ರಾಜಕೀಯ
ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಜೀವನ ಮತ್ತು ಪ್ರಮುಖ ಘಟನೆಗಳು
ಹಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಶನಿವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 66 ವರ್ಷದ ಜೇಟ್ಲಿ ಬಿಜೆಪಿಯ ಹಿರಿಯ ಮುಖಂಡರು. ತಳಹಂತದಿಂದಲೂ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೂಲತ: ವಕೀಲರಾಗಿದ್ದ ಜೇಟ್ಲಿ ತಮಗೆ ನೀಡಿದ ಹುದ್ದೆ ಹಾಗು ವೃತ್ತಿಗೆ ನ್ಯಾಯ ಒದಗಿಸಿದರು.
ವಕೀಲ ವೃತ್ತಿಯಿಂದ ಕೇಂದ್ರದ ಉನ್ನತ ಖಾತೆಗಳನ್ನು ಅಲಂಕರಿಸಿದ ಅರುಣ್ ಜೇಟ್ಲಿ ಬಹುಮುಖ ವ್ಯಕ್ತಿತ್ವ ಉಳ್ಳವರು. 28, ಡಿಸೆಬರ್ 1952ರಲ್ಲಿ ದೆಹಲಿಯಲ್ಲಿ ಜನಿಸಿದ ಅರುಣ್ ಜೇಟ್ಲಿ, ಅವರ ತಂದೆ ಮಹಾರಾಜ್ ಕಿಶನ್ ಕೂಡ ವಕೀಲರಾಗಿದ್ದರು. ತಾಯಿ ರತನ್ ಪ್ರಭಾ ಅವರು ಮಗನಿಗೆ ಉತ್ತಮ ಸಂಸ್ಕಾರ ನೀಡಿ ಭವಿಷ್ಯ ರೂಪಿಸುವಲ್ಲಿ ಶ್ರಮಿಸಿದರು.
ಎಬಿವಿಪಿ ಸೇರುವ ಮೂಲಕ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾದರು. 1973ರಲ್ಲಿ ಜಯಪ್ರಕಾಶ್ ನಾರಾಯಣ ಮತ್ತು ರಾಜ್ ನರೈನ್ ಅವರು ಪ್ರಾರಂಭಿಸಿದ ಭ್ರಷ್ಟಾಚಾರದ ವಿರುದ್ಧ ಚಳುವಳಿಯಲ್ಲೂ ಕೂಡ ಪ್ರಮುಖ ಪಾತ್ರ ವಹಿಸಿದರು. 1982ರಲ್ಲಿ ಜಮ್ಮು ಮತ್ತು ಕಾಶ್ಮೀರದ ಆಗಿನ ಹಣಕಾಸು ಸಚಿವ ಗಿರ್ಧಾರಿಲಾಲ್ ದೋಗ್ರಾ ಅವರ ಪುತ್ರಿ ಸಂಗೀತಾ ಅವರನ್ನು ವಿವಾಹವಾದರು. ರೋಹನ್ ಮತ್ತು ಸೋನಾಲಿ ಇಬ್ಬರ ಮಕ್ಕಳ ಸುಂದರ ಕುಟುಂಬ ಇವರದ್ದಾಗಿತ್ತು.
ಹೋರಾಟ ಮನೋಭಾವದ ಜೇಟ್ಲಿ
ಅರುಣ್ ಜೇಟ್ಲಿ ಹೋರಾಟ ಮನೋಭಾವದವರು. ನಾಗರಿಕ ಹಕ್ಕುಗಳ ಸಮಿತಿಯಲ್ಲಿ ಸಕ್ರಿಯರಾದವರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲು ಸೇರಿದ್ದರು. ಜೈಲಿನಿಂದ ಹೊರ ಬಂದ ಮೇಲೆ ಜನಸಂಘ ಸೇರಿದರು.
1977ರಲ್ಲಿ ಕಾಂಗ್ರೆಸ್ ಪಕ್ಷ ಸೋಲುಂಡಾಗ ಲೋಕ್ ತಾಂತ್ರಿಕ ಯುವ ಮೋರ್ಚಾದ ಕನ್ವಿನರ್ ಆಗಿ ಜೇಟ್ಲಿ ಕಾರ್ಯನಿರ್ವಹಿಸಿದ್ದಾರೆ. ಎಬಿವಿಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಹಲವು ವಿದ್ಯಾರ್ಥಿ ಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಇನ್ನು ತಮ್ಮ ವಕೀಲಿ ವೃತ್ತಿಯಲ್ಲೂ ಕೂಡ ತಮ್ಮದೇ ಛಾಪು ಮೂಡಿಸಿದ ವ್ಯಕ್ತಿತ್ವ ಜೇಟ್ಲಿ ಅವರದ್ದು. ಸುಪ್ರಿಂ ಕೋರ್ಟ್ ಸೇರಿ ದೇಶದ ಹತ್ತು ಹಲವು ಕೋರ್ಟ್ ಗಳಲ್ಲಿ ಕಾನೂನು ಅಭ್ಯಾಸ ಮಾಡಿದ್ದಾರೆ. ಬೋಫೋರ್ಸ್ ಹಗರಣದ ತನಿಖೆಗಾಗಿ ಹಲವಾರು ದಾಖಲೆಗಳನ್ನು ಸಂಗ್ರಹಿಸಿದ್ದರು. ಇನ್ನು ಭಾರತದಲ್ಲಿನ ಭ್ರಷ್ಟಾಚಾರ ಮತ್ತು ಅಪರಾಧಕ್ಕೆ ಸಂಬಂಧಿಸಿದಂತೆ ಇಂಡೋ ಬ್ರಿಟೀಷ್ ಕಾನೂನು ವೇದಿಕೆಯ ಮುಂದೆ ಪ್ರಬಂಧ ಮಂಡಿಸುವ ಮೂಲಕ ಜನಮೆಚ್ಚುಗೆಯನ್ನು ಪಡೆದಿದ್ದರು. ಮಹಿಳಾ ಮೀಸಲಾತಿ ಮಸೂದೆಯಲ್ಲಿ ಜೇಟ್ಲಿ ಪಾತ್ರ ಪ್ರಮುಖವಾಗಿತ್ತು. ಸಂವಿಧಾನದ 84ನೇ ತಿದ್ದುಪಡಿಗಳನ್ನು 2026ವರೆಗೆ ಸ್ಥಗಿತಗೊಳಿಸುವ ಮೂಲಕ ದಿಟ್ಟತನ ಪ್ರದರ್ಶಿಸಿದ್ದರು.
ಪರಿಸರ ಸ್ನೇಹಿ ಜೇಟ್ಲಿ
ಅರುಣ್ ಜೇಟ್ಲಿ ವಕೀಲ ವೃತ್ತಿಯ ಜತೆಗೆ ಹಲವು ಖಾತೆಗಳಿಗೆ ನ್ಯಾಯಸಮ್ಮತವಾಗಿ ಆಡಳಿತ ನಡೆಸಿದವರು. ತಮ್ಮ ಅಧಿಕಾರದ ಅವಧಿಯಲ್ಲಿ ಪರಿಸರಕ್ಕೆ ಹಾನಿ ನೀಡುವ ಬಹುರಾಷ್ಟ್ರೀಯ ಕಂಪನಿ ವಿರುದ್ಧ ಸಮರ ಸಾರಿದ್ದರು. ಹೀಗಾಗಿ ಜೇಟ್ಲಿ ವ್ಯಕ್ತಿತ್ವ ಪರಿಸರ ಸ್ನೇಹಿಯಾಗಿತ್ತು.
ಜೇಟ್ಲಿ ಸಾಗಿ ಬಂದ ಹಾದಿ
ಎಬಿವಿಪಿ ಮೂಲಕ ವಿದ್ಯಾರ್ಥಿ ಸಂಘಟನೆಗೆ ಧುಮುಕಿ ಸಾಕಷ್ಟು ಹುದ್ದೆಗಳನ್ನು ನಿಭಾಯಿಸಿದರು. ನಂತರ ಜನಸಂಘ ಸೇರಿ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ನಂತರ ಬಿಜೆಪಿಯಲ್ಲಿಯೂ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು.
1990ರಲ್ಲಿ ದೆಹಲಿ ಹೈಕೋರ್ಟ್ ನಲ್ಲಿ ಹಿರಿಯ ವಕೀಲರಾಗಿಯೂ ಕಾರ್ಯನಿರ್ವಹಿಸಿದ್ದರು.
1999ರಲ್ಲಿ ವಾಜಪೇಯಿ ಸರ್ಕಾರದಲ್ಲಿ ರಾಜ್ಯ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ, 2000 ರಲ್ಲಿ ಕಾನೂನು, ನ್ಯಾಯ ಮತ್ತು ಕಂಪನಿ ವ್ಯವಹಾರ ಖಾತೆಯನ್ನು ಹೆಚ್ಚುವರಿಯಾಗಿ ನಿಭಾಯಿಸಿದರು. ಇದೇ ಸಂದರ್ಭದಲ್ಲಿ ಸಾರಿಗೆ ವಿಭಾಗ ವಿಭಜನೆಯಾದ ನಂತರ ಪ್ರಥಮ ಬಂದರು ಸಚಿವರಾದ ಕೀರ್ತಿ ಜೇಟ್ಲಿ ಅವರಿಗೆ ಸಲ್ಲುತ್ತದೆ. ತಮ್ಮ ರಾಜಕೀಯ ಜೀವನದಲ್ಲಿ ಬಹುತೇಕ ನೇರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಕಡಿಮೆ.
ಆದರೆ ಜೇಟ್ಲಿ ರಾಜಕೀಯ ಜೀವನದಲ್ಲಿ 2016 ನವಂಬರ್ 9ರಂದು 500, 1,000 ಮುಖಬೆಲೆಯ ನೋಟು ನಿಷೇಧದ ಸಂದರ್ಭದಲ್ಲಿ ಅರುಣ್ ಜೇಟ್ಲಿ ಹಣಕಾಸು ಸಚಿವರಾಗಿದ್ದರು. ಹೀಗಾಗಿ ನೋಟ್ ಬ್ಯಾನ್ ನಂತಹ ತೀರ್ಮಾನ ಸ್ವಪಕ್ಷದ ಸಮರ್ಥನೆಗೆ ಕಾರಣವಾದರೆ ವಿರೋಧ ಪಕ್ಷದ ತೀವ್ರ ವಿರೋಧಕ್ಕೆ ಕಾರಣವಾಯಿತು.
1998ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧಿವೇಶನಕ್ಕೆ ಭಾರತ ಸರ್ಕಾರ ಪರ ಪ್ರತಿನಿಧಿಯಾಗಿದ್ದರು. ರಾಜ್ಯ ಸಭೆಯ ಪ್ರತಿಪಕ್ಷದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರತಿಪಕ್ಷ ಸ್ಥಾನ ಅಲಂಕರಿಸುವ ಮೂಲಕ ವಕೀಲಿ ವೃತ್ತಿ ನಿಲ್ಲಿಸಿದರು.
2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ಅನಾರೋಗ್ಯದ ಕಾರಣ ತಾವು ಸಕ್ರಿಯರಾಗದಿರುವ ಬಗ್ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಲವು ತಿಂಗಳಿಂದ ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಏಮ್ಸ್ ನಲ್ಲಿ ಮೂತ್ರ ಪಿಂಡ ಕಸಿ ಮಾಡಿಸಿಕೊಂಡಿದ್ದರು. ಇನ್ನು ನ್ಯೂಯಾರ್ಕ್ ನಲ್ಲೂ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ ಶನಿವಾರ ಕೊನೆಯುಸಿರೆಳೆದರು.
ಕೃಪೆ : ಡೆಮಾಕ್ರಟಿಕ್ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243