ದಿನದ ಸುದ್ದಿ
ಮಧ್ಯ ಕರ್ನಾಟಕದ ಯಕ್ಷಗಾನ ಯುವಪ್ರತಿಭೆ ‘ಅಮೂಲ್ಯ ಸಿ.’
- ಡಾ.ಕೆ.ಎ.ಓಬಳೇಶ್
ಕರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ ಇದು ಸಾಂಸ್ಕೃತಿಕ ಸಮನ್ವಯತೆಗೂ ವಿಶೇಷತೆ ಮನ್ನಣೆಯನ್ನು ಕಲ್ಪಿಸಿಕೊಂಡು ಬಂದಿದೆ.
ಇಲ್ಲಿ ಹಲವಾರು ಸಾಂಸ್ಕೃತಿಕ ವೈಶಿಷ್ಟ್ಯತೆಗಳು ತನ್ನ ಅನನ್ಯತೆಯನ್ನು ಕಾಯ್ದುಕೊಂಡಿವೆ. ಉತ್ತರ ಕರ್ನಾಟಕಕ್ಕೆ ಹೋದರೆ ಬಯಲಾಟ, ದಕ್ಷಿಣ ಕರ್ನಾಟಕದಲ್ಲಿ ಕಂಸಾಳೆ, ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನ ಕಲೆಗಳು ವಿಶಿಷ್ಟವಾಗಿ ಗುರುತಿಸಿಕೊಂಡಿವೆ. ಆದರೆ ಮಧ್ಯ ಕರ್ನಾಟಕ ಮಾತ್ರ ಇವೆಲ್ಲವುಗಳನ್ನು ತನ್ನ ಆಂತರ್ಯದಲ್ಲಿ ಪ್ರಾಂತ್ಯಬೇಧ ಮರೆತು ಹುದುಗಿಸಿಕೊಂಡಿದೆ. ಹೀಗಾಗಿ ಮಧ್ಯ ಕರ್ನಾಟಕದಲ್ಲಿ ವಿವಿಧ ಸಾಂಸ್ಕೃತಿಕ ವಲಯದಲ್ಲಿ ಸಾಧನೆಗೈದ ವಿಭಿನ್ನ ಕಲಾ ಪ್ರತಿಭೆಗಳು ಕಂಡುಬರುತ್ತವೆ.
ಇಂತಹ ಕಲಾ ಪ್ರತಿಭೆಗಳಲ್ಲಿ ಅಮೂಲ್ಯ ಸಿ, ಅವರು ಒಬ್ಬರಾಗಿದ್ದಾರೆ. ಮಧ್ಯ ಕರ್ನಾಟಕದ ದಾವಣಗೆರೆ ಭಾಗದಲ್ಲಿ ಯಕ್ಷಗಾನದ ಮೂಲಕ ತನ್ನ ವಿಶಿಷ್ಟ ಪ್ರತಿಭೆಯನ್ನು ಅನಾವರಣಗೊಳಿಸುತ್ತಿರುವ ಅಮೂಲ್ಯ ಅವರ ಕಲಾ ಬದುಕನ್ನು ಅನಾವರಣಗೊಳಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.
ಕುಮಾರಿ ಅಮೂಲ್ಯ ಅವರು ಚಂದ್ರಶೇಖರ್ ಹಾಗೂ ಸವಿತಾ ದಂಪತಿಗಳ ಪುತ್ರಿಯಾಗಿ ದಿನಾಂಕ 4 ಜನವರಿ 2001 ರಂದು ದಾವಣಗೆರೆಯಲ್ಲಿ ಜನಿಸಿದರು. ಇವರ ತಂದೆ ಹೊಸದುರ್ಗ ಮೂಲದವರಾಗಿದ್ದು, ಇವರ ತಾಯಿಯು ಕರಾವಳಿ ಮೂಲದವರಾಗಿದ್ದಾರೆ. ಇವರ ತಾಯಿಯ ತಂದೆ ಉಡುಪಿ ಜಿಲ್ಲೆ ಮುನಿಯಾಲ ಸಮೀಪದ ಕಾಡೊಳೆಯವರು.
ಇವರು ಬಾಲ್ಯದಲ್ಲಿಯೇ ಜೀವನ ನಿರ್ವಹಣೆಗಾಗಿ ದಾವಣಗೆರೆಯಲ್ಲಿ ನೆಲೆಯನ್ನು ಕಂಡುಕೊಂಡರು. ಹಾಗೆಯೇ ಈ ಭಾಗದಲ್ಲಿಯೇ ವಿವಾಹವಾಗಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಕುಮಾರಿ ಅಮೂಲ್ಯ ಅವರ ತಾಯಿಯ ಮೂಲವು ಕರಾವಳಿ ಮೂಲವಾಗಿದ್ದರು ಯಕ್ಷಗಾನ ಕಲೆಯ ಯಾವುದೇ ನೇರ ಪ್ರಭಾವಗಳಾಗಿರುವುದಿಲ್ಲ. ಆದರೆ ಇವರು ಸೆಂಟ್ ಪಾಲ್ಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆಯುತ್ತಿರುವಾಗ ಯಕ್ಷಗಾನ ಕಲೆಯನ್ನು ಕಂಡು ಆಕರ್ಷಿತರಾಗಿದ್ದರು.
ಈ ಶಾಲಾ ಅವಧಿಯಲ್ಲಿನ ಯಕ್ಷಗಾನ ಪ್ರದರ್ಶನ ಕಲೆಯನ್ನು ನೋಡಿ ಪ್ರಭಾವಿತರಾದ ಅಮೂಲ್ಯ ಅವರು ನಾನು ಒಂದಲ್ಲ ಒಂದು ದಿನ ಈ ಕಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದರು. ಆದರೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನವು ಅಷ್ಟೊಂದು ಪ್ರಸಿದ್ಧಿಯಾಗಿರದ ಕಾರಣ ಇವರ ಆಸೆಯು ಬಹುದಿನಗಳ ಕಾಲ ಮರೀಚಿಕೆಯಾಗಿಯೇ ಉಳಿದಿತ್ತು. ಇವರಲ್ಲಿ ಬಹುದಿನಗಳಿಂದಲೂ ಚಿಗುರಿದ ಕನಸನ್ನು ಸಾಕಾರಗೊಳಿಸಿದ್ದು ರಾಘವೇಂದ್ರ ಮಠ.
ರಾಘವೇಂದ್ರ ಗುರುಗಳಲ್ಲಿ ಅತಿಯಾದ ನಂಬಿಕೆಯನ್ನು ಹೊಂದಿದ್ದ ಅಮೂಲ್ಯ ಅವರು ಪ್ರತಿವಾರ ರಾಘವೇಂದ್ರ ಮಠಕ್ಕೆ ಹೋಗಿ ದರ್ಶನ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಒಮ್ಮೆ ರಾಯರ ಮಠದಲ್ಲಿ ಯಕ್ಷಗಾನ ತರಬೇತಿಯ ಬಗ್ಗೆ ಪ್ರದರ್ಶಿಸಿದ ಜಾಹಿರಾತು ಇವರ ಮನದ ಮೂಸೆಯಲ್ಲಿನ ಆಸೆಗೆ ವೇದಿಕೆಯೊಂದನ್ನು ಕಲ್ಪಿಸಿಕೊಟ್ಟಿತ್ತು. ಆಗ ಈ ಜಾಹಿರಾತು ನೀಡಿದ ಸೀತಾರಾಮ ಆಚಾರ್ಯ ಅವರನ್ನು ಸಂಪರ್ಕಿಸಿದಾಗ ಅಮೂಲ್ಯ ಅವರಿಗಿದ್ದ ಯಕ್ಷಗಾನ ತುಡಿತವನ್ನು ಅರಿತು ತನ್ನ ಶಿಷ್ಯೆಯಾಗಿ ಸ್ವೀಕರಿಸಿ, ‘ಯಕ್ಷ ಸೌರಭ’ ಕಲಾ ತಂಡದಿAದ ಯಕ್ಷಗಾನ ತರಬೇತಿಯನ್ನು ನೀಡುತ್ತ ಬಂದರು.
ಹೀಗೆ ಯಕ್ಷಗಾನ ಕಲಿಕೆಗೆ ಸೀತಾರಾಮ ಆಚಾರ್ಯರಿಂದ ದೀಕ್ಷೆಯನ್ನು ಪಡೆದ ಅಮೂಲ್ಯ ಅವರು ಈ ಕಲೆಯನ್ನು ತನ್ನ ಬದುಕಿನ ಒಂದು ಭಾಗವಾಗಿ ಮುಂದುವರೆಸಿಕೊAಡು ಬಂದಿದ್ದಾರೆ. ಹಾಗೆಯೇ ಈ ಯಕ್ಷಗಾನ ಕಲೆಯ ಮೇಲೆ ವಿಶಿಷ್ಟವಾದ ಕಾಳಜಿ ಮತ್ತು ಆಸ್ಥೆಯನ್ನು ಹೊಂದಿದ್ದು ಮಧ್ಯ ಕರ್ನಾಟಕದಲ್ಲಿ ಕರಾವಳಿಯ ವಿಶಿಷ್ಟ ಕಲೆಯನ್ನು ಅರಳಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ.
ಅಮೂಲ್ಯ ಅವರ ತಂದೆ ಚಂದ್ರಶೇಖರ್ ಅವರು ಅನಾರೋಗ್ಯದಿಂದ ಮರಣ ಹೊಂದಿದ ತರುವಾಯದಲ್ಲಿ ಇವರಿಗೆ ಉಚಿತವಾಗಿ ತರಬೇತಿ ನೀಡುವ ಮೂಲಕ ಸೀತಾರಾಮ ಆಚಾರ್ಯರು ತಮ್ಮ ಔದಾರ್ಯತೆಯನ್ನು ಮರೆಯುತ್ತ ಬಂದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮೂಲ್ಯ ಅವರಿಗಿರುವ ಕಲಾಸಕ್ತಿ ಮತ್ತು ಬದ್ಧತೆಯಾಗಿದೆ. ಹೀಗಾಗಿ ಸೀತಾರಾಮ ಆಚಾರ್ಯರು ತಮ್ಮ ಪ್ರೀತಿಯ ಮಗಳಂತೆ ಅಮೂಲ್ಯ ಅವರನ್ನು ಮುನ್ನಡೆಸುತ್ತ ಬಂದಿದ್ದಾರೆ.
ಇದರೊಂದಿಗೆ ತನ್ನೆಲ್ಲ ಕಲೆಯನ್ನು ಸೀತರಾಮ ಆಚಾರ್ಯರು ತನ್ನ ಶಿಷ್ಯೆಗೆ ಧಾರೆಯೆರೆಯುವ ಮೂಲಕ ಮಧ್ಯ ಕರ್ನಾಟಕದಲ್ಲೊಂದು ಅಮೋಘವಾದ ಯಕ್ಷಗಾನ ಪ್ರತಿಭೆಯೊಂದನ್ನು ರೂಪಿಸಿದ್ದಾರೆ. ಇದರ ಫಲವಾಗಿ ಅಮೂಲ್ಯ ಅವರು ಜಿಲ್ಲಾಡಳಿತ, ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನ ಯಕ್ಷಗಾನ ಪ್ರತಿಭೆಯನ್ನು ಅನಾವರಣಗೊಳಿಸುತ್ತ ಬಂದಿದ್ದಾರೆ. ಇತ್ತೀಚೆಗೆ ‘ಮಲಬರ್ ಗೋಲ್ಡ್ ಅಂಡ್ ಡೈಮಂಡ್ಸ್’ ಕಂಪನಿಯವರು ಆಯೋಜಿಸಿದ್ದ ಟಾಲೆಂಟ್ ಶೋನಲ್ಲಿ ‘ಗೋಲ್ಡನ್ ಗರ್ಲ್’ ಅವಾರ್ಡ್ ಪಡೆದುಕೊಂಡಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ಅಮೂಲ್ಯ ಅವರು ದಾವಣಗೆರೆಯ ಎ.ವಿ.ಕಮಲಮ್ಮ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡುತ್ತಿದ್ದು, ಬ್ಯಾಂಕ್ ಉದ್ಯೋಗಿಯಾಗಬೇಕೆಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದಾರೆ. ಯಕ್ಷಗಾನ ಮತ್ತು ಶಿಕ್ಷಣವನ್ನು ತನ್ನೆರಡು ಕಣ್ಣುಗಳೆಂದು ನಂಬಿರುವ ಅಮೂಲ್ಯ ಅವರು ಕಲೆಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರವಾದ ಸಾಧನೆಗೈಯುವ ಹಂಬಲವೊತ್ತಿದ್ದಾರೆ.
ಪ್ರೀತಿಯ ತಂದೆಯ ಅಗಲಿಗೆಯಿಂದ ನೊಂದಿರುವ ಅಮೂಲ್ಯ ಅವರು ತನ್ನ ತಾಯಿಯ ಪ್ರೀತಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಕಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಮೂಲ್ಯ ಅವರು ಯಕ್ಷಸೌರಭ ತಂಡದಿಂದ ಯಕ್ಷಗಾನ ತರಬೇತಿಯನ್ನು ಪಡೆಯುತ್ತಲೇ ಕಿರಿಯ ವಿದ್ಯಾರ್ಥಿಗಳಿಗೆ ಗುರುಗಳೊಂದಿಗೆ ತರಬೇತಿಯನ್ನು ನೀಡುವ ಮೂಲಕ ಕಲಾ ಸೇವೆಯನ್ನು ಆರಂಭಿಸಿದ್ದಾರೆ. ಅಮೂಲ್ಯಳ ಉಜ್ವಲ ಭವಿಷ್ಯಕ್ಕಾಗಿ ಮಾವ ಮತ್ತು ಸಹೋದರ ಆಸರೆಯಾಗಿ ನಿಂತಿದ್ದಾರೆ. ಇವರೆಲ್ಲರ ಆಸರೆಯಲ್ಲಿ ಶಿಕ್ಷಣದೊಂದಿಗೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನ ಕಲೆಯನ್ನು ಅರಳಿಸುತ್ತಿರುವ ಅಮೂಲ್ಯ ಅವರ ಮುಂದಿನ ಬದುಕಿನಲ್ಲಿ ಯಶಸ್ಸು ಕಾಣಲೆಂಬುದು ನಮ್ಮ ಹಾರೈಕೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?