ದಿನದ ಸುದ್ದಿ
ಎಂಜಿ ರೋಡ್ ಶಾಂತಿ ಬದುಕು ಮತ್ತು ಬವಣೆ
ಸುದ್ದಿದಿನ ವಿಶೇಷ: ಸ್ಯಾಂಡಲ್ವುಡ್ನ ಜ್ಯೂನಿಯರ್ ಆರ್ಟಿಸ್ಟ್ಗಳಿಗೆ ಎಂಜಿ ರೋಡ್ ಆರ್ಟಿಸ್ಟ್ಗಳು ಎಂಬ ಅನ್ವರ್ಥ ನಾಮವೊಂದಿದೆ. ಸಿನಿಮಾದಲ್ಲಿ ಸಣ್ಣಪುಟ್ಟ ರೋಲ್ ಮಾಡುವವರ ಇಂಥ ಕಲಾವಿದರ ಬದುಕನ್ನು ಅನಾವರಣ ಮಾಡುವ ‘ಎಂಜಿ ರೋಡ್ ಶಾಂತಿ’ ನಾಟಕವು ಇದೇ 20ರಂದು ಬೆಂಗಳೂರಿನಲ್ಲಿ ಪ್ರದರ್ಶನವಾಗಲಿದೆ.
ಒಬ್ಬಳು ನಾಟಕದ ಮೂಲಕ ದೇಶಾದ್ಯಂತ ಹೆಸರು ಮಾಡಿದ ರಂಗ ಕಲಾವಿದ ಪ್ರಸನ್ನ ಡಿ. ಅವರು ಈ ನಾಟಕವನ್ನು ನಿರ್ದೇಶಿಸಿದ್ದು, ಮೇ.20ರ ಸಂಜೆ 7.15ಕ್ಕೆ ಬೆಂಗಳೂರಿನ ಮಲ್ಲಹಳ್ಳಿಯಲ್ಲಿರುವ ಕಲಾಗ್ರಾಮದಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಭಾರತೀಯ ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಿಂದ ಹತ್ತಿರದಿಂದ ಕಂಡು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವವಿರುವ ಬರಹಗಾರ ವಿಜಯ್ ತೆಂಡೂಲ್ಕರ್ ಅವರ ‘ಬೇಬಿ’ ಮರಾಠಿ ಕಾಂದಂಬರಿಯ ಕನ್ನಡ ಅವತರಣಿಕೆಯು ಎಂಜಿ ರೋಡ್ ಶಾಂತಿ.
ಮರಾಠಿ ಕಾದಂಬರಿಯನ್ನು ಕನ್ನಡ ಮಣ್ಣಿಗೆ ಹೊಂದಿಕೊಳ್ಳುವಂತೆ ಕೆಲವು ಅಂಶಗಳನ್ನು ಸೇರಿಸಿ ನಾಟಕವನ್ನು ಕನ್ನಡಿಗನ ಮನ ಮುಟ್ಟುವಂತೆ ರೂಪಿಸಲಾಗಿದೆ ಎನ್ನುತ್ತಾರೆ ನಿರ್ದೇಶಕ ಪ್ರಸನ್ನ ಡಿ.
ಸಾಗರ ಮೂಲದವರಾದ ಪ್ರಸನ್ನ ಅವರು ಈವರೆಗೆ ಪೀರನೆಂಬ ಕಿರಾತಕನ ಪ್ರಸಂಗ, ಒಬ್ಬಳು, ಓವರ್ ಕೋಟ್, ಬಿಂಬಾಯಣ, ಪರಿಹಾರ ಮೊದಲಾದ ನಾಟಕಗಳನ್ನು ನಿರ್ದೇಶಿಸಿದೆ. ಒಬ್ಬಳು ನಾಟಕವು ಇವರಿಗೆ ರಾಷ್ಟ್ರಮಟ್ಟದ ಹೆಸರು ತಂದುಕೊಟ್ಟಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಕಲಾವಿದೆ, ರಾಜ್ಯ ಪ್ರಶಸ್ತಿ ವಿಜೇತೆ ಅಕ್ಷತಾ ಪಾಂಡವಪುರ ಅವರು ಲೀಡ್ ರೋಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕು ಪಾತ್ರಗಳಿರುವ ಈ ನಾಟಕದಲ್ಲಿ ಅಕ್ಷತಾ ಅವರೊಂದಿಗೆ ಕಲಾವಿದರಾದ ಶಿವು, ಮುರುಳಿ, ಗೋಮಾರ್ದನಹಳ್ಳಿ ಮಂಜುನಾಥ್ ನಟಿಸಿದ್ದಾರೆ.
ಮೂಲ ನಾಟಕದಲ್ಲಿ ಬೇಬಿ ಎಂಬುವವಳು ಒಬ್ಬ ಜ್ಯೂನಿಯರ್ ಆರ್ಟಿಸ್ಟ್. ಆಕೆಯ ಬದುಕಿನಲ್ಲಿ ಘಟಿಸುವ ಘಟನೆಗಳೇ ಈ ನಾಟಕದ ಕಥಾವಸ್ತು. ಚಿಕ್ಕಾಸಿಗಾಗಿ ಸಣ್ಣಪುಟ್ಟ ಪಾತ್ರಗಳನ್ನೇ ಅವಲಂಬಿಸಿರುವ ಬೇಬಿ ಶಿವಪ್ಪ ಎಂಬುವವನ ಮನೆಯಲ್ಲಿ ಆಶ್ರಯ ಪಡೆದಿರುತ್ತಾಳೆ. ಬೇಬಿಯನ್ನು ತನ್ನ ತೃಷೆಗಾಗಿ ಬಳಸಿಕೊಳ್ಳುವ ಶಿವಪ್ಪ ಆಕೆಯ ತಮ್ಮನಿಗೆ ಕಿರುಕುಳ ನೀಡಿ ಹುಚ್ಚಾಸ್ಪತ್ರೆಗೆ ಸೇರಿಸುತ್ತಾನೆ. ಎರಡು ವರ್ಷಗಳ ನಂತರ ಆತ ವಾಪಸ್ ಮನೆಗೆ ಬಂದಾಗ ಶಿವಪ್ಪ ಆತನನ್ನು ಪಶುವಿನಂತೆ ಕಾಣುತ್ತಾನೆ ಇನ್ನಷ್ಟು ಚಿತ್ರಹಿಂಸೆ ಕೊಡುತ್ತಾನೆ. ಇದನ್ನು ಕಂಡೂ ಕೂಡ ಬೇಬಿಗೆ ಏನೂ ಮಾಡಲಾಗದ ಸ್ಥಿತಿ.
ಸಂಗೀತಗಾರನೊಬ್ಬನ ಹಾಡುಗಳು ಆಕೆಯ ಬದುಕಿಗೆ ಸ್ಫೂರ್ತಿ. ಆತ ಬರೆಯುವ ಹಾಡುಗಳೇ ಆಕೆಯ ಬದುಕಿಗೆ ಶಕ್ತಿ. ಹೇಗಾದರೂ ಮಾಡಿ ಜೀವನದಲ್ಲಿ ಮುಂದೆ ಬರಬೇಕೆಂಬ ಹಂಬಲದಲ್ಲಿರುವ ಆಕೆಗೆ ಸಹಾಯಕ ನಿರ್ದೇಶಕನೊಬ್ಬ ತನ್ನ ಸಿನಿಮಾದ ನಾಯಕಿ ಮಾಡುವುದಾಗಿ ಭರವಸೆ ನೀಡುತ್ತಾನೆ. ಆತ ಒಬ್ಬ ಬೇಬಿ ಮನೆಗೆ ಬಂದಾಗ ಶಿವಪ್ಪ ಅದನ್ನು ಕಂಡು ಬೇಬಿಯನ್ನು ಮನೆಯಿಂದ ಹೊರ ಹಾಕುತ್ತಾನೆ. ಇದು ಸಿನಿಮಾದ ಮುಖ್ಯ ಕತೆ.
ಈ ಕತೆಯನ್ನು ಕನ್ನಡ ನೆಲಕ್ಕೆ ಹೊಂದಿಸುವ ನಿಟ್ಟಿನಲ್ಲಿ ನಿರ್ದೇಶಕರು ಡಬ್ಬಿಂಗ್ ಚರ್ಚೆ, ಕಾಸ್ಟಿಂಗ್ ಕೌಚ್ ಮೊದಲಾದ ವಿಷಯಗಳನ್ನು ಸ್ಪರ್ಶಿಸಿದ್ದಾರೆ.
ಜ್ಯೂನಿಯರ್ ಆರ್ಟಿಸ್ಟ್ಗಳು ಒಂದು ಸಿನಿಮಾದ ಬೆನ್ನೆಲುಬಾಗಿ ನಿಂತಿರುತ್ತಾರೆ. ಇವರಿಗೆ ನೀಡುವ ಸಂಭಾವನೆ ಅವರ ಪಾತ್ರಕ್ಕೆ ತಕ್ಕಂತಿರುತ್ತದೆ. ಮದುವೆ ಮನೆಯಲ್ಲಿ ಹೆಣ್ಣಿನ ಜತೆ ಇರುವ ಪಾತ್ರಕ್ಕೆ ಹೆಚ್ಚು, ಗ್ರಾಮೀಣ ಮಹಿಳೆ ಪಾತ್ರಕ್ಕೆ ಕಡಿಮೆ ಸಂಭಾವನೆ ಪಡೆಯುತ್ತಾರೆ. ಇಂಥ ಪಾತ್ರದಾರಿಗಳ ಬದುಕಿನ ಬವಣೆಗಳು ಹೇಳತೀರದು. ಅದನ್ನು ನಾಟಕವಾಗಿಸುವ ಪ್ರಯತ್ನ ನಮ್ಮದು ಎನ್ನುತ್ತಾರೆ ನಿರ್ದೇಶಕ ಪ್ರಸನ್ನ.
———————–……………………———————
“ಶ್ರೀ ರೆಡ್ಡಿ ಎಂಬ ಕಲಾವಿದೆ ಇತ್ತೀಚೆಗೆ ಸಾರ್ವಜನಿಕವಾಗಿ ಅರೆಬೆತ್ತಲಾಗಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕಲಾವಿದೆ ಎಂದರೆ ಆಕೆಯನ್ನು ಕಾಮ ತೃಷೆ ತೀರಿಸಿಕೊಳ್ಳುವ ಗಂಡು ಮನಸ್ಥಿತಿಯ ಪ್ರತಿಭಟನೆಯ ರೂಪವೇ ಎಂಜಿ ರೋಡ್ ಶಾಂತಿ. ಒಬ್ಬ ಕಲಾವಿದೆಯಲ್ಲಿರುವ ಪ್ರತಿಭೆಯನ್ನು ಗಂಡು ಯಾವ ರೀತಿ ಅಪಾನಿಸುತ್ತಾನೆ ಎಂಬುದನ್ನು ಇದು ಪ್ರತಿಪಾದಿಸುತ್ತದೆ.”
|ಪ್ರಸನ್ನ ಡಿ. ರಂಗ ನಿದೇರ್ಶಕ
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು