ಸಿನಿ ಸುದ್ದಿ
ನಾಗರಹಾವಿನ ಆರ್ಭಟ ಚಿತ್ರದುರ್ಗದಲ್ಲಿ ಹೇಗಿತ್ತು ಗೊತ್ತಾ ?
ಚಿತ್ರದುರ್ಗ: ಏಳುಸುತ್ತಿನ ಚಿತ್ರದುರ್ಗದ ಕೋಟೆಯಲ್ಲಿ 1972 ರಲ್ಲಿ ಚಿತ್ರೀಕರಣಗೊಂಡು ನಾಡಿನಾದ್ಯಂತ ಖ್ಯಾತಿಗಳಿಸಿದ ನಾಗರಹಾಾವು ಚಿತ್ರ 46 ವರ್ಷಗಳ ನಂತರ ಡಿ.ಟಿ.ಎಸ್.ಸೌಂಡ್ನೊಂದಿಗೆ ಮತ್ತೆ ತೆರೆಯ ಮೇಲೆ ಪ್ರದರ್ಶನಗೊಳ್ಳುತ್ತಿರುವುದರಿಂದ ಡಾ.ವಿಷ್ಣುವರ್ಧನ್ರವರ ಆದರ್ಶ ಬಳಗದವರು ಬಸವೇಶ್ವರ ಚಿತ್ರಮಂದಿರದ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಿನಿಮಾಸ್ಕೋಪ್, ರೀಕಲರ್ ಹಾಗೂ ರೀರೆಕಾರ್ಡ್ನೊಂದಿಗೆ ಮತ್ತೆ ಪ್ರದರ್ಶನಗೊಳ್ಳುತ್ತಿರುವ ನಾಗರಹಾವು ಚಿತ್ರ ವೀಕ್ಷಣೆಗೆ ಕೆಲವರು ಗ್ರಾಮೀಣ ಪ್ರದೇಶಗಳಿಂದ ಆಟೋಗಳಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಭಾವಚಿತ್ರವನ್ನು ಕಟ್ಟಿಕೊಂಡು ಆಗಮಿಸಿದ್ದರು. ಬೃಹಧಾಕಾರವಾದ ಕಟೌಟ್ಗೆ ದೊಡ್ಡಗಾತ್ರದ ಹೂಮಾಲೆಗಳನ್ನು ಹಾಕಲಾಗಿತ್ತು. ಅಭಿಮಾನಿಗಳು ವಿಷ್ಣು ಕಟೌಟ್ಗೆ ಕ್ಷೀರಾಭಿಷೇಕ ಮಾಡಿ ಕುಂಕುಮ ಇಟ್ಟರು.
ಡಾ.ವಿಷ್ಣುವರ್ಧನ್ರವರ ಆದರ್ಶ ಬಳಗದ ರಾಜ್ಯಾಧ್ಯಕ್ಷ ಸಿ.ಕೆ.ಗೌಸ್ಪೀರ್, ಉಪಾಧ್ಯಕ್ಷ ಪುಟ್ಟಣ್ಣ, ರಾಜ್ಕುಮಾರ್, ಸಂಘಟನಾ ಕಾರ್ಯದರ್ಶಿ ಪುನಿತ್ ಕಬ್ಬಿಣದ, ಬಾಬು, ಶೇಖ್ಕಲೀಂ, ಶೇಕ್ ಅಹಮದ್, ಜಿಕ್ರಿಯ, ಚಳ್ಳಕೆರೆ ತಿಪ್ಪೇಶಿ, ರಘು, ರಾಜು ಈ ಸಂದರ್ಭದಲ್ಲಿ ಹಾಜರಿದ್ದರು. ಡಾ.ವಿಷ್ಣುವರ್ಧನ್ ಅಭಿಮಾನಿ ಮೈಸೂರಿನ ಶಶಿಕುಮಾರ್ ನಾಗರಹಾವು ಚಿತ್ರ ವೀಕ್ಷಣೆಗೆ ಆಗಮಿಸಿದ್ದರು.
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು