ದಿನದ ಸುದ್ದಿ
ಹರಪನಹಳ್ಳಿ | ಮ್ಯಾಸ ಬೇಡರ ಕುಂದುಕೊರೆತಗಳ ಕುರಿತು ಸಭೆ
ಸುದ್ದಿದಿನ, ಹರಪನಹಳ್ಳಿ : ಕರ್ನಾಟಕ ಆಂದ್ರ ಗಡಿ ಜಿಲ್ಲೆಗಳಾದ ಬಳ್ಳಾರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯಕ ಪಂಗಡದವರಾದ ಮ್ಯಾಸ ನಾಯಕ – ಮ್ಯಾಸ ಬೇಡರು ನೆಲೆಸಿರುತ್ತಾವೆ. ನಮ್ಮ ಬುಡಕಟ್ಟಿನಲ್ಲಿ ಮಂದ ನಾಯಕ ಮತ್ತು ಮಲ್ಲ ನಾಯಕ ಎಂಬ ಎರಡು ಗುಂಪುಗಳಿರುತ್ತವೆ. ಮ್ಯಾಸ ಬೇಡರ ಭಾಷೆ ತೆಲುಗು ಭಾಷೆಯ ಉಪ ಭಾಷೆ. ವಿದ್ವಾಂಸರು ಇದನ್ನು “ಮ್ಯಾಸ ಭಾಷೆ “ಎಂದೇ ಕರೆದಿರುತ್ತಾರೆ ಎಂದು ಮ್ಯಾಸ ಬೇಡ (ಮ್ಯಾಸ ನಾಯಕ) ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ಉಪಧ್ಯಾಕ್ಷ ಎಂ.ಕೆ.ಬೋಸಪ್ಪ ಹೇಳಿದರು.
ಬುಧವಾರ ಹರಪನಹಳ್ಳಿ ಪಟ್ಟಣದಲ್ಲಿ ಮ್ಯಾಸ ಬೇಡರ ಕುಂದುಕೊರೆತಗಳ ಕುರಿತು ಮ್ಯಾಸ ಬೇಡ (ಮ್ಯಾಸ ನಾಯಕ) ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ವತಿಯಿಂದ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಕೆ.ಬೋಸಪ್ಪ ಅವರು ಮಾತನಾಡಿದರು.
ನಾವು ಮೂಲತ: ಗೊಂಡವಾನ ಪ್ರದೇಶದ ಬುಡಕಟ್ಟುಗಳಲ್ಲಿ ಒಂದಾದ ‘ಭಿಲ್’ ಬುಡಕಟ್ಟು ಜನಾಂಗದಿಂದ ಬೇರ್ಪಟ್ಟ ‘ನಾಯ್ಕಡ’ ಬುಡಕಟ್ಟಿಗೆ ಸೇರಿರುತ್ತೇವೆ. ಆಂದ್ರದ ಶ್ರೀಶೈಲದ ಮೂಲಕ ಆಂದ್ರ ಕರ್ನಾಟಕ ಗಡಿಭಾದಲ್ಲಿ ಬಂದು ನೆಲೆಸಿರುತ್ತೇವೆ. ನಾಯ್ಕಡ-ನಾಯಕ ಪಂಗಡದವರಾದ ಮ್ಯಾಸ ನಾಯಕ / ಮ್ಯಾಸ ಬೇಡ ಬುಡಕಟ್ಟು ಜನರು ಮೂರ್ತಿ ಪೂಜಕರು ಅಲ್ಲ. ‘ಉದಿ-ಪದಿ’ ಎಂಬ ಬುಡಕಟ್ಟು ಧಾರ್ಮಿಕ ಸಂಪ್ರದಾವನ್ನು ಪಾಲಿಸುತ್ತೇವೆ.
‘ಉದಿ’ ಎಂದರೆ ಪೆಟ್ಟಿಗೆ, ಬುಟ್ಟಿಗಳಲ್ಲಿ ಇಟ್ಟಿರುವ ಪವಿತ್ರ ವಸ್ತುಗಳ ಪುಟ್ಟಿ ಅಥವಾ ಪೆಟ್ಟಿಗೆ ಇವುಗಳನ್ನೇ ದೇವರೆಂದು ಇವರು ಪೂಜಿಸುವುದರಿಂದ ಇವುಗಳನ್ನು ಪೆಟ್ಟಿಗೆ ದೇವರುಗಳೆಂದು ಕರೆಯುತ್ತೇವೆ. ಬಿಲ್ಲು, ಕತ್ತಿ, ಕೋಲು ಮುಂತಾದ ಆಯುಧಗಳನ್ನು ಮತ್ತು ದೇವರ ಎತ್ತುಗಳನ್ನು ಸಹ ಪೂಜಿಸುತ್ತೇವೆ. ಈ ದೇವರ ಎತ್ತುಗಳು ನಮ್ಮ ಪೂರ್ವಿಕರ ಆತ್ಮವನ್ನು ಹೊಂದಿರುವ ಪ್ರಾಣಿಗಳೆಂದು ಪೂಜಿಸುತ್ತೇವೆ ಎಂದರು.
ನಾವು ಪ್ರಾಣಿ ಪೂಜಕರೆ ಹೊರತು, ಮೂರ್ತಿ ಪೂಜಕರಲ್ಲ ಮತ್ತು ವೈಧಿಕ ಸಂಪ್ರದಾಯಗಳನ್ನು ಪಾಲಿಸುವವರಲ್ಲ. ನಾವು ಕೋಳಿ ಮಾಂಸವನ್ನು ತಿನ್ನುವುದಿಲ್ಲ ಮತ್ತು ಕೋಣದ ಮಾಂಸವನ್ನು ಸಮಾನ್ಯವಾಗಿ ಮುಖ್ಯ ಮಾಂಸ ಭೋಜನವಾಗಿ ಉಪಯೋಗಿಸುತ್ತೇವೆ. ಚಿತ್ರದುರ್ಗ ಪಾಳೆಯಗಾರರು ನಮ್ಮ ಮ್ಯಾಸ ಬೇಡ ಬುಡಕಟ್ಟಿನ ಕಾಮಗೇತಿ ಬೆಡಗಿಗೆ ಸೇರಿದ ವೀರರಾಗಿರುತ್ತಾರೆ.
ರಾಜ್ಯದ ಬಳ್ಳಾರಿ ಜಿಲ್ಲೆ, ಚಿತ್ರದುರ್ಗ ಜಿಲ್ಲೆ ಮತ್ತು ಜಗಳೂರು ತಾಲ್ಲೂಕಿನಲ್ಲಿ ನಮ್ಮ ನಾಯಕ ಪಂಗಡ ಮ್ಯಾಸ ಬೇಡರು ಜನ ಸಂಖ್ಯೆಯಲ್ಲಿ ಬಹುಸಂಖ್ಯಾತರಾಗಿರುತ್ತೇವೆ. ಮ್ಯಾಸ ಬೇಡ ಸಮುದಾಯದ ಜನರು ಆರ್ಥಿಕ, ಸಮಾಜಿಕ, ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದ್ದೇವೆ ವಿಷಾದ ವ್ಯಕ್ತಪಡಿಸಿದರು.
ಬುಡಕಟ್ಟು ಹಿನ್ನೆಲೆಯನ್ನು ಹೊಂದಿರುವ ಮ್ಯಾಸ ಬೇಡ ಸಮುದಾಯದ ಜನರನ್ನು ಈಗಾಗಲೇ ನಾಯಕ ವಾಲ್ಮೀಕಿ ಎಂಬ ಹೆಸರಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿಯನ್ನು ನೀಡಿ 45ವರ್ಷಗಳೇ ಗತಿಸಿದರು ಸಹ ಈ ಜನರು ಮುಖ್ಯವಾಹಿನಿಗೆ ಬರಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮ್ಯಾಸ ಬೇಡ ಸಮುದಾಯವು ನೆಲೆಸಿರುವ ಹಟ್ಟಿಗಳು ಇದುವರೆಗೂ ಕಂದಾಯ ಗ್ರಾಮಗಳು ಆಗಿರುವುದಿಲ್ಲ. ನಮ್ಮ ಬುಡಕಟ್ಟು ಜನಾಂಗದ ಸಾಂಸ್ಕೃತಿಕ ವೀರರ ಹೆಸರಲ್ಲಿ ಮತ್ತು ಮ್ಯಾಸರಹಟ್ಟಿ ಎಂಬ ಹೆಸರಿನಲ್ಲಿ ಊರುಗಳು ಇರುತ್ತವೆ ಎಂದು ಹೇಳಿದರು.
ಕಾರ್ಯದರ್ಶಿ ದೊಡ್ಡಮನಿ ಪ್ರಸಾದ್ ಮಾತನಾಡಿ ನಮ್ಮ ಬುಡಕಟ್ಟು ಸಮುದಾಯದ ಧಾರ್ಮಿಕ ನಂಬಿಕೆಯ ಪ್ರತೀಕವಾದ ದೇವರು ಎತ್ತುಗಳು ಇವೆ. ಸುಮಾರು ಗುಡಿಕಟ್ಟೆಯ ದೇವರ ಎತ್ತುಗಳು ದಶಕಗಳಿಂದ ಮೇವು ನೀರಿಲ್ಲದೆ ಸತ್ತುಹೋಗಿರುತ್ತವೆ. ಬಯಲು ಸಿಮೇಯಲ್ಲಿ ಇರುವುದರಿಂದ ಇವುಗಳನ್ನು ಉಳಿಸಿಕೊಳ್ಳಲು ಕಿಲಾರಿಗಳು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದೇವೆ ಎಂದು ಹೇಳಿದರು.
ಇದಕ್ಕೆ ಸಂಬಂಧಿಸಿದಂತೆ ಹಾಲವಾರು ಬಾರಿ ಮಾದ್ಯಮಗಳಲ್ಲಿಯು ವರದಿಯಾಗಿರುತ್ತದೆ. ನಾವು ಹಾಲವಾರು ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಹ ಸಲ್ಲಿಸಲಾಗಿದೆ ಆದರೆ ಯಾವುದೇ ರೀತಿ ಕ್ರಮಕೈಗೊಂಡಿರುವುದಿಲ್ಲ. ಸರ್ಕಾರದಿಂದ ಸಿಗಬೇಕಾದ ಮೂಲಭೂತ ಸೌಲಭ್ಯಗಳು ಮತ್ತು ಅನುಧಾನವು ತಳವಾರ ಪರಿವಾರದವರ ಪಾಲಗುತ್ತಿದೆ. ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವುದರಿಂದ ನಿಧಾನವಾಗಿ ನಮ್ಮ ಬುಡಕಟ್ಟು ಸಂಸ್ಕೃತಿಯು ನಾಶವಾಗುವ ಹಂತಕ್ಕೆ ತಲುಪಿರುತ್ತದೆ.
ಈ ಸಮುದಾಯದ ಹಟ್ಟಿಗಳು ಮತ್ತು ಜನರು ಮೂಲ ಸೌಲಭ್ಯಗಳಿಲ್ಲದೆ ಸಂಪೂರ್ಣವಾಗಿ ಅಭಿವೃದ್ದಿಯಿಂದ ವಂಚಿತವಾಗಿದ್ದೇವೆ. ಈ ಸಮುದಾಯದ ಹೆಸರಿನಲ್ಲಿ ಜನಪ್ರತಿ ನಿಧಿಗಳಾಗಿರುವವರು ಮತ್ತು ರಾಜಕೀಯ ಮುಖಂಡರುಗಳು ಮ್ಯಾಸ ಬೇಡರ ಹಕ್ಕುಗಳ ರಕ್ಷಣೆ ಮಾಡುವಲ್ಲಿ ವಿಫಲವಾಗಿದ್ದಾರೆ. ರಾಜಕಾರಣಿಗಳು ಚುನಾವಣೆ ಬಂದಾಗ ಮಾತ್ರ ಮ್ಯಾಸ ನಾಯಕ ಎಂಬುದನ್ನು ನೆನಪು ಮಾಡಿಕೊಳ್ಳುತ್ತಾರೆ ಎಂದರು.
ರಾಜಕೀಯ ಮುಖಂಡರ ಇಚ್ಛಾಶಕ್ತಿಯ
ಕೊರೆತೆಯಿಂದಾಗಿ ಇಂದು ಈ ಸಮುದಾಯ ಜ್ವಾಲಂತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದೆ. ಇದರಿಂದ ನಾವು ಮುಕ್ತಿಯನ್ನು ಪಡೆಯಬೇಕಾದರೆ ಮೊದಲು ನಾವು ಸಂಘಟಿತರಾಗಬೇಕು ನಮ್ಮ ಮ್ಯಾಸ ಮಂಡಲದ ಎಲ್ಲಾ ಹಟ್ಟಿಗಳಲ್ಲಿ ಯುವಕರನ್ನು ಜಾಗೃತಿಗೊಳಿಸಬೇಕು ರಾಜಕಾರಣಿಗಳು ಯಾವುದೇ ಪಕ್ಷಗಳಲ್ಲಿ ಇರಲಿ ನಮ್ಮ ಸಮುದಾಯದ ಅಭಿವೃದ್ದಿ ವಿಚಾರ ಬಂದಾಗ ಪಕ್ಷತೀತವಾಗಿ ಕೆಲಸಮಾಡಬೇಕು ಎಂದು ಕರೆ ನೀಡಿದರು.
ನಮ್ಮ ಸಮುದಾಯದ ಎಲ್ಲಾ ವರ್ಗದ ಜನರನ್ನು ಜಾಗೃತಿಗೊಳಿಸಿ ಮುಂದಿನ ದಿನಗಳಲ್ಲಿ ಆಳುವ ವರ್ಗಕ್ಕೆ ಮ್ಯಾಸ ಬೇಡರ ಶಕ್ತಿಯನ್ನು ತೋರಿಸಬೇಕು. ಸಂವಿಧಾನ ಬದ್ದ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು. ಈ ಒಂದು ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
ಈ ಸಭೆಯಲ್ಲಿ ಬಳ್ಳಾರಿ, ಕೊಟ್ಟೂರು ಕೂಡ್ಲಿಗಿ ಮೊಳಕಾಲ್ಮೂರು ಜಗಳೂರು ತಾಲ್ಲೂಕುಗಳ ಸಮಿತಿಯ ಮುಖಂಡರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ2 days ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ