ದಿನದ ಸುದ್ದಿ
ಚನ್ನಗಿರಿಯ ಕಲಾಭಿಮಾನಿಗಳ ಹೃದಯ ಗೆದ್ದ ತರಳಬಾಳು ಜಾನಪದ ಸಿರಿಯ ಪ್ರತಿಭೆಗಳು
ಸುದ್ದಿದಿನ,ಚನ್ನಗಿರಿ( ಪಾಂಡೋಮಟ್ಟಿ ): ನಾಡಿನ ಜಾನಪದ ಶ್ರೀಮಂತಿಕೆಯ ಸಾಂಸ್ಕೃತಿಕ ಕಣಜವನ್ನು ಉಳಿಸುವ ಪ್ರಯತ್ನದಿ ಯಶಸ್ಸು ಸಾಧಿಸಿ ಸಾಂಸ್ಕೃತಿಕ ಕಹಳೆಯನ್ನು ನಾಡಿನಾದ್ಯಂತ ಯಶಸ್ವಿಯಾಗಿ ಊದುತ್ತ ,ಕನ್ನಡದ ಕಲೋಪಾಸಕರ ಮನ ಗೆದ್ದಿರುವ ತರಳಬಾಳು ಜಗದ್ಗುರು ಬೃಹನ್ಮಠದ ಮುಖ್ಯ ವಾಹಿನಿಯಾಗಿ ಸಾಂಸ್ಕೃತಿಕ ರಸದೌತಣದ ಜೊತೆ ಕಲೆಯನ್ನು ಉಳಿಸಿ ಬೆಳೆಸುವ ಸಂದೇಶ ಸಾರುತ್ತಿರುವ ತರಳಬಾಳು ಜಾನಪದ ಸಿರಿ ಸಂಭ್ರಮದ ಯಶೋಗಾಥೆಗೆ ತಲೆದೂಗಿ ಅಹುದಹುದೆನ್ನಲೇಬೇಕು.
ಕೇವಲ ನಾಡು,ನುಡಿ, ಭಾಷೆ, ಸಂಸ್ಕೃತಿಯ ಬಗ್ಗೆ ವೇದಿಕೆಗಳಲ್ಲಿ ಬಡಾಯಿ ಕೊಚ್ಚಿಕೊಳ್ಳುವ ಪ್ರಭೂತಿಗಳಿಗೆ ಅಪವಾದದಂತೆ ಸದ್ದಿಲ್ಲದೆ ಜಾನಪದ ಸಂಸ್ಕೃತಿಯ ಪುನರುಜ್ಜೀವನದ ಕೈಂಕರ್ಯಕ್ಕೆ ಲಕ್ಷಾಂತರ ರೂಪಾಯಿಗಳನ್ನು ವಿನಿಯೋಗಿಸಿ ಯಾವುದೇ ಸರ್ಕಾರದ ಅನುದಾನ ಮತ್ತು ಅನುಮೋದನೆಗೆ ಜೋತು ಬೀಳದೆ ಲೋಕಮುಖಿ ಜಗದ್ಗುರುವೆಂದೇ ವಿಖ್ಯಾತರಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶಯದಂತೆ ತರಳಬಾಳು ಸಂಪದ್ಭರಿತ ಶಿಷ್ಯ ಸಮುದಾಯದ ಅಪೇಕ್ಷೆಯಂತೆ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಜಾನಪದದ ನಿಜ ಸೊಗಡಿನ ಕಂಪನ್ನು ಬೀರುತ್ತಿರುವ ತರಳಬಾಳು ಕಲಾ ಸಂಘದ ಕಲಾ ಜವಾಬ್ದಾರಿಯನ್ನು ನೋಡಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಾಚಿಕೆಪಟ್ಟುಕೊಳ್ಳಬೇಕು.
ಈ ವರ್ಷದ ಮೂರನೆಯ ಅವತರಣಿಕೆಯು ನಿನ್ನೆ ಯಶಸ್ವಿಯಾಗಿ ಚನ್ನಗಿರಿಯ ಪಾಂಡೋಮಟ್ಟಿಯ ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಜರುಗಿತು. ಸುಂದರ ಸಂಜೆಯ ಸಾಂಸ್ಕೃತಿಕ ಸ್ವರ್ಗಕ್ಕೆ ಸಾಕ್ಷಿಯಾದ 5 ಸಾವಿರ ಜನರ ಮನದಲ್ಲಿ ಉಳಿದಿದ್ದು ಕರಗ ನೃತ್ಯ, ಬೀಸು ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ, ಲಂಬಾಣಿ ನೃತ್ಯ, ಯಕ್ಷಗಾನ,ಮಲ್ಲಕಂಬ,ಮಲ್ಲಿ ಹಗ್ಗ ಸೇರಿದಂತೆ 25 ಕ್ಕೂ ಹೆಚ್ಚು ಕಲಾ ನೃತ್ಯ ಪ್ರಕಾರಗಳಲ್ಲಿ ಗ್ರಾಮೀಣ ಪ್ರದೇಶದ 350 ಮಕ್ಕಳ ಸಂಪನ್ನವಾದ ಕಲಾ ಪ್ರೌಢಿಮೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಎಸ್.ಬಿ ರಂಗನಾಥ್ ಕರ್ನಾಟಕದ 14 ಜಿಲ್ಲೆಗಳಲ್ಲಿ ವಿದ್ಯಾಸಂಸ್ಥೆಯ 250 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು ಗುಣಮಟ್ಟದ ಶಿಕ್ಷಣದ ಜೊತೆ ನಾಡು ನುಡಿ ಸಂಸ್ಕೃತಿಯನ್ನು ಮಕ್ಕಳಿಗೆ ಅರ್ಥೈಸುವ ಹೊಣೆಗಾರಿಕೆಯಿಂದ ಶ್ರೀ ಸಂಸ್ಥೆಯು ವಿಭಿನ್ನವಾದ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.
ಸ್ಥಳೀಯ ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಮಾತನಾಡಿ ಕರ್ನಾಟಕ ರಂಗಭೂಮಿ ಇತಿಹಾಸಲ್ಲಿ ತರಳಬಾಳು ಕಲಾಸಂಘಕ್ಕೆ ಮಹತ್ವದ ಸ್ಥಾನವಿದ್ದು 70 ವರ್ಷಗಳ ಹಿಂದೆ ಪರಮ ಪೂಜ್ಯ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದದಿ ಸ್ಥಾಪಿತವಾದ ಕಲಾಸಂಘ ನೂರಾರು ಶರಣರ ನಾಟಕಗಳನ್ನು ದೇಶದಾದ್ಯಂತ ಪ್ರಯೋಗಿಸಿದ ಕೀರ್ತಿ ಹೊಂದಿದೆ ಎಂದರು .ಪ್ರಸ್ತುತ ಜಗದ್ಗುರುವರ್ಯರಾದ ಪೂಜನೀಯ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಿ ಹೊಸ ಆಯಾಮ ಪಡೆದು ಕಲಾ ಸರಸ್ವತಿಯನ್ನು ಉಳಿಸಿ ಬೆಳೆಸುವ ಔಚಿತ್ಯಪೂರ್ಣ ಕಾರ್ಯದಿ ಯಶಸ್ವಿಯಾಗಿ ಸಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಭಿಪ್ರಾಯ ಪಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ