಣ್ ಗಳನ್ನು ಬಳಸಿಕೊಳ್ಳಲು ಅವಕಾಶ ನೀಡಿದೆ. ಎಲ್ಲ ಡ್ರೋಣ್ ಬಳಕೆದಾರರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಯುನಿಕ್ ಐಡೆಂಟಿಫಿಕೇಷನ್ ನಂಬರ್ (UIN) ನೀಡಲಿದೆ. ಡ್ರೋಣ್ ಬಳಕೆದಾರರಿಗೆ 18 ವರ್ಷ ವಯಸ್ಸಾಗಿರಬೇಕು. ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದು, ಇಂಗ್ಲಿಷ್ ಜ್ಞಾನ ಹೊಂದಿರಬೇಕು.
ನ್ಯಾನೋ, ಮೈಕ್ರೋ ವಿಧದಲ್ಲಿ ಐದು ಕ್ಯಾಟಗರಿ
ರಿಮೋಟ್ ಪೈಲೆಟೆಡ್ ಏರ್ಕ್ರಾಫ್ಟ್ ಸಿಸ್ಟಮ್ (RPAS) ಚಾಲಿತ ನ್ಯಾನೋ ಡ್ರೋಣ್.ಗಳಿಗೆ ಅನ್ ಮ್ಯಾನ್ಡ್ ಏರ್ಕ್ರಾಫ್ಟ್ ಆಪರೇಟರ್ ಪರ್ಮಿಟ್ (UAOP) ಪರವಾನಿಗೆ ಅಗತ್ಯವಿಲ್ಲ. 50 ಅಡಿ ಎತ್ತರದಲ್ಲಿ ಹಾರಾಟ ಮಾಡುವಂಥವು. 200 ಅಡಿ ಎತ್ತರದಲ್ಲಿ ಕಣ್ಣಿಗೆ ಕಾಣುವ ಅಂತರದಲ್ಲಿ ಹಗಲು ವೇಳೆ ಹಾರಾಟ ಮಾಡುವ ಡ್ರೋಣ್ ಗಳಿಗೆ ಸೆಕ್ಯುರಿಟಿ ಮತ್ತು ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿಯ ಪರವಾನಗಿ ಅಗತ್ಯವಿದೆ. 400ಅಡಿ ಎತ್ತರದವರೆಗೆ ಮಾತ್ರ ಹಾರಾಟ ಮಾಡಬಹುದಾಗಿದೆ.
ನೋ ಫ್ಲೈಯಿಂಗ್ ಜೋನ್ ಹಾರಾಡುವಂತಿಲ್ಲ
ದೇಶದಲ್ಲಿ ಕೆಲವೊಂದು ಪ್ರದೇಶಗಳನ್ನು ‘ನೋ ಫ್ಲೈಯಿಂಗ್ ಜೋನ್’ ಎಂದು ಗುರುತಿಸಿರುವ ಕಡೆ ಹಾರಾಟ ಮಾಡುವಂತಿಲ್ಲ. ಅವುಗಳೆಂದರೆ, ಏರ್ಪೋರ್ಟ್, ಅಂತಾರಾಷ್ಟ್ರೀಯ ಗಡಿಭಾಗ, ದೆಹಲಿಯ ವಿಜಯ್ ಚೌಕ್, ಎಲ್ಲಾ ರಾಜ್ಯಗಳ ರಾಜ್ಯ ಕಾರ್ಯದರ್ಶಿಗಳ ಕಚೇರಿ, ಸ್ಟ್ರಟೆಜಿಕ್ ಲೋಕೇಷನ್, ಮಿಲಿಟರಿ ಸ್ಥಳಗಳಲ್ಲಿ ಹಾರಾಟ ಮಾಡುವಂತಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ1 day ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ