ರಾಜಕೀಯ
ಅತೃಪ್ತ ಶಾಸಕರು ಸಿದ್ದು ಭೇಟಿ ಮಾಡಿದ್ದಾದ್ರೂ ಏಕೆ.? ಇಲ್ಲಿದೆ ಅದರ ಕಂಪ್ಲೀಟ್ ಡೀಟೆಲ್ಸ್ ಓದಿ..!
ಸುದ್ದಿದಿನ, ಬೆಂಗಳೂರು : ಎಂಟಿಬಿ ನಾಗರಾಜ್, ಡಾ.ಸುಧಾಕರ, ಜೊತೆಗೆ ಸಚಿವ ಜಮೀರ್ ಅಹಮ್ಮದ್ ಅವರು ಸಿದ್ದರಾಮಯ್ಯರನ್ನು ಅವರ ನಿವಾಸ ಕಾವೇರಿಯಲ್ಲಿ ಭೇಟಿಯಾದರು. ನಂತರ ಸಿದ್ದು ನಿವಾಸದಿಂದ ಹೊರಬಂದ ಎಂಟಿಬಿ ನಾಗರಾಜ್ ಅವರು”ಪಕ್ಷದವರು ಯಾವ ಭರವಸೆಯನ್ನು ನನಗೆ ನೀಡಿಲ್ಲ. ಹೈಕಮಾಂಡ್ ಇದೆ ಮಾತಾಡೋಣ ಅಂದಿದ್ದಾರೆ. ನನಗೆ ಅಸಮಧಾನ ಇದ್ದೇ ಇದೆ. ಸರ್ಕಾರದಲ್ಲಿ ಪಾರದರ್ಶಕತೆ ಇಲ್ಲ.ತಾರತಮ್ಯ ಮಾಡಲಾಗ್ತಿದೆ. ಎಲ್ಲಿಯೂ ಹೋಗಲ್ಲ.ಕಾದು ನೋಡೋಣ. ಹೈಕಮಾಂಡ್ ಗೊತ್ತಲ್ಲಾ ? ಅಷ್ಟು ಸುಲಭವಾಗಿ ಒಪ್ಪುತ್ತಾ ? ಬೇಸರದಿಂದಲೇ ಸಿದ್ದರಾಮಯ್ಯ ನಿವಾಸದಿಂದ ಕಾಲ್ಕಿತ್ತರು. ಹಾಗೇ ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿಯಾಗ್ತಿಲ್ಲ, ಅನುದಾನ ಸಿಗ್ತಿಲ್ಲ. ಈ ಬಗ್ಗೆ ಬೇಸರ ಇತ್ತು. ನನಗೆ ಮಂತ್ರಿ ಸ್ಥಾನ ವಿಚಾರ, ನೋಡೋಣ ಅಂದಿದ್ದಾರೆ. ನೋಡೋಣ ಎಂದು ಬೇಸರ ವ್ಯಕ್ತ ಪಡಿಸಿದರು.
ಶಾಸಕಾಂಗ ಸಭೆಗೂ ಮುನ್ನ ಅತೃಪ್ತರನ್ನ ಕರೆದು ಮಾತನಾಡಿಸಿದ ಮಾಜಿ ಸಿಎಂ ಸಿದ್ದು, ಕೆಲ ದಿನಗಳ ಹಿಂದೆ ವೇಣುಗೋಪಾಲ ಜೊತೆ ಚರ್ಚೆ ಮಾಡಿದ್ದರು ಎಂಟಿಬಿ ನಾಗರಾಜ್. ನಿಮ್ಮ ಸಮಸ್ಯೆ ಏನೇ ಇದ್ರೂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಎಂದು ಸೂಚಿಸಿದ್ದರು ವೇಣುಗೋಪಾಲ ಅವರು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ ಎಂಟಿಬಿ ನಾಗರಾಜ್ ಹಾಗೂ ಸುಧಾಕರ್. ಸಂಜೆ ಎಲ್ಲಿ ಸಭೆಗೆ ಗೈರಾಗಿ ಬಿಟ್ಟಾರು ಅನ್ನೋ ಭೀತಿಯಿಂದ ಕಾವೇರಿಗೆ ಕರೆಸಿಕೊಂಡು ಮಾತನಾಡಿಸಿದರು ಸಿದ್ದು.
ನಾಗರಾಜ್ ಡಿಕೆಶಿ ಭೇಟಿ
ನಂತರ ಡಿ.ಕೆ.ಶಿ ಭೇಟಿಯಾಗಿ ಚರ್ಚೆ ನಡೆಸಿ ಹೊರಬಂದ ಎಂ.ಟಿ ಬಿ ನಾಗರಾಜ್ ಅವರು ನಾನು ಸಚಿವ ಸ್ಥಾನ ದ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿಲ್ಲ. ಕ್ಷೇತ್ರದ ಬಗ್ಗೆ ಸಿದ್ದರಾಮಯ್ಯ, ಡಿಕೆಶಿ ಬಳಿ ಚರ್ಚೆ ಆಗಿದೆ. ನಮ್ಮಲ್ಲಿ ಅನುದಾನ ಮತ್ತು ಅಭಿವೃದ್ಧಿ ವಿಚಾರದಲ್ಲಿ ಅಸಮಾಧಾನ ಇದೆ. ಸಚಿವ ಸ್ಥಾನ ದ ಬಗ್ಗೆ ಅಸಮಾಧಾನ ಇಲ್ಲ. ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ. ವೇಣುಗೋಪಾಲ್ ಸಿದ್ದರಾಮಯ್ಯ ಭೇಟಿ ಮಾಡು ಅಂತ ಹೇಳಿದ್ರು ಭೇಟಿ ಮಾಡಿದೆ ಅಷ್ಟೆ ಎಂದರು.
ಸಿದ್ದು ಭೇಟಿಯಾದ ರೇವಣ್ಣ
ಸಿದ್ದರಾಮಯ್ಯ ನಿವಾಸ ಕಾವೇರಿಗೆ ಆಗಮಿಸಿದ ಚಿವ ಹೆಚ್ ಡಿ ರೇವಣ್ಣ ಅವರ ಭೇಟಿ ಕುತೂಹಲ ಮೂಡಿಸಿತು. ಸಿದ್ದರಾಮಯ್ಯ ಭೇಟಿ
ಡಿ ಬಳಿಕ ಎಚ್ ಡಿ ರೇವಣ್ಣ ಅವರು “ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದರಲ್ಲಿ ಯಾವುದೇ ವಿಶೇಷತೆ ಇಲ್ಲ. ಕರ್ಟಸಿ ವಿಸಿಟ್ ಅಷ್ಟೇ. ರಾಜಕೀಯ ಎಲ್ಲ ಸಿಎಂ ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ. ಆಸ್ಪತ್ರೆಯಿಂದ ಡಿಸ್ಚರ್ಜ್ ಆದ ಬಳಿಕ ಡಿಕೆಶಿ ಭೇಟಿ ಮಾಡಿರಲಿಲ್ಲ.ಹೀಗಾಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಕಾಂಗ್ರೆಸ್ ಅತೃಪ್ತ ಶಾಸಕರ ಸಿಎಂ ನಡೆ ವಿರುದ್ಧ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವ ಅಸಮಾಧಾನ ವೂ ಇಲ್ಲ ಎಲ್ಲ ನಡೆಯುತ್ತೆ ಬಿಡಿ ಎಂದರು”.
ವಿಧಾನ ಪರಿಷತ್ ಗೆ ರಮೇಶ್ ಗೌಡ ಅಭ್ಯರ್ಥಿ ಮಾಡಿದ್ದ ವಿಚಾರವದು ಪಕ್ಷದ ನಿರ್ಧಾರ ಅಷ್ಟೇ. ಮಧು ಬಂಗಾರಪ್ಪ ಅಭ್ಯರ್ಥಿ ಮಾಡಬೇಕು ಅಂತ ನಿರ್ಧಾರ ಆಗಿತ್ತು.ಆದ್ರೆ ಹಿಂಬಾಗಿಲಿನ ರಾಜಕಾರಣ ಮಾಡಲ್ಲ ಅಂತ ತಿರಸ್ಕಾರ ಮಾಡಿದ್ರು. ಹೀಗಾಗಿ ಕೊನೆಯ ಕ್ಷಣದಲ್ಲಿ ರಮೇಶ್ ಗೌಡ ಅವರನ್ನ ಕಣಕ್ಕೆ ಇಳಿಸಿದ್ವಿ ಎಂದರು.
ಪರಿಷತ್ ಚುನಾವಣೆ ಮೂರು ಅಭ್ಯರ್ಥಿಗಳು ಅವಿರೋಧ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ನಿಂದ ನಸೀರ್ ಅಹ್ಮದ್, ಎಂಸಿ ವೇಣುಗೋಪಾಲ್, ಜೆಡಿಎಸ್ ನಿಂದ ಹೆಚ್ ಎಂ ರಮೇಶ್ ಗೌಡ ಅವರು ಅವಿರೋಧವಾಗಿ ಆಯ್ಕೆಯಾದವರು ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243