Connect with us

ದಿನದ ಸುದ್ದಿ

ಮೆದಿಕೇರನಹಳ್ಳಿಯಲ್ಲಿದೆ ರೈಲು ಶಾಲೆ ; ಸ್ವಂತ ಖರ್ಚಿನಲ್ಲಿ ವಿದ್ಯಾಸಿರಿ ಎಕ್ಸ್‌ಪ್ರೆಸ್‌ ನಿರ್ಮಿಸಿದ ಶಿಕ್ಷಕರು, ಹಳೇ ವಿದ್ಯಾರ್ಥಿಗಳು..!

Published

on

ಸುದ್ದಿದಿನ ವಿಶೇಷ: ಭಾರತದ ಸಂಸ್ಕೃತಿಯಲ್ಲಿ ಶಿಕ್ಷಣವನ್ನು ಎಂದೂ ಲಾಭ–ದಾಯಕ ಉದ್ದಿಮೆಯನ್ನಾಗಿ ಪರಿಗಣಿಸಿದ್ದ ಉದಾ–ಹರಣೆಗಳಿಲ್ಲ. ಹಲವು ಜನೋಪಕಾರಿ ಸಂಘ ಸಂಸ್ಥೆಗಳು, ಮಠಮಾನ್ಯಗಳು ಶಿಕ್ಷಣವನ್ನು ಒಂದು ಸಾಮಾಜಿಕ ಒಳಿತೆಂದು ಭಾವಿಸಿ ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ನೀಡಿದ ಉದಾಹರಣೆಗಳು ನಮ್ಮಲ್ಲಿ ಹೇರಳ. ನಮ್ಮ ಸಂಪ್ರದಾಯದಲ್ಲಿ ಶಿಕ್ಷಣ ಎಲ್ಲ ದಾನಗಳಿಗಿಂತ ಶ್ರೇಷ್ಠವಾದ ದಾನ.

ಆದರೆ, ಇಂದು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪರೀಕರಣ ಜನ ಸಾಮಾನ್ಯರಲ್ಲಿ ಹೆಚ್ಚಿನ ಆತಂಕವನ್ನು ಉಂಟು ಮಾಡಿದೆ. ಶಿಕ್ಷಣವನ್ನು ಒಂದು ಲಾಭದ ಉದ್ದಿಮೆಯನ್ನಾಗಿ ಮಾಡಿಕೊಂಡಿರುವ ಹಲವು ಜನರು ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣದ ಪರ–ವಾಗಿದ್ದಾರೆ. ಲಾಭದ ಲೆಕ್ಕಾಚಾರವನ್ನೇ ಪ್ರಧಾನವಾಗಿ ಪರಿಗಣಿ–ಸುವ ಅವರಿಗೆ ಶಿಕ್ಷಣ ಒಂದು ವ್ಯಾಪಾರದ ವಸ್ತು ಮತ್ತು ತಂದೆ-ತಾಯಿ ಹಾಗೂ ಮಕ್ಕಳು ಗ್ರಾಹಕರು. ಶಿಕ್ಷಕರೇ ಅವರ ಸೇಲ್ಸ್ ಮ್ಯಾನ್‌ಗಳು. ಅವರ ಮೇಲೊಬ್ಬ ಸಿಇಒ. ಇದು ಆಧುನಿಕ ಶಿಕ್ಷಣ ವ್ಯಾಪಾರ ಮಳಿಗೆಯ ಸಂರಚನೆ.

ಇಷ್ಟೆಲ್ಲಾ ಯಾಕೆ ಹೇಳ ಬೇಕಾಯ್ತು ಎಂದರೆ,ಬಹುತೇಕ ಸರ್ಕಾರಿ ಕನ್ನಡ ಶಾಲೆಗಳು ಕೊನೆ ಉಸಿರೆಳೆಯುತ್ತಿವೆ. ವಿದ್ಯಾರ್ಥಿಗಳಿಲ್ಲದೆ ಶಾಲೆಗಳು ಬಣಗುಡುತ್ತಿವೆ‌. ಒಂದು ಕಾಲದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದರ ಪರಿಣಾಮ ತರಗತಿಗಳನ್ನು ಎ ಸೆಕ್ಷನ್ , ಬಿ ಸೆಕ್ಷನ್ ವಿಭಾಗಗಳಾಗಿ ಮಾಡಿ ಬೋಧಿಸಲಾಗುತ್ತಿತ್ತು. ಈಗ ಅದು ಕನಸಿನ ಮಾತು ಎಂದರೆ ತಪ್ಪಾಗಲಾರದು. ಆದರೂ ನಾವು ನಿರಾಶಾವಾದಿಗಳಾಗ ಬೇಕಿಲ್ಲ. ಏಕೆಂದರೆ ಅಂತಹದೊಂದು ಉದಾಹರಣೆಗೆ ಕಾರಣವಾಗಿದೆ ಈ ಶಾಲೆ. ಈ ಸ್ಟೋರಿ ನೋಡಿ.

ಅದು ಸುಮಾರು ಸಾವಿರ ಜನಸಂಖ್ಯೆ ಇರುವ, ಇದುವರೆಗೂ ಸಾರಿಗೆ ಸಂಪರ್ಕವಿರದ ಒಂದು ಪುಟ್ಟ ಗ್ರಾಮ. ಅಲ್ಲಿರುವ ಸರ್ಕಾರಿ ಶಾಲೆ, ಹಾಗೂ ಅಲ್ಲಿನ ಶಿಕ್ಷಕರಿಗೆ ಪ್ರಸಂಶೆಯ ಮಾತುಗಳು ಕೇಳಿ ಬರುತ್ತಿವೆ. ಅದು ಯಾವ ಊರು ಅನ್ನೋ ಕುತೂಹಲ ನಿಮ್ಮಲ್ಲೀಗ ಇಮ್ಮಡಿಸಿರ ಬಹುದು. ಅದು ದಾವಣಗೆರೆ ಜಿಲ್ಲೆಯ, ಜಗಳೂರು ತಾಲೂಕಿನ ಮೆದಿಕೇರನಹಳ್ಳಿ.

ಈ ಹಳ್ಳಿಯ ಸರ್ಕಾರಿ ಪ್ರೌಢ ಶಾಲೆಗೆ ಮುಖ್ಯೋಪಾಧ್ಯಾಯರಾದ ಅರುಣ್ ಕುಮಾರ್ ಹೆಚ್.ಎನ್. ಅವರು ವರ್ಗವಾಗಿ ಬಂದ ಕೇವಲ ಒಂದೂವರೆ ತಿಂಗಳಿನಲ್ಲಿ ಶಾಲೆಗೆ ಹೊಸರೂಪ ಕೊಟ್ಟು ಗಮನ ಸೆಳೆದಿದ್ದಾರೆ. ತನ್ನ ಸ್ವಂತ ಖರ್ಚಿನಲ್ಲಿ
ಶಾಲೆಗೆ ರೈಲಿನಾಕಾರಾದ ಚಿತ್ತಾರದ ರಂಗು ಮೂಡಿಸಿ ‘ರೈಲು ಶಾಲೆ’ಯಾಗಿ ಪರಿವರ್ತಿಸಿ‌ ಬಿಟ್ಟಿದ್ದಾರೆ. ಶಾಲೆಗೆ ‘ರೈಲು’ ಆಕಾರ ಕೊಡಿಸುವುದರ ಮೂಲಕ ಶಿಕ್ಷಕರ, ವಿದ್ಯಾರ್ಥಿಗಳ, ಗ್ರಾಮದ ಜನತೆಯ ಮನ ಗೆದ್ದಿದ್ದಾರೆ.

2006 ರಲ್ಲಿ ಆರಂಭವಾದ ಈ ಶಾಲೆ ಹಲವು ಕೊರತೆಗಳಿಂದ ಕೂಡಿತ್ತು. ಈ ಹಿಂದೆ ಬಂದ ಮುಖ್ಯೋಪಾಧ್ಯಾಯರು ಸರ್ಕಾರ ಸಹಾಯದಿಂದ ಶಾಲೆಯನ್ನು ಒಂದು ಮಟ್ಟಿಗೆ ನಡೆಸಿಕೊಂಡು ಬಂದಿದ್ದರು. ಆದರೆ ಈಗಿರುವ ಮುಖ್ಯೋಪಾಧ್ಯಾಯರು ಅವರೇ ಹೇಳುವಂತೆ ‘ನಾನು ಕಾರ್ಯನಿರ್ವಹಿಸುವ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡುವುದು ನನ್ನ ಗುರಿಯೂ ಹೌದು, ಕನಸೂ ಹೌದು’ ಎನ್ನುತ್ತಾರೆ.

ಅದರಂತೆಯೇ ಈಗಿನ ಶಾಲೆಗೆ ರೈಲು ಆಕಾರದ ಚಿತ್ತಾರ ಕೊಡಿಸುವುದರ ಮೂಲಕ, ಅದಕ್ಕೆ ವಿದ್ಯಾಸಿರಿ ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಿದ್ದಾರೆ. ಸಹ ಶಿಕ್ಷಕರೂ ಕೂಡ ಇವರ ಉತ್ಸಾಹ ಕಂಡು ಬೆರೆಗಾಗಿ ಸಾಥ್ ನೀಡುತ್ತಿದ್ದಾರೆ.

ಸಹ ಶಿಕ್ಷಕರ ಸಾಥ್

ಅಂದ ಹಾಗೆ ಶಾಲೆಯ ಸಹ ಶಿಕ್ಷಕರು ಈ ಕ್ರಿಯಾಶೀಲ ಯೋಜನೆಗೆ ಸಾಥ್ ನೀಡಿದ್ದು, ಮುಖ್ಯ ಶಿಕ್ಷಕರಿಗೆಂದೇ ಒಂದು ಪ್ರತ್ಯೇಕ ಕೊಠಡಿ ರೂಪಿಸಿ ಪ್ರೋತ್ಸಾಹ ನೀಡಿದ್ದಾರೆ. ಕರೊನಾ ಸಂಕಷ್ಟದ ಕಾಲದಲ್ಲಿ ನಾವು ಸಮಯವನ್ನು ಹಾಳು ಮಾಡದೆ ಅಭಿವೃದ್ಧಿ ಕೆಲಸಗಳ ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದೇವೆ ಎನ್ನುತ್ತಾರೆ ಕನ್ನಡ ಶಿಕ್ಷಕ ವಿಜಯ್ ಕುಮಾರ್.

ಶಿಕ್ಷಕರ ಈ ಕಾರ್ಯ ಗಮನಿಸಿದ ಶಾಲೆಯ ಹಳೇ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. ಶಾಲಾ ಕೊಠಡಿಗಳ ದುರಸ್ತಿಗೆ ಹಣ ಹಾಕಿ ಸ್ವತಃ ಅವರೇ ಮುಂದೆ ನಿಂತು ಕೆಲಸ ಮಾಡಿಸುತ್ತಿದ್ದಾರೆ. ಜೊತೆಗೆ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಈ ಕಾರ್ಯಕ್ಕೆ ಸೈ ಎಂದಿದ್ದಾರೆ.

ಆಟ, ಪಾಠದಲ್ಲಿ ಮುಂದು

ಇಲ್ಲಿನ ವಿದ್ಯಾರ್ಥಿಗಳು ಆಟ, ಪಾಠದಲ್ಲಿ ಕೂಡ ಮುಂದೆ ಇದ್ದಾರೆ. ಎಸ್ ಎಸ್ ಎಲ್ ಸಿ ಯಲ್ಲಿ ಐದು ಬಾರಿ ಶೇ.100ರಷ್ಟು ಫಲಿತಾಂಶ ಸಾಧಿಸಿದ್ದಾರೆ. ಇದಕ್ಕೆ ಪೂರಕವಾಗಿ ಶಾಲೆ ವಾತಾವರಣ ಇದ್ದು, ಖಾಸಗಿ ಶಾಲೆಗಳಿಗೂ ಕೂಡ ಮಾದರಿಯಾಗಿದೆ ಎಂದರೆ ತಪ್ಪಾಗಲಾರದು.

ವಿಡಿಯೋ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending