Connect with us

ದಿನದ ಸುದ್ದಿ

ಚಿತ್ರದುರ್ಗದ ತಮಟಕಲ್ಲು ಶಾಸನವು ಕನ್ನಡ ಸಾಹಿತ್ಯದ ಮೊದಲ ಪದ್ಯ : ಡಾ. ಜಯರಾಮಯ್ಯ

Published

on

ಸುದ್ದಿದಿನ,ದಾವಣಗೆರೆ : ಕನ್ನಡ ಶಾಸನಗಳನ್ನು ಡಾ.ಚಿದಾನಂದಮೂರ್ತಿಯವರು “ ಕನ್ನಡ ಸಾಹಿತ್ಯದ ತಲಕಾವೇರಿ “ಎಂದು ಕರೆಯುತ್ತಾ, ಕನ್ನಡ ಸಾಹಿತ್ಯ ಉಗಮವಾದದ್ದು ಶಾಸನಗಳಿಂದ ಎಂಬುದು ಅವರ ವಾದವಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ. ಜಯರಾಮಯ್ಯ ತಿಳಿಸಿದರು.

ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು 65ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಹಮ್ಮಿಕೊಂಡ ಅಂತರ್ಜಾಲ ಕನ್ನಡ ನುಡಿಹಬ್ಬ ಕಾರ್ಯಕ್ರಮದಲ್ಲಿ “ಕನ್ನಡ ಸಾಹಿತ್ಯಕ್ಕೆ ಪ್ರೇರಣೆಯಾದ ಶಾಸನಗಳು “ ಎಂಬ ವಿಷಯ ಕುರಿತು ಡಾ. ಜಯರಾಮಯ್ಯ ಶುಕ್ರವಾರ 13 ನೇ ದಿನದ ಉಪನ್ಯಾಸ ನೀಡಿದರು.

ಕ್ರಿಸ್ತಪೂರ್ವ 3ನೇ ಶತಮಾನದ ಬ್ರಹ್ಮಗಿರಿ ಶಾಸನ ಇದನ್ನು ಅಶೋಕನ ಶಾಸನ ಎಂದೇ ಕರೆಯಲಾಗುತ್ತದೆ. ಈ ಬ್ರಹ್ಮಗಿರಿ ಶಾಸನ ದಲ್ಲಿ ಕನ್ನಡದ ಮೊಟ್ಟಮೊದಲವನ್ನು ಗುರುತಿಸಬಹುದು. ಕನ್ನಡದ ಮೊಟ್ಟ ಮೊದಲ ಪದ “ ಇಸಿಲ್ಲ “‌.
ಕ್ರಿಸ್ತಪೂರ್ವ 300 ರಿಂದ 450 ರವರೆಗೆ ಹಲ್ಮಿಡಿ ಶಾಸನ ಸಿಗುವವರೆಗೂ 750 ವರ್ಷಗಳ ಇತಿಹಾಸದ ಮದ್ಯದಲ್ಲಿ ಅನೇಕ ಕನ್ನಡ ಪದಗಳನ್ನು ಗುರುತಿಸಬಹುದಾಗಿದೆ ಎಂದರು.

ಕವಿರಾಜಮಾರ್ಗ ಕೃತಿ ಸಿಗುವವರೆಗೂ ಕನ್ನಡ ಸಾಹಿತ್ಯ ರಚನೆಗೆ ಶಾಸನಗಳೇ ಪೂರಕ ದಾಖಲೆಗಳಾಗಿವೆ. ಕವಿರಾಜಮಾರ್ಗ ಲಕ್ಷಣ ಗ್ರಂಥವಾದರೆ, ವಡ್ಡಾರಾಧನೆ ಗದ್ಯಕೃತಿ. ಆದರೆ ಪಂಪನ ಆದಿಪುರಾಣ ವೇ ಕನ್ನಡದ ಮೊದಲ ಕಾವ್ಯ ಎಂದು ತಿಳಿಸಿದರು.

ಕನ್ನಡ ಸಾಹಿತ್ಯದ ದೃಷ್ಟಿಯಿಂದ ಕ್ರಿಸ್ತಪೂರ್ವ ಐದು ನೂರರ ಚಿತ್ರದುರ್ಗದ ತಮಟಕಲ್ಲು ಶಾಸನ, ಇದು ಕನ್ನಡ ಸಾಹಿತ್ಯದ ಮೊದಲ ಪದ್ಯ. ಎಂದೇ ಹೇಳಬಹುದಾಗಿದೆ.ಇದು ಕನಕಾರ್ಜುನಿವೃತ್ತ ದಲ್ಲಿರುವ ಪದವಾಗಿದ್ದು, ಗುಣಮಧುರ ಎಂಬ ವ್ಯಕ್ತಿಯನ್ನು ಹೊಗಳಿರುವ ಶಾಸನ ವಾಗಿದೆ ಎಂದು ಮಾಹಿತಿ ನೀಡಿದರು.

ಗುಣಮಧುರನ ಕುರಿತ ಪದ್ಯ ಹೀಗಿದೆ.

ಪಣಮಣಿಯಂತು ಭೋಗಿ, “ಪಣದೊಳ್ ಮಣಿ, ರಣಮುಖದೊಳ್ಳೆ ಕಾಲವನ್ ಅರಿಯುರ್ಕುಂ ಮನಿಂದೆ ಗುಣನ್ ಪ್ರಣಯಿ ಜನಕ್ಕೆ ಕಾಮನಸೀತೋತ್ಪಲವರ್ಣನವನ್ ಗುಣಮಧುರಾಂಕ ದಿವ್ಯ ಪುರುಷಮ್ ಪುರುಷ ಪ್ರವರನ್ “.

ಇದರ ಸಾರಾಂಶ ಹೀಗಿದೆ..

ಹಣೆಯಲ್ಲಿ ರತ್ನವನ್ನು ಧರಿಸಿದ ಆದಿಶೇಷ ನಂತೆ ಮಹಾಭೋಗಿಯಾದ, ಹಣೆಯಲ್ಲಿ ರತ್ನವನ್ನು ಧರಿಸಿರುವ ರಾಜನಾದರೂ ಬಿಲ್ಲಿನಂತೆ ಬಾಗುವ ವಿನಯಶಾಲಿ, ರಣರಂಗದಲ್ಲಿ ಯಮನಂತಿರುರುವವನು, ಶತ್ರುಗಳೂ ಸಹ ನಿಂದಿಸಲು ಸಾಧ್ಯವಿಲ್ಲದಂತಹ ಗುಣವುಳ್ಳವನು. ಪ್ರಣಯಿ ಗಳಿಗೆ ಮನ್ಮಥನಂತಿರುವನು, ಕಪ್ಪುಬಣ್ಣದವನೂ ಆದ ಗುಣಮಧುರಾಂಕನು ದಿವ್ಯ ಪುರುಷ ಹಾಗೂ ಪುರುಷ ಶ್ರೇಷ್ಠ ನೆಂದು ಗುಣಮಧುರನನ್ನು ಕನ್ನಡದ ಮೊದಲ ಪದ್ಯದಲ್ಲಿ ವರ್ಣಿಸಲಾಗಿದೆ ಎಂದು ತಿಳಿಸಿದರು.

ಈ ಪದ್ಯವು ಕನ್ನಡದ ಮೊಟ್ಟ ಮೊದಲ ಪ್ರಶಸ್ತಿ ಶಾಸನವು ಹೌದು.ಮೊದಲ ಶಾಸನ ಕಾವ್ಯವೂ ಹೌದು. ಕನ್ನಡದ ಮೊದಲ ಸಾಹಿತ್ಯ ಕಾವ್ಯವೂ ಹೌದು. ಕನ್ನಡದ ಮೊದಲ ಛಂದಸ್ಸಿನ ಪದ್ಯವೂ ಹೌದು. ಎಂದು ತಿಳಿಸಿದರು.
ಕಪ್ಪೆ ಅರಭಟ್ಟನ ಶಾಸನವನ್ನು ಉಲ್ಲೇಖಿಸುತ್ತ,
ಸಾಧುಗೆ ಸಾಧು, ಮಾಧುರ್ಯಂಗೆ ಮಾಧುರ್ಯಂ ಬಾಧಿಪ್ಪ ಕಲಿಗೆ ಕಲಿಯುಗ ವಿಪರೀತನ್ ಮಾಧವನೀತನ್ ಪೆರನಲ್ ಎಂದು ಬಣ್ಣಿಸಿದರು.

ಈ ತರಹದ ಪದ್ಯಗಳು ಮುಂದೆ ಕನ್ನಡ ಕವಿಗಳು ತಮ್ಮ ಕಾವ್ಯಗಳನ್ನು ರಚಿಸುವಲ್ಲಿ ಪ್ರೇರಣೆ ನೀಡಿವೆ ಎಂದು ಹೇಳಬಹುದಾಗಿದೆ. ಕ್ರಿಸ್ತಶಕ ಏಳುನೂರರ ನಂದಿಸೇನ ಪ್ರವರ ಮುನಿಯವರ ಪದ್ಯ, 971 ರ ಧಾರವಾಡದ ಸವಡಿ ಶಾಸನ, ಹೀಗೆ ಅನೇಕ ಶಾಸನಗಳನ್ನು ಉಲ್ಲೇಖಿಸುತ್ತಾ ಈ ಶಾಸನಗಳು ಕನ್ನಡ ಸಾಹಿತ್ಯ ರಚನೆಗೆ ಪ್ರೇರಣೆ ನೀಡುತ್ತಾ ಬಂದಿವೆ ಎಂದು ಡಾ. ಜಯರಾಮಯ್ಯ ನವರು ತಮ್ಮ ಉಪನ್ಯಾಸದ ಮೂಲಕ ತಿಳಿಸಿದರು.

ಅಧ್ಯಕ್ಷೀಯ ನುಡಿ ಗಳನ್ನಾಡಿದ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಬಿ. ವಾಮದೇವಪ್ಪ ನವರು, ಕನ್ನಡ ನಾಡಲ್ಲಿ ಅನೇಕ ಶಾಸನಗಳು ಪತ್ತೆಯಾಗಿವೆ. ಅದರಲ್ಲಿ ಮೊದಲಿಗೆ ಶಾತವಾಹನರು, ಕಂಚಿಯ ಪಲ್ಲವರು, ತಲಕಾಡಿನ ಸ್ಕಂದರು , ಬಾದಾಮಿಯ ಚಾಲುಕ್ಯರು, ರಾಷ್ಟ್ರಕೂಟರು, ಕಲ್ಯಾಣದ ಚಾಲುಕ್ಯರು, ಹೊಯ್ಸಳರು, ವಿಜಯನಗರ ಅರಸರು, ಬಹಮನಿ ಸುಲ್ತಾನರು, ಕೆಳದಿಯ ಅರಸರು, ಹೈದರಾಲಿ ಟಿಪ್ಪೂ ಸುಲ್ತಾನರು ಅಷ್ಟೇ ಅಲ್ಲದೆ ಇನ್ನೂ ಅನೇಕರು ಆಡಳಿತ ನಡೆಸಿದ ಇತಿಹಾಸವಿದೆ.

ಅವರ ಕಾಲದಲ್ಲಿ ಅನೇಕ ಶಾಸನಗಳು ರಚನೆಯಾಗಿದ್ದು, ಶಾಸನಗಳು ಆ ಕಾಲದ ಇತಿಹಾಸವನ್ನು ತಿಳಿಯುವಲ್ಲಿ ನಮಗೆ ಸಹಕಾರಿಯಾಗಿವೆ. ಎಂದು ತಿಳಿಸುತ್ತಾ, ದಾವಣಗೆರೆ ಜಿಲ್ಲೆಯವರೇ ಆದ ಹೆಸರಾಂತ ಸಂಶೋಧಕರಾದ ಡಾ.ಚಿದಾನಂದಮೂರ್ತಿಯವರು ಸಂಶೋಧಿಸಿ ತಿಳಿಸಿದ ಶಾಸನ 7 ನೇ ಶತಮಾನದ್ದಾಗಿದ್ದು , ಬಾದಾಮಿಯ ಸಮೀಪದ ಸುತ್ತುಕೋಟೆ ಎಂಬ ಗ್ರಾಮದಲ್ಲಿ ದೊರೆತಿರುವ ಕಪ್ಪೆ ಅರಭಟ್ಟ ಶಾಸನ .

ಇನ್ನೂ ಅನೇಕ ಶಾಸನಗಳು,ನಮ್ಮ ಜಿಲ್ಲೆಯವರೇ ಆದ ಪ್ರೊ. ರಾಜಶೇಖರಪ್ಪ, ಸಂತೇಬೆನ್ನೂರಿನ ನಾಡಿಗ್, ದಾವಣಗೆರೆಯ ಡಾ. ಬುರುಡೆಕಟ್ಟೆ ಮಂಜಪ್ಪ, ಇನ್ನೂ ಅನೇಕರು ಅನೇಕ ಸಂಶೋಧನೆಗಳನ್ನು ಮಾಡಿದ್ದು, ಅವರ ಸಂಶೋಧನೆಗಳು ಕನ್ನಡ ಸಾಹಿತ್ಯಕ್ಕೆ ಬೆಳಕುಚೆಲ್ಲುವುಕ್ಕೆ ಪೂರಕವಾಗಿವೆ.

ಕನ್ನಡ ಶಾಸನಗಳು ಕನ್ನಡ ಸಾಹಿತ್ಯಕ್ಕೆ ಅನೇಕ ಕೊಡುಗೆ ಗಳನ್ನು ನೀಡಿವೆ. ಎಂದು ತಿಳಿಸುತ್ತಾ, ‘ಇತಿ’ ಎಂದರೆ ‘ಹೀಗೆ ‘ “ ಹಾಸ “ ಎಂದರೆ ‘ ಇತ್ತು ‘. ಅದರಂತೆ ಇತಿಹಾಸ ಹೇಗಿತ್ತು ಎಂದು ತಿಳಿಯುವುದೇ ಆಗಿದೆ. ಶಾಸನಗಳು ಕನ್ನಡ ಸಾಹಿತ್ಯದ ಅಧ್ಯಯನಕ್ಕೆ ಅಡಿಪಾಯ ಒದಗಿಸಿಕೊಟ್ಟಿವೆ ಎಂದರೆ ತಪ್ಪಾಗಲಾರದು. ಎಂದು ಹೇಳುತ್ತಾ ಕನ್ನಡದ ಎಲ್ಲಾ ಮನಸುಗಳಿಗೆ ಶುಭವನ್ನು ಕೋರುತ್ತಾ ತಮ್ಮ ಅಧ್ಯಕ್ಷೀಯ ನುಡಿಗಳನ್ನು ಆಡಿದರು.

ಆರಂಭದಲ್ಲಿ ಸೀತಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಪಾಲಕ ರಾದ ಶ್ರೀಮತಿ ಅನ್ನಪೂರ್ಣ ಪಾಟೀಲ್ ರವರು ಸರ್ವರನ್ನು ಸ್ವಾಗತಿಸಿದರು.

ಸುಗಮ ಸಂಗೀತ ಕಾರ್ಯಕ್ರಮವನ್ನು ದಾವಣಗೆರೆ ನಗರದ ಜಾನಪದ ಕಲಾ ತಂಡದ ಖ್ಯಾತ ಸಂಗೀತಗಾರರು ಶ್ರೀಮತಿ ರುದ್ರಾಕ್ಷಿ ಬಾಯಿ ಪುಟ್ಟ ನಾಯಕ್ ಮತ್ತು ಸಂಗಡಿಗರು ಕನ್ನಡ ಹಾಡುಗಳನ್ನು ಹಾಡುವುದರ ಮೂಲಕವಾಗಿ ಸಂಗೀತಾಸಕ್ತರಿಗೆ, ಎಲ್ಲಾ ಕನ್ನಡ ಮನಸ್ಸುಗಳಿಗೆ ಕನ್ನಡದ ಕಂಪನ್ನು ಬೀರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending