Connect with us

ದಿನದ ಸುದ್ದಿ

ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ

Published

on

ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.

31 ವಾರ್ಡ್‌ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.

ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.

4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.

7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.

9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್‌ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.

11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.

13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.

15 ನೇ ವಾರ್ಡ್ ಬಹಾರ್ ಮಖಾನ್‌ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.

17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್‌ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.

19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್‌ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.

21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್‌ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.

27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.

29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending