ಸಿನಿ ಸುದ್ದಿ
‘Article 15’ ಒಂದು ಅಪರೂಪದ ಚಿತ್ರ
ಅನುಭವ ಸಿನ್ಹಾ ನಿರ್ದೇಶನದ ಆರ್ಟಿಕಲ್15 ಹಿಂದಿ ಚಲನಚಿತ್ರ ಇಂದಿನ ಸಮಾಜೋ-ರಾಜಕೀಯ ವ್ಯವಸ್ಥೆಗೆ ಕನ್ನಡಿ ಹಿಡಿದ ಕಹಿವಾಸ್ತವದ ಚಿತ್ರ. ಮೊಬ್ ಲಿಂಚಿಂಗ್ ,ದಲಿತ ಯುವಕರನ್ನು ತುಂಬಿದ ಬಾಜಾರಿನಲ್ಲಿ ವಾಹನದ ಹಿಂಬದಿಗೆ ಕಟ್ಟಿ ಥಳಿಸುವ, ಇಬ್ಬರು ದಲಿತ ಅಲ್ಪವಯಸ್ಸಿನ ಯುವತಿಯರನ್ನು ಎಳೆದೊಯ್ದು ಸಾಮೂಹಿಕ ಬಲಾತ್ಕಾರ ಎಸಗಿ ಜೀವಂತ ಮರಕ್ಕೆ ನೇತು ಹಾಕಿದ ಸತ್ಯ ಘಟನೆಯ ಆಧರಿಸಿದ ಸಮಕಾಲೀನ ವ್ಯಂಗ್ಯಾತ್ಮಕ ಚಿತ್ರ. ಕೆಲವು ಕಡೆ ಈ ಚಿತ್ರವನ್ನು ಕಾನೂನು,ಸುವ್ಯವಸ್ಥೆ ಹೆಸರಡಿ ನಿಷೇಧಿಸಲಾಗಿದೆ ಎಂಬ ವರದಿಯಿದೆ.
ಬಿಗಿಯಾದ ಚಿತ್ರಪಟಕಥೆಯ ನಿರೂಪಣೆ, ಚುರುಕಾದ ಎದೆಗಿಳಿವ ಕತ್ತಿಅಲಗಿನ ಸಂಭಾಷಣೆ, ದೃಶ್ಯ ಕಾವ್ಯದಂತಿರುವ ಛಾಯಾಗ್ರಹಣ-ಇವು ಇಡೀ ಚಿತ್ರವನ್ನು ಕುತೂಹಲದಿಂದ ವೀಕ್ಷಿಸುವಂತೆ ಪ್ರೇರೇಪಿಸುತ್ತವೆ. ದಟ್ಟ ಪರಿಣಾಮವನ್ನೂ ಉಂಟು ಮಾಡುತ್ತದೆ.ಚಿತ್ರ ಆರಂಭವಾಗುವುದು ಒಂದು ಕ್ರಾಂತಿ ಗೀತೆಯ ಹಾಡಿನ ಮೂಲಕ ಮತ್ತು ಅಂತ್ಯವಾಗುವುದು ಒಂದು ರ್ಯಾಪ್ ಹಾಡಿನಿಂದ. ಇದರ ಮಧ್ಯ ನಡೆವ ಪ್ರಸಂಗಗಳು ಮಾತ್ರ ಬೆಚ್ಚಿಬೀಳುಸುತ್ತ ಸಾಗುತ್ತವೆ.
ಉತ್ತರಪ್ರದೇಶದ ಒಂದು ಠಾಣೆಗೆ ಒಬ್ಬ ಯುವ ಅಡಿಷನಲ್ ದಕ್ಷ ಪೋಲಿಸ್ ಆಫೀಸರ್ ಸೇವೆಗೆ ನಿಯುಕ್ತನಾಗುತ್ತಾನೆ. ಆಗತಾನೆ ಸವರ್ಣಿಯವರಿಂದ ದೌರ್ಜನ್ಯಗಳು ನಡೆದಿರುತ್ತದೆ. ಜನವೂ ಸಹ ಇದು ಸರ್ವೇ ಸಾಮಾನ್ಯ ಎಂದು ಕುಂಡಿ ಹೊಸೆಯುತ್ತ ಬದುಕುತ್ತಿರುತ್ತಾರೆ. 25 ರೂಪೈಗೆ ದುಡಿಯುತ್ತಿದ್ದ ಮೂರು ಯುವತಿಯರು ಕೇವಲ3 ರೂಪೈ ಹೆಚ್ಚಿಗೆ ಕೇಳಿದ್ದಕ್ಕೆ ಅವರನ್ನು ಹೊತ್ತೊಯ್ದು ಸತತ ಆರುದಿನ ಗ್ಯಾಂಗ್ ರೇಪಿನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಸಿ ಅವರ ಸಮುದಾಯದ ಜನರಲ್ಲಿ ಭಯ ಹುಟ್ಟಿಸಲು ಮೂವರಲ್ಲಿ ಇಬ್ಬರನ್ನು ಊರಗಸಿಯ ಮರಕ್ಕೆ ಜೀವಂತ ನೇಣಿಗೆ ಹಾಕುತ್ತಾರೆ ಮತ್ತು ಅವರು ಖುಲ್ಲಮ್ ಖುಲ್ಲಾ ಯಾವ ಕಾನೂನಿನ ಭಯವಿಲ್ಲದೆ ಅಲೆಯುತ್ತಿರುತ್ತಾರೆ. ಒಬ್ಬಳು ಮಾತ್ರ ನಿಗೂಢವಾಗಿ ಕಣ್ಮರೆಯಾಗಿರುತ್ತಾಳೆ.
ಆ ದಲಿತ ತಂದೆಯರನ್ನು ಠಾಣೆಯಲ್ಲಿ ಕೇಳುವವರೇ ಇಲ್ಲ. ಇಡೀ ಕಾನೂನು ವ್ಯವಸ್ಥೆ ಉಚ್ಚಕುಲದವರ ಪರವಾಗಿ ರಕ್ಷಣೆಗೆ ಟೊಂಕಕಟ್ಟಿ ನಿಂತಿದೆ. ದಲಿತ,ಒಬಿಸಿ ಮುಂತಾದವರು ಇಲ್ಲಿ ಪ್ರಾಣಿ ಸಮ. ಅದಕ್ಕೆ ಆ ಊರ ಪಕ್ಕದ ” ಸುವ್ವರ್ ಕೀ ತಾಲಾಬ್” (ಹಂದಿಗಳನ್ನು ತೊಳೆಯುವವರ ಕೆರೆ) ಒಂದು ರೂಪಕವಾಗಿದೆ.
ಇಂಥ ಬೆಚ್ಚಿಸುವ ಸಾಮಾಜಿಕ,ರಾಜಕೀಯ ವರ್ತಮಾನದಲ್ಲಿ ಯುವ ಅಧಿಕಾರಿಗೆ ಇಲ್ಲಿಯ ರೇಪ್ ಘಟನೆ ಸವಾಲಾಗಿ ಕಾಣುತ್ತದೆ.ಆಗ ಒಟ್ಟು ವ್ಯವಸ್ಥೆಯ ಒಂದೊಂದು ಪದರುಗಳು ಬಿಚ್ಚತೊಡಗುತ್ತವೆ. ಸರಕಾರಿ ವ್ಯವಸ್ಥೆಯ ಅಂಗವಾದ ಕಾನೂನು ರಕ್ಷಕರು ಸಹ ತಮ್ಮ ಕಚೇರಿಯೊಳಗೆ ಜಾಠ್,ಯಾದವ,ಠಾಕೂರ್, ಚಮ್ಮಾರ್,ಒಬಿಸಿ,ಎಸ್.ಸಿ; ಎಸ್.ಟಿ ಎಂದು ಶ್ರೇಣೀಕೃತ ಮಾನಸಿಕತೆಯಲ್ಲಿ ಕುಂಡಿ ಹೊಸೆಯುತ್ತ ಒಣಪ್ರತಿಷ್ಠೆಯ ಹುಸಿ ಬದುಕು ಅರಸಿರುತ್ತಾರೆ.ಇಂಥವರ ಮೇಲಧಿಕಾರಿಯಾಗಿ ಬಂದ ಆ ಯುವ ಅಧಿಕಾರಿ ಬ್ರಾಹ್ಮಣ ಸಮುದಾಯಕ್ಕೆ ಸೇರಿರುತ್ತಾನೆ. ಅವನು ಶಹರಲಿ ಕನಸಿದ ನ್ಯೂಇಂಡಿಯಾ ಒಂದು ಅಣಕು ಆಗಿ ಇಲ್ಲಿ ಭಾಸವಾಗುತ್ತದೆ.ಇನ್ನೂ ಫ್ಯುಡಲ್ ಭ್ರಷ್ಟ ತೆಯ ಸಾಂಪ್ರದಾಯಿಕ ಒಲ್ಡ್ ಇಂಡಿಯಾದ ಭಯಾನಕ ಪಳೆಯುಳಿಕೆಗಳು ದಿಗಿಲುಗೊಳುಸುತ್ತಿರುತ್ತವೆ.
ದಲಿತರ ಪರ ಹೋರಾಡುವ,ನ್ಯಾಯ ಕೊಡಿಸಲು ಧಡಪಡಿಸುವ ದಲಿತ ಮಹಿಳೆ ಗೌರವ ಮತ್ತು ಆಕೆಯ ಪ್ರಿಯಕರರ ಹೋರಾಟಗಳು, ದಲಿತ ಮತ್ತು ಬ್ರಾಹ್ಮಣ ರಾಜಕೀಯ ನಾಯಕರು ಒಂದಾಗಿ “ಹಿಂದು ಏಕ” ಘೋಷಣೆಯ ಪರಿಕಲ್ಪನೆಯ ರಾಜಕೀಯ ತಂತ್ರ, ಪ್ರತಿತಂತ್ರಗಳ ಸಂಘರ್ಷ, ನ್ಯಾಯ ದೊರೆಕಿಸುವಲ್ಲಿ ನಿರ್ಣಾಯಕ ಹಂತ ತಲುಪಿದಾಗ ರಾಜಕೀಯ ಒತ್ತಡದಿಂದ ಸಿಬಿಐ ತನಿಖೆ ಎದುರಿಸುವ ದಕ್ಷ ಯುವ ಅಧಿಕಾರಿಯ ತಳಮಳ, ತಲ್ಲಣಗಳು.ಹೀಗೆ ಚಿತ್ರವು ಒಂದು ಆಳವಾದ ವಿಷಾದ ಗೀತೆಯಾಗಿ ಹೊರಹೊಮ್ಮಿದೆ. ಕೊನೆಗೂ ಅಪರಾಧಿಗಳ ಪತ್ತೆಹಚ್ಚುವಲ್ಲಿ ಯಶಸ್ಸು ಕಂಡು ತಲೆಮರೆಸಿಕೊಂಡಿದ್ದ ಮೂರನೆಯವಳನ್ನು ಶೋಧಿಸಿ ಜೀವ ಸುಧಾರಕನಾಗಿ ಕಾಣುವ ನಾಯಕನಿಗೆ ಅಚ್ಚರಿ ಕಾದಿತ್ತು. ಅಪರಾಧ ಎಸಗಿದವರಲ್ಲಿ ಪೋಲಿಸ್ ಇಲಾಖೆಯ ಹೆಸರುಗಳು ಇವೆ ಎಂಬುದು.ಇದು ಬೆಳಕಿಗೆ ಬಂದಾಗ ಇಡೀ ಚಿತ್ರವು ವ್ಯವಸ್ಥೆಯ ದರುಶನವಾಗಿ ಸ್ಫೋಟಗೊಳ್ಳುತ್ತದೆ.ಬಹುಜನ ಸಮುದಾಯದವರ ಕಣ್ತೆರೆಸಲು ಒಬ್ಬ ಬ್ರಾಹ್ಮಣ ಅಧಿಕಾರಿಯೇ ರಿಫಾರ್ಮರ್ ಆಗಿ ಬರಬೇಕಾಯಿತೆ! ಎನ್ನುವ ಒಂದು ಪ್ರಶ್ನೆ ಎದ್ದೇಳುತ್ತದೆ. ಆದರೆ ಇದು ವಾಸ್ತವವೂ ಹೌದು ಎಂದು ಒಪ್ಪಲೂಬೇಕಾಗುತ್ತದೆ.
–ಡಿ.ಎಸ್.ಚೌಗಲೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?