ದಿನದ ಸುದ್ದಿ
ದಾವಣಗೆರೆಯಲ್ಲಿ ಇಂದು ‘ಕಸಾಪ ಉಳಿಸಿ ಆಂದೋಲನ’ ಸಭೆ : ಶಿವಕುಮಾರಸ್ವಾಮಿ ಕುರ್ಕಿ
ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು ತಂತಾನೆ ಹೆಚ್ಚಿಸಿಕೊಳ್ಳುವುದನ್ನು ವಿರೋಧಿಸಿದ್ದೆವು.
ಅಲ್ಲದೆ ನಾವು ಹೈಕೋರ್ಟ್ ಮೆಟ್ಟಿಲೇರಿ ಬಹುದೂರದ ದ.ಕ. ಜಿಲ್ಲೆಯ ಪುಟ್ಟಗ್ರಾಮ ಕೋಟದಲ್ಲಿ ನಡೆವ ಸಭೆಗೆ ತಡೆಯಾಜ್ಞೆ ತರಲು ಲಾಯರ್ ಬಳ್ಳಾರಿ ರೇವಣ್ಣನವರ ವಕಾಲತ್ತಿನ ಮೂಲಕ ಪ್ರಯತ್ನಿಸಿದ್ದೆವು. ಆಗ ಸಮಯದ ಅಭಾವದಿಂದ ಈ ಕೆಲಸ ಆಗಿರಲಿಲ್ಲ. ಆದರೆ “ಸಹಕಾರಿ ಸಂಘಸಂಸ್ಥೆಗಳ ಉಪ ನೋಂದಣಾಧಿಕಾರಿಗಳಿಗೆ ತಿದ್ದುಪಡಿಮಾಡದಿರಲು ಅರ್ಜಿ ಹಾಕಬಹುದು ” ಎಂಬ ಸಲಹೆಯನ್ನು ಹೈಕೋರ್ಟ್ ಸೂಚಿಸಿತ್ತು.
ಆದ ಕಾರಣ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯಿಂದ ಈ ಕುರಿತ ಅರ್ಜಿಯೊಂದಿಗೆ ನಾವು ಹೈಕೋರ್ಟ್ಗೆ ನೀಡಿದ ಎಲ್ಲಾ ದಾಖಲೆಗಳನ್ನೂ ಬೆಂಗಳೂರು ಮಲ್ಲೇಶ್ವರಂ ಸಹಕಾರ ಭವನದಲ್ಲಿರುವ ಈ ಸಂಘ ಸಂಸ್ಥೆಗಳ ಉಪನೋಂದಾವಣಾಧಿಕಾರಿಗಳ ಕಡೆ ನೀಡಿದ್ದೆವು.
ಜುಲೈ 9ರಂದು ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಡಾ.ಕೋ.ವೆಂ.ರಾಮಕೃಷ್ಣೇಗೌಡರು, ಧಾರವಾಡದ ಲೇಖಕಿ ಹೊರಾಟಗಾರ್ತಿ ಡಾ.ಹನುಮಾಕ್ಷಿ ಗೋಗಿ ಹಾಗೂ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯ ಪರವಾಗಿ ಸಂಚಾಲಕರಾದ ಆರ್. ಶಿವಕುಮಾರಸ್ವಾಮಿ ಕುರ್ಕಿ ಎಂಬ ನಾನು ಇಲ್ಲಿನ ಉಪನಿಬಂಧಕರ ನ್ಯಾಯಾಲಯಕ್ಕೆ ಹಾಜರಾಗಿದ್ದೆವು.
ಆ ವಿಚಾರಣೆಯಲ್ಲಿ ಕಸಾಪ ಅಧ್ಯಕ್ಷರಾದ ಡಾ.ಮನುಬಳಿಗಾರ್ ಹಾಗೂ ಗೌ.ಕಾರ್ಯದರ್ಶಿಗಳು ಉಪಸ್ಥಿತರಿದ್ದು ಮತ್ತೆ ತಮ್ಮ ಅದೇ ಹಳೇ ರಾಗದಲ್ಲಿ ” ಅಧ್ಯಕ್ಷರ ಅಧಿಕಾರ ಅವಧಿಯನ್ನು 3 ರ ಬದಲು 5 ವರ್ಷ ಮಾಡಿಕೊಳ್ಳಲು ಅವಕಾಶ ನೀಡಲು ಕೇಳಿಕೊಂಡರು. ಅಲ್ಲದೆ ಈ ನಿಬಂಧನೆಗಳನ್ನು ಇವತ್ತೇ ಈಗಲೇ ಅನುಮೋದಿಸುವಂತೆ , ತಮ್ಮ ಅಧಿಕಾರ ಅವಧಿಯಿಂದಲೇ ಜಾರಿಯಾಗುವಂತೆ ಕೋಟಾದಲ್ಲಿ ನಡೆಸಿದ ಸಭೆಯ ನಿಬಂಧನೆಗಳನ್ನು ಅನುಮೋದಿಸಬೇಕಾಗಿ ಹಟಕ್ಕೆ ಬಿದ್ದವರಂತೆ ಕೇಳಿಕೊಂಡರು.
ಆಗ ನಾವು ಮೂವರೂ ಸೂಕ್ತ ಕಾರಣಗಳನ್ನು ನೀಡಿ ಅದನ್ನು ಬಲವಾಗಿ ವಿರೋಧಿಸಿದೆವು. ಚುನಾವಣೆ ನಡೆದುದು 3 ವರ್ಷಗಳ ಕಾಲಾವಧಿಗಾಗಿಯೇ ವಿನಃ 5 ವರ್ಷಗಳಿಗಲ್ಲ. ಅಲ್ಲದೆ ನ್ಶಾ.ಶ್ಯಾಮಸಂದರ್ ಆಯೋಗ ಹಿಂದೊಮ್ಮೆ ಹಂ.ಪ.ನಾ. ಅವರು ತಮ್ಮ ಆಧಿಕಾರ ಅವಧಿ ವಿಸ್ತರೀಕರಣ ಮಾಡಿಕೊಳ್ಳಲು ಇವರಂತೆಯೇ ಮುಂದಾದಾಗ ಅದನ್ನು ತಿರಸ್ಕರಿಸಿತ್ತು. ಅಗ ಅವರು ತಿದ್ದಿಕೊಂಡಿದ್ದ 5 ರ ಬದಲು 3 ವರ್ಷವೇ ಇರುವಂತೆ ಸರಕಾರ ನೇಮಿಸಿದ ಆಯೋಗ ತಾಕೀತು ಮಾಡಿತ್ತು’ ಎಂಬ ವಿಷಯವನ್ನು ಕೋರ್ಟ್ ಗಮನಕ್ಕೆ ತಂದೆವು.
ಆಗ ಸ್ಪಂದಿಸಿದ ಉಪನಿಬಂಧಕರು ಅದನ್ನು ಆಸಕ್ತಿಯಿಂದ ಆಲಿಸಿದರು. ಅಲ್ಲದೆ ಬಳಿಗಾರರ ವಾದವನ್ನು ಒಪ್ಪದೆ ಈ ಕುರಿತು ಮಾಹಿತಿ ಸಾಕ್ಷಿಗಳನ್ನು ತೋರಿಸಲು ನಾವು ಮೂವರಿಗೆ ಅವಕಾಶ ಕೊಟ್ಟು ಜು.20 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿಸಿದರು.
ಕನ್ನಡ ವಿದ್ವಾಂಶರು ದಿಗ್ಗಜರು ಕವಿಪುಂಗವರು 100 ವರ್ಷಗಳ ಹಿಂದೆ ನಿಸ್ವಾರ್ಥತೆಯಿಂದ ಕಟ್ಟಿದ ಈ ಕನ್ನಡ ಸಾಹಿತ್ಯ ಹೃನ್ಮಂದಿರ ಇದೀಗ ಹಣ-ಅಧಿಕಾರ ಲಾಲಸೆ ಇರುವ ಮನುಬಳಿಗಾರ ಅವರಂತಹ ಸ್ವಾರ್ಥಪರ ಜನರಿಂದ ಪೂರ್ಣ ಕಲುಷಿತವಾಗಿದೆ.
ಇದರ ಶುದ್ಧೀಕರಣಕ್ಕಾಗಿ ಇಂದು (ಜುಲೈ12) ರ ಸಂಜೆ 6 ಗಂಟೆಗೆ ದಾವಣಗೆರೆಯ ಉದ್ಯಾನವನದ ಕಾವ್ಯ ಮಂಟಪದಲ್ಲಿ “ಕಸಾಪ ಉಳಿಸಿ” ಆಂದೋಲನ ನಡೆಸಲು ಪೂರ್ವಬಾವೀ ಸಮಾಲೋಚನಾ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಸ್ವಯಂಸ್ಫೂರ್ತಿಯಿಂದ ಪಾಲ್ಗೊಂಡು ಕಸಾಪ ಕ್ಕೆ ಬಂದಿರುವ ಈ ಕುತ್ತನ್ನು ದೂರಮಾಡಲು ಸಹಕರಿಸಲು ವಿನಂತಿ.
ಈಗಾಗಲೆ ಧಾರವಾಡ, ಬೆಂಗಳೂರು, ಮಂಗಳೂರು, ಬಳ್ಳಾರಿ, ಮೈಸೂರು, ಮಂಡ್ಯ, ಮುಂತಾದ ಕಡೆ ಆಂಧೋಲನ ನಡೆಸಲು ಹುರಿಗೊಳ್ಳುತ್ತಿದ್ದಾರೆ. ಆದ್ದರಿಂದ ಹಾಲಿ ಕಸಾಪ ಸಮಿತಿಯ ಯಾವುದೇ ಆಸೆ ಆಮಿಷ, ಹಿಂಜರಿಕೆಗೆ ಒಳಗಾಗದೆ ನಾಳೆ ಜು.12 ರ ಗುರುವಾರ ಸಂಜೆ 6.00 ಗಂಟೆಗೆ ಸರಿಯಾಗಿ ದಾವಣಗೆರೆ ವಿದ್ಯಾನಗರದ ಕಾವ್ಯಮಂಟಪ ಉದ್ಯಾನವನಕ್ಕೆ ಆಗಮಿಸಲು ಆಹ್ವಾನಿಸುತ್ತೇವೆ. ತಮ್ಮ ಆತ್ಮೀಯರೆಲ್ಲರಿಗೂ ಈ ಸಂದೇಶವನ್ನು ರವಾನಿಸಲು ವಿನಂತಿ.
ಆರ್.ಶಿವಕುಮಾರಸ್ವಾಮಿ ಕುರ್ಕಿ, ಸಂಚಾಲಕರು, ದಾವಣಗೆರೆ
ಮೊ: 8970948221
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?