ದಿನದ ಸುದ್ದಿ
ದಾವಣಗೆರೆ ವಿವಿ ಯಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಆರಂಭ : ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಸ್ಥಳೀಯ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹಾಗೂ ಈ ಫ್ಯಾಷನ್ ಡಿಸೈನಿಂಗ್ ಕ್ಷೇತ್ರಕ್ಕೆ ವೃತ್ತಿ ಕೌಶಲ್ಯಗಳನ್ನು ಒಳಗೊಂಡ ಪದವೀಧರ ಅಭ್ಯರ್ಥಿಗಳನ್ನು ಸೃಷ್ಟಿಸುವ ಸದುದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಹೊಸ ಕೋರ್ಸ್ನ್ನು ಪ್ರಸಕ್ತ ಶೈಕ್ಷಣಿಕ ವರ್ಷ 2020-21 ರಿಂದ ಆರಂಭಿಸಲಾಗುತ್ತಿದ್ದು, ಅ.22 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಸ್ನಾತಕೋತ್ತರ ಎಂ.ಎಸ್ಸಿ ಫ್ಯಾಷನ್ ವಿನ್ಯಾಸ ಅಧ್ಯಯನ ವಿಭಾಗವು ಎರಡು ವರ್ಷದ (ನಾಲ್ಕು ಸೆಮಿಸ್ಟರ್) ಕೋರ್ಸ್ ಆಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪಡೆಯಬಹುದು. ಕೋರ್ಸ್ನ ಪ್ರವೇಶಾತಿಗಾಗಿ ಈಗಾಗಲೇ ವಿಶ್ವವಿದ್ಯಾನಿಲಯವು ಅಧಿಸೂಚನೆ ಹೊರಡಿಸಿದೆ.
ಕೋರ್ಸ್ನ ಉದ್ದೇಶ
ಫ್ಯಾಷನ್ ವಿನ್ಯಾಸದಲ್ಲಿ ವಿದ್ಯಾರ್ಥಿಗಳಿಗೆ ಸೃಜನಶಿಲತೆ ಮತ್ತು ಹೊಸತನವನ್ನು ಕಂಡುಕೊಳ್ಳುವುದು ಮತ್ತು ಫ್ಯಾಷನ್ ವಿನ್ಯಾಸದ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ತಾಂತ್ರಿಕ ಅಂಶಗಳ ಬಗ್ಗೆ ಜ್ಞಾನವನ್ನು ನೀಡುವುದು ಈ ಕೋರ್ಸ್ನ ಮುಖ್ಯ ಉದ್ದೇಶವಾಗಿದೆ.
ಅರ್ಹತೆ
ಈ ಕೋರ್ಸ್ ವ್ಯಾಸಂಗ ಮಾಡಲಿಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯನ್ನು (ಬಿಎ, ಬಿಎಸ್ಸಿ, ಬಿಕಾಂ, ಬಿಬಿಎಂ, ಬಿಬಿಎ, ಬಿಇ ಇನ್ನಿತರೆ) ಹೊಂದಿರಬೇಕು.
ಕೋರ್ಸ್ನ ಮಹತ್ವ/ಉಪಯೋಗ
ಮಾರುಕಟ್ಟೆ ಆಧಾರಿತ ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ವಿನ್ಯಾಸಕಾರರ ಬೇಡಿಕೆ ಹೆಚ್ಚುತ್ತಿದೆ. ಮುಖ್ಯವಾಗಿ ಜನರು ಹೆಚ್ಚು- ಹೆಚ್ಚು ಫ್ಯಾಷನ್ ಪ್ರಜ್ಞೆಯನ್ನು ಪಡೆಯುತ್ತಿದ್ದಾರೆ. ಹೀಗಾಗಿ ಫ್ಯಾಷನ್ ವಿನ್ಯಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರೆ ಅನುಕೂಲವಿದೆ. ಫ್ಯಾಷನ್ ವಿನ್ಯಾಸ ಪದವೀಧರರನ್ನು ಪ್ರಸಿದ್ಧ ವಿನ್ಯಾಸಕಾರರು ಮಾತ್ರವಲ್ಲದೇ ಸ್ಥಳೀಯ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಲ್ಲೂ ಬೇಡಿಕೆ ಇದೆ. ಅವರ ನೇಮಕಕ್ಕೆ ಆದ್ಯತೆ ನೀಡುತ್ತಿವೆ.
ಉದ್ಯೋಗಾವಕಾಶಗಳು
ಫ್ಯಾಷನ್ ಉದ್ಯಮಕ್ಕೆ ಸೇರಬಯಸುವ ಆಕಾಂಕ್ಷಿಗಳಿಗೆ ಮುಂದೆ ಸಾಕಷ್ಟು ಅವಕಾಶಗಳಿವೆ. ಕೋರ್ಸ್ ಮುಗಿದ ನಂತರ ಫ್ಯಾಷನ್ ವಿನ್ಯಾಸಕಾರರಾಗಿ ಹಾಗೂ ಕಾರ್ಪೋರೇಟ್ ಕಂಪನಿಗಳೊಂದಿಗೆ ಕೆಲಸ ಮಾಡಬಹುದು.
ಕ್ಯಾಂಪಸ್ ಆವರಣದಲ್ಲಿ ಅರ್ಜಿ ಮತ್ತು ಕೈಪಿಡಿ ದೊರೆಯುವುದು. ಅರ್ಜಿ ಸಲ್ಲಿಸಲು ಅ.22 ಕೊನೆಯ ದಿನವಾಗಿರುತ್ತದೆ. ಅ.27, 28 ನತ್ತಯ ಪ್ರವೇಶ ಪರೀಕ್ಷೆ (ತಾತ್ಕಾಲಿಕ) ನಡೆಯಲಿದ್ದು, ಕೌನ್ಸಲಿಂಗ್ ಪ್ರಕ್ರಿಯೆ ನ.02 ಮತ್ತು ನ.03 ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ(ಮೆರಿಟ್ ಸೀಟುಗಳು: ಜನರಲ್ ಮೆರಿಟ್ (ತಾತ್ಕಾಲಿಕ), ನ.04 ಬೆಳಗ್ಗೆ 10.30 ಗಂಟೆಗೆ (ತಾತ್ಕಾಲಿಕ) ಓಪನ್ ಮೆರಿಟ್ ಪ್ರವೇಶಾತಿ ನಡೆಯಲಿದ್ದು ನ.05 ಖಾಲಿ ಉಳಿದ ಸೀಟುಗಳ ಮಾಹಿತಿ ಲಭ್ಯವಾಗುತ್ತದೆ.
ಈ ಕೋರ್ಸ್ ಸೇರಲಿಚ್ಚಿಸುವ ಅಭ್ಯರ್ಥಿಗಳು ಅರ್ಜಿ ಹಾಗೂ ಇನ್ನಿತರೇ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್https://davangereuniversity.ac.in ನೀಡಬಹುದಾಗಿದ್ದು ಸಂಯೋಜನಾಧಿಕಾರಿಗಳ ಮೊ.ನಂ.7892631239 ಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243