ದಿನದ ಸುದ್ದಿ
ಅನ್ನದಾತನ ಉನ್ನತಿಗಾಗಿ ಸಮಾಜಮುಖಿ ಶ್ರಾವಣಾನುಷ್ಟಾನ ಕೈಗೊಂಡಿರುವ ತರಳಬಾಳು ಶ್ರೀ ಜಗದ್ಗುರುವರ್ಯರು
ಕನ್ನಡನಾಡಿನ ಹಬ್ಬ ಹರಿದಿನಗಳ ಸಂಖ್ಯೆಗೆ ಕಡಿವಾಣವ ಹಾಕುವ ಕಾರ್ಯ ಆ ವಿಧಾತನಿಂದಲೂ ಸಾಧ್ಯವಿಲ್ಲ.ಜನರ ಉದ್ದಾರಕ್ಕೂ ? ತಮ್ಮ ಅಸ್ತಿತ್ವದ ಕಡ್ಡಾಯ ಅಭಿವ್ಯಕ್ತಿಗೋ ? ಮುಗ್ಧ ಭಕ್ತರ ಭಾವನೆಯ ಬಂಡವಾಳದ ಸದುಪಯೋಗಕ್ಕೊ,? ಧಾರ್ಮಿಕ ದಬ್ಬಾಳಿಕೆಯ ಪ್ರತಿಷ್ಠೆಗೋ ? ಪ್ರಶ್ನೆ ಮಾಡಲು ಯಾವ ಬುದ್ಧಿವಂತನೂ ಇಲ್ಲ ಎನ್ನುವ ಪರಿಸ್ಥಿತಿಯ ಲಾಭ ಹಾಗೂ ಸ್ವಪ್ರಶಂಸೆಯಿಂದಲೊ ? ಈ ನೆಲದ ಕರ್ಮವೋ,ಎಂಬಂತೆ ನಿತ್ಯವೂ ಸರ್ವಅಲಂಕಾರ ಭೂಷಿತ ಸ್ವಘೋಷಿತ ದೇವಮಾನವ ಕಪಟ ಕಾವಿಧಾರಿಗಳಿಂದಅಡ್ಡ ಪಲ್ಲಕ್ಕಿ, ಉದ್ದಪಲ್ಲಕ್ಕಿ ,ಹೋಮ,ಹವನ,ಯಜ್ಞ ,ಲಕ್ಷ ಪೂಜೆ, ಕೋಟಿ ಪೂಜೆ ಹೀಗೆ ಹೊಸ ಹೆಸರಿಡಲು ಸಾಧ್ಯವಿರದಷ್ಟು ಅತೀರೇಖದ ಅವಿವೇಕಿಗಳ ನಾಟಕಕ್ಕೆ ಮುಗ್ದ ಸಮಾಜ ‘ಭಕ್ತರು ‘ ‘ ಶಿಷ್ಯರು’ ಎಂಬ ಹೆಸರಲ್ಲಿ ಕಣ್ಣಿದ್ದು ಕುರುಡರಾಗಿ,ಕಿವಿ ಇದ್ದು ಕಿವುಡರಾಗಿ ಅವರಾಡುವ,ಆಡಿಸುವ ಡೋಂಗಿ ನಾಟಕಕ್ಕೆ ಪ್ರೇಕ್ಷಕರಾಗಿ ಕೆಲವೊಮ್ಮೆ ದಿಢೀರ್ ಪಾತ್ರಧಾರಿಗಳಾಗಿ ಪ್ರಬುದ್ಧ ನಾಗರಿಕ ಸಮಾಜ ಹಂಗಿಸುವ ಗುಲಾಮರಂತೆ ಚಾಚು ತಪ್ಪದೆ ಕಾರ್ಯಪ್ರವೃತ್ತರಾಗಿರುವುದು ಸಮಾಜದ ದುರಂತವೇ ಸರಿ.
ಈ ಶ್ರಾವಣ ಮಾಸವೆಂದರೆ ಅದು ಪೂಜೆ ಅನುಷ್ಠಾನಗಳಿಗೆ ಒಳ್ಳೆಯ ಮಾರುಕಟ್ಟೆ. ಉತ್ಸವ ಹಾಗೂ ಪಲ್ಲಕ್ಕಿ ಪ್ರಿಯರಾದ ಕಾವಿಧಾರಿಗಳಿಗಂತೂ ಫುಲ್ ಕಲೆಕ್ಷನ್ ಹಾಗೂ ಸಂವಿಧಾನದಲ್ಲೇ ಉಲ್ಲೇಖ ಇಲ್ಲದ ಸ್ವಯಂ ಘೋಷಿತ ಕಾನೂನಿನ ನಿರ್ಮಾತೃಗಳಂತೆ
ತಮ್ಮ ಸರಹದ್ದಿನ ವ್ಯಾಪ್ತಿಯಲ್ಲಿ ಮತ್ತೋರ್ವ ಮಠಾಧೀಶರು ಬಂದರೆ ತಮ್ಮ ವ್ಯಾಪರಕ್ಕೆ ಎಲ್ಲಿ ಭಂಗ ಬರುತ್ತದೆಯೋ ಎಂಬ ಉದರ ಸಂಕಟದಿಂದ ತಮ್ಮ ಸುತ್ತಲಿನ ಅರೆಬೆಂದ ಮತಿಹೀನರನ್ನು ಧರ್ಮದ ಹೆಸರಿನಲ್ಲಿ ಎತ್ತಿಕಟ್ಟಿ ಧಮಕೀ ಹಾಕಿದ ಘಟನೆಗಳು ನಡೆಯುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ.ಇಂತಹ ವಿಷ ವರ್ತುಲದಲ್ಲಿ ಕಾಯಕವೇ ಕೈಲಾಸ ಅದುವೇ’ ಕರ್ತವ್ಯದ ಉದ್ದೇಶ’ ಎಂದು,ನಾಳೆ ಬಪ್ಪುದು ನಮಗಿಂದೇ ಬರಲಿ, ಇಂದು ಬಪ್ಪುದು ನಮಗೀಗಲೇ ಬರಲಿ ಎಂಬ ಶರಣರ ಸಂಕಲ್ಪದಂತೆ ರೈತರ ಬದುಕು ನಿತ್ಯವೂ ಶ್ರಾವಣವಾಗಲೆಂದು ತ್ರೀಕಾಲವೂ ಅನ್ನಧಾತನ ಅಭ್ಯುಧಯಕ್ಕೆ ಕೈಂಕರ್ಯ ಬದ್ದರಾಗಿರುವ ರೈತಮೆಚ್ಚಿದ ಗುರುವಾಗಿ ಪ್ರತ್ಯಕ್ಷ ದೇವರೆಂದೇ ನಾಮಾಂಕಿತರಾದ ಪರಮ ಪೂಜನೀಯ ಶ್ರೀ ಮದುಜ್ಠಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಶ್ರಾವಣಾನುಷ್ಟಾನ ದೇಶವೇ ಮೆಚ್ಚುವಂತಹದ್ದು.
ಭರಪೂರ ಮಳೆಯ ಪರಿಣಾಮ ನಾಡಿನ ಎಲ್ಲಾ ಜಲಾಶಯಗಳು ಭರ್ತಿಯಾಗಿ ಪ್ರತಿದಿನವೂ 3 ರಿಂದ 4 ಲಕ್ಷ ಕ್ಯೂಸೆಕ್ಸ್ ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿಯುತ್ತಿರುವ ದೃಶ್ಯವನ್ನು ಹಳ್ಳಿಯ ಜನ ತಮ್ಮ ಬಿರುಕುಬಿಟ್ಟ ಕೆರೆಯ ದಡಗಳಲ್ಲಿ ನಿಂತು ನೋಡುತ್ತಿದ್ದರೆ ಹೃದಯ ಕಲಕುತ್ತದೆ.ಆಳುವ ಸರ್ಕಾರಗಳ ದೂರದರ್ಶಿತ್ವದ ಶಾಶ್ವತ ರೈತ ಸ್ನೇಹಿ ಯೋಜನೆಗಳು ರೂಪುಗೊಳ್ಳದ ಫಲವಾಗಿ ಅನ್ನಧಾತ ಇಂದು ಆತ್ಮಹತ್ಯೆಯ ಜಾಡು ಹಿಡಿದಿದ್ದಾನೆ.
ತರಳಬಾಳು ಶ್ರೀ ಜಗದ್ಗುರುವರ್ಯರ ಮಾತಿನಲ್ಲಿಯೇ ಹೇಳುವುದಾದರೆ ರೈತರಿಗೆ ಯಾವ ಭಾಗ್ಯವೂ ಬೇಡ ಸಮರ್ಪಕವಾದ ನೀರು ಮತ್ತು ವಿದ್ಯುತ್ ನೀಡಿದರೆ ರೈತರೇ ಸರ್ಕಾರಕ್ಕೆ ಸಾಲ ನೀಡುವಂತಾಗುತ್ತಾರೆ ಎಂಬುದರಲ್ಲಿ ಎಷ್ಟೊಂದು ಅರ್ಥವಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಮೇಲಿನ ನಂಬಿಕೆ ಅನ್ನಧಾತನ ಮನದಲ್ಲಿ ಅಳಿದು. ಧಾರ್ಮಿಕ ನೇತಾರರ ಸಾಮಿಪ್ಯದಿ ನಮ್ಮ ಕಾರ್ಪಣ್ಯಕ್ಕೆ ಉತ್ತರವಿದೆ ಎಂಬ ಆಶಾಭಾವನೆ ಉಳಿದಿದೆ. ಸಂಪ್ರದಾಯಸ್ಥ ಸತ್ಯ ತತ್ವಾದಾರ್ಶ ಧಾರ್ಮಿಕ ಪೀಠದ ಅಧಿಪತಿಗಳಿಗೆ ಶ್ರಾವಣ ಮಾಸವನ್ನು ಸಮಾಜದ ಶ್ರೇಯೋಭಿವೃದ್ದಿಯ ಪೂಜಾ ಕೈಂಕರ್ಯಗಳ ಅಣಿಯಾಗಿದ್ದರೆ ಕಪಟ ಕಾವಿಧಾರಿಗಳಿಗೆ ಶ್ರಾವಣ ಮಾಸ ಕೇವಲ ಅತ್ಯುತ್ತಮ ವಹಿವಾಟಿನ ತಿಂಗಳಾಗಿದೆ. ಇವೆರೆಡಕ್ಕಿಂಲೂ ಬಿನ್ನವಾಗಿ ಬಸವ ಮರುಳಸಿದ್ದರ ವೈಚಾರಿಕ ತತ್ವ ಪರಂಪರೆಯ ವಿದ್ವತ್ತಿನ ಸಂಗಮವಾದ ತರಳಬಾಳು ಶ್ರೀ ಗಳು ಬೆಂಗಳೂರಿನ ಆರ್ ಟಿ ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ, ಎಲ್ಲಾ ಪರಿಣಿತ ಎಂಜಿನಿಯರ್ ಗಳ ಸಭೆಯನ್ನು ತಮ್ಮ ಸಾನ್ನಿಧ್ಯದಲ್ಲಿ ಏರ್ಪಡಿಸಿ.ರಾಜಕೀಯ ರಂಗದ ಅಪರೂಪ ಜನಸ್ನೇಹಿ ಚಿಂತಕ ಬಿ.ಎಲ್.ಶಂಕರ್ ಅಧ್ಯಕ್ಷತೆಯಲ್ಲಿ ದಾವಣಗೆರೆಯಿಂದ ವ್ಯರ್ಥವಾಗಿ ಹರಿಯುತ್ತಿರುವ ಭದ್ರಾ ನದಿಯ ನೀರನ್ನು ಜಗಳೂರು ಹಾಗೂ ಭರಮಸಾಗರ ವ್ಯಾಪ್ತಿಯ ಕೆರೆಗಳಿಗೆ ಶೀಘ್ರವಾಗಿ ಮತ್ತು ಸಮರ್ಪಕವಾಗಿ ಹರಿಸುವ ವಿಸ್ತೃ ಯೋಜನೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತಿರುವ ಮಾಹಿತಿಯನ್ನು ಸಮಾಜ ಭಾಂಧವರಿಗೆ ತಿಳಿಸಲೇಬೇಕಾಗುತ್ತದೆ .
ರಾಜನಹಳ್ಳಿ ಏತ ನೀರಾವರಿಯ ಯೋಜನೆಯ1 ನೇ ಹಂತದ ಯೋಜನೆಯಲ್ಲಿ ದಾವಣಗೆರೆ ಮತ್ತು ಜಗಳೂರು ತಾಲ್ಲೂಕಿನ 23ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಳೆದ ವರ್ಷದಿಂದಲೇ ಜಾರಿಯಲ್ಲಿದೆ.ಆದರೂ ಹಲವು ತಾಂತ್ರಿಕ ದೋಷಗಳಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಫಲಪ್ರದವಾಗಿರಲಿಲ್ಲ, ಮಲೆನಾಡಿನಲ್ಲಿ ವಿಪರೀತ ಮಳೆಯಾಗಿ ತುಂಗಾ ಮತ್ತು ಭದ್ರಾ ಜಲಾಶಯಗಳು ತುಂಬಿ ಹರಿದು,ಹೆಚ್ಚುವರಿ ನೀರನ್ನು ಜಲಾಶಯಗಳಿಂದ ಹೊರಬಿಡುತ್ತಿದ್ದರೂ ಸಹ ತಾಂತ್ರಿಕ ಕಾರಣಗಳಿಂದ ಸುತ್ತಲಿನ ಕೆರೆಗಳಿಗೆ ನೀರು ಬಾರದರಿರುವುದು ಶ್ರೀಗಳ ಬೇಸರಕ್ಕೆ ಕಾರಣವಾಗಿದೆ. ಹೆಚ್ಚುವರಿ ನೀರಿನಿಂದ ಆಡಳಿತ ಮತ್ತು ಅಧಿಕಾರಿಗಳ ಜಾಗೃತಿವಹಿಸಿದ್ದರೆ ಎಲ್ಲಾ ಕೆರೆಗಳಿನ್ನು ತುಂಬಿಸಬಹುದಿತ್ತೆಂಬುದು ಮನೋ ಇಂಗಿತ.
ಈ ನಿಟ್ಟಿನಲ್ಲಿ ಈ ಯೋಜನೆಯಲ್ಲಿ ಇರುವ ದೋಷಗಳನ್ನು ಸರಿಪಡಿಸಿ 1 ನೇ ಹಂತದ ಯೋಜನೆಯ ಎಲ್ಲಾ ಕೆರೆಗಳಿಗೆ ಶತಾಯಗತಾಯ ನೀರು ತುಂಬಿಸುವಂತೆ ಶ್ರೀಗಳು ತಾಕೀತು ಮಾಡಿದರು.ಜಗಳೂರು ತರಳಬಾಳು ಹುಣ್ಣಿಮೆಯ ರೈತಕೊಡುಗೆ ಎನ್ನುವಂತೆ 2 ನೇ ಹಂತದ 2
ಯೋಜನೆಗಳಿಗೆ 500 ಕೋಟಿ ರೂಪಾಯಿ ಅನುದಾನ ಬಜೆಟ್ನಲ್ಲಿ ದೊರೆತಿದ್ದು,ಮೊದಲ ಹಂತದಲ್ಲಿ ಕಂಡುಬಂದ ಎಲ್ಲಾ ನ್ಯೂನತೆಗಳು 2 ನೇ ಹಂತದ ಕಾರ್ಯಯೋಜನೆಯಲ್ಲಿ ಪುನರಾವರ್ತನೆಯಾಗದಂತೆ ಎಚ್ಚರವಹಿಸಲು ಕ್ರಮವಹಿಸಿವ ಪರಮರ್ಶೆಯನ್ನು ಶ್ರೀಗಳು ನಡೆಸಿದರು.
ಜೊತೆಗೆ ಚಿಕ್ಕಮಂಗಳೂರು ಜಿಲ್ಲೆಯ ಹಬ್ಬೆ ಫಾಲ್ಸ್ ,ಮದಗದಕೆರೆ,ಅಯ್ಯನಕೆರೆ,ಲಿಂಗದಹಳ್ಳಿ ವ್ಯಾಪ್ತಿಯ ಎಲ್ಲಾ ಕೆರೆಗಳಿಗೆ ನೀರು ಹರಿಸುವ ಕುರಿತು ಶ್ರೀಗಳು ಸಮಾಲೋಚನೆ ನಡೆಸಿದರು. ಅಧಿಕಾರಿಗಳ ಮೇಲೆ ನಿಯಮಿತ ಒತ್ತಡ ಹಾಕಿದರೆ ಸಾರ್ವಜನಿಕ ಕೆಲಸಗಳು ಆಗುವುದು ಕಷ್ಟ ಎಂದು ಅರಿತಿರುವ ಶ್ರೀಗಳು ,ಈ ಸಭೆಯ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಚೀಫ್ ಎಂಜಿನಿಯರ್ ಗಳು,ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಅಧಿಕಾರಿಗಳು ಹಾಜರಿದ್ದರು.
ರೈತಾಭ್ಯುದಯದ ಕಲ್ಯಾಣದ ಕನಸೇ ಶ್ರೀ ಜಗದ್ಗುರುವರ್ಯರ ಅಂತರಾಳದ ಆಶಯ ತ್ರೀಕಾಲವೂ ಸಮಾಜದ ಉತ್ಕೃಷ್ಟ ಉನ್ನತಿಗೆ ಶ್ರಮದಋಷಿಯಂತೆ ಕೈಂಕರ್ಯಬದ್ದರಾಗಿರುವ ಪರಮಾರಾಧ್ಯ ಶ್ರೀಗಳ ಪವಿತ್ರ ಪಾದಗಳಲ್ಲಿ ಭಕ್ತಿ ಪೂರ್ವಕ ಪ್ರಣಾಮಗಳನ್ನು ಸಲ್ಲಿಸಲಷ್ಟೇ ನಮಗೆ ಸಾಧ್ಯ.
-ಬಸವರಾಜ ಸಿರಿಗೆರೆ
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243