ದಿನದ ಸುದ್ದಿ
ಸವಿತಾ ಮಹರ್ಷಿ ಮತ್ತು ಮಡಿವಾಳ ಮಾಚಿದೇವರು ಕಾಯಕ ಯೋಗಿಗಳು: ಕಣ್ಮಣಿ ಜಾಯ್
ಸುದ್ದಿದಿನ,ಮಡಿಕೇರಿ : ಸವಿತಾ ಮಹರ್ಷಿಯವರು ಮತ್ತು ಮಡಿವಾಳ ಮಾಚಿದೇವರು, ಈ ಇಬ್ಬರು ಮಹನೀಯರು ‘ಕಾಯಕ ಯೋಗಿಗಳು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವರ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಸವಿತಾ ಮಹರ್ಷಿ ಹಾಗೂ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸವಿತಾ ಮಹರ್ಷಿ ಅವರು ಮೂರನೇ ಶತಮಾನದಲ್ಲಿ ಮತ್ತು ಮಡಿವಾಳ ಮಾಚಿದೇವರು 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಬಸವಣ್ಣ ಅವರಂತೆ ಕಾಯಕ ತತ್ವದಲ್ಲಿ ನಂಬಿಕೆಯುಳ್ಳ ಇವರು, ವೃತ್ತಿಗೆ ಹೆಚ್ಚಿನ ಗೌರವ ನೀಡಿದ್ದರು. ಆ ದಿಸೆಯಲ್ಲಿ ಹಿಂದಿನವರ ಆದರ್ಶವನ್ನು ಮೈಗೂಡಿಸಿಕೊಂಡು, ಯುವಜನರು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಅನಾದಿಕಾಲದಲ್ಲಿ ಸಮಾಜ ಸುಧಾರಣೆ ಮಾಡಿದವರ ಕಾರ್ಯಗಳನ್ನು ಇಂದಿಗೂ ಸ್ಮರಿಸುತ್ತೇವೆ. ಆ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಿದಾಗ ಪ್ರತಿಯೊಬ್ಬರೂ ಸ್ಮರಿಸುತ್ತಾರೆ. ಆದ್ದರಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲೆಯ ಜನರು ಸಂಕಷ್ಟ ಎದುರಿಸಿದ್ದಾರೆ. ಸರ್ಕಾರ ಸಂತ್ರಸ್ತರ ಸಂಕಷ್ಟವನ್ನು ನಿವಾರಿಸಲು ಶ್ರಮಿಸುತ್ತಿದೆ. ಆ ದಿಸೆಯಲ್ಲಿ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕುಮಾರ ಅವರು ಮಾತನಾಡಿ ಸವಿತಾ ಎಂಬುದು ಸೃಷ್ಟಿಕರ್ತರ ಹೆಸರಾಗಿದೆ. ಜಗತ್ತಿನಲ್ಲಿ ಮೆಚ್ಚುವಂತಹ ಕಾಯಕ ಸೃಷ್ಟಿಯನ್ನು ಸೃಷ್ಟಿ ಮಾಡಿದರು ಸವಿತಾ ಸಮಾಜ ಎಂಬುದನ್ನು ಮರೆಯುವಂತಿಲ್ಲ ಎಂದರು.
ಒಬ್ಬರು ಮುಡಿ, ಮತ್ತೊಬ್ಬರು ಮಡಿ ಕಾಯಕದಲ್ಲಿ ಶ್ರೇಷ್ಠತೆಯನ್ನು ಕಂಡಿದ್ದರು. ಸಮಾಜ ಸುಧಾರಣೆಗಾಗಿ ಇವರು ಶ್ರಮಿಸಿದ್ದಾರೆ. ಮೂರನೇ ಶತಮಾನದಲ್ಲಿ ಸವಿತಾ ಸಮಾಜದವರು ಮತ್ತು ಹಾಗೆಯೇ 12 ನೇ ಶತಮಾನದಲ್ಲಿ ಮಡಿವಾಳ ಮಾಚಿದೇವರು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದರು. ವೃತ್ತಿಯನ್ನು ಗೌರವಿಸಿ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದ್ದಾರೆ ಎಂದು ಅವರು ನುಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ಮಾತನಾಡಿ ಸಮಾಜಕ್ಕೆ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸವಿತಾ ಮಹರ್ಷಿಗಳು ಹಾಗೂ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ. ಅವರಂತೆ ನಡೆದುಕೊಳ್ಳಬೇಕು ಎಂದರು. ಮೂಡನಂಬಿಕೆಗಳನ್ನು ದೂರವಿಟ್ಟ ಸಂತ ಮಹರ್ಷಿಗಳು, ಇವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು. ಭಕ್ತಿಯ ಸಮಾಜ ನಿರ್ಮಾಣ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ಸವಿತಾ ಹಾಗೂ ಮಡಿವಾಳ ಮಾಚಿದೇವ ಸಮಾಜದವರು ಕ್ರೀಡಾಕೂಟಗಳನ್ನು ಏರ್ಪಡಿಸಿ, ಸಂಘಟಿತರಾಗಬೇಕು ಎಂದು ಅವರು ಸಲಹೆ ಮಾಡಿದರು. ಜಿ.ಪಂ.ಉಪಕಾರ್ಯದರ್ಶಿ ಗುಡೂರು ಭೀಮಸೇನ ಅವರು ಮಾತನಾಡಿ ಕಾಯಕ ನಿಷ್ಠೆಯನ್ನು ತೋರಿಸಿದವರಲ್ಲಿ ಸವಿತಾ ಹಾಗೂ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ ಎಂದರು.
ಸವಿತಾ ಸಮಾಜದ ಅಧ್ಯಕ್ಷರಾದ ವೆಂಕಟೇಶ್ ಅವರು ಮಾತನಾಡಿ ಸಮಾಜದ ಅಭಿವೃದ್ಧಿಗೆ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸುವಂತಾಗಬೇಕು ಎಂದರು. ಮಡಿವಾಳ ಸಮಾಜದ ಅಧ್ಯಕ್ಷರಾದ ಮಂಜುನಾಥ ಅವರು ಮಾತನಾಡಿ ಜಿಲ್ಲಾಡಳಿತದಿಂದ ಕನ್ನಡ ಸಂಸ್ಕøತಿ ಇಲಾಖೆ ಮೂಲಕ ಅಗತ್ಯ ಸಹಕಾರ ನೀಡಬೇಕು ಎಂದರು.
ಸತೀಶ್ ಮತ್ತು ತಂಡದವರು ಸಂಗೀತ ಕಾರ್ಯಕ್ರಮ ನಡೆಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಸ್ವಾಗತಿಸಿದರು. ಕಲಾವಿದ ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಮಂಜುನಾಥ್ ನಿರೂಪಿಸಿ, ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986815401
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243