Connect with us

ದಿನದ ಸುದ್ದಿ

ದೆಹಲಿ‌ ಸಿಎಂ ಅರವಿಂದ್ ಕೇಜ್ರಿವಾಲರನ್ನು ಅವಹೇಳಿಸಿ ಶೂ ಖರೀದಿಸಲು ಹಣ ಕಳಿಸಿದ ಇಂಜಿನಿಯರ್ ಗೆ ಅವರು ಕೊಟ್ಟ ಉತ್ತರ..! : ಮಿಸ್ ಮಾಡ್ದೆ ಓದಿ

Published

on

  • ಮೂಲ : ಮಲಯಾಳ, ಕನ್ನಡಕ್ಕೆ: ರಶೀದ್ ಅಬ್ದುಲ್ ಹಮೀದ್ (HA ) ಕಕ್ಕಿಂಜೆ

ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲರನ್ನು ಅವಹೇಳಿಸಿ ಅವರಿಗೆ ಶೂ ಖರೀದಿಸಲು 364 ರೂ ಕಳಿಸಿ ಫೇಸ್ಬುಕ್ ಪೋಸ್ಟ್ ಮಾಡಿದ ಇಂಜಿನಿಯರ್ ಗೆ ಕೇಜ್ರಿವಾಲರು ನೀಡಿದ ಉತ್ತರ.

ಪ್ರಿಯ ಇಂಜಿನಿಯರ್ ಗೆಳೆಯಾ,

“ತಾವು ಕಳಿಸಿದ ಹಣ ತಲುಪಿದೆ. ಅದರಲ್ಲಿ ಒಂದು ಜೊತೆ ಶೂ ಖರೀದಿಸಿದೆ. ನಿಮಗೆ ತಿಳಿದಿರುವ ಹಾಗೆ ನಮ್ಮ ರೂಪಾಯಿ ಮೌಲ್ಯವು ಪಾತಾಳಕ್ಕೆ ಇಳಿದಿರುವೂದರಿಂದ 364 ರುಪಾಯಿಗೆ ಅಷ್ಟೇನೂ ಉತ್ತಮ ಶೂ ಸಿಗಲಿಲ್ಲ. ನಾನು ಆಫೀಸಿಗೆ ಶೂ ಉಪಯೋಗಿಸುವುದಿಲ್ಲ. ಹಾಗಾಗಿ ಬೆಳಗ್ಗೆ ಜಾಗಿಂಗ್ ಹೋಗುವಾಗ ಇದನ್ನು ಉಪಯೋಗಿಸುವೆ. ನಿಮ್ಮ ಸಹೃದಯಿ ಮನಸ್ಸಿಗೆ ಕೃತಜ್ಞತೆಗಳು.

ನಿಮ್ಮಂತಹ ರಾಷ್ಟ್ರದ ಬಗ್ಗೆ ಚಿಂತಿಸುವ ಯುವಜನತೆ ನಮ್ಮ ರಾಷ್ಟ್ರದ ಬಲು ದೊಡ್ಡ ಶಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೂ ನಮ್ಮ ರಾಷ್ಟ್ರದ ಪ್ರಧಾನಿ ವಿದೇಶಗಳಿಗೆ ತೆರಳಿ ಭಾರತದಲ್ಲಿ ಜನಿಸಿದ್ದು ಕೂಡ ಅಪಮಾನವಾಯಿತು ಎನ್ನುವಂತಹ ಮಾತುಗಳನ್ನು ಆಡುವುದು, ರಾಷ್ಟ್ರ ಗೀತೆಗೆ ಗೌರವ ಸಲ್ಲಿಸದೆ ನಡೆಯುವುದು, ಹೆಮ್ಮೆಯ ಬಾವುಟದ ಮೇಲೆ ಸಹಿ ಹಾಕುವುದನ್ನು ನೋಡಿಯೂ ನೋಡದಂತೆ ನಟಿಸಬಾರದು.

ಒಬ್ಬ ಮುಖ್ಯಮಂತ್ರಿಯ ಚಪ್ಪಲನ್ನು ಗುರುತು ಮಾಡಿದ ತಾವು 40.36% ಇರುವ ನಿರ್ಗತಿಕ ಮತ್ತು, ‘ಭಾರತದ ಸ್ವರ್ಗ’ ಎಂದು ಬಿಂಬಿಸುವ ಗುಜರಾತಿನಲ್ಲಿ ಕೂಡ 62.78 % ಜನರು ತಮ್ಮ ಪ್ರಾಥಮಿಕ ಕಾರ್ಯಗಳನ್ನು ಬಯಲು ಪ್ರದೇಶದಲ್ಲಿ ಮಾಡುವುದು, ದೈನಂದಿನ ಒಂದು ಹೊತ್ತಿನ ತುತ್ತಿಗಾಗಿ ಕೃಷಿಕರು ಆತ್ಮಹತ್ಯೆ ಮಾಡಿಕೊಳ್ಳುವುದು, ಭ್ರಷ್ಟಾಚಾರ ದಿನನಿತ್ಯ ನಡೆಯುವುದು, ಜಾತಿ ಮತದ ಹೆಸರಲ್ಲಿ ತಮ್ಮೊಳಗೆ ಜಗಳ ತಂದಿಕ್ಕಿ ISIS ನಂತಹ ಸಂಘಟನೆಗಳು ಮೊಳಕೆಯೊಡೆಯುವುದು, ಜೀವಿಸಲು ಅತ್ಯಗತ್ಯ ಸಾಮಾನುಗಳ ಬೆಲೆ ಗಗನಕ್ಕೆ ಏರುವುದು ಮಾತ್ರವಲ್ಲ ಸೈನಿಕರು ಸಾವನ್ನಪ್ಪುವುದು ಕಂಡಿಲ್ಲ ಎಂಬಂತೆ ತಾವು ನಟಿಸಬಾರದು.

ನಿಮಗಿದು ಗೊತ್ತೇ ?? ನಾನು ಕೂಡ ಒಬ್ಬ ಇಂಜಿನಿಯರ್ ನ ಮಗನಾಗಿದ್ದೇನೆ, ಅಲ್ಲದೆ IIT ಯವನೂ ಅಲ್ಲದೆ IRS, ಮತ್ತು ಒಬ್ಬ ಆದಾಯ ತೆರಿಗೆ ಉದ್ಯೋಗಸ್ತೆಯ ಪತಿಯಾಗಿದ್ದೇನೆ, ಆರ್ಥಿಕವಾಗಿ ಒಂದು ಉತ್ತಮ ಕುಟುಂಬ, ಆದರೂ ವಿದ್ಯಾಬ್ಯಾಸದಲ್ಲಿ ಮತ್ತು ಉದ್ಯೋಗದಲ್ಲಿ ನಾನು ಒಮ್ಮೆಯೂ ನಮ್ಮ ರಾಜಕೀಯ ನೇತಾರರನ್ನು ಅವರ ವೇಷದಲ್ಲಿ ಅಲ್ಲ ಅವರು ಮಾಡುವ ಕೆಲಸದಲ್ಲಿ ಗಮನ ನೀಡಿದವನಾಗಿದ್ದೇನೆ. ಇಂದಿರಾ ಗಾಂಧಿಯವರ ಬಿಳಿ ಕೂದಲೊ ದೇವೇಗೌಡರ ಕೂದಲಿಲ್ಲದ ತಲೆಯೋ ನನ್ನ ಗಮನಕ್ಕೆ ಬಂದಿಲ್ಲ, ಅಲ್ಲದೆ ಅವರು ನೇತಾರರಾಗಿರುವ ಸಮಯದಲ್ಲಿ ನಮ್ಮ ರಾಷ್ಟ್ರದ ಜನಜೀವನ ರೀತಿ ಹೇಗಿದೆ ಎಂಬುದರಲ್ಲಾಗಿತ್ತು ನನ್ನ ಗಮನ ಮತ್ತು ನೋಟ.

ಭಿಕ್ಷೆ ಬೇಡುವ ಮಕ್ಕಳು, ಅವರ ಪಾಲನೆಗಾಗಿ ಶರೀರ ಮಾರುವ ತಾಯಂದಿರು, ಆದಾಗ್ಯೂ ಬಡತನ ತಡೆಯಲಾರದೆ ಆತ್ಮಹತ್ಯೆ ನಡೆಸುವ ತಂದೆಯಂದಿರು, ನಮ್ಮ ದೇಶದ ಈ ವ್ಯವಸ್ಥೆಯಾಗಿದೆ ಬಲು ದೊಡ್ಡ ಅವಮಾನ ಎಂದು ಹೇಳಲು ನನಗೆ ನಿರಾಶೆ ಇದೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳಬೇಕು ಎಂದು ನಾನು ಚಿಂತಿಸಿದೆ.

ಅದಕ್ಕಾಗಿ ನಾನು ನನ್ನ ಉದ್ಯೋಗಕ್ಕೆ ರಾಜಿ ಕೊಟ್ಟೆ, ಜನರ ನಡುವೆ ಇಳಿದು ಕೆಲಸ ಮಾಡಿದೆ, ಅದರ ಪ್ರತಿಫಲ ತಿಳಿಯಲು ಆರಂಭಿಸಿತು, ಜನರು ನನ್ನೊಂದಿಗೆ ನಿಂತರು ಚುನಾವಣೆಯಲ್ಲಿ ಅವರು ನನ್ನ ಗುರುತನ್ನು ಪ್ರದರ್ಶಿಸಿದರು, ಇಂದು ನನಗೆ ಅವರ ಕನಸುಗಳನ್ನು ನನಸು ಗೊಳಿಸುವ ಕೆಲಸದಲ್ಲಿ ನಿರತನಾಗಿದ್ದೇನೆ ಆದೂದರಿಂದ ನಾನದನ್ನು ಮರೆತೆ, ಕೋಟ್ಟು ಸೂಟು ಕನ್ನಡಕ ಹಾಕಿ ಸುತ್ತಬೇಕು ಎಂದೂ ವಿದೇಶಗಳಲ್ಲಿ ಹೋಗಿ ಸೆಲ್ಫಿ ತೆಗೆಯಬೇಕೆಂದು.

ಇಂಜಿನಿಯರ್ ಆದಾಗ ನಿಮಗೆ ಮುಖ್ಯಮಂತ್ರಿಯರ ಚಪ್ಪಲ್ ಒಂದು ಕೊರತೆಯಾಗಿ ಕಂಡಿತು, ತಾವು ಅದಕ್ಕೆ ಪರಿಹಾರ ಕಂಡು ಹಿಡಿದಿರಿ ಮೊದಲಾಗಿ ಅದನ್ನು ನಾನು ಅಭಿನಂದಿಸುತ್ತೇನೆ.ಆದರೆ ನಾನು ಇಂಜಿನಿಯರ್ ಆದಾಗ ನಮ್ಮ ರಾಷ್ಟ್ರದ ಏನೆಲ್ಲ ಕೊರತೆಗಳು ಎಂದು ನನ್ನ ಸ್ವರಾಜ್ ಎಂಬ ಪುಸ್ತಕದಲ್ಲಿದೆ, ಅದರಲ್ಲಿ ಹೇಳುವ ಕೊರತೆಗಳನ್ನ ಪರಿಹರಿಸಲು ನಿಮ್ಮ ಸಹಾಯ ಖಂಡಿತ ಬೇಕೆಂದು ನಿರೀಕ್ಷಿಸುತ್ತಾ..”

ನಿಮ್ಮವನೇ ಆದ ಅರವಿಂದ್ ಕೇಜ್ರಿವಾಲ್

ಒಳಿತನ್ನು ಹೇಳಲು ರಾಜಕೀಯ ನೋಡಬೇಕಾಗಿಲ್ಲ.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending