ದಿನದ ಸುದ್ದಿ
ಒಂದೇ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಹುದು : ಕೂಡಲೇ ಕರೆಮಾಡಿ
ಶ್ರೀ ನಾರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಮನರಂಜನೆಗೆ ಅಧಿಕ ಸಮಯ ಮೀಸಲಿಡುವಿರಿ. ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಮನೆಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಆಸಕ್ತಿ ತೋರುವಿರಿ. ಹತ್ತಿರದ ಬಂಧು ಅಥವಾ ಸ್ನೇಹಿತರ ಬೇಟಿಯಾಗುವ ಅವಕಾಶಗಳು ಇಂದು ಸಿಗಲಿದೆ. ದೊಡ್ಡಮಟ್ಟದ ಯೋಜನೆಗಳು ಅಂತಿಮ ಸ್ವರೂಪ ಪಡೆದುಕೊಳ್ಳಲಿದೆ. ನಿಮ್ಮ ಆರ್ಥಿಕ ಚತುರತೆ ಹಾಗೂ ಸ್ಪರ್ಧಾಮನೋಭಾವ ಎಲ್ಲ ರಂಗದಲ್ಲೂ ಉತ್ತಮ ಗೆಲುವು ಸಂಪಾದನೆಗೆ ಸಹಕಾರಿಯಾಗಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಸಂಗಾತಿಯಿಂದ ವಿಶೇಷವಾದ ಉಡುಗೊರೆಯನ್ನು ಪಡೆಯುವ ವ್ಯವಸ್ಥೆ ಕಾಣಬಹುದು. ಈ ದಿನ ನಿಮ್ಮ ಸಮಯ ಹಾಗೂ ವಿಚಾರಗಳನ್ನು ಇತರರ ಒಳಿತಿಗಾಗಿ ಶ್ರಮಿಸುವ ಸಾಧ್ಯತೆ ಕಾಣಬಹುದು. ನಿಮಗೆ ಸಂಬಂಧವಿಲ್ಲದ ವಿಷಯಗಳಲ್ಲಿ ಆದಷ್ಟು ಮುಂದುವರಿಯುವುದು ಬೇಡ. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಾಣಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಕೌಟುಂಬಿಕ ಅವಶ್ಯಕತೆಗಳನ್ನು ಪೂರೈಸಲು ಬದ್ಧರಾಗಿ. ಕೆಲವು ಮಾತುಗಳು ಇತರರಿಗೆ ಮುಜುಗರ ತರಿಸುವುದು ಆದಷ್ಟು ಮಾತಿನಲ್ಲಿ ಜಾಗ್ರತೆವಹಿಸಿ. ಹೂಡಿಕೆಗಳು ನಿಮ್ಮನ್ನು ದಾರಿ ತಪ್ಪಿಸಬಹುದಾಗಿದೆ ಆದಷ್ಟು ಅದರ ಬಗ್ಗೆ ಪೂರ್ವಪರ ತಿಳಿದುಕೊಳ್ಳಿ ನಿಪುಣರ ಸಹಾಯ ಪಡೆಯಿರಿ. ನಿಮ್ಮ ಕೆಲವು ಆಲೋಚನೆಗಳು ಜನಗಳ ಮೇಲೆ ಪ್ರಭಾವ ಬೀರಬಹುದಾದ ಅಂಶಗಳು ಪರಿಚಯಿಸಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಸಂಗಾತಿಯ ನೋಟ ಸುಂದರವಾದ ವದನ ನಿಮಗೆ ಆನಂದ ತರಿಸುವ ಮುಖ್ಯವಾದ ಅಂಶವಾಗಿದೆ. ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ನಿಮ್ಮ ಬಿಡುವಿಲ್ಲದ ಸಮಯದಿಂದ ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿರಬಹುದು ಆದಷ್ಟು ಇದರ ಬಗ್ಗೆ ಗಮನವಹಿಸಿ. ಯೋಜನೆಯ ನಿಮಿತ್ತ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಕೆಲವು ಜವಾಬ್ದಾರಿಗಳು ನೀವು ಪೂರೈಸಲು ಕಟಿಬದ್ಧರಾಗಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಸತ್ಯ ಕಹಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಹಾಗಾಗಿ ನೀವು ಹೇಳುವ ಮಾತುಗಳನ್ನು ಯಾರು ಇವತ್ತು ನಂಬದೇ ಇರಬಹುದು. ಮೋಸದ ಹೂಡಿಕೆಗಳಿಂದ ಎಚ್ಚರ ಇರಬೇಕಾದ ಅಗತ್ಯವಿದೆ. ಆರ್ಥಿಕ ವ್ಯವಹಾರಗಳು ನಷ್ಟದಿಂದ ಕೂಡಿರಬಹುದು. ಅಪರಿಚಿತರೊಡನೆ ವ್ಯವಹರಿಸುವಾಗ ಅವರ ಪೂರ್ವಾಪರವನ್ನು ಸಮಗ್ರವಾಗಿ ತಿಳಿದುಕೊಳ್ಳುವುದು ಅಗತ್ಯವಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಕೆಲವು ಯೋಜನೆಗಳು ಹಣಕಾಸಿನ ಆಸೆಯನ್ನು ನಿಮ್ಮ ಮನದಲ್ಲಿ ಬಿತ್ತಬಹುದು ಇವು ಮೋಸದ ಜಾಲ ವಾಗಿರಬಹುದು ಎಂಬುದನ್ನು ನೆನಪಿಡಬೇಕು. ನಂಬಿಕಸ್ಥ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಹಿಂದಿನ ವಿಚಾರಗಳನ್ನು ವ್ಯಥೆಪಡುತ್ತಾ ಕುಳಿತುಕೊಳ್ಳುವುದು ಸರಿಯಲ್ಲ ಆದಷ್ಟು ಮುನ್ನಡೆಯುವ ಯೋಜನೆ ರೂಪಿಸಿ. ನಿಮ್ಮ ಪರಿಶ್ರಮದ ತಕ್ಕಹಾಗೆ ಫಲ ದೊರಕುತ್ತದೆ. ಅನಗತ್ಯ ಬೇರೆಯವರ ವಿಚಾರಗಳಲ್ಲಿ ಕಾಲಹರಣ ಮಾಡಿ ಆರ್ಥಿಕ ವಿಚಾರದ ಬಗ್ಗೆ ಚಿಂತಿಸುವುದು ಲಕ್ಷಣವಲ್ಲ. ಮಾತುಗಳ ಬಗ್ಗೆ ಆದಷ್ಟು ನಿಗಾ ಇರಲಿ ಕಠೋರ ಮಾತುಗಳು ಒಡನಾಡಿಗಳ ಜೊತೆಗೆ ಒಡಕು ತರಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ.
9945410150
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243