Connect with us

ಸಿನಿ ಸುದ್ದಿ

EXCLUSIVE INTERVIEW | ‘ಶಬ್ಧ ಗಾರುಡಿಗ ಟಗರು ಮಾಸ್ತಿ’ ಮನದಾಳ

Published

on

” ಚಿಟ್ಟೆ…ಅಂಕಲ್ ನಾ ಹೊಡಿತೀನಿ…ಹೇ ಬಿಡು ಸುಬ್ಬಿ…ಬೆಳಗ್ಗೆ ಹಾಲು ತುಪ್ಪ ಬಿಡೋದ್ರೊಳಗೆ ಅಂಕಲ್ ನಾ ಹೊಡಿತೀನಿ; ಅಂಕಲ್ ನಾ ಹೊಡಿತೀನಿ”. ” ನಿಂದು ಒಂದ್ ಜನ್ಮ, ನಿಮ್ಗೂ ಒಂದ್ ಜನ್ಮದಿನ ಬೇರೆ ಕೇಡು”. ” ಮೀಸೆ, ಗಡ್ಡ, ಬಿಟ್ಟೋರ್ನೆಲ್ಲ ಗಂಡ್ಸು ಅನ್ನೋದಾದ್ರೆ ಕರಡಿ ಎಲ್ಲಕ್ಕಿಂತ ದೊಡ್ ಗಂಡ್ಸು”. ” ನಾವು ಮ್ಯಾಚ್ನಲ್ಲಿ ಸೋಲಲ್ಲ, ಅಕಸ್ಮಾತ್ ಸೋತ್ರೂ..ಮ್ಯಾನ್ ಆಫ್ ದಿ ಮ್ಯಾಚ್ ನಮ್ದೆ”. ಸುಕ್ಕಾ ಸೂರಿಯವರ ‘ಟಗರು’ ಸಿನೆಮಾದ ಇಂಥ ಸಂಭಾಷಣೆಯ ಜಂಗಮ ಭಾವ, ನೋಡುಗನ ಎದೆಯಲ್ಲಿ ಸ್ಥಾವರಗೊಳ್ಳುವಂತೆ ಮಾಡಿ, ತಮ್ಮ ರೋಚಕ, ರಂಜನೀಯ, ಕಿಲಾಡಿತನದ ಮಾತುಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದಾರೆ ಸಂಭಾಷಣಾಕಾರ ಮಂಜು ಮಾಸ್ತಿ. ಇವರು ಮಾಸ್ತಿ ಎಂತಲೇ ಚಂದನವನದಲ್ಲಿ ಚಿರಪರಿಚಿತ.

‘ಶಬ್ದದೊಳಗೆ ನಿಶ್ಯಬ್ದ ; ನಿಶ್ಯಬ್ದದೊಳಗೆ ಶಬ್ದ’ ಹುಡುಕುತ್ತಾ..ಕತೆಗಾರನಾಗಿ, ಸಂಭಾಷಣಾಕಾರನಾಗಿ, ನಟನಾಗಿ, ಒಬ್ಬ ಒಳ್ಳೆಯ ಓದುಗನಾಗಿ ಎಲ್ಲರ ಚಿತ್ತ ತನ್ನತ್ತ ಹೇಗೆ ಸೆಳೆಯ ಬೇಕು ಎಂಬ ಚಾಲಾಕಿತನದ ಶಬ್ದಮಾಂತ್ರಿಕ ಮಾಸ್ತಿ ಅವರು, ನಿಜಕ್ಕೂ ಒಬ್ಬ ಬರಹಗಾರ ತಮ್ಮ ಬರವಣಿಗೆಯನ್ನ ಪಾಲಿಶ್ ಮಾಡಿಕೊಳ್ಳ ಬೇಕಾದಾಗ, ತಾನು ಬದುಕುತ್ತಿರುವ ಸಮಾಜದೊಟ್ಟಿಗೆ ಹೇಗೆಲ್ಲಾ ಸಂಪರ್ಕವಿಟ್ಟುಕೊಳ್ಳಬೇಕು, ದೈನಂದಿನ ಜೀವನದ ಸಂಗತಿಗಳನ್ನು ತನ್ನ ಕುತೂಹಲದ ಕಣ್ಣಿನ್ನಿಂದ ಹೇಗೆಲ್ಲಾ ನೋಡ ಬಹುದು ಎಂಬುದಕ್ಕೆ ಟಗರು ಸಿನೆಮಾದ ಸಂಭಾಷಣೆಯೇ ಸಾಕ್ಷಿ. ಶಬ್ದಗಾರುಡಿಗ ನಂತೆ ಕಾಣುವ ಈ ಮಾಸ್ತಿ ನಿಜಕ್ಕೂ ಕನ್ನಡದ ಆಸ್ತಿಯೇ. ಏಕೆಂದರೆ ಇವರೊಳಗಿರುವ ಒಬ್ಬ ಸಹೃದಯನೇ ಇವರನ್ನ ಬೆಳೆಸಿದೆ, ಮುಂದೆಯೂ ಬೆಳೆಸುತ್ತದೆ ಎಂಬುದು ನಮ್ಮ ಮನದ‌ ಸೂಕ್ಷ ಗ್ರಹಿಸಿದ್ದು. ಇಂತಹ ಒಬ್ಬ ‘ಸೂಕ್ಷ್ಮಜ್ಞ’ನೊಂದಿಗೆ ಸುದ್ದಿದಿನ ತನ್ನ ಮಾತು-ಕತೆಯಲ್ಲಿ ಮಾತನಾಡಿಸಿದಾಗ ಅವರು ಎದೆ ತುಂಬಿ ಮಾತನಾಡಿದ್ದಾರೆ‌. ಅದರ ಅಕ್ಷರ ರೂಪ‌ ಇಲ್ಲಿದೆ.

ಟಗರು ಮಾಸ್ತಿ ಮನದಾಳ

ಬಾಲ್ಯದಿಂದಲೂ ಸಾಹಿತ್ಯದ ಓದು, ಬರವಣಿಗೆಯಲ್ಲಿ ತೊಡಗಿಸಿಕೊಂಡು,‌ಬರವಣಿಗೆಯಲ್ಲಿಯೇ ಬದುಕು ಕಾಣಬೇಕು ಎಂಬ ಕನಸಿದ್ದರೂ ಅದು ಅಸಾಧ್ಯವೇನೋ ಎಂಬ ಅಪನಂಬಿಕೆ ನನ್ನನ್ನು ಕಾಡಿದ್ದು ಸತ್ಯ. ಆದರೆ ಸಿನೆಮಾರಂಗಕ್ಕೆ ಬಂದಮೇಲೆ ಬರಹಗಾರನಿಗಿರುವ ಶಕ್ತಿ ಎಂಥದ್ದು ಅನ್ನೋದು ನನಗೆ ಮನವರಿಕೆಯಾಗಿದೆ. ಅದರಲ್ಲೂ ಸೂರಿ ಸರ್ ‘ಟಗರು’ ಸಿನೆಮಾ ನನ್ನನ್ನು ಈ ಮಟ್ಟಿಗೆ ಗುರುತಿಸುವಂತೆ ಮಾಡಿದ ಮೇಲಂತೂ ಬರವಣಿಗೆಯೇ ನನ್ನ ಜೀವಾಳ,ಜೀವನ ಆಗಿಬಿಟ್ಟಿದೆ.

ಅಂದಹಾಗೆ ನಾನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೆ.ಉಪ್ಪಾರಹಳ್ಳಿ ಎಂಬ ಗ್ರಾಮದವನು. ನಮ್ಮದು ಮಿಡಲ್ ಕ್ಲಾಸ್ ಫ್ಯಾಮಿಲಿ. ತುಂಬಾ ಕಷ್ಟಗಳ ಜೊತೆಗೆ ಬೆಳೆದವನು. ಆ ಕಷ್ಟಗಳನ್ನೇ ನನ್ನ ಜೀವನೋತ್ಸಾಹವಾಗಿ ಪ್ರೀತಿಯಿಂದ ಬದುಕುತ್ತಾ ಬಂದೆ. ನನ್ನ ಕಡು ಕಷ್ಟಗಳೇ ನನ್ನ ಒಬ್ಬ ಬರಹಗಾರನಾಗಿ ಮಾಡಿದವು ಅಂದ್ರೆ ತಪ್ಪಾಗಲಾರದು. ನನ್ನ ಆ ದಿನಗಳ ‘ನೆನಪಿನ ಬುತ್ತಿ’ ಯನ್ನೇ ಬರವಣಿಯ ಮೂಲವಾಗಿಸಿಕೊಂಡು ಬರೆಯಲು ಹೊರಟೆ. ಪ್ರೈಮರಿ ಶಾಲೆಯಿಂದಲೂ ನಾನು ಬಾಲಮಿತ್ರ, ಚಂದಮಾಮ, ಕಾಮಿಕ್ಸ್ ಬುಕ್, ಜನಪದ ಕತೆಗಳು, ಪಂಚತಂತ್ರ ಕತೆಗಳನ್ನು ನಾನು ಅಚ್ಚುಕಟ್ಟಾಗಿ ಓದಿಕೊಂಡು ಬಂದೆ. ಆ ಕತೆಗಳ ಮೂಲ ಆಶಯ ‘ನೀತಿ’ ಹೇಳುವುದೇ ಆಗಿದ್ದರಿಂದ ಅವು ನನ್ನನ್ನು ಆವಾಹಿಸಿಕೊಂಡು ಬಿಟ್ಟವು. ಹಾಗೇ ಶಾಲೆಯಲ್ಲಿ ಮೇಷ್ಟ್ರುಗಳು ಹೇಳುತ್ತಿದ್ದ ಕತೆಗಳು ನನ್ನನ್ನ ತುಂಬಾ ಕಾಡಿದವು. ನಮ್ಮ ಮೇಷ್ಟುಗಳು ತುಂಬಾ ವಿಶಿಷ್ಟವಾಗಿ ಕತೆಹೇಳುವ ಪರಿಯೇ ನನ್ನ ಕುತೂಹಲವನ್ನು ಕೆರಳಿಸುತ್ತಿದ್ದವು.ನಾನು ಕತೆಗಳನ್ನು ಮಂತ್ರ ಮುಗ್ಧನಾಗಿ ಕೇಳುತ್ತಿದ್ದೆ.

ನಮ್ಮ ಮನೆಯಲ್ಲಿ‌ ಆಗಾಗ ನಮಗೆ ಕಾಸುಕೊಟ್ಟು ಟೆಂಟ್ ಗಳಲ್ಲಿ‌ ಸಿನೆಮಾ ನೋಡಲು ಕಳುಹಿಸುತ್ತಿದ್ದರು. ಟೆಂಟ್ ಒಳಗೆ ಕೂತು ನೋಡುವ ಸಿನೆಮಾಗಳು ನನಗೆ ಮಾಯಾಲೋಕದಂತೆ ಭಾಸವಾಗುತ್ತಿತ್ತು. ಸಿನೆಮಾ ನೋಡಿ ಬಂದಾಗಿನ ಖುಷಿ ಹೇಳಲು ನನಗೆ ಪದಗಳೇ ಸಾಲುತ್ತಿರಲಿಲ್ಲ. ಅಷ್ಟೊಂದು ಆಳವಾಗಿ ಇಳಿದು ಹೋಗಿಬಿಡ್ತಾಇದ್ದೆ ಸಿನೆಮಾಗಳನ್ನ‌ ನೋಡಿ. ಈಗ ವಿದೇಶಕ್ಕೆ ಹೋಗಿಬಂದಾಗ ಆಗುವಂತಹ ಖುಷಿ , ಆಗ ಸಿನೆಮಾ ನೋಡಿದಾಗ ಆಗ್ತಾ ಇತ್ತು. ಸಿನೆಮಾ ಪರದೆಯೊಳಗೆ ಕಾಣುವ ದೃಶ್ಯಗಳು ನನ್ನನ್ನ ಮೈಮರೆಸುತ್ತಿದ್ದವು. ಆಗ ಅಂಥಹ ಸಿನೆಮಾಗಳು ಬರ್ತಾ ಇದ್ವು ಬಿಡಿ (ಈಗಲೂ ಬರ್ತಾ ಇದಾವೆ) . ಹೀಗೆ ಸಿನೆಮಾಗಳು ನನ್ನ ಕಾಡಿದ್ದರಿಂದ ಸಿನೆಮಾವನ್ನ ಆರಾಧಿಸುತ್ತಾ ಬಂದೆ. ಕೆಲವು ನನ್ನ ಸ್ನೇಹಿತರು ಸಿನೆಮಾ‌ ನೋಡಿ ಬಂದು ಅಭಿನಯದ ಮೂಲಕ ರೋಚಕವಾಗಿ ಸಿನೆಮಾ‌ ಕತೆ ಹೇಳ್ತಾ ಇದ್ರು, ಅವರು ಹೇಳೋ ಕತೆಗಳನ್ನ ತದೇಕ ಚಿತ್ತದಿಂದ ಕೇಳ್ತಾ, ನೋಡ್ತಾ ಇದ್ದೆ. ಈ ಸಂಗತಿಗಳೂ ಕೂಡಾ ನನ್ನ ಸಿನೆಮಾ ಮೇಲಿನ ಪ್ರೀತಿಯನ್ನ ಹೆಚ್ಚಿಸ್ತಾ ಬಂದ್ವು. ಜೊತೆಗೆ ಅಪರೂಪಕ್ಕೊಮ್ಮೆ ನನಗೆ ಮನೇಲಿ ಹೊಸ ಪುಸ್ತಕ ಕೊಡಿಸ್ತಾ ಇದ್ರು, ನಾನು ಆ ಪುಸ್ತಕದ ಪುಟಗಳನ್ನ ತಿರುವಿಹಾಕಿ ಹಾಳೆಗಳ ವಾಸನೆಯನ್ನ ಗ್ರಹಿಸ್ತಾ ಇದ್ದೆ. ಬಹುಶಃ ಹಾಳೆಗಳ ಅಕ್ಷರದ ಇಂಕು ಹಾಗೂ ಹಾಳೆಗಳ ಪರಿಮಳವೇ ಕತೆಗಳನ್ನ ಓದಿ ಆಸ್ವಾದಿಸುವ ಹುಚ್ಚು ಬಿಡಿಸಿ ಬಿಟ್ಟವು. ಒಟ್ಟಾರೆ ಕನ್ನಡ ಮೀಡಿಯಂ, ಸರ್ಕಾರಿ ಶಾಲೆಗಳೇ ನನ್ನ ಬರವಣಿಗೆಯ ಶಕ್ತಿ ಎಂದರೆ ಅತಿಶಯೋಕ್ತಿಯಾಗಲಾರದು.

ನಮ್ಮ ಊರಿಗೆ ತೆಲುಗು ಭಾಷೆಯ ಪ್ರಭಾವ ಹೆಚ್ಚು, ನಾನು ಅದರ ಪ್ರಭಾವಕ್ಕೆ ಬಲಿಯಾಗಲಿಲ್ಲ. ತೆಲುಗು ಸಿನೆಮಾಗಳು ತುಂಬಾ ಪ್ರದರ್ಶನ ಕಾಣ್ತಾಇದ್ವು ಆಗ. ತೆಲುಗಿನ ಹಲವು ಸಿನೆಮಾಗಳು ಕ್ರೈಂ ಮತ್ತು ಸೆಕ್ಸ್ ಅನ್ನ ವೈಭವೀಕರಿಸಿ ಸಹಜತೆಯೇ ಕಾಣೆಯಾಗಿದ್ದುದರಿಂದ ನಾನು ಅಂಥಹ ಸಿನೆಮಾಗಳನ್ನು ವಿರೋಧಿಸುತ್ತಾ ಬಂದೆ. ತೆಲುಗಿನ ಅಂತಹ ಸಿನೆಮಾಗಳು ಕನ್ನಡ ಸಿನೆಮಾಗಳ‌ ಮೇಲೂ ಪ್ರಭಾವ ಬೀರಿದವು. ಆದರೆ ಅವ್ಯಾವೂ ಅಷ್ಟು ಹಿಟ್ ಆಗಲಿಲ್ಲ, ಜನರು ಅಂಥಹ ಸಿನೆಮಾಗಳನ್ನ ತಿರಸ್ಕರಿಸಿದ್ರೂ ಕೂಡಾ. ಏಕಂದ್ರೆ ಅವು ನಮ್ಮ ಕನ್ನಡದ ನೆಲಕ್ಕೆ ಒಗ್ಗುವಂತವಲ್ಲ. ನಮ್ಮ ನೆಲದಗುಣವಿರುವ ಕನ್ನಡ ಸಿನೆಮಾಗಳು ಅಮ್ಮ ಮಾಡಿದ ಅಡುಗೆ ತರ, ತುಂಬಾ ರುಚಿ ಹಾಗೂ ದೇಹಕ್ಕೆ ಒಳ್ಳೆಯದು.ಹಾಗಾಗಿ ಕನ್ನಡ ಸಿನೆಮಾರಂಗಕ್ಕೆ ಹೇಗಾದ್ರೂ ಬರಬೇಕು ಅನ್ನೋತುಡಿತ ನನ್ನಲ್ಲಿ ಹೆಚ್ಚಾಗ್ತಾ ಬಂತು. ನನಗೆ ಸಿನೆಮಾದ ಹಿನ್ನೆಲೆಯಿಲ್ಲದಿದ್ದರೂ ನನಗೆ ಸಿನೆಮಾ ಮೇಲಿರುವ ಪ್ರೀತಿಯೇ ನನ್ನ ಸಿನೆಮಾ ಹಿನ್ನೆಲೆ.

ನನ್ನ ಸಿನೆಮಾ ಎಂಟ್ರಿ

ಸಿನೆಮಾದಲ್ಲಿ ಹೇಗಾದರೂ ಕೆಲಸ ಮಾಡ್ಬೇಕು ಅನ್ನೋ ಹಂಬಲದಿಂದ ತುಂಬಾ ಸೈಕಲ್ ಹೊಡೆದೆ. ಆದ್ರೆ ಯಾವ ಅವಕಾಶಗಳೂ ನನಗೆ ದಕ್ಕಲಿಲ್ಲ. ಆದ್ರೆ ಒಮ್ಮೆ ನಮ್ಮ ಮನೆಯ ಹತ್ತಿರದಲ್ಲಿ ತುಷಾರ್ ರಂಗನಾಥ್ (ಗುಲಾಮ, ಕಂಠೀರವ ಸಿನೆಮಾ ನಿರ್ದೇಶಕ) ಸಿನೆಮಾದಲ್ಲಿ ಕೆಲಸ ಮಾಡ್ತಾರೆ ಅಂತ ಗೊತ್ತಿತ್ತು. ಅವರನ್ನ ಹೇಗೋ ಕಷ್ಟಪಟ್ಟು ಪರಿಚಯ ಮಾಡ್ಕೊಂಡೆ. ಈ ಸಮಯದಲ್ಲಿ ಅವರು ಸಾಧುಕೂಕಿಲಾ ನಿರ್ದೇಶನದ, ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನೆಮಾಗೆ ಸಹ ನಿರ್ದೇಶಕ ನಾಗಿ ಕೆಲಸ ಮಾಡ್ತಿದ್ರು. ಈ ಸಿನೆಮಾ ‘ಚಿತ್ರಕತೆ’ ಯ ಬಗ್ಗೆ ಚರ್ಚೆ ಮಾಡೋದಿಕ್ಕಾಗಿ ನನ್ನ ಕರ್ಕೊಂಡ್ ಹೋದ್ರು. ಸುಂಟರಗಾಳಿ ಸಿನೆಮಾದಲ್ಲಿ ದರ್ಶನ್ ಅವರು ಹೇಗೆ ಎಂಟ್ರಿ ಆಗ್ಬೇಕು ಅನ್ನೋ ದೃಶ್ಯದ ಬಗ್ಗೆ ಚರ್ಚೆ ನಡೀತಾ ಇತ್ತು, ಆಗ ನನಗೆ ತೋಚಿದ, ಪಕ್ಕಾ ಮಾಸ್ ಆಗಿ ಇರೋ ಒಂದ್ ದೃಶ್ಯಾನ ವಿವರಿಸ್ತಾ ಹೋದೇ, ಆಗ ಎಲ್ರೂ ಖುಷಿಯಿಂದ ಒಪ್ಪೊಂಡ್ರು. ಅವತ್ತೇ ನನ್ನ ಸಿನೆಮಾದ ಎಂಟ್ರಿಯೂ ಆಗೋಯ್ತು. ತುಂಬಾನೆ ಖುಷಿಕೊಡೋ ಸಂಗತಿ ನನಗದು.

ಸೂರಿ – ಭಟ್ಟರ ಸಹವಾಸ

ಸುಂಟರಗಾಳಿ‌ ಸಿನೆಮಾಗೆ ಸೂರಿ ಸರ್ ಕೂಡ ಸಹ ನಿರ್ದೇಶಕರಾಗಿ ಕೆಲಸ ಮಾಡ್ತಿದ್ರು. ತುಷಾರ್ ರಂಗನಾಥ್ ಕಡೆಯಿಂದ ಅವರ ಪರಿಚಯವಾಯ್ತು. ನಂತರ ಅದೇ ಸಮಯದಲ್ಲಿ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್ ಬಿ.ಸುರೇಶ್ ಅವರ ನಿರ್ದೇಶನದ ‘ಸಾಧನೆ’ ಎಂಬ ಧಾರಾವಾಹಿಯಲ್ಲಿ ಕೆಲಸ ಮಾಡ್ತಿದ್ರು. ಸಾಧನೆ ಧಾರಾವಾಹಿಯ ಸೆಟ್ ಗೆ ನನ್ನನ್ನೂ ಕೂಡ ಕರೆದುಕೊಂಡು ಹೋಗ್ತಾದ್ರು ತುಷಾರ್ ರಂಗನಾಥ್. ಆಗ ಅವರ ಜೊತೆ ಸಿನೆಮಾಗೆ ಸಂಭಂದಿಸಿದ ವಿಷಯಗಳನ್ನ ಚರ್ಚೆ ಮಾಡ್ತಾ ಅವರೊಳಗೆ ನನ್ನೊಬ್ಬನನ್ನಾಗಿ ಮಾಡ್ಕೊಂಡ್ರು ಸೂರಿ ಸರ್ ಹಾಗೂ ಭಟ್ ಸರ್. ಹಾಗೇ ಇನ್ನೊಂದ್ ವಿಷಯ ಹೇಳಲೇ ಬೇಕು ನಾನು. ಮುಂಗಾರು ಮಳೆ ಸಿನೆಮಾ ಮಾಡಿ‌ ಭಟ್ ಸರ್ ಒಂದ್ ಟ್ರೆಂಡ್ ಸೆಟ್ ಮಾಡಿದ್ರು,ಹಾಗೆ ಸಿನೆಮಾ ಒಳ್ಳೆಯ ಲಾಭವನ್ನ ನಿರ್ಮಾಪಕರಿಗೆ ತಂದು ಕೊಡ್ತು. ಆಗ ಇನ್ಫೋಸಿಸ್ ನ ನಾರಾಯಾಣ ಮೂರ್ತಿಯವರು ಭಟ್ ಸರ್ ಅವರನ್ನ ಕರೆಸಿ ಹೇಳಿದ್ರಂತೆ, ” ಕನ್ನಡ‌‌ದಲ್ಲಿ‌ ಇಂತಹ ಒಂದು ಒಳ್ಳೆಯ ಸಿನೆಮಾ ಕೋಟಿಗಟ್ಟಲೆ ಹಣ ಮಾಡೋದು ಅಂದ್ರೆ ಸುಮ್ನೆ ಮಾತಲ್ಲ, ನಾವು ಏನೆಲ್ಲಾ ಮಾಡ್ತೀವಿ‌, ಅದ್ರೆ ಒಂದ್ ಸಿನೆಮಾ ಮಾಡಿ ನೀವು ಎಲ್ಲರೀತಿಯಿಂದಲೂ ಯಶಸ್ಸುಗಳಿಸಿದರ ಬಗ್ಗೆ ತುಂಬಾ ಹೆಮ್ಮೆ‌ಯಿಂದ ಹೇಳಿದ್ರಂತೆ, ಅಂತಹ ಭಟ್ ಸರ್ ಗೆ ನಾನು ಕತೆ ಹೇಳಿದ್ದು ತುಂಬಾ ಖುಷಿಕೊಡ್ತು. ಅದೇ ಕನ್ನಡಕ್ಕಿರುವ ತಾಕತ್ತು ಅಂತಾನೂ ನಂಗೆ ಅರಿವಾಯ್ತು.

ಕತೆಗಾರನಾಗಿ

ನಾನು ಒಂದಷ್ಟು ಕತೆಗಳನ್ನ ಬರೆದೆ. ಅದರಲ್ಲಿ‌ ಬಾಲ್ ಪೆನ್ ಅನ್ನೋ ಕತೆಯನ್ನ ಪತ್ರಕರ್ತ ರವಿಬೆಳೆಗೆರೆಯವರು ಕೇಳಿ ತುಂಬಾ ಇಷ್ಟ ಪಟ್ರು. ನಂತರ ಅವರ ಮಗಳು, ನಟ ಶ್ರೀನಗರ‌ ಕಿಟ್ಟಿ ಅವರ ಪತ್ನಿ ಭಾವನಾ ಬೆಳಗೆರೆಯವರು ನಿರ್ಮಾಣ ಮಾಡಿದ್ರು. ಸಿನೆಮಾಗೆ ಒಳ್ಳೆಯ ಹೆಸರೂ ಬಂತು. ಹಾಗೆ ತುಂಬಾ ಕತೆಗಳನ್ನ ಬರೆದೆ. ಸಿನೆಮಾಗೆ ಆಗದೇ ಇರೋ‌ ಕತೆಗಳು ಇವೆ. ಅವನ್ನೆಲ್ಲಾ ಸೇರಿಸಿ ಒಂದು ಪುಸ್ತಕ ಮಾಡುವ ಯೋಚನೆಯೂ ಇದೆ. ಸಿನೆಮಾ ಬರವಣಿಗೆಯಲ್ಲಿ ಸಧ್ಯಕ್ಕೆ ಹೆಚ್ಚು ತೊಡಗಿಸಿಕೊಂಡಿರೋದ್ರಿಂದ ಪುಸ್ತಕ ಬರೋದು ಸ್ವಲ್ಪ‌ ತಡವಾಗಬಹುದು.

ಸಂಭಾಷಣಾಕಾರನಾಗಿ

ಸೂರಿ ಸರ್ ನಿರ್ದೇಶನದ ಜಂಗ್ಲಿ, ಜಾಕಿ, ಕೆಂಡಸಂಪಿಗೆ ಸಿನೆಮಾಗಳ‌ ಕತೆ, ಚಿತ್ರಕತೆ ಸಂಭಾಷಣೆಯ ಚರ್ಚೆಗಳಲ್ಲಿ ನನ್ನನ್ನೂ ತೊಡಗಿಸಿಕೊಂಡರು. ನಂತರ ಕಡ್ಡಿ ಪುಡಿ ಸಿನೆಮಾಗೆ ನಾನು ಮತ್ತು ಸೂರಿ ಸರ್ ಸಂಭಾಷಣೆ ಬರೆದ್ವಿ. ಕಡ್ಡಿಪುಡಿ ಸಿನೆಮಾದಲ್ಲಿನ ಸಂಭಾಷಣೆ ಸೂರಿ ಸರ್ ಕೈಚಳಕವೇ ಹೆಚ್ಚು, ಆದ್ರೂ ನನಗೂ ಕ್ರೆಡಿಟ್ ಕೊಟ್ರು ಸೂರಿ ಸರ್. ನಂತರ, ಕಾಲೇಜ್ ಕುಮಾರ್ ಎಂಬ ಸಿನೆಮಾಗೆ ಸಂಭಾಷಣೆ ಬರೆದೆ. ನಂತರ ‘ಟಗರು’ ಸಿನೆಮಾಗೆ ಸಂಭಾಷಣೆ ಬರೆಯುವ ಜವಾಬ್ದಾರಿಯನ್ನ ಕೊಟ್ರು ಸೂರಿ ಸರ್. ಅವರು ನನ್ನ ಮೇಲಿಟ್ಟು ಹೊರಿಸಿದ ಜವಾಬ್ದಾರಿಯನ್ನ ಸ್ಬಲ್ಪ ಮಟ್ಟಿಗೆ ನಿಭಾಯಿಸಿದ್ದೇನೆ ಅನ್ಸುತ್ತೆ. ಯಾಕಂದ್ರೆ ಸೂರಿ ಸರ್ ನನ್ನಿಂದ ಅಷ್ಟು ಕೆಲಸ ತೆಗೆಸಿದ್ರು ಅಂತ ಹೇಳೋಕೆ ನಂಗೆ ಹೆಮ್ಮೆ ಆಗುತ್ತೆ. ಹಾಗೇ ಸೂರಿ ಸರ್ ಮುಂದಿನ ಸಿನೆಮಾ ,’ಪಾಪ್ ಕಾರ್ನ್ ಮಂಕಿ ಟೈಗರ್’ ಸಿನೆಮಾಗೆ ಸಂಭಾಷಣೆ ಬರೆಯೋಕೆ ಮತ್ತೆ ಅವಕಾಶ ಮಾಡಿಕೊಟ್ಟಿದ್ದಾರೆ. ಟಗರು ಸಿನೆಮಾ ನೋಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ‘ಭೈರವ ಗೀತಾ’ ಸಿನೆಮಾಗೆ ಸಂಭಾಷಣೆ (ಕನ್ನಡ ಅವತರಿಣಿಕೆಗೆ) ಬರಯೋದಿಕ್ಕೆ ಅವಕಾಶ ಸಿಕ್ಕಿದೆ. ಅವಕಾಶ ಸಿಕ್ಕಿದ್ದರಲ್ಲಿ ನಟ ಧನಂಜಯ್ ಪಾತ್ರವೂ ದೊಡ್ಡದಿದೆ. ಧನಂಜಯ್ ಗೆ ಒಂದು ಸಲಾಮ್ ಹೇಳಲು ಈ ಸಮಯದಲ್ಲಿ‌ ಇಷ್ಟ ಪಡ್ತೇನೆ. ಇತ್ತೀಚಿಗೆ ಬಿಡುಗಡೆಯಾದ ‘ ಕಟ್ಟುಕತೆ’ ಸಿನೆಮಾಗೂ ಸಂಭಾಷಣೆ ಬರೆದಿದ್ದೇನೆ. ಹಾಗೆ ನೀನಾಸಂ‌ ಸತೀಶ್ ಅಭಿನಯದ ಅಯ್ಯೋಗ್ಯ ಸಿನೆಮಾ, ದುನಿಯಾ ವಿಜಯ್ ಅವರ ಕುಸ್ತಿ, ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿ ಮಗನ ‘ಅಖಿಲ್’ ಎಂಬ ಸಿನೆಮಾಕ್ಕೆ ಸಂಭಾಷಣೆ ಬರೆದಿದ್ದೇನೆ. ಸಿನೆಮಾ‌‌ ನಿರ್ದೇಶನ ಮಾಡೋ ಆಸೆ ಇದೆ ಬರವಣಿಗೆಯ ಒತ್ತಡದಲ್ಲಿ ಅದು ಸಾಧ್ಯ ಆಗ್ತಾ ಇಲ್ಲ. ಮುಂದೊಂದು ದಿನ ನಿರ್ದೇಶಕನಾಗಿ ನಿಮ್ಮ ಮುಂದೆ ಬರ್ತೇನೆ.

ನಟನಾಗಿ

ನಾನು ಕೆಲಸ ಮಾಡಿರೋ‌ ಸಿನೆಮಾಗಳಲ್ಲೇ ಚಿಕ್ಕ- ಪುಟ್ಟ ಪಾತ್ರಗಳನ್ನ ಮಾಡ್ತಾ ಬಂದಿದೀನಿ. ಕಡ್ಡಿಪುಡಿ, ಕೆಂಡಸಂಪಿಗೆ, ಹಾಗೇ ಯೋಗರಾಜ್ ಭಟ್ ನಿರ್ದೇಶನ ‘ಪಂಚತಂತ್ರ’ ಸಿನೆಮಾದಲ್ಲೂ ಅಭಿನಯಿಸಿದ್ದೇನೆ.

ನನ್ನಿಷ್ಟದ‌ ಸಿನೆಮಾ-ನಿರ್ದೇಶಕ-ಸಂಭಾಷಣಾಕಾರ

ನನಗೆ ವೈಯಕ್ತಿಕವಾಗಿ ಇಷ್ಟವಾಗುವ ಸಿನೆಮಾಗಳು ತುಂಬಾ ಇದಾವೆ. ಅದ್ರಲ್ಲಿ ಇತ್ತೀಚೆಗೆ ಕೆಲವು ವರ್ಷಗಳ ಹಿಂದೆ ತೆರೆಕಂಡು ಜನಮಾನಸದಲ್ಲಿ ಉಳಿದ, ಎದ್ದೇಳು ಮಂಜುನಾಥ ಹಾಗೂ ತಿಥಿ ಸಿನೆಮಾ. ನನಗೆ ಕೆಲಸ ಕಲಿಸಿಕೊಟ್ಟ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್, ಅವರಿಬ್ಬರೂ ನನ್ನ ಗುರು ಸಮಾನರು. ಸೂರಿ ಸರ್ ಇಂದ ಶಿಸ್ತು, ಭಟ್ ಸರ್ ಇಂದ ಶ್ರದ್ಧೆ ಕಲಿತೆ. ಹಾಗೇ ತೆಲುಗು‌ ಸಿನೆಮಾ‌ ಸಂಭಾಷಣಾಕಾರರಾದ ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಕನ್ನಡದಲ್ಲಿ‌ ಪ್ರಶಾಂತ್ ರಾಜಪ್ಪ ನನಗೆ ತುಂಬಾ ಕಾಡಿರೋ ಸಂಭಾಷಣಾಕಾರರು.

ಕನ್ನಡದಲ್ಲಿ‌ ತುಂಬಾ ಒಳ್ಳೆಯ ಕತೆಗಳು ಇದಾವೆ. ಕತೆಗಾರರೂ ಇದ್ದಾರೆ. ಅವರನ್ನ ಗುರುತಿಸಿ ಒಂದು ಅವಕಾಶಮಾಡಿಕೊಟ್ಟರೆ ನಮ್ಮ ಕನ್ನಡ ಸಿನೆಮಾರಂಗ ಇನ್ನೂ ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವೇ ಇಲ್ಲ.

ಕನ್ನಡವೇ ಸತ್ಯ ; ಕನ್ನಡವೇ ನಿತ್ಯ
ಇಂತಿ‌ ನಿಮ್ಮ ಮಾಸ್ತಿ

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 week ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ2 weeks ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ3 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ3 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending