ದಿನದ ಸುದ್ದಿ
ಶರಾವತಿ ಉಳಿಸಿ | ಶರಾವತಿ ನದಿ ಎಂಬುದು ಮಲೆನಾಡಿನ ನಾಡಿ ಮಿಡಿತ
ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ
ಮಾನ್ಯರೇ ,
ಶರಾವತಿ ನದಿ ಎಂಬುದು ಮಲೆನಾಡಿನ ನಾಡಿ ಮಿಡಿತ. ಮಲೆನಾಡಿನ ಬದುಕಿನ ಜೊತೆ ಹಾಸುಹೊಕ್ಕಾಗಿರುವ ಮತ್ತು ಮಲೆನಾಡಿನ ಹೆಗ್ಗುರುತಾಗಿ ಬೆಳೆದುಬಂದಿರುವ ಜೀವನದಿ ಅದು. ಅದು ಸೃಷ್ಟಿಸುವ ಜೋಗ ಜಲಪಾತದ ಸೌಂದರ್ಯದಂತೆಯೇ ಅದರ ಹೆಸರೇ ನಮಗೆ ಒಂದು ಐಡೆಂಟಿಟಿಯನ್ನು ತಂದುಕೊಟ್ಟಿದೆ. ಸಾಲು ಸಾಲು ಜಲಾಶಯಗಳು ಮುಳುಗಿಸಿದ ಬದುಕಿನ ಹೊರತಾಗಿಯೂ ಅದರೊಂದಿಗೆ ಮಲೆನಾಡಿನ ಮಣ್ಣಿನಮಕ್ಕಳು ಹೊಂದಿರುವ ಕಳ್ಳುಬಳ್ಳಿಯ ಸಂಬಂಧ ಕಡಿದುಕೊಂಡಿಲ್ಲ. ಹಾಗಾಗಿ ಇದು ಅಮ್ಮ-ಮಕ್ಕಳ ಅನುಬಂಧ.
ಆದರೆ, ಇಂತಹ ನಮ್ಮೆಲ್ಲರ ಬದುಕಿನ ಭಾಗವಾಗಿರುವ ನದಿಗೆ ಈಗ ಅಪಾಯ ಬಂದೊದಗಿದೆ. ಆ ನದಿಯ ಲಿಂಗನಮಕ್ಕಿ ಅಣೆಕಟ್ಟೆಯಿಂದ ಸುಮಾರು 400 ಕಿ.ಮೀ ದೂರದ ಬೆಂಗಳೂರಿಗೆ ನೀರು ಒಯ್ಯುವ ಕುರಿತ ತ್ಯಾಗರಾಜ್ ಸಮಿತಿ ವರದಿಯ ಪ್ರಕಾರ, ಯೋಜನೆಯ ಡಿಪಿಆರ್(ವಿಸ್ತೃತ ಯೋಜನಾ ವರದಿ) ತಯಾರಿಸುವಂತೆ ರಾಜ್ಯ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ ಜಿ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಗೆ ನೋಡಿದರೆ, 2010ರಷ್ಟು ಹಿಂದೆಯೇ ಈ ಬಗ್ಗೆ ಯೋಚಿಸಿದ್ದ ಅಂದಿನ ರಾಜ್ಯ ಸರ್ಕಾರ, ತ್ಯಾಗರಾಜ್ ನೇತೃತ್ವದಲ್ಲಿ ಒಂಭತ್ತು ಮಂದಿ ತಜ್ಞರ ಸಮಿತಿ ರಚಿಸಿ, ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೂಲಕಗಳ ಕುರಿತು ವರದಿ ನೀಡುವಂತೆ ಸೂಚಿಸಿತ್ತು. ಸಾಕಷ್ಟು ನೀರು ಲಭ್ಯವಿರುವ ಮತ್ತು ಅಂತಾರಾಜ್ಯ ವಿವಾದಗಳಿಲ್ಲದ ಲಿಂಗನಮಕ್ಕಿ ಜಲಾಶಯದಿಂದ ಶರಾವತಿ ನದಿ ನೀರನ್ನು ಒಯ್ಯುವುದು ಮತ್ತು ಹಂತಹಂತವಾಗಿ ಶರಾವತಿ ಕಣಿವೆಯ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ ಸಂಪೂರ್ಣ ನೀರನ್ನು ಬೆಂಗಳೂರು ಮೈಸೂರು ಭಾಗದ ಹಲವು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡಬಹುದು ಎಂದು ಸಮಿತಿ 2013ರ ತನ್ನ ವರದಿಯಲ್ಲಿ ಹೇಳಿತ್ತು.
ಇದೀಗ ಮಾನ್ಯ ಉಪಮುಖ್ಯಮಂತ್ರಿಗಳ ಪ್ರಸ್ತಾಪದೊಂದಿಗೆ ಆ ವರದಿಯನ್ನೇ ಮುಂದಿಟ್ಟುಕೊಂಡು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿರುವುದು ಸ್ಪಷ್ಟ.
ಆದರೆ, ಮಲೆನಾಡಿಗರಾಗಿ, ಲಿಂಗನಮಕ್ಕಿಯೂ ಸೇರಿದಂತೆ ಶರಾವತಿ ಕಣಿವೆಯ ಸರಣಿ ಜಲಾಶಯಗಳಿಗಾಗಿ ನಮ್ಮ ಮನೆಮಠ, ಆಸ್ತಿಪಾಸ್ತಿ ಕಳೆದುಕೊಂಡು, ಬೀದಿಗೆ ಬಿದ್ದಿರುವ ಮುಳುಗಡೆ ಸಂತ್ರಸ್ತರಾಗಿ, ಮಲೆನಾಡು ವ್ಯಾಪ್ತಿಯಲ್ಲಿದ್ದೂ ತೀವ್ರ ಬರ ಮತ್ತು ಕುಡಿಯುವ ನೀರಿನ ಹಾಹಾಕಾರ ಎದುರಿಸುತ್ತಿರುವ ನದಿ ತಟದ ನತದೃಷ್ಟರಾಗಿ, ಈ ಯೋಜನೆಗೆ ನಮ್ಮ ಸಂಪೂರ್ಣ ವಿರೋಧ ಇದೆ.
12 ಸಾವಿರ ಕೋಟಿ ರೂಪಯಿ ಬೃಹತ್ ಮೊತ್ತದ ಯೋಜನೆಯ ಹಿಂದೆ ಯಾವುದೇ ವೈಜ್ಞಾನಿಕ, ಕಾರ್ಯಸಾಧುವಾದ ಯೋಚನೆ, ಚಿಂತನೆ ಇರದೆ, ಕೇವಲ ರಾಜಕೀಯ ಲಾಭ ಮತ್ತು ಸಾರ್ವಜನಿಕ ಹಣವನ್ನು ಲೂಟಿ ಹೊಡೆಯುವ ಲೆಕ್ಕಾಚಾರ ಇದರ ಹಿಂದಿದೆ ಮತ್ತು ಪರಿಸರ ಮತ್ತು ಮಲೆನಾಡಿನ ಜನಜೀವನದ ಮೇಲು ಉಂಟಾಗಬಹುದಾದ ಪರಿಣಾಮದ ಕಾರಣದಿಂದಾಗಿ ಇಂತಹ ಮೂರ್ಖತನದ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕು ಮತ್ತು ಮೂಲಭೂತವಾಗಿ ವಿದ್ಯುತ್ ಉತ್ಪಾದನೆಯ ಉದ್ದೇಶಕ್ಕಾಗಿಯೇ ನಿರ್ಮಾಣವಾಗಿರುವ ಶರಾವತಿ ಕಣಿವೆಯ ಲಿಂಗನಮಕ್ಕಿ ಮತ್ತಿತರ ಜಲಾಶಯಗಳ ನೀರನ್ನು ಆ ಉದ್ದೇಶಕ್ಕಲ್ಲದೆ ಅನ್ಯ ಉದ್ದೇಶಕ್ಕೆ ಬಳಸುವುದೇ ಆದರೆ, ನದಿ ತಟದಲ್ಲೇ ಕುಡಿಯುವ ನೀರಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಜನರಿಗೆ ಮತ್ತು ಕಣಿವೆಯ ಜಲವಿದ್ಯುತ್ ಯೋಜನೆಗಳಿಂದ ಸಂತ್ರಸ್ತರಾಗಿ ಸೂಕ್ತ ಪರಿಹಾರವೂ ಕಾಣದೆ, ಅಲ್ಲಲ್ಲಿ ಬರಪೀಡಿತ ಒಣಭೂಮಿ ಬೇಸಾಯ ಮಾಡಿಕೊಂಡಿರುವ ಸಂತ್ರಸ್ತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಈ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ, ಮಲೆನಾಡಿನ ಸಾಕ್ಷಿಪ್ರಜ್ಞೆಯಂತಿರುವ ಹಿರಿಯ ಸಾಹಿತಿ ಮತ್ತು ಶರಾವತಿ ಕಣಿವೆಯ ಬದುಕನ್ನು ಕಂಡುಂಡ ಶ್ರೀಯುತ ನಾ. ಡಿಸೋಜ ಅವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ.
ಮಾನ್ಯರ ನೇತೃತ್ವದಲ್ಲಿ ಸಾಗರದಲ್ಲಿ 22-06-19ರಂದು ನಡೆದ ಒಕ್ಕೂಟದ ಮೊದಲ ಸಮಾಲೋಚನಾ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳ ಪ್ರಸ್ತಾಪವನ್ನು ವಿರೋಧಿಸಿ, ಮಲೆನಾಡಿನಾದ್ಯಂತ ದಿಟ್ಟ ಹೋರಾಟ ನಡೆಸುವ ಮತ್ತು ಸರ್ಕಾರಕ್ಕೆ ನಮ್ಮ ಆಕ್ರೋಶ ವ್ಯಕ್ತಪಡಿಸುವ ಮಾರ್ಗವಾಗಿ ಜುಲೈ 10ರಂದು ಸಂಪೂರ್ಣ ಶಿವಮೊಗ್ಗ ಜಿಲ್ಲಾ ಬಂದ್ ನಡೆಸುವ ಕುರಿತು ನಿರ್ಧರಿಸಲಾಯಿತು.
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆ ಕೇವಲ ಶರಾವತಿ ಕಣಿವೆಯ ಜನರ ಸಮಸ್ಯೆ ಅಲ್ಲ. ಇದು ಇಡೀ ಮಲೆನಾಡಿನ ಜೀವ ಪರಿಸರ ಮತ್ತು ಜನಜೀವನದ ಭವಿಷ್ಯದ ಪ್ರಶ್ನೆ. ಹಾಗಾಗಿ ಸರ್ಕಾರದ ವಿವೇಚನಾಹೀನ ಯೋಜನೆಯ ಭವಿಷ್ಯದ ಗಂಭೀರ ಪರಿಣಾಮಗಳನ್ನು ಅರಿತು ಇಡೀ ಮಲೆನಾಡಿನ ಜನ ಈ ಹೋರಾಟಕ್ಕೆ ದನಿಗೂಡಿಸಬೇಕಿದೆ.
ಶಿವಮೊಗ್ಗ ನಗರ ಮತ್ತು ಜಿಲ್ಲೆಯ ಸಮಸ್ತ ಜನತೆ ಈ ಹೋರಾಟಕ್ಕೆ ಬೆಂಬಲ ನೀಡಿ, ಜುಲೈ 10ರ ಬಂದ್ ಬೆಂಬಲಿಸಬೇಕಾಗಿ ಒಕ್ಕೂಟ ಮನವಿ ಮಾಡುತ್ತದೆ. ಜಿಲ್ಲೆಯ ಧಾರ್ಮಿಕ ಮಠ-ಮಾನ್ಯಗಳ ಮುಖಂಡರು ಮತ್ತು ಮಠಾಧೀಶರು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಮುಖಂಡರು, ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು, ಆಟೋ ಚಾಲಕರ ಸಂಘ, ಬಸ್ ಮಾಲೀಕರ ಸಂಘ, ಸರಕು ಸಾಗಣೆ ವಾಹನ ಮಾಲೀಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ- ಸಂಸ್ಥೆಗಳು, ಸರ್ಕಾರಿ ನೌಕರರ ಸಂಘ, ಅಡಿಕೆ ಮಂಡಿ ಮಾಲೀಕರ ಸಂಘ ಮತ್ತು ಅಡಿಕೆ ಬೆಳೆಗಾರರ ಸಂಘಟನೆಗಳು, ಅಂಗಡಿ ಮುಂಗಟ್ಟು ಮಾಲೀಕರು, ವ್ಯಾಪಾರಸ್ಥರು ಮತ್ತು ಹೋಟೆಲ್ ಉದ್ಯಮಿಗಳು, ವಿದ್ಯಾರ್ಥಿ ಸಂಘಟನೆಗಳು, ವಿವಿಧ ಜಾತಿ- ಜನಾಂಗ ಸಂಘಟನೆಗಳು, ಮುಖ್ಯವಾಗಿ ಜಿಲ್ಲೆಯ ಇಡೀ ಮಾಧ್ಯಮ ಸ್ನೇಹಿತರು ಸದುದ್ದೇಶದದ ಮತ್ತು ಪಕ್ಷಾತೀತವಾದ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಒಕ್ಕೂಟ ಕೋರುತ್ತದೆ.
ಸರ್ಕಾರ ಸಂಪೂರ್ಣ ತನ್ನ ಪ್ರಸ್ತಾವನೆಯಿಂದ ಹಿಂದೆ ಸರಿದು, ತ್ಯಾಗರಾಜ್ ಸಮಿತಿ ವರದಿಯನ್ನು ಅಧಿಕೃತವಾಗಿ ತಿರಸ್ಕರಿಸಬೇಕು ಮತ್ತು ಭವಿಷ್ಯದಲ್ಲಿ ಕೂಡ ಶರಾವತಿ ನದಿ ಕಣಿವೆಯ ನೀರನ್ನು ಕಣಿವೆ ವ್ಯಾಪ್ತಿ ಹೊರಗಿನ ಬಳಕೆಗೆ ಮುಂದಾಗುವುದಿಲ್ಲ ಎಂದು ಭರವಸೆ ನೀಡಬೇಕು ಎಂಬ ಹಕ್ಕೊತ್ತಾಯಕ್ಕೆ ದನಿಗೂಡಿಸಬೇಕು ಎಂದು ಮನವಿ ಮಾಡುತ್ತದೆ.
ಹಕ್ಕೊತ್ತಾಯಗಳು
- ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಸ್ತಾಪವನ್ನು ಸಾರಾಸಗಟಾಗಿ ಕೈಬಿಡಬೇಕು ಮತ್ತು ತ್ಯಾಗರಾಜ್ ವರದಿಯನ್ನು ಅಧಿಕೃತವಾಗಿ ತಿರಸ್ಕರಿಸಬೇಕು.
- ಶರಾವತಿ ಕಣಿವೆಯ ಆಸುಪಾಸಿನ ವಿವಿಧ ಯೋಜನೆಗಳ ಸಂತ್ರಸ್ತರು ಸೇರಿದಂತೆ ಆ ಭಾಗದ ಕುಡಿಯುವ ನೀರು ಮತ್ತು ಒಣ ಭೂಮಿಗೆ ನೀರಾವರಿ ಒದಗಿಸಲು ಜಲಾಶಯದ ನೀರು ಬಳಕೆಗೆ ಆದ್ಯತೆ ನೀಡಬೇಕು. ಈ ಕುರಿತು ಸರ್ಕಾರ ಕೂಡಲೇ ಡಿಪಿಆರ್ ತಯಾರಿಸಲು ಆದೇಶ ನೀಡಬೇಕು.
ಸಹಿಗಳು:
ಡಾ. ನಾ ಡಿಸೋಜಾ, ಹಿರಿಯ ಸಾಹಿತಿಗಳು (ಗೌರವಾಧ್ಯಕ್ಷರು),ಪ್ರೊ. ಶ್ರೀಕಂಠ ಕೂಡಿಗೆ ಚಿಂತಕರು,ಶಂಕರ್ ಶರ್ಮಾ, ಇಂಧನ ತಜ್ಞರು,
ಹರ್ಷಕುಮಾರ್ ಕುಗ್ವೆ,ಶಶಿ ಸಂಪಳ್ಳಿ,ಎಚ್ ಬಿ ರಾಘವೇಂದ್ರ,ಜಿ ಟಿ ಸತ್ಯನಾರಾಯಣ ಕರೂರು,
ಅಜಯ್ ಶರ್ಮಾ,ವಿನ್ಸೆಂಟ್ ರೋಡ್ರಿಗಸ್,ಕನ್ನಪ್ಪ ಈಡಿಗ,ತಾರಾಮೂರ್ತಿ,
ಇತರರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು