ಸಿನಿ ಸುದ್ದಿ
EXCLUSIVE INTERVIEW | ಸ್ಯಾಂಡಲ್ ವುಡ್ ಬ್ಯೂಟಿ ; ‘ಸ್ವರ್ಣಖಡ್ಗಂ’ನ ಮಹಧಾತ್ರಿ ಸಂಜನಾ ಗಲ್ರಾಣಿ
ಬಾಹುಬಲಿ ಚಿತ್ರದ ನಿರ್ಮಾಪಕರಿಂದ ಮತ್ತೊಂದು ಅದ್ದೂರೀ ಕೊಡುಗೆ; ತೆರೆಯ ಮೇಲೆ ಮಹರಾಣಿ ಮಹಧಾತ್ರಿಯಾಗಿ ಮಿಂಚಲಿದ್ದಾರೆ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾ ಗಲ್ರಾಣಿ
ಬಾಹುಬಲಿ ಚಿತ್ರದ ನಿರ್ಮಾಪಕರು, ಹಾಗೂ ಆರ್ಕಾ ಮೀಡಿಯಾ ವರ್ಕ್ಸ್ ಅವರ ಚಿಕ್ಕ ಪರದೆಯ ಮೇಲೆ ಬಹು ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ “ಸ್ವರ್ಣ ಖಡ್ಗಂ”. ಭಾರತೀಯ ಟಿ.ವಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹದಿನಾಲ್ಕು ಭಾಷೆಗಳಲ್ಲಿ ಮೂಡಿ ಬರಲಿದ್ದು, ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ತೆಲುಗಿನ ಖ್ಯಾತ ಸೀರಿಯಲ್ ನಿರ್ದೇಶಕರಾದ ಯತ ಸತ್ಯನಾರಾಯಣ ರವರು ಇದನ್ನು ನಿರ್ದೇಶಿಸಿದ್ದಾರೆ. ಜುಲೈ ಆರರಿಂದ ಪ್ರಾರಂಭವಾಗುತ್ತಿರುವ ಈ ದೊಡ್ಡ ಪ್ರಾಜೆಕ್ಟ್, ಪೌರಾಣಿಕ ಕಥಾ ಹದರ ಒಳಗೊಂಡಿದ್ದು, ಬಾಹುಬಲಿ ಚಿತ್ರದ ತಂತ್ರಜ್ಞರೇ ಇಲ್ಲೂ ಕೆಲಸ ಮಾಡಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.
ಇದು ಸಂಜನಾ ‘ಡ್ರೀಮ್ ರೋಲ್ ‘
ಬಾಹುಬಲಿ ಚಿತ್ರ ನೋಡಿದ ಪ್ರತಿಯೊಬ್ಬ ನಟಿಯೂ, ನಾನು ಆ ಚಿತ್ರದ ಒಂದು ಭಾಗವಾಗಿರ ಬೇಕಿತ್ತು ಎಂದು ಮನಸ್ಸಲೇ ನೆನೆದಿದ್ದುಂಟು. ಆ ಸೌಭಾಗ್ಯ ಈಗ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾರ ಪಾಲಾಗಿದೆ.
‘ಸ್ವರ್ಣ ಖಡ್ಗಂ’ “ನನ್ನಒಂಬತ್ತು ವರ್ಷಗಳ ಸಿನಿ ವೃತ್ತಿಯಲ್ಲಿ ಯೇ ಇದು ಮಹತ್ವಾಕಾಂಕ್ಷೆ ಯ ಪಾತ್ರ. ಯಾವುದೇ ನಟಿಗಾದರೂ ಒಮ್ಮೆ ಯಾದರೂ ಇಂತಹ ಮಹಿಳಾ ಪ್ರಧಾನ ಪಾತ್ರ ದಲ್ಲಿ ಮಿಂಚುವ ಆಸೆ ಇದ್ದೇ ಇರುತ್ತದೆ. ಆ ಸೌಭಾಗ್ಯ ನನ್ನದಾಗಿದೆ ಎನ್ನುತ್ತಾರೆ ಸ್ಯಾಂಡಲ್ವುಡ್ ಬ್ಯೂಟಿ ಸಂಜನಾ.
ಸದ್ಯ ಇದೇ ಸೀರಿಯಲ್ ನ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸಂಜನಾ, ‘ಸುದ್ದಿದಿನ‘ ಕ್ಕೆ ನೀಡಿರುವ Exclusive Interview ನ ಸಂಪೂರ್ಣ ಡೀಟೇಲ್ ಇಲ್ಲಿದೆ.
ಯೋಧ ರಾಜಕುಮಾರಿಯ ಕಸರತ್ತು ಹೇಗಿದೆ ಗೊತ್ತಾ..!
ದಂಡುಪಾಳ್ಯದ ಪಾತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡಿದ್ದ ಸಂಜನಾ, ಈಗಿನ ತಮ್ಮ ‘ಡ್ರೀಮ್ ರೋಲ್’ಗಾಗಿ ಬಹಳಷ್ಟು ಕಸರತ್ತು ಮಾಡುತ್ತಿದ್ದಾರೆ. ಮಹಾರಾಣಿ ಮಹಧಾತ್ರಿ ಯಾಗಿ ತೆರೆಯ ಮೇಲೆ ಮಿಂಚಲು ಹೊರಟಿರುವ ಸಂಜನಾ, ಈ ಪಾತ್ರಕ್ಕಾಗಿಯೇ ಕತ್ತಿ ವರಸೆ, ಕುದುರೆ ಸವಾರಿ ಯ ವಿಶೇಷ ತರಬೇತಿ ಯನ್ನು ಪಡೆದಿದ್ದಾರೆ.
ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾ ಈಗ “ಸ್ವರ್ಣಖಡ್ಗಂ” ನ ಯೋಧ ರಾಜಕುಮಾರಿ !
ಈ ಮಹಿಳಾ ಪ್ರಧಾನ ಪಾತ್ರದ ಬಗ್ಗೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಸಂಜನಾ, ದಿನನಿತ್ಯ ಬೆಳಿಗ್ಗೆ 3.30 ಕ್ಕೆ ಎದ್ದು ಸುಮಾರು ಒಂದೂವರೆ ಫಂಟೆಗಳ ಹೈ ಇಂಟೆಂಸಿಟೀ ವರ್ಕ್ ಔಟ್ ಮಾಡಿ, ನಂತರ ಸುಮಾರು ಎರಡೂವರೆ ಘಂಟೆಗಳ ಕಾಲ ಪಾತ್ರಕ್ಕಾಗಿ ರೆಡಿಯಾಗುತ್ತಾ ರಂತೆ.
ಸುಮಾರು 12-14 ತಾಸುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸಂಜನಾ, ತಮ್ಮ ಪಾತ್ರಕ್ಕಾಗಿ 5-6 ಕೆ.ಜಿ ತೂಕದ ಕಾಸ್ಟ್ಯೂಮ್ ಧರಿಸುತ್ತಿದ್ದಾರೆ. ಇನ್ನು ಬಾಹುಬಲಿ ಚಿತ್ರದ ವಸ್ತ್ರ ವಿನ್ಯಾಸಕರೇ ಇಲ್ಲೂ ಕೆಲಸ ಮಾಡುತ್ತಿದ್ದು. ಮಹಾರಾಣಿ ಮಹಧಾತ್ರಿಯ ಲುಕ್ ಬಾಹುಬಲಿಯ ತುಣುಕು ಗಳನ್ನ ನೆನಪಿಸುತ್ತದೆ. ಸೀರಿಯಲ್ ನ ಪ್ರಮೋ ದಲ್ಲಿ ಶ್ವೇತ ಹಂಸದಂತೆ ಒಮ್ಮೆ ಕಣ್ಮನ ಸೆಳೆದರೆ, ಮತ್ತೊಮ್ಮೆ ಯೋಧರಾಣಿಯ ಖಡಕ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ ಸುಂದರಿ ಸಂಜನಾ.
“ಮಹಾರಾಣಿ ಮಹಧಾತ್ರಿ”ಯಾಗಿ ಮಿಂಚಲು ಹೊರಟಿರುವ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾರ ” ಫಿಟ್ನೆಸ್ ಸೀಕ್ರೇಟ್” ನಮ್ಮ ಮುಂದಿನ ಸಂಚಿಕೆಯಲ್ಲಿ ತಪ್ಪದೇ ಓದಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243