ದಿನದ ಸುದ್ದಿ
ಕೋವಿಡ್ -19 | ಲಾಕ್ ಡೌನ್ ನಿಂದ ಉಂಟಾಗುವ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಮುನ್ನೋಟ..!
- ಕ್ರಾಂತಿರಾಜ್ ಒಡೆಯರ್ ಎಂ, ಸಹಾಯಕ ಪ್ರಾಧ್ಯಾಪಕರು, ಮೈಸೂರು
ಸಂದರ್ಭ 1
ಬೇರೆ ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ವಲಸೆ ಕಾರ್ಮಿಕರು ಕೋವಿಡ್ 19 ಲಾಕ್ ಡೌನ್ ನಿಂದ ಕೆಲಸವಿಲ್ಲದೇ ಜೀವನೋಪಾಯ ಕಷ್ಟವಾಗಿ, ತಮ್ಮ ತಮ್ಮ ಊರುಗಳಿಗೆ ಹೊರಡಲು ರೈಲ್ವೆ ಹಾಗು ಬಸ್ಸು ನಿಲ್ದಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸೇರಿದ್ದ ವಲಸೆ ಕಾರ್ಮಿಕರ ಕುರಿತು ನಮ್ಮ ರಾಜ್ಯದ ಮುಖ್ಯಮಂತ್ರಿ ಯೆಡಿಯೂರಪ್ಪನವರು, ಕಾರ್ಮಿಕರು ವಾಪಸು ಹೋಗದಂತೆ ಕಳಕಳಿಯ ಮನವಿ ಮಾಡಿಕೊಂಡರೂ, ಮುಖ್ಯಮಂತ್ರಿಗಳ ಮನವಿಗೆ ಸ್ಪಂಧಿಸದ ವಲಸೆ ಕಾರ್ಮಿಕರು, ತಾವು 2 ತಿಂಗಳಿನಿಂದ ಅನುಭವಿಸುತ್ತಿರುವ ಯಾತನೆ ಸಾಕು.
ಈಗಲಾದರೂ ತಮ್ಮ ತಮ್ಮ ಊರುಗಳಿಗೆ ಸೇರಿಕೊಳ್ಳೋಣ ಎಂದು ಕೆಲವರು ಈಗಾಗಲೇ ತಮ್ಮ ಊರು ಸೇರಿಕೊಂಡಿದ್ದರೆ, ಹಲವರು ತಮ್ಮ ಗೂಡು ಸೇರಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.
ಸಂದರ್ಭ 2
ಒಂದು ವಾರದ ಹಿಂದೆ ಟಿ ವಿ ಯಲ್ಲಿ ನೋಡಿದ್ದು. ಮುಂಬೈಯಿಂದ ಉತ್ತರ ಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದ ವಲಸೆ ಕಾರ್ಮಿಕನಿಗೆ ಪತ್ರಕರ್ತ ಕೇಳಿದ ಪ್ರಶ್ನೆ, “ಸರ್ಕಾರ ನಿಮಗಾಗಿ ರೈಲಿನ ವ್ಯವಸ್ಥೆ ಮಾಡಿದೆ.
ನೀವು ಏಕೆ ನಡೆದು ಹೋಗ್ತಿದ್ದೀರಾ? ಲಾಕ್ ಡೌನ್ ಮುಗಿದ ಮೇಲೆ ವಾಪಸ್ ಇಲ್ಲಿಗೆ ಬರುತ್ತೀರಾ?” ಎಂಬ ಹಲವಾರು ಪ್ರಶ್ನೆಗಳಿಗೆ ವಲಸೆ ಕಾರ್ಮಿಕ ಕೊಟ್ಟ ಉತ್ತರ, “ನಮಗೆ ಅಕ್ಷರ ಜ್ಞಾನ ಇಲ್ಲ, ಈ ಮೊಬೈಲ್ ಬಳಸಲು ಸಹ ಬರಲ್ಲ, ಅವರ ಇವರ ಬಳಿ ಕಾಡಿ ಬೇಡಿ ಅನ್ ಲೈನ್ ಅರ್ಜಿ ಸಲ್ಲಿಸಿದ್ದೆ ಅದು ರಿಜೆಕ್ಟ್ ಆಗಿದೆ, ಮತ್ತೆ ಯಾರು ಅರ್ಜಿ ಹಾಕಲು ಸಹಾಯ ಮಾಡಲಿಲ್ಲ, ಅದಕ್ಕೆ ನಡೆದುಕೊಂಡೆ ಹೋಗ್ತಿದ್ದಿನಿ.ಊರಲ್ಲಿ ಅಪ್ಪನಿಗೆ ವ್ಯವಸಾಯಕ್ಕೆ ಸಹಾಯ ಮಾಡಿಕೊಂಡು ಇರ್ತೀನಿ ವಿನಾ ಇಲ್ಲಿ ಬಂದು ಇನ್ನೊಮ್ಮೆ ನರಕಯಾತನೆ ಅನುಭವಿಸಲು ಇಷ್ಟ ಇಲ್ಲ”.
ಸಂದರ್ಭ 3
ಮೈಸೂರಿನ ಹೆಮ್ಮೆಯ ಉದ್ದಿಮೆಗಳಾದ ಸಥರನ್ ಸ್ಟಾರ್ ಹೋಟೆಲ್ ಹಾಗು ರೀಡ್ ಅಂಡ್ ಟೇಲರ್ ಕಂಪನಿಗಳು ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿಯು ಅನಿಶ್ಚಿತತೆಯಿಂದ ಕೂಡಿದ್ದು, ಮುಂದೇನು ಮಾಡಬೇಕೆಂಬ ದಾರಿ ತೋಚದೆ, ಉದ್ದಿಮೆಗಳನ್ನು ಮುಚ್ಚಿದ್ದು, ಸುಮಾರು 2000 ಕಾರ್ಮಿಕರು ಬೀದಿಪಾಲಾದಂತಾಗಿದೆ.
ಈ ಸಮಸ್ಯೆ ಕೇವಲ ವಲಸೆ ಕಾರ್ಮಿಕರು ಹಾಗು ಕೆಲವು ಕಂಪೆನಿಗಳದ್ದಲ್ಲ. ದೇಶದ ಎಲ್ಲ ಆರ್ಥಿಕ ವಲಯಗಳಿಗೂ ಹರಡಿರುವ ಸಮಸ್ಯೆ. ಭಾರತದಲ್ಲಿ ಸರಿ ಸುಮಾರು 67% ರಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಹಲವು ಸಂಸ್ಥೆಗಳ ಸಮೀಕ್ಷೆಗಳು ಹೇಳುತ್ತವೆ.
ಈ ಸಂದರ್ಭದಲ್ಲಿ ಆಗಿರುವ ಬದಲಾವಣೆಗಳಿಂದ ದೇಶದಲ್ಲಿ ದೊಡ್ಡ ಮಟ್ಟದ ಆರ್ಥಿಕ ಹಾಗು ಸಾಮಾಜಿಕ ಸಮಸ್ಯೆಗಳು ಉಂಟಾಗಲಿದ್ದು, ನಮ್ಮ ಆಡಳಿತ ವ್ಯವಸ್ಥೆಯು ಸಮಸ್ಯೆ ಹೋಗಲಾಡಿಸಲು ಸರಿಯಾದ ಮಾರ್ಗೋಪಾಯಗಳನ್ನು ಕಂಡುಕೊಳ್ಳದ್ದಿದ್ದರೆ, ದೇಶವು ಸರಿಪಡಿಸಲಾಗದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಲಿದೆ. ಕೋವಿಡ್ 19 ಲಾಕ್ ಡೌನ್ ನಿಂದ ದೇಶದ ಆರ್ಥಿಕ ವಲಯಗಳ ಮೇಲೆ ಉಂಟಾಗುವ ಸಾಮಾಜಿಕ ಹಾಗು ಆರ್ಥಿಕ ಪರಿಣಾಮಗಳನ್ನು ಅವಲೋಕಿಸುವುದಾದರೆ..
ಸಣ್ಣ, ಮಧ್ಯಮ ಹಾಗು ಬೃಹತ್ ಉದ್ದಿಮೆಗಳ ಮೇಲೆ ಉಂಟಾಗುವ ಪರಿಣಾಮ
ಲಾಕ್ ಡೌನ್ ನಿಂದ ಉದ್ದಿಮೆಗಳು ಸಂಪೂರ್ಣ ಮುಚ್ಚಿದ್ದು, ಐಟಿ, ಬಿಟಿ ವಲಯಗಳೇನೋ ಕಾರ್ಮಿಕರಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವ ಸೌಲಭ್ಯವನ್ನು ಕಲ್ಪಿಸಿದ್ದು, ಈ ವ್ಯವಸ್ಥೆ ಇನ್ನೂ 6 ತಿಂಗಳು ಮುಂದುವರೆಯುವ ಮುನ್ಸೂಚನೆಯನ್ನು ಹಲವು ಕಂಪನಿಗಳು ನೀಡಿವೆ.
ಆದರೆ ಉತ್ಪಾದನಾ ವಲಯವು ಬೇಡಿಕೆ ಇಲ್ಲದೇ, ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದು, ಈ ವಲಯದ ಮುಂದಿನ ದಿನಗಳು ಅನಿಶ್ಚಿತತೆಯಿಂದ ಕೂಡಿದೆ. ಕೆಲಸ ಕಳೆದುಕೊಂಡ ಕಾರ್ಮಿಕರಲ್ಲಿ ಹಲವರು ಈಗಾಗಲೇ ತಮ್ಮ ತಮ್ಮ ಊರುಗಳನ್ನು ಸೇರಿಕೊಂಡಿದ್ದು, ಇನ್ನೂ ಹಲವರು ತಮ್ಮ ಊರು ಸೇರಿಕೊಳ್ಳುವ ಪ್ರಕ್ರಿಯೆಯಲ್ಲಿದ್ದು, ತಮ್ಮ ಜೀವನೋಪಾಯಕ್ಕೆ ತಮ್ಮ ತಮ್ಮ ಹಳ್ಳಿಗಳಲ್ಲೇ ಹಲವು ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದು, ಮುಂದೊಂದು ದಿನ ದೇಶದ ಆರ್ಥಿಕ ವ್ಯವಸ್ಥೆ ಸರಿಹೋದರೂ, ಇವರು ತಮ್ಮ ಹಳೇ ಕೆಲಸಗಳಿಗೆ ಮರಳುವುದು ಕಷ್ಟಸಾಧ್ಯ.
ಇದರಿಂದ ಈ ವಲಯಕ್ಕೆ ಕಾರ್ಮಿಕರ ಕೊರತೆ ಉಂಟಾಗಲಿದ್ದು, ಉದ್ದಿಮೆಗಳಿಗೆ ತಗಲುವ ಕಾರ್ಮಿಕರ ವೆಚ್ಚ ಹೆಚ್ಚಾಗಲಿದ್ದು, ಇದರಿಂದ ಈ ವಲಯ ತಯಾರಿಸುವ ಉತ್ಪನ್ನಗಳ ಬೆಲೆ ಹೆಚ್ಚಾಗಲಿದ್ದು, ಗ್ರಾಹಕರ ಮೇಲೆ ಬೆಲೆ ಏರಿಕೆಯ ಬರೆ ಬೀಳುವುದು ಗ್ಯಾರಂಟಿ. ಮತ್ತೊಂದು ಸಮಸ್ಯೆ ಎಂದರೆ, ಕಾರ್ಖಾನೆಗಳ ಮಾಲೀಕರು ಈಗಾಗಲೇ ಅನುಭವಿಸಿರುವ ನಷ್ಟವನ್ನು ಸರಿದೂಗಿಸಿಕೊಳ್ಳಲು, ಬೇರೆ ದಾರಿ ತೋಚದೆ ಇದೇ ಕೆಲಸದಲ್ಲಿ ಉಳಿಯುವ ಕಾರ್ಮಿಕರಿಂದ ಕಡಿಮೆ ಸಂಬಳಕ್ಕೆ ಹೆಚ್ಚು ಕೆಲಸ ಮಾಡಿಸಿ ಶೋಷಣೆ ಮಾಡುವ ದಿನಗಳನ್ನು ಶೀಘ್ರದಲ್ಲೇ ನೋಡುತ್ತೇವೆ.
ಶಿಕ್ಷಣ ವಲಯದ ಮೇಲೆ ಉಂಟಾಗುವ ಪರಿಣಾಮ
ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿನ ಬೇಡಿಕೆ ಕುಂಠಿತದಿಂದಾಗಿ ಉದ್ದಿಮೆಗಳು ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದ್ದು, ಬೇಡಿಕೆ ಮರಳಲು ಇನ್ನೂ 3 ರಿಂದ 4 ವರ್ಷಗಳು ಬೇಕಾಗಬಹುದು. ಈ ಸಂದರ್ಭದಲ್ಲಿ, ಪ್ರಸ್ತುತ ವರ್ಷದಲ್ಲಿ ಹಾಗೂ ಮುಂದಿನ ಕೆಲವು ವರ್ಷಗಳಲ್ಲಿ ಪದವಿ ಪಡೆದು ಉದ್ಯೋಗದ ಕನಸು ಕಟ್ಟಿಕೊಳ್ಳುವ ವಿದ್ಯಾರ್ಥಿಗಳನ್ನು ನೆನೆಸಿಕೊಂಡರೆ ಅಯ್ಯೋ ಎನಿಸುತ್ತದೆ. ಇವರು ಉದ್ಯೋಗ ಪಡೆದು ಜೀವನದಲ್ಲಿ ನೆಲೆಯೂರುವ ದಿನಗಳು ಮುಂದೆ ಹೋದಷ್ಟು, ಇವರ ಸ್ವಾಭಿಮಾನದ ಜೀವನದ ಕನಸು, ಮದುವೆ ಆಸೆಗಳು ಮುಂದೂಡಲಾಗಿ, ಜೀವನದ ಸಹಜ ಪ್ರಕ್ರಿಯೆಗಳಿಗೆ ಹಾಗು ಹಣಕಾಸಿನ ಸಂಪಾದನೆಗೆ ಅಡ್ಡದಾರಿಯನ್ನು ಹಿಡಿಯಬಹುದಾದ ಸಂದರ್ಭ ಬರಬಹುದು.
ಸರ್ಕಾರ ನಿರ್ವಹಿಸಬೇಕಾದ ಪಾತ್ರ
ಜಾನ್ ಮೇನಾರ್ಡ್ ಕೇನ್ಸ್ ಎಂಬ ಇಂಗ್ಲೆಂಡ್ ದೇಶದ ಶ್ರೇಷ್ಠ ಆರ್ಥಿಕ ತಜ್ಞ ಅವನ The theory of Empolyment, Interest and Money ಹಾಗೂ The Role of the Government ಎನ್ನುವ ಪುಸ್ತಕದಲ್ಲಿ ದೇಶಗಳು ಆರ್ಥಿಕ ಸಂಕಷ್ಟದಲ್ಲಿ ಯಾವ ರೀತಿಯ ಆರ್ಥಿಕ ನೀತಿಗಳನ್ನು ರೂಪಿಸಬೇಕು ಎಂದು ಹೇಳುತ್ತಾ, “ಆರ್ಥಿಕ ದುಸ್ಥಿತಿಯಲ್ಲಿ ಆಳುವ ಸರ್ಕಾರಗಳು, ಯಾವುದಾದರೂ ಮೂಲಗಳಿಂದ ಹಣವನ್ನು ತಂದು ಆರ್ಥಿಕ ವ್ಯವಸ್ಥೆಯ ತಳ ಪದರಕ್ಕೆ (ಕುಟುಂಬಗಳಿಗೆ ಹಾಗು ಕಾರ್ಮಿಕ ಸಮೂಹ) ನೇರ ಹಂಚಬೇಕು.ಇದರಿಂದ ಕಾರ್ಮಿಕರನ್ನು ಅವರವರ ಕೆಲಸಗಳಲ್ಲಿ ಜೀವಂತವಾಗಿಟ್ಟುಕೊಳ್ಳುವುದಲ್ಲದೇ, ಉತ್ಪನ್ನಗಳಿಗೆ ಬೇಡಿಕೆಯನ್ನೂ ಹುಟ್ಟಿಸಬಹುದಾಗಿದ್ದು, ದೊಡ್ಡಮಟ್ಟದ ಆರ್ಥಿಕ ಕುಸಿತದಿಂದ ದೇಶವನ್ನು ರಕ್ಷಿಸಬಹುದು” ಎಂದು ಹೇಳುತ್ತಾನೆ. ಇಂದಿನ ಸಂದರ್ಭದಲ್ಲಿ ಜಾನ್ ಮೇನಾರ್ಡ್ ಕೇನ್ಸ್ ನ ಆರ್ಥಿಕ ಸಿದ್ಧಾಂತವು ಪ್ರಸ್ತುತವೆನಿಸುತ್ತದೆ.
ಆದರೆ ನಮ್ಮ ಸರ್ಕಾರದ ಆರ್ಥಿಕ ಪ್ಯಾಕೇಜ್ ನೋಡಿದಾಗ, ಕಡಿಮೆ ಪ್ರಮಾಣದ ಹಣಕಾಸಿನ ಪ್ಯಾಕೇಜ್ ಆರ್ಥಿಕ ವ್ಯವಸ್ಥೆಯ ಕೆಳಸ್ತರಕ್ಕೆ ಮೀಸಲಿಟ್ಟಿದ್ದು, ದೊಡ್ಡ ಮಟ್ಟದ ಹಣ ಮೇಲಿನ ಸ್ತರಕ್ಕೆ ಮೀಸಲಿಟ್ಟಿದೆ.
ಇದರಿಂದ ಇಂದಿನ ಆರ್ಥಿಕ ಸಮಸ್ಯೆ ಬಗೆಹರಿಯದು ಎಂಬುದು ನನ್ನ ಅನಿಸಿಕೆ. ಇಂದು ನಮಗೆ ಬೇಕಿರುವುದು “BOTTOM TO TOP ECONOMIC APPROACH” ಹೊರತು “TOP TO BOTTOM ECONOMIC APPROACH” ಅಲ್ಲ. ಆಳುವ ಸರ್ಕಾರಗಳು ಲಭ್ಯವಿರುವ ಆರ್ಥಿಕ ಸಿದ್ದಾಂತಗಳನ್ನು ಅಧ್ಯಯಿಸಿ ಸಂದರ್ಭಕ್ಕೆ ಸರಿಯಾದ ಆರ್ಥಿಕ ನೀತಿಗಳನ್ನು ರೂಪಿಸಬೇಕೆಂಬುದು ನನ್ನ ಅನಿಸಿಕೆ.
(ಲೇಖಕರು :ಕ್ರಾಂತಿರಾಜ್ ಒಡೆಯರ್ ಎಂ
ಸಹಾಯಕ ಪ್ರಾಧ್ಯಾಪಕರು
ವ್ಯವಹಾರ ನಿರ್ವಹಣಾ ವಿಭಾಗ
ಸೇಪಿಯೆಂಟ್ ಕಾಲೇಜು
ಮೈಸೂರು)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ