ಸಿನಿ ಸುದ್ದಿ
“ಹೋದ ಉಸಿರು”ಬಹುಭಾಷೆಯ ಕಿರುಚಿತ್ರ ನೋಡಿ,ತಬ್ಬಲಿ ಜಾತಿಯ ಅಲೆಮಾರಿಯಾದ ಚಂದ್ರು ಯಡವಲ್ ರವರ ವಿಲನ್ ಪಾತ್ರವನ್ನು ನೋಡಿ ಅಭಿನಂದಿಸಿ ಪ್ರೋತ್ಸಾಹಿಸಿ..!
ಸಿನಿಮಾ ಅಂದರೆ ಸಾಕು ಎಲ್ಲ ಭಾಗದಿಂದಲೂ ಹೆಚ್ಚಾಗಿ ಕೇಳಿ ಬರುವ ಹೆಸರು ಬೆಂಗಳೂರು-ಮೈಸೂರಿನ ಮಂಡ್ಯ ಕಡೆಯವರು,ಬಲ್ಯಾಡರು,ದುಡ್ಡಿದ್ದ ಶ್ರೀಮಂತರೆ ಸಿನಿಮಾ ಮಾಡುತ್ತಾರೆ,ಅದರಲ್ಲೂ ಕಿರುಚಿತ್ರವೆಂದರೆ ಸಾಕು ಬೆಂಗಳೂರು-ಮೈಸೂರು,ಹುಬ್ಬಳ್ಳಿ-ಧಾರವಾಡದ ಜನತೆಯೆ ಮುಂದು ಹಾಗೂ ಪರಿಣಿತರೂ ಸಹ ಹೌದು ಎಂಬ ಭಾವನೆ ನಮ್ಮ ಭಾಗದವರ ಸರ್ವೇಸಾಮಾನ್ಯವಾದ ಮನೋಭಾವನೆ.ಆದರೆ ಇದರ ಮಧ್ಯೆಯೂ ಪಕ್ಕಾ ಅಲೆಮಾರಿಯೊಬ್ಬನ ಪ್ರತಿಭೆಯೊಂದು ಯಾವ ರಂಗಭೂಮಿಯ ತರಬೇತಿಯಿಲ್ಲದೆ
(ಒಂಥರಾ ಅಲೆಮಾರಿಗಳೆಲ್ಲ ಕಲಾವಿದರೇ)
ಇವರು ಚಿಕ್ಕಂದಿನಲ್ಲಿ ಹಗಲುವೇಷಗಾರನಾಗಿ ತಂದೆಯ ಜೊತೆ ಹಗಲುವೇಷಗಾರಿಕೆಯ ಪಾತ್ರದ ಮುಖಾಂತರ ತಮಿಳುನಾಡು,ಆಂಧ್ರಪ್ರದೇಶ,ಕರ್ನಾಟಕದ ಕೆಲವು ಭಾಗದಲ್ಲಿಯೂ ಕುಟುಂಬದ ಜೀವನೋಪಯಕ್ಕಾಗಿ ಹಿರಿಯರಿಂದ ಬಂದ ಬಳುವಳಿಯ ವೃತ್ತಿಯಾದ ವೇಷಗಾರಿಕೆಯನ್ನು ಮಾಡಿರುತ್ತಾರೆ.
ಆ ಹಗಲುವೇಷಗಾರಿಕೆ ಇಂದು ಕೈ ಹಿಡಿದಿದೆ ಅಂತಲೇ ಎನ್ನಬಹುದು ಮತ್ತು ಸರಿಯಾದ ಉನ್ನತ ವಿದ್ಯಾಭ್ಯಾಸವನ್ನು ಕಲಿಯದ ಬಡ ಅಲೆಮಾರಿ ಕುಟುಂಬದ ಹಿನ್ನೆಲೆಯಲ್ಲಿ ಬಂದಿರುವ ಹಾಗೂ *ಇಂದಿಗೂ ತನ್ನ ಬೇರೆ-ಬೇರೆ ವೃತ್ತಿ ಕಾಯಕದ ಜೊತೆಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ರಾಯಚೂರು ಜಿಲ್ಲೆಯ ಮಾನ್ವಿ (ನೂತನ ಸಿರವಾರ) ತಾಲ್ಲೂಕಿನ ಕವಿತಾಳ ಎಂಬ ಪಟ್ಟಣದ ವ್ಯಕ್ತಿಯಾದ ನನ್ನ ಸಂಬಂಧಿಯಾದ(ಮಾವ),ಮಾರ್ಗದರ್ಶಿ,
ಹಿತೈಷಿ,ಅಲೆಮಾರಿಗಳ ಸಾಮಾಜಿಕ ಹೋರಾಟಗಾರ, ಅಲೆಮಾರಿಗಳ ಕಾಳಜಿಯುಳ್ಳ ಅಪ್ಪಟ ಅಲೆಮಾರಿಗಳ ಭಾವಿನಾಯಕ,ಅಲೆಮಾರಿ ಸಮಾಜದ ಹೆಮ್ಮೆಯ ಕುಡಿಯಾದ ನಮ್ಮ ನಿಮ್ಮೆಲ್ಲರ ನೆಚ್ಚಿನ ಆತ್ಮೀಯರಾದ,ಸಹೋದರ ಚಂದ್ರಶೇಖರ್ ಯಡವಲ್ ಎಂಬುವವರು ನಿಖಿತ್ ಪರಿಚಯಿಸುವ ಬಹುಭಾಷೆಯ ಕಿರುಚಿತ್ರವಾದ ಹೋದ ಉಸಿರು ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸಿ, ನಿರ್ಮಾಪಕರಾಗಿಯೂ ಕೆಲಸ ಮಾಡಿರುತ್ತಾರೆ.
ಅವರು ವಿಲನ್ ಪಾತ್ರದಲ್ಲಿ ಅಭಿನಯಿಸಿರುವ ಚೊಚ್ಚಲ(ಮೊದಲ) ಸಿನಿಮಾ “ಹೋದ ಉಸಿರು” ಕಿರುಚಿತ್ರವು ಆರ್ ಪ್ರೊಡಕ್ಷನ್ ಅರ್ಪಿಸುವ ನಿದೇರ್ಶನ,
ಛಾಯಾಗ್ರಹಣರಾದ ರಾಕೇಶ್ ಆಚಾರ್ಯರವರ ಕಥೆ-ಚಿತ್ರಕಥೆ:-ಸಂಪತ್ ರಾಯ್ ನೇತೃತ್ವದಲ್ಲಿ ಮೂಡಿಬಂದಿದೆ. ಇದೊಂದು ಪಕ್ಕಾ ಹಳ್ಳಿಯ ನೈಜ ಘಟನಾಧಾರಿತವಾದ ಪ್ರೀತಿಯ ಬಲೆಗೆ ಬಿದ್ದು ಪ್ರೇಮಿ ಕೊಲೆಯಾಗುವ ಕಥೆಯಾಗಿದ್ದು,ಈ ಕಿರುಚಿತ್ರವು ರಾಜ್ಯಾದ್ಯಂತ ಏಕಕಾಲಕ್ಕೆ ಬಹುಭಾಷೆಯಲ್ಲಿ ಅಂದರೆ ಐದು ಭಾಷೆಯಲ್ಲಿ
(ಕನ್ನಡ,ತೆಲುಗು,
ತಮಿಳು,ಮಲಯಾಳಂ,ಹಿಂದಿ)
Youtube ಲಿ ಬಿಡುಗಡೆಗೊಳ್ಳಲಿದೆ ಮತ್ತು
ಮುಂದುವರೆದು ಚಿತ್ರಮಂದಿರಗಳಲ್ಲಿಯೂ ಪ್ರಸಾರವಾಗುವ ಸಾಧ್ಯತೆಗಳು ಹೆಚ್ಚಾಗಿವೆ.ಆದ್ದರಿಂದ ತಾವುಗಳು ಈ ಚಿತ್ರವನ್ನು ತಮ್ಮ ಸ್ನೇಹಿತರೊಂದಿಗೆ ಮತ್ತು ಬಂದು ಬಳಗದವರ ಜೊತೆ ಹಂಚಿಕೊಂಡು ಕಿರುಚಿತ್ರವನ್ನು ನೋಡುವುದರ ಮೂಲಕ ಈ ಕಿರುಚಿತ್ರದಲ್ಲಿ ಬಹುಭಾಷೆಯಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡ ಈ ಭಾಗದ ಹಳ್ಳಿಯ, ಅಪ್ಪಟ್ಟ ಅಲೆಮಾರಿಯ ಯುವ ಪ್ರತಿಭೆಯಾದ ಚಂದ್ರಶೇಖರ್ ಯಡವಲ್ ಹಾಗೂ ಇನ್ನೊಬ್ಬ ನಾಯಕ-ನಟನಾದ ಸಂಪತ್ ರಾಯ್ ಇವರನ್ನು ಗುರುತಿಸಿ, ಪ್ರೋತ್ಸಾಹಿಸಿ,ಸಹಕರಿಸಿ ಆರ್ಶಿವಾದಿಸಬೇಕಾಗಿ ಸಕಲರಲ್ಲಿ ವಿನಂತಿ.
ಇನ್ನೂ ಅನೇಕ ಸಾಮಾಜಿಕ ಕಳಕಳಿಯುಳ್ಳ ಕಿರುಚಿತ್ರಗಳನ್ನು ನಿರ್ಮಾಣ ಮಾಡಿ ಜನಮನ್ನಣೆ ಪಡೆದು ಆದಷ್ಟು ಬೇಗನೆ ಚಿತ್ರರಂಗಕ್ಕೆ ಅಲೆಮಾರಿ ಬಂಧುವಾದ ಚಂದ್ರಶೇಖರ್ ಯಡವಲ್ ರವರು ಪಾದಾರ್ಪಣೆಯನ್ನು ಮಾಡಲೆಂದು,ಮುಂದಿನ ಚಿತ್ರರಂಗದ ಅವರ ಬದುಕು ಸುಗಮವಾಗಿ ಸಾಗಿ ಯಶಸ್ಸು ಲಭಿಸಲೆಂದೂ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
–ಶಿವರಾಜ್ ಮೋತಿ ಹಟ್ಟಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು