Connect with us

ರಾಜಕೀಯ

ಬಹುಜನ ಸಮಾಜ ಪಕ್ಷ ನಿಜಕ್ಕೂ ಬಹು ಜನರನ್ನು ಒಳಗೊಂಡಿದೆಯೇ..?

Published

on

  • ವಿವೇಕಾನಂದ. ಹೆಚ್.ಕೆ

ಭಾರತದಲ್ಲಿ ಅಸ್ತಿತ್ವದಲ್ಲಿರುವ ಬಹುಮುಖ್ಯ ರಾಷ್ಟ್ರೀಯ ಪಕ್ಷಗಳಲ್ಲಿ ಒಂದು. ಕಾಂಗ್ರೆಸ್‌, ಬಿಜೆಪಿ, ಕಮ್ಯುನಿಸ್ಟ್ ಪಕ್ಷಗಳ ನಂತರ ಹೆಚ್ಚು ಜನಪ್ರಿಯತೆ ಗಳಿಸಿರುವ ಪಕ್ಷ. ಉತ್ತರ ಪ್ರದೇಶದಲ್ಲಿ ಮೂರು ಬಾರಿ ಅಧಿಕಾರವನ್ನು ನಡೆಸಿದೆ ಮತ್ತು ಕೆಲವು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರದ ಭಾಗವೂ ಆಗಿದ್ದಿತು.ಕಾನ್ಷಿರಾಂ ಎಂಬುವವರು ಬಹು ಶ್ರಮದಿಂದ ಕಟ್ಟಿದ ಮತ್ತು ಈಗ ಮಾಯಾವತಿಯವರು ಅಧ್ಯಕ್ಷರಾಗಿರುವ ಪಕ್ಷವದು.ಅಂಬೇಡ್ಕರ್ ಮತ್ತು ಅವರ ವಿಚಾರಗಳ ಆಧಾರದ ಮೇಲೆ ಈ ಪಕ್ಷ ಹೋರಾಟ ಮಾಡುತ್ತಿದೆ ಎಂಬುದು ಅದರ ಅನುಯಾಯಿಗಳ ಸಮರ್ಥನೆ ಮತ್ತು ಮೂಲ ಆಶಯ.

ಹಾಗಾದರೆ ಇದು ವಾಸ್ತವವೇ ?

ಅದರ ಒಟ್ಟು ಇತಿಹಾಸದ ರಾಜಕೀಯ ನಡೆಗಳನ್ನು ಗಮನಿಸಿದಾಗ ನಮ್ಮ ಕರ್ನಾಟಕದ ಜನತಾದಳ ಪಕ್ಷದಂತೆ ಬಹುತೇಕ ಅಧಿಕಾರದ ಲಾಭ ನಷ್ಟಗಳನ್ನು ನೋಡಿಕೊಂಡು ಎಲ್ಲಾ ಕಡೆಯೂ ಸಲ್ಲುವ ಅನುಕೂಲಕರ ನಿರ್ಧಾರಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ.

ತನ್ನ ಸಿದ್ದಾಂತಗಳಿಗೆ ವಿರುದ್ಧ ನಿಲುವಿನ ಬಿಜೆಪಿಯ ಜೊತೆಗೂ, ತನ್ನ ಮೇಲೆ ಹಲ್ಲೆ ಮಾಡಿದ ಪ್ರಬಲ ಯಾದವ ಜಾತಿಯ ಸಮಾಜವಾದಿ ಪಕ್ಷದ ಜೊತೆಗೂ, ಕೆಲವು ಕಡೆ ತಾವು ವಿರೋಧಿಸುವ ಗಾಂಧಿ ತತ್ವದ ನೆಲೆಯ ಕಾಂಗ್ರೆಸ್ ಪಕ್ಷದ ಜೊತೆಯೂ ಸೇರುತ್ತಾರೆ.

ಅಂದರೆ ಅಂಬೇಡ್ಕರ್ ಶೋಷಿತರ ಜಾಗೃತಿಗಾಗಿ ಘೋಷಿಸಿದ ಶಿಕ್ಷಣ ಸಂಘಟನೆ ಹೋರಾಟ ಎಂಬ ತ್ರಿವಳಿ ಸಂದೇಶಕ್ಕೆ ಎಲ್ಲವೂ ಅಧಿಕಾರಕ್ಕಾಗಿ ಎಂಬುದನ್ನು ಹೊಸದಾಗಿ ಸೇರ್ಪಡೆಯಾದಂತೆ ಆಗುತ್ತದೆ. ಅಂಬೇಡ್ಕರ್ ರಾಜಕೀಯ ಅಧಿಕಾರದ ಪ್ರಾಮುಖ್ಯತೆ ಬಗ್ಗೆ ಖಂಡಿತ ಹೇಳಿದ್ದಾರೆ. ಅದರ ಜೊತೆಗೆ ಮಾರ್ಗವೂ ಮುಖ್ಯವಾಗಬೇಕಾಗುತ್ತದೆ.

ವಿಶಾಲ ತಳಹದಿಯ ಮೇಲೆ ಒಂದು ಪಕ್ಷ ಮತ್ತು ಸಂಘಟನೆ ದೊಡ್ಡದಾಗಿ ಬೆಳೆಯಬೇಕಾದರೆ ದೀರ್ಘಕಾಲದಲ್ಲಿ ಹೇಗೆಂದರೆ ಹಾಗೆ ತತ್ ಕ್ಷಣದ ಲಾಭವನ್ನು ನೋಡಬಾರದು. ಒಂದು ಪಕ್ಷದ ಕಾರ್ಯಕರ್ತರಲ್ಲಿ ಮತ್ತು ಸಾರ್ವಜನಿಕರಲ್ಲಿ ಕೂಡ ಆ ಪಕ್ಷದ ಬಗ್ಗೆ ಅದರ ನ್ಯಾಯ ನೀತಿ ಧರ್ಮದ ಬಗ್ಗೆ ಸಹಜ ಗೌರವ ಮೂಡುವಂತಿರಬೇಕು. ಅದರಲ್ಲಿ ಬಿಎಸ್ಪಿ ವಿಫಲವಾಗಿದೆ ಎಂದು ಹೇಳಬಹುದು.

ಮಾಯಾವತಿ ಹೊರತುಪಡಿಸಿ ಮತ್ತೊಂದಿಷ್ಟು ನಾಯಕರಗಳನ್ನು ಅವರ ಮಟ್ಟಕ್ಕೆ ಬೆಳೆಸಲು ಪ್ರಯತ್ನಿಸಲಿಲ್ಲ ಅಥವಾ ಉದ್ದೇಶಪೂರ್ವಕವಾಗಿಯೇ ನಿರ್ಲಕ್ಷಿಸಿದಂತೆ ಕಾಣುತ್ತದೆ . ಅಂಬೇಡ್ಕರ್ ವಾದದ ಹಿನ್ನೆಲೆಯ ಅನೇಕ ಯುವ ಮತ್ತು ಅನುಭವಿ ಸಂಘಟಕರನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸದೆ ಪರ್ಯಾಯ ನಾಯಕತ್ವದ ಅಸೂಯೆಯಿಂದ ಅವರಿಗೆ ಪ್ರೋತ್ಸಾಹ ನೀಡಲಿಲ್ಲ.

ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಸಿದ್ಧವಾಗುತ್ತಿರುವಾಗಲೇ ರಾಜಕೀಯ ಪ್ರವೇಶಿಸಿದ ವಿದ್ಯಾವಂತೆ ಮತ್ತು ಬುದ್ದಿವಂತೆಯಾದ ಮಾಯಾವತಿಯರ ಬಹುದೊಡ್ಡ ಸಮಸ್ಯೆ ಸರ್ವಾಧಿಕಾರಿ ಮನೋಭಾವ, ಅಧಿಕಾರ ಲಾಲಸೆ ಮತ್ತು ಹೊಂದಾಣಿಕೆಯ ಮನೋಭಾವದ ಕೊರತೆ. ಜೊತೆಗೆ ಆಡಳಿತಾತ್ಮಕ ದಕ್ಷತೆಯೂ ಕಡಿಮೆ.

ಸರಿಯೋ ತಪ್ಪೋ ಆದರೆ ಜನರ ಬೆಂಬಲವನ್ನು ನಿರಂತರವಾಗಿ ಗಳಿಸಿದ ದೆಹಲಿಯ ಶೀಲಾ ದೀಕ್ಷಿತ್, ಪಶ್ಚಿಮ ಬಂಗಾಳದ ಜ್ಯೋತಿ ಬಸು, ಗುಜರಾತಿನ ನರೇಂದ್ರ ಮೋದಿ, ಒರಿಸ್ಸಾದ ನವೀನ್ ಪಾಟ್ನಾಯಕ್ ಮುಂತಾದವರ ಸಾಲಿನಲ್ಲಿ ನಿಲ್ಲುವ ಪ್ರಯತ್ನ ಮಾಡಲಿಲ್ಲ.

ಅಧಿಕಾರಕ್ಕೆ ಏರುವುದು ಒಂದು ಸಾಧನೆಯಾದರೆ ಅದನ್ನು ನಿರಂತರವಾಗಿ ಉಳಿಸಿಕೊಳ್ಳುವುದು ಸಹ ಮುಖ್ಯವಾಗುತ್ತದೆ. ಅದರಲ್ಲೂ ಒಬ್ಬ ದಲಿತ ಹೆಣ್ಣು ಮಗಳು ತಮಗೆ ಸಿಕ್ಕಿದ ಅಪರೂಪದ ಅವಕಾಶವನ್ನು ಇನ್ನಷ್ಟು ಜನರಿಗೆ ಹತ್ತಿರವಾಗುವ ರೀತಿ ಬಳಸಬಹುದಿತ್ತು.ಹೌದು, ಅದಕ್ಕೆ ಹಲವಾರು ಕಾರಣಗಳು ಇರಬಹುದು. ಆದರೆ ಜನರಿಗೆ ಅನುಕೂಲಕರ ಕೆಲಸ ಮಾಡುವಾಗ ಖಂಡಿತ ಜನರಿಂದ ಪ್ರೋತ್ಸಾಹ ಸಿಕ್ಕೇ ಸಿಗುತ್ತದೆ.

ನಮ್ಮ ಜನರ ಮನಸ್ಥಿತಿ ಹೇಗಿದೆ ಎಂದರೆ, ನೀವು ಸಾರ್ವಜನಿಕವಾಗಿ ಒಳ್ಳೆಯ ಉದ್ದೇಶಕ್ಕೇ ಆದರೂ ಸ್ವಲ್ಪ ಕೆಟ್ಟ ಅಥವಾ ತಪ್ಪು ನಿರ್ಧಾರ ಕೈಗೊಂಡರೇ ಜನ ಅದನ್ನೇ ಉದಾಹರಣೆಯಾಗಿ ತೆಗೆದುಕೊಂಡು ತಮ್ಮ ವೈಯಕ್ತಿಕ ಸ್ವಾರ್ಥ ಸಾಧನೆಗೆ ಇದನ್ನೇ ನಿದರ್ಶನವಾಗಿ ಉಪಯೋಗಿಸಿಕೊಳ್ಳುತ್ತಾರೆ.

ಇದೇ ಬಹುಮುಖ್ಯವಾಗಿ ಇಂದು ಅಂಬೇಡ್ಕರ್ ವಾದದ ಬಹುಜನ ಚೆಲ್ಲಾಪಿಲ್ಲಿಯಾಗಿ ಒಂದೊಂದು ಪಕ್ಷ ಅಥವಾ ಸಂಘಟನೆಯ ದಾರಿ ಹಿಡಿದಿದ್ದಾರೆ. ಸಹಜವಾಗಿ ಅದರ ವಿರೋಧಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಬಹುಜನರ ಪಕ್ಷ ಆಂತರಿಕವಾಗಿಯೂ ಬಹುಜನರ ಪಕ್ಷವಾಗೇ ಇರಬೇಕೆ ಹೊರತು ಹೆಸರಿಗೆ ಮಾತ್ರ ಇದ್ದು ಸಂಘಟನೆಯಲ್ಲಿ ನೆಪ ಮಾತ್ರದ ನಡವಳಿಕೆ ಇದ್ದರೆ ಖಂಡಿತ ಬಹುಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ.

ಜೊತೆಗೆ ಹೋರಾಟ ಸಿದ್ದಾಂತಗಳೊಂದಿಗೆ ಆಡಳಿತಾತ್ಮಕ ದಕ್ಷತೆ ಸಹ ಮುಖ್ಯವಾಗುತ್ತದೆ. ಅಧಿಕಾರಕ್ಕೆ ಬರುವವರೆಗೂ ಚಳವಳಿ ಮುಖ್ಯ. ಬಂದ ನಂತರ ಆಡಳಿತ ಮಾಡುವುದು ಅತಿಮುಖ್ಯ ಇಲ್ಲದಿದ್ದರೆ ಜನ ಬಹುಬೇಗ ನಿರಾಸೆಗೊಳಗಾಗಿ ಪಕ್ಷ ತಿರಸ್ಕರಿಸಲ್ಪಡುತ್ತದೆ. ಆಗ ಪಕ್ಷ ಬೆಳೆಸಲು ಅಡ್ಡ ದಾರಿ ಹಿಡಿಯುವ ಅವಶ್ಯಕತೆ ಬರುತ್ತದೆ. ಅದು ಒಂದು ಸಿದ್ಧಾಂತದ ಅವಸಾನಕ್ಕೆ ದಾರಿ ಮಾಡಿಕೊಡುತ್ತದೆ.

ಬಹುಶಃ ಇಂದು ಕವಲು ದಾರಿಯಲ್ಲಿ ಸಾಗುತ್ತಿರುವ ಬಹುಜನ ಸಮಾಜ ಪಕ್ಷದ ಆತ್ಮಾವಲೋಕನಕ್ಕೆ ಇದು ಸರಿಯಾದ ಸಮಯವೆಂದು ಭಾವಿಸಬಹುದು.ಯಾವುದೇ ವ್ಯಕ್ತಿ ಪಕ್ಷ ಸಂಘಟನೆ ಸಿದ್ಧಾಂತ ಸಾಮಾಜಿಕ ಮೌಲ್ಯಗಳನ್ನು ಸದಾ ಪ್ರತಿನಿಧಿಸುವಂತಿರಬೇಕು. ಅದರ‌ ಸ್ವಾರ್ಥದ ನಡೆಯನ್ನು ಜನ ಗಮನಿಸುತ್ತಿರುತ್ತಾರೆ. ಅಧಿಕಾರವೇ ಎಲ್ಲವೂ ಅಲ್ಲ. ಅದರಲ್ಲೂ ಶೋಷಿತ ಸಮುದಾಯಗಳ ಒಂದು ಪಕ್ಷ ಅತ್ಯಂತ ಶುದ್ದ ಪ್ರಾಮಾಣಿಕ ದೂರದೃಷ್ಟಿಯ ನಿಲುವುಗಳನ್ನು ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಪರ್ಯಾಯ ವ್ಯವಸ್ಥೆ ಇರುವುದಕ್ಕಿಂತ ಮತ್ತಷ್ಟು ಉತ್ತಮವಾಗಬೇಕು. ದೇಶದ ಸಮಗ್ರ ಅಭಿವೃದ್ಧಿಗೆ ಇದು ಬಹಳ ಮುಖ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 weeks ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ2 weeks ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ3 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ3 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ3 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ3 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ3 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ3 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ3 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ3 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending