ದಿನದ ಸುದ್ದಿ
ಲೈಸೆನ್ಸ್ ಶುಲ್ಕ ಬಾಕಿ: ಖಾಸಗಿ ಟೆಲಿಕಾಂ ಕಂಪನಿಗಳ ದಕ್ಷತೆ ಮತ್ತು ಸರಕಾರಕ್ಕೆ ನ್ಯಾಯಾಲಯದ ತರಾಟೆ
- “ಸಂಚಾರ್ ಭವನ”ದಲ್ಲಿರುವ ಕೆಲವು ಕಿರಿಯ ಅಧಿಕಾರಿಗಳು ಸುಪ್ರಿಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವ ನಿರ್ದೇಶನವನ್ನು ಕೊಟ್ಟಿದ್ದಾರೆ ಎಂದರೆ ನಂಬಬಹುದೇ?. ಇಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರ ಹೇಳಿದ ವಿಪುಲ ಹಣಬಲದ ಟಿಪ್ಪಣಿಯನ್ನು ನೆನಪಿಸಿಕೊಳ್ಳದಿರಲು ಸಾಧ್ಯವಿಲ್ಲ. ಇದಲ್ಲದೆ, ಗಂಭೀರ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ಸರಕಾರ 1.47 ಲಕ್ಷ ಕೋಟಿ ರೂ.ಗಳ ಒಂದು ಭಾರೀ ಮೊತ್ತವನ್ನು ಪಡೆಯಲು ಅನುವು ಮಾಡಿಕೊಟ್ಟ ಸುಪ್ರಿಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಲು ಉತ್ಸುಕವಾಗಿಲ್ಲ ಏಕೆ ಎಂಬ ಪ್ರಶ್ನೆಯೂ ಏಳುತ್ತದೆ. 2007ರಿಂದ 2012 ರ ನಡುವೆ ತನ್ನ ಒಡೆತನದ ಬಿಎಸ್ಎನ್ಎಲ್ನ್ನು ದುರ್ಬಲಗೊಳಿಸಿ, ಈ ಖಾಸಗಿ ಕಂಪನಿಗಳು ಅಪಾರ ಲಾಭಗಳನ್ನು ಪೇರಿಸಲು ಅವಕಾಶ ಕಲ್ಪಿಸಿದ ಸರಕಾರ ಮಾತ್ರವೇ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕು.
ಪಿ. ಅಭಿಮನ್ಯು
ಫೆಬ್ರುವರಿ 14, 2020 ರಂದು ಸುಪ್ರಿಂ ಕೋರ್ಟ್, ಲೈಸೆನ್ಸ್ ಶುಲ್ಕ ಬಾಕಿಯನ್ನು ತೆರದೆ ತಪ್ಪಿಸಿಕೊಳ್ಳುತ್ತಿರುವ ಖಾಸಗಿ ಟೆಲಿಕಾಂ ಕಂಪನಿಗಳನ್ನು ಕಾಪಾಡುವ ಪ್ರಯತ್ನ ನಡೆಸುತ್ತಿದೆ ಎಂದು ಸರಕಾರವನ್ನು ತರಾಟೆಗೆ ತಗೊಂಡಿತು. ವೊಡಾಫೋನ್ ಇಂಡಿಯ, ಏರ್ಟೆಲ್ ಮತ್ತು ಟಾಟಾ ಟೆಲಿಸರ್ವಿಸಸ್ ಇವು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸದೇ ಇರುವುದಕ್ಕೆ ತೀವ್ರ ಟೀಕೆಗೆ ಒಳಗಾಗಿರುವ ಖಾಸಗಿ ಟೆಲಿಕಾಂ ಕಂಪನಿಗಳು.
ಅಕ್ಟೋಬರ್ 24, 2019ರಂದು ನ್ಯಾಯ ಮೂರ್ತಿಗಳಾದ ಅರುಣ್ ಮಿಶ್ರ, ಎಸ್.ಅಬ್ದುಲ್ ನಝೀರ್ ಮತ್ತು ಎಂ.ಆರ್.ಷಾ ಇದ್ದ ಸುಪ್ರಿಂ ಕೋರ್ಟ್ ಪೀಠ ಈ ಮೂರು ಕಂಪನಿಗಳು ಲೈಸೆನ್ಸ್ ಶುಲ್ಕ ಬಾಕಿ ರೂ.1.47 ಲಕ್ಷ ಕೋಟಿ ರೂ.ಗಳನ್ನು ಮೂರು ವಾರದೊಳಗೆ ಪಾವತಿ ಮಾಡಬೇಕು ಎಂದು ಆದೇಶಿಸಿತು. ಈ ಆದೇಶದ ಪ್ರಕಾರ ವೊಡಾಫೋನ್ 53,038 ಕೋಟಿ ರೂ., ಏರ್ಟೆಲ್ 35,586 ಕೊಟಿ ರೂ. ಮತ್ತು ಟಾಟಾ ಟೆಲಿಸರ್ವಿಸಸ್ 13,823 ಕೋಟಿ ರೂ.ಗಳನ್ನು ಪಾವತಿ ಮಾಡಬೇಕಾಗಿದೆ. ಆದರೆ ಈ ಆದೇಶದ ನಂತರ ನಾಲ್ಕು ತಿಂಗಳು ಕಳೆದರೂ ಈ ಖಾಸಗಿ ಕಂಪನಿಗಳು ಒಂದು ರೂಪಾಯಿಯನ್ನೂ ತೆರಲಿಲ್ಲ.
ಸುಪ್ರಿಂ ಕೋರ್ಟ್ ಅತ್ಯಂತ ಕೋಪೋದ್ರಿಕ್ರ ಗೊಂಡದ್ದು, ಇದಕ್ಕಿಂತ ಹೆಚ್ಚಾಗಿ, ಈ ಖಾಸಗಿ ಕಂಪನಿಗಳಿಂದ ಈ ಬಾಕಿಗಳನ್ನು ವಸೂಲಿ ಮಾಡಲು ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದ ದೂರಸಂಪರ್ಕ ಇಲಾಖೆ ತನ್ನ ಕರ್ತವ್ಯ ನಿರ್ವಹಿಸುವ ಬದಲಿಗೆ, ಈ ಪಾವತಿಯನ್ನು ತಪ್ಪಿಸಿಕೊಳ್ಳಲು ಅದೇ ಅನುಕೂಲ ಕಲ್ಪಿಸಿಕೊಟ್ಟದ್ದು. ಜನವರಿ 23, 2020ರಂದು ಇಲಾಖೆ, ಸುಪ್ರಿಂ ಕೋರ್ಟ್ ಆದೇಶದಂತೆ ಈ ಟೆಲಿಕಾಂ ಕಂಪನಿಗಳಿಂದ ಯಾವುದೇ ಬಾಕಿ ಪಾವತಿಗೆ ಒತ್ತಾಯ ಹಾಕಬಾರದು ಎಂದು ಅಕೌಂಟೆಂಟ್ ಜನರಲ್ಗೆ ನಿರ್ದೇಶನ ನೀಡಿತು, ಮತ್ತು ಮುಂದಿನ ಆದೇಶದ ವರೆಗೆ, ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳಬಾರದು ಎಂದೂ ಹೇಳಿತು.
ಈ ನಿರ್ದೇಶನವನ್ನು ಪ್ರಸ್ತಾಪಿಸುತ್ತ ನ್ಯಾಯಮೂರ್ತಿ ಅರುಣ್ ಮಿಶ್ರ ಇಲ್ಲಿ ಎಷ್ಟೊಂದು ಹಣಬಲ ಇದೆ, ನನಗೆ ಬಹಳ ಯಾತನೆಯಾಗುತ್ತಿದೆ, ಈ ವ್ಯವಸ್ಥೆಯಲ್ಲಿ ಈ ನ್ಯಾಯಾಲಯದಲ್ಲಿ ಕೆಲಸ ಮಾಡಬಾರದು ಎಂದು ನನಗನಿಸುತ್ತಿದೆ ಎಂದು ಟಿಪ್ಪಣಿ ಮಾಡಿದರು.
ಈ ಮೊಕದ್ದಮೇ ಆರಂಭವಾದದ್ದು, 1999ರಲ್ಲಿ. 1995ರಲ್ಲಿ ಖಾಸಗಿ ಕಂಪನಿಗಳಿಗೆ ಟೆಲಿಕಾಂ ಸೇವೆಗಳನ್ನು ಒದಗಿಸಲು ಲೈಸೆನ್ಸ್ಗಳನ್ನು ಕೊಡಲಾಯಿತು. ಲೈಸೆನ್ಸ್ ಶರತ್ತುಗಳ ಪ್ರಕಾರ ಈ ಕಂಪನಿಗಳು ಒಂದು ನಿಗದಿತ ಲೈಸೆನ್ಸ್ ಶುಲ್ಕವನ್ನು ತೆರಬೇಕಾಗಿತ್ತು. ಆದರೆ 1995ರಿಂದ 1999ರ ವರೆಗೂ ಈ ಕಂಪನಿಗಳು ಯಾವುದೇ ಲೈಸೆನ್ಸ್ ಶುಲ್ಕವನ್ನು ತೆರಲಿಲ್ಲ. ಹೀಗೆ ಬಾಕಿಯಾದ ಶುಲ್ಕಗಳ ಮೊತ್ತ ಹಲವು ಸಾವಿರ ಕೋಟಿ ರೂ.ಗಳಿಗೇರಿತು. 1999ರಲ್ಲಿ ಆಗಿನ ಪ್ರಧಾನ ಮಂತ್ರಿ ವಾಜಪೇಯಿರುವರು ಉದಾರ ಮನಸ್ಸಿನಿಂದ ಸಂಪೂರ್ಣ ಲೈಸೆನ್ಸ್ ಶುಲ್ಕಗಳಿಗೆ ವಿನಾಯ್ತಿ ನೀಡಿದರು. ಅಲ್ಲದೆ, ನಿಗದಿತ ಲೈಸೆನ್ಸ್ ಶುಲ್ಕದ ಮಾದರಿಯ ಬದಲಿಗೆ, ರೆವಿನ್ಯೂ ಪಾಲುದಾರಿಕೆಯ ಮಾದರಿಯನ್ನು ತಂದರು.
ಇದರ ಪ್ರಕಾರ ಖಾಸಗಿ ಟೆಲಿಕಾಂ ಕಂಪನಿಗಳು, ತಮ್ಮ ರೆವಿನ್ಯೂ ಗಳಿಕೆಯ ಒಂದು ಭಾಗವನ್ನು ಲೈಸೆನ್ಸ್ ಶುಲ್ಕವಾಗಿ ತೆರಬೇಕು. ಆರಂಭದಲ್ಲಿ ಇದನ್ನು 15ಶೇ. ಎಂದು ನಿಗದಿ ಮಾಡಲಾಯಿತು, ನಂತರ ಇದನ್ನು 13ಶೇ.ಕ್ಕೆ ಇಳಿಸಲಾಯಿತು, ಅಂತಿಮವಾಗಿ 8ಶೇ. ಎಂದು ನಿಗದಿ ಮಾಡಲಾಯಿತು.
ಈ ರೆವಿನ್ನೂ ಪಾಲುದಾರಿಕೆ ಮಾದರಿಯನ್ನು ಬಳಸಿಕೊಂಡು ಈ ಟೆಲಿಕಾಂ ಕಂಪನಿಗಳು ತಮ್ಮ ರೆವಿನ್ಯೂ ಸಂಗ್ರಹವನ್ನು ಸತತವಾಗಿ ಕಡಿಮೆಗೊಳಿಸಿ ತೋರಿಸಲಾರಂಭಿಸಿ, ಸರಕಾರಕ್ಕೆ ಲೈಸೆನ್ಸ್ ಶುಲ್ಕವನ್ನು ವಂಚಿಸಿದರು. ದೂರಸಂಪರ್ಕ ಇಲಾಖೆ ಹೊರಗಣ ಆಡಿಟರ್ಗಳಿಂದ ನಡೆಸಿದ ತಪಾಸಣೆಗಳು ಈ ವಂಚನೆಯನ್ನು ತೋರಿಸಿಕೊಟ್ಟವು. ಇದರಿಂದಾಗಿ, ಅವು ಲೈಸೆನ್ಸ್ ಶುಲ್ಕ ತೆರುವಂತೆ ಮಾಡಲಾಯಿತು.
ಇದಲ್ಲದೆ, ಆರಂಭದಿಂದಲೇ, ಈ ಖಾಸಗಿ ಕಂಪನಿಗಳು ಎಜಿಆರ್(ಸರಿಹೊಂದಿಸಿದ ಒಟ್ಟು ರೆವಿನೂ ಆದಾಯ)ದ ಲೆಕ್ಕಾಚಾರದಲ್ಲಿ ಕೈಚಳಕ ನಡೆಸಿಕೊಂಡು ಬಂದವು. ಈ ಎಜಿಆರ್ನಲ್ಲಿ ಟೆಲಿಕಾಂ ಸೇವೆಯಿಂದ ಬರುವ ಆದಾಯವನ್ನು ಮಾತ್ರ ತೆಗೆದುಕೊಳ್ಳಬೇಕು, ಹ್ಯಾಂಡ್ಸೆಟ್ಗಳ ಮಾರಾಟ, ರದ್ದಿಗಳು ಇತ್ಯಾದಿಗಳಿಂದ ಬರುವ ಆದಾಯಗಳು ಇದರ ವ್ಯಾಪ್ತಿಗೆ ಬರುವುದಿಲ್ಲ ಎಂಬ ನಿಲುವು ತಳೆದವು. ಆದರೆ ಸರಕಾರ ಎಜಿಆರ್ನಲ್ಲಿ ಇವೆಲ್ಲ ಆದಾಯಗಳೂ ಸೇರುತ್ತವೆ ಎಂಬ ನಿಲುವು ತಳೆಯಿತು (ಆದರೆ ಈಗಿನ ಸರಕಾರ ಅಂತಹ ನಿಲುವು ತಳೆಯಬಾರದಿತ್ತು ಎಂದು ಖೇದಗೊಳ್ಳುತ್ತಿರಬಹುದು). ಈ ವಿವಾದ ಬಹಳ ವರ್ಷಗಳ ಕಾಲ ನೆನೆಗುದಿಗೆ ಬಿದ್ದಿತ್ತು. ಕಳೆದ ಅಕ್ಟೋಬರ್ ೨೪ರಂದು ಸುಪ್ರಿಂ ಕೋರ್ಟ್ ಆದೇಶದೊಂದಿಗೆ ಅದು ಇತ್ಯರ್ಥಗೊಂಡಿತು.
ನ್ಯಾಯಮೂರ್ತಿ ಅರುಣ್ ಮಿಶ್ರರವರ ಫೆಬ್ರುವರಿ 14, 2020ರ ಟಿಪ್ಪಣಿಯಿಂದ ಖಂಡಿತವಾಗಿಯೂ ಎರಡು ಪ್ರಶ್ನೆಗಳು ಏಳುತ್ತವೆ. ಮೊದಲನೆಯದ್ದು, ಜನವರಿ 23ರಂದು ದೂರಸಂಪರ್ಕ ಇಲಾಖೆ ಅಕೌಂಟೆಂಟ್ ಜನರಲ್ರಿಗೆ ಕೊಟ್ಟ ನಿರ್ದೇಶನಕ್ಕೆ ಸಂಬಂಧಪಟ್ಟಿದೆ. ದೂರಸಂಪರ್ಕ ಇಲಾಖೆಯ ಇಬ್ಬರು ಡೆಸ್ಕ್ ಅಧಿಕಾರಿಗಳು ಇಂತಹ ನಿರ್ದೇಶನಕ್ಕೆ ಹೊಣೆಗಾರರು ಎಂದು ಅಕೌಂಟೆಂಟ್ ಜನರಲ್ ತುಷಾರ್ ಮೆಹ್ತ ನ್ಯಾಯಾಲಯಕ್ಕೆ ತಿಳಿಸಿದರು. ಈ ಬಗ್ಗೆ ದೂರಸಂಪರ್ಕ ಮಂತ್ರಿಗಳಿಗಾಲೀ, ಇಲಾಖೆಯ ಕಾರ್ಯದರ್ಶಿಗಳಿಗಾಗಲಿ ತಿಳಿದೇ ಇರಲಿಲ್ಲ ಎಂದು ಹೇಳಲಾಗಿದೆ. ಆದರೆ ಸಂಚಾರ್ ಭವನದಲ್ಲಿರುವ ಕೆಲವು ಡೆಸ್ಕ್ ಅಧಿಕಾರಿಗಳು ಸುಪ್ರಿಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವ ಇಂತಹ ನಿರ್ದೇಶನವನ್ನು ಕೊಟ್ಟಿದ್ದಾರೆ ಎಂದರೆ ನಂಬುವುದು ಕಷ್ಟವೇ. ಇಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರ ಹೇಳಿದ ವಿಪುಲ ಹಣಬಲದ ಟಿಪ್ಪಣಿಯನ್ನು ನೆನಪಿಸಿಕೊಳ್ಳದಿರಲು ಸಾಧ್ಯವಿಲ್ಲ.
ಎರಡನೆಯ ಪ್ರಶ್ನೆಯೆಂದರೆ, ಗಂಭೀರ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ಸರಕಾರ 1.47 ಲಕ್ಷ ಕೋಟಿ ರೂ.ಗಳ ಒಂದು ಭಾರೀ ಮೊತ್ತವನ್ನು ಪಡೆಯಲು ಅನುವು ಮಾಡಿಕೊಟ್ಟ ಸುಪ್ರಿಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಲು ಉತ್ಸುಕವಾಗಿಲ್ಲ ಏಕೆ ಎಂಬುದು.
ಈ ಖಾಸಗಿ ಟೆಲಿಕಾಂ ಕಂಪನಿಗಳ, ಅದರಲ್ಲೂ ವೊಡಾಫೋನ್ನ ಆರ್ಥಿಕ ಪರಿಸ್ಥಿತಿ ಎಷ್ಟು ನಾಜೂಕಾಗಿದೆಯೆಂದರೆ, ಇಷ್ಟೊಂದು ದೊಡ್ಡ ಮೊತ್ತವನ್ನು ಅವು ಎಲ್ಲಿಂದ ತಾನೇ ಹೊಂದಿಸ ಬಲ್ಲವು ಎಂದು ಮಾಧ್ಯಮಗಳು ಕಣ್ಣೀರು ಹಾಕುತ್ತಿವೆ. ಆದರೆ ಈ ಕಂಪನಿಗಳು ಭಾರತೀಯ ಟೆಲಿಕಾಂ ಉದ್ಯಮದಲ್ಲಿ ಗಳಿಸಿದ ಅಪಾರ ಸಂಪತ್ತು, ಅದರಲ್ಲೂ, 2007ರಿಂದ 2012 ರ ನಡುವೆ ಸರಕಾರವೇ ತನ್ನ ಒಡೆತನದ ಬಿಎಸ್ಎನ್ಎಲ್ನ್ನು ದುರ್ಬಲಗೊಳಿಸುತ್ತಿದ್ದ ಅವಧಿಯಲ್ಲಿ ಪೇರಿಸಿಟ್ಟ ದೈತ್ಯಪ್ರಮಾಣದ ಲಾಭಗಳು ಎಲ್ಲ ಎಲ್ಲಿಗೆ ಹೋದವು? ಸರಕಾರ ಮಾತ್ರವೇ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕು.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243