ದಿನದ ಸುದ್ದಿ
ದಲಿತರ ಮೇಲೆ ಸವರ್ಣೀಯರಿಂದ ದೌರ್ಜನ್ಯ : ಈ ಊರಲ್ಲಿ ದಲಿತರಿಗೆ ಪ್ರವೇಶವಿಲ್ಲ
ಸುದ್ದಿದಿನ ವಿಶೇಷ : ಕುಲ ಕುಲ ಎಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆ ಎನ್ನಾದರು ಬಲೀರಾ ಅಂತ ದಾಸರೇ ಹೇಳಿದ್ದಾರೆ.ಆದ್ದರೆ ಅಂತಹ ಕುಲದ ಹೊಡೆದಾಟ ಇನ್ನು ಸಹಿತ ನಡೀತಿದೆ .ಇವನ್ನು ಮೇಲು ಕೀಳು ಎಂಬ ಭಾವನೆ ಇಂದಿಗು ಸಹ ಜೀವಂತವಾಗಿ ಕಣ್ಣಮುಂದೆ ಕಾಣ್ತಿದೆ.ಮೇಲ್ಜಾತಿಯವರು ಕೇಳ್ಜಾತಿವರ ಮೇಲೆ ನಿರಂತರವಾಗಿ ಶೋಷಣೆ ಮಾಡ್ತಿದ್ದಾರೆ .ಅಂತಹ ಅಸ್ಪೃಶ್ಯತೆಯ ಜನಾಂಗ ದೌರ್ಜನಕ್ಕೆ ಒಳಗಾಗಿ ಕೇಸರಿನ ಹುಳುಗಳ ರೀತಿಯಲ್ಲಿ ಬದುಕುತ್ತಿದ್ದಾರೆ .ಅಂತಹ ಹೃದಯ ವಿದ್ರಾವಕ ಘಟನೆ ಇಲ್ಲಿನ ಜನರದ್ದಾಗಿ ಇವರ ಪರಿಸ್ಥಿತಿ.
ಇದು ರಾಯಚೂರು ಜಿಲ್ಲೆ ಲಿಂಗಸುಗೂರ ತಾಲೂಕಿನ ಯರಜಂತಿ ಗ್ರಾಮ ಈ ಗ್ರಾಮದಲ್ಲಿ ದಲಿತರಿಗೆ ಅಸ್ಪೃಶ್ಯರಿಗೆ ಗ್ರಾಮದಲ್ಲಿ ಅವಕಾಶ ಇಲ್ಲ ಯಾವುದೇ ಗುಡಿ ಗುಂಡಾರಗಳಲ್ಲಿ ,ಊರು ಕೇರಿಗಳಲ್ಲಿ ಹೊಗುವಂತಿಲ್ಲ .ಯಾರು ಮುಟ್ಟಬಾರದು ಯಾರು ಇವರನ್ನು ಮಾತನಾಡಿಸಬಾರದು .ಯಾವುದೇ ಅಂಗಡಿಗಳಿಗು ಸಹ ಹೋಗುವಹಾಗಿಲ್ಲ ಅಷ್ಟೇ ಯಾಕ್ಕೆ ಇವರು ಮಕ್ಕಳಿಗು ಸಹ ಶಾಲೆಯಲ್ಲಿ ಅವಕಾಶ ಇಲ್ವಂತೆ ಅವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಒಂದು ತುತ್ತು ಊಟವನ್ನು ಹಾಕ್ತಿಲ.ಇಲ್ಲಿರುವ ಕೇಳವರ್ಗದವರು ಜನರು ಒಡಾಡುವ ರಸ್ತೆ ನೋಡಿದ್ರೆ ಭಯಬೀತರಾಗಿ ಬಿಡ್ತಿರಾ ಯಾಕಂದ್ರೆ ಇವರು ಒಡಾಡುವ ರಸ್ತೆ ಕಲ್ಲು ಮುಳಿನ ಗುಡ್ಡಗಳಿಂದ ಕೂಡಿದ ಸಾವಿನ ದಿಬ್ಬವಾಗಿ ಪರಿಣಮಿಸಿದೆ. ಅದೇ ರೀತಿ ಮೇಲ್ಜಾತಿಯವರ ರಸ್ತೆಗಳು ಆರ್ ಸಿ ಸಿ ರಸ್ತೆಯಾಗಿದೆ.ಒಂದು ವೇಳೆ ಅವರ ನಿಯಮವನ್ನು ತಪ್ಪಿದ್ದರೆ ಇವರ ಮೇಲೆ ಮಚ್ಚಿನಿಂದ ಕೊಚ್ಚಿ ಹಾಕುತ್ತೆನೆ . ಅಂತ ಮಾರಣಾಂತಿಕ ಹಲ್ಲೆ ಮಾಡಲು ಮುಂದಾಗುತ್ತಾರೆ.ಬಾಯಿಗೆ ಬಂದಂತೆ ಸ್ತ್ರೀ ಯರ ಮೇಲೆ ನಿಂದನೆ ಮಾಡೋದು ತೊಡೆ ತಟ್ಟಿ ಕರೆಯೊದು ಇಂತಹ ಅವಮಾನವೀಯ ನಡವಳಿಕೆ ಇಲ್ಲಿನ ಗ್ರಾಮಸ್ಥರು ಮತ್ತು ಇಲ್ಲಿನ ಪಂಚಾಯಿತಿಯ ಸದ್ಯಸರು ದೌರ್ಜನ್ಯವೆಸಗುತ್ತಿದ್ದಾರೆ.
ಈ ಊರಿನಲ್ಲಿ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ ಆಟೋಗಳ ಮುಖಾಂತರವಾಗಿ ಬರಬೇಕು ಅಂತಹ ಪರಿಣಾಮವಾಗಿದೆ .ಹೀಗಿರುವಾಗ ದಲಿತರು ಬಂದರೆ ಅವರಿಗೆ ಆಟೋಗಳಲ್ಲಿಯು ಅವಕಾಶ ಇಲ್ಲ ಸಾವು ಬದುಕುನ ನಡುವೆ ಹೋರಾಡುತ್ತಿದ್ದಾರೆ ಚಿಕಿತ್ಸೆ ಪಡೆಯಲು ಅವರು ಪರದಾಟ ಪಟ್ಟ ಸ್ಥಿತಿ ಅಷ್ಟ ಇಷ್ಟಲ. ಕುಡಿಯಲು ನೀರಿಗೆ ಸುಮಾರು ದೂರಹೋಗಿ ತರಬೇಕು ಅದು ಜಾನುವಾರಗಳು ಕುಡಿಯುವ ನೀರಿನ ಹೊಂಡದಲ್ಲಿ. ಇನ್ನು ಇಲ್ಲಿನ ಜನರಿಗೆ ಯಾವುದೇ ಸರಕಾರಿ ಮನೆಗಳು ಶೌಚಾಲಯಗಳಿಲ ಸರಕಾರದ ಬೋಮಿಯನ್ನು ಸಹ ಲಪಟಾಯಿಸ್ಸಿದ್ದಾರೆ. ವಾಸಿಸಲು ಮನೆ ಇಲ್ಲದೆ ಊರಿನ ಹೊರ ಭಾಗದ ದಿಬ್ಬದಲ್ಲಿ ವಾಸ ಮಾಡ್ತಿದ್ದಾರೆ.ಇಂತಹ ಚಿತ್ರಣವನ್ನು ನೊಡುತ್ತಿದ್ದರೆ ಇದು ರಾಮರಾಜ್ಯದ ಕನಸ್ಸಿನ ಕರ್ನಾಟಕ ನಾ ಇಲ್ಲ ರಾವಣ ದೌರ್ಜನ್ಯ ಪ್ರದೇಶ ನಾ ಅಂತ ಗೋಚ್ಚರಿಸುತ್ತಿದೆ.ಇಂತಹ ಇಷ್ಟ ಕಷ್ಟಗಳ ಸಂಕೊಲೆಗಳಲಿ ಜನ ಜೀವಂತ ಶವವಾಗಿ ಬದುಕುತ್ತಿದ್ದಾರೆ.ಎಲ್ಲಿದೆ ಮಾನವನ ಮೂಲಭೂತ ಹಕ್ಕು ಎಂಬ ಪ್ರಶ್ನೆ ಕಾಡುತ್ತಿದೆ.ಈ ಜನರ ಕಣ್ಣಿರಿನ ಆಕ್ರೋಶದ ಕಥೆಯನ್ನು ಕೇಳಿದ್ರೆ ಎಂತಹ ಹಿಟ್ಲರನ ಹೃದಯದವನಿದ್ದರು ಕರಗುತ್ತಾನೆ.
ಇನ್ನೂ ರಾಜಕೀಯ ನಾಯಕರು ತಮ್ಮ ಬೇಳೆಯನ್ನು ಬೆಯಿಸಿಕೊಳಲು ಚುನಾವಣೆ ಬಂದಾಗ ಅವರ ಮನೆಯಲ್ಲಿ ಊಟ ಮಾಡೊದು ನೀರು ಕುಡಿಯೊದು ಮಲಗೊದು ಇಂತಹ ನಾಟಕವನ್ನು ಬಿಟ್ಟು ಇವರ ಮೇಲೆ ನಡೆಯುವ ದಬ್ಬಾಳಿಕೆ ವಿರುದ್ಧ ಕೈ ಜೋಡಿಸಿ ಅಂಬೇಡ್ಕರ್ ಹೊತ್ತ ಕನಸಿನ ಆದರ್ಶ ಪ್ರರೂಪಗಳು ಪಾಲಿಸಿ .ಕಾಲ್ತುಳಿತಕ್ಕೆ ಒಳಗಾಗಿರುವ ಇಂತಹ ಕಾಯಕ ಸಮಾಜದವನ್ನು ಉನ್ಬತಿ ಕರಿಸಿ ಅಸ್ಪೃಶ್ಯತೆಯ ವಿರುದ್ದ ದಬ್ಬಾಳಿಕೆ ಮಾಡುವವರನ್ನು ಶಿಕ್ಷಿಸಿ. ಕಾಯಕ ಸಮಾಜಕ್ಕೆ ಸಿಗಲಿ ಸ್ಥಾನ ಮಾನ.
ನೀರಿಗ ಯಾವ ಕುಲ
ಅಗ್ನಿಗೆ ಯಾವ ಕುಲ,
ವಾಯುಗೆ ಯಾವ ಕುಲ,
ರಕ್ತಕ್ಕೆ ಯಾವ ಕುಲ .
ಇರುವುದು ಒಂದೆ ಕುಲ ಅದು ಮನುಷ್ಯ ಕುಲ…ಮನುಷ್ಯ ಕುಲ
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243