Connect with us

ರಾಜಕೀಯ

ಬಲಪಂಥೀಯ ದಾಳಿಯ ಕ್ರೋಡೀಕರಣಕ್ಕೆ ಎದುರಾಗಿ ವರ್ಗಪರ್ಯಾಯವನ್ನು ಆಧರಿಸಿದ ಎಡಪಂಥೀಯ ಪ್ರತಿಧಾಳಿ –ಇದೀಗ ದೇಶದಲ್ಲಿನ ಹೊಸಧ್ರುವೀಕರಣ : ಸೀತಾರಾಂಯೆಚುರಿ

Published

on

17ನೇ ಲೋಕಸಭಾ ಚುನಾವಣೆಗಳಲ್ಲಿ ಬಲಪಂಥೀಯರಿಗೆ ಒಂದು ದೊಡ್ಡ ವಿಜಯಸಿಕ್ಕಿದೆ, ಇದು ಕಳೆದ ಐದು ವರ್ಷಗಳಲ್ಲಿ ನಡೆಸಿದ ಬಲಪಂಥೀಯದಾಳಿಗಳ ಕ್ರೋಡೀಕರಣ, ಎಡಶಕ್ತಿಗಳು ದೊಡ್ಡ ಹಿನ್ನಡೆ ಅನುಭವಿಸಿವೆ, ಆದರೆ ಎಡಪಂಥೀಯರು, ಕೆಲವರು ಹೇಳುವ ಹಾಗೆ ನಿಶ್ಶಸ್ತ್ರರಾಗಿಲ್ಲ, ಅಥವ ನಿರ್ಮೂಲಗೊಂಡಿಲ್ಲ., ನೆನಪಿಟ್ಟುಕೊಳ್ಳಿ, ಬಲಪಂಥೀಯ ರಾಜಕೀಯ ದಾಳಿಯನ್ನು ಎಡಪಂಥೀಯ ರಾಜಕೀಯ ಪ್ರತಿಧಾಳಿ ಮಾತ್ರವೇ ಎದುರಿಸಬಲ್ಲದು. ಈ ಪ್ರತಿದಾಳಿ ಒಂದು ವರ್ಗ ಪರ್ಯಾಯವನ್ನು, ವರ್ಗರಾಜಕೀಯವನ್ನು ಆಧರಿಸಿದೆ. ಕೇಂದ್ರಸಮಿತಿಯಲ್ಲಿಸಿಪಿಐ(ಎಂ) ಈಗಇದನ್ನೇಮಾಡಲುನಿರ್ಧರಿಸಿದೆ” ಎಂದುಸೀತಾರಾಮ್‍ ಯೆಚುರಿ, ಸಿಪಿಐ(ಎಂ) ಪ್ರಧಾನಕಾರ್ಯದರ್ಶಿ ಹೇಳಿದ್ದಾರೆ.

ಅವರು ಜೂನ್‍ 7ರಿಂದ 9 ರವರೆಗೆ ನಡೆದ ಸಿಪಿಐ(ಎಂ)ನ ಕೇಂದ್ರ ಸಮಿತಿಯ ಚರ್ಚೆಗಳು, ನಿರ್ಧಾರಗಳ ಬಗ್ಗೆ ಪತ್ರಿಕಾ ಸಮ್ಮೇಳನವನ್ನು ಉದ್ದೇಶಿಸಿ ಮಾತಾಡುತ್ತಿದ್ದರು. ಎಡಶಕ್ತಿಗಳು ಹಿಮ್ಮೆಟ್ಟುತ್ತಿಲ್ಲ, ಪ್ರತಿದಾಳಿ ನಡೆಸುತ್ತವೆ. ಇದೀಗ ಎಡಶಕ್ತಿಗಳು ಸೆಟೆದುನಿಲ್ಲುವ ಸಮಯ, ಆಧುನಿಕ ಭಾರತದ ಮೌಲ್ಯಗಳನ್ನು ಎತ್ತಿಹಿಡಿಯಲು, ನಮ್ಮ ಸಂವಿಧಾನದ ಆಶ್ವಾಸನೆಗಳನ್ನು ರಕ್ಷಿಸಿಕೊಳ್ಳಲು ಮತ್ತು ಜನಗಳ ಪ್ರಜಾಪ್ರಭುತ್ವ ಹಕ್ಕುಗಳು ಹಾಗೂ ನಾಗರಿಕ ಸ್ವಾತಂತ್ರ್ಯಗಳನ್ನು ರಕ್ಷಿಸಿಕೊಳ್ಳಲು ಸೆಟೆದುನಿಲ್ಲುವ ಸಮಯ. ಬಲಪಂಥಬಲಗೊಂಡಾಗ, ಎಡಪಂಥವೂ ಶಕ್ತಿಶಾಲಿಯಾಗಬೇಕಾಗುತ್ತದೆ. ಇದೀಗ ದೇಶದಲ್ಲಿನ ಹೊಸಧ್ರುವೀಕರಣ, ಮೆದುಹಿಂದುತ್ವವು ಕಟ್ಟಾಹಿಂದುತ್ವಕ್ಕೆ ಉತ್ತರವಾಗದು, ಎಡಪಂಥಮಾತ್ರವೇ ಏಕೈಕ ಆಯ್ಕೆ ಎಂದು ಯೆಚುರಿ ಹೇಳಿದರು.

ಸಿಪಿಐ(ಎಂ) ಕೇಂದ್ರಸಮಿತಿ ಈ ಮೂರು ದಿನಗಳ ಸಭೆಯಲ್ಲಿ 17ನೇ ಲೋಕಸಭಾ ಚುನಾವಣೆಗಳ ಫಲಿತಾಂಶದ ಪ್ರಾಥಮಿಕ ವಿಮರ್ಶೆ ನಡೆಸಿದೆ. ಬಿಜೆಪಿ ಕಳೆದ ಐದುವರ್ಷಗಳಲ್ಲಿ ಹರಿಯಬಿಟ್ಟಿರುವ ಬಲಪಂಥೀಯ ದಾಳಿ ಈ ಜನಾದೇಶದೊಂದಿಗೆ ಕ್ರೋಡೀಕರಣಗೊಂಡಿದೆ ಎಂದು ವಿಶ್ಲೇಷಿಸಿರುವ ಕೇಂದ್ರಸಮಿತಿ, ಪ್ರತಿಪಕ್ಷಗಳ ವಿಫಲತೆ, ಎಡಶಕ್ತಿಗಳ ತೀವ್ರಪರಾಭವದ ಪ್ರಾಥಮಿಕ ವಿಮರ್ಶೆಯನ್ನು ನಡೆಸಿತು.

ಪಕ್ಷದ ಸ್ವತಂತ್ರಶಕ್ತಿ ಮತ್ತು ರಾಜಕೀಯ ಮಧ್ಯಪ್ರವೇಶದ ಸಾಮರ್ಥ್ಯಗಳು ದುರ್ಬಲಗೊಳ್ಳುತ್ತಲೇ ಇವೆ ಎಂದು ಗಮನಿಸಿದ ಸಿಪಿಐ(ಎಂ) ಕೇಂದ್ರಸಮಿತಿ ಇಂತಹ ಒಂದು ಪ್ರವೃತ್ತಿ ಆಳಗೊಳ್ಳಲು ಕಾರಣವಾಗಿರುವ ವಿವಿಧ ಅಂಶಗಳನ್ನು ಚರ್ಚಿಸಿತು. ಮತ್ತು ಈ ಅವನತಿಯನ್ನು ತಡೆಯಲು ಹಾಗೂ ತಿರುಗುಮುರುಗುಗೊಳಿಸಲು ಪಕ್ಷವು ಕೈಗೊಳ್ಳುವ ತಕ್ಷಣದ ಸಂಘಟನಾತ್ಮಕ ಮತ್ತು ರಾಜಕೀಯ ಕ್ರಮಗಳನ್ನು ರೂಪಿಸಿತು.

ಈ ನಿರ್ಣಾಯಕ ಬಿಜೆಪಿ ವಿಜಯವು ಖಂಡಿತವಾಗಿಯೂ ಒಡ್ಡಲಿರುವ ಸವಾಲುಗಳನ್ನು ಎದುರಿಸಲು ದೇಶ ಮತ್ತು ಜನತೆ ಸಿದ್ಧರಾಗಬೇಕಾಗಿದೆ ಎಂಬ ತೀರ್ಮಾನಕ್ಕೆ ಕೇಂದ್ರಸಮಿತಿ ಬಂದಿದೆ. ಅದು ಇಂತಹ ನಾಲ್ಕು ಮುಖ್ಯಸವಾಲುಗಳನ್ನು ಗಮನಿಸಿ, ಅವನ್ನು ಎದುರಿಸುವ ಬಗೆಗಳನ್ನೂ ಗುರುತಿಸಿದೆ.

ಪಕ್ಷಕ್ಕೆ ಆಗಿರುವ ಹಿನ್ನಡೆಯಿಂದಾಗಿ ಉಂಟಾಗಿರುವ ಗಂಭೀರ ಸನ್ನಿವೇಶವನ್ನು ಎದುರಿಸಲು ಕೇಂದ್ರಸಮಿತಿ, ಪಕ್ಷದ ಕೊಲ್ಕತಾಪ್ಲೀನಂನ ಮಹತ್ವದ ನಿರ್ಣಯಗಳ ಜಾರಿಯ ವಿಮರ್ಶೆಯೂ ಸೇರಿದಂತೆ ಹಲವಾರು ಕ್ರಮಗಳನ್ನು ಮತ್ತು ಕಾರ್ಯಭಾರಗಳನ್ನು ಅಂಗೀಕರಿಸಿದೆ.

ಕೇಂದ್ರಸಮಿತಿಯ ಸಭೆ ಚುನಾಣಾ ಸುಧಾರಣೆಗಳ, ಅದರಲ್ಲೂ ಚುನಾವಣಾ ಆಯೋಗದ ಸುಧಾರಣೆಗಳ ಅಗತ್ಯ ಮತ್ತು ಇಲೆಕ್ಟ್ರಾನಿಕ್ಮತಯಂತ್ರಗಳ ಬಗ್ಗೆ ಎದ್ದಿರುವ ಸಂದೇಹಗಳನ್ನೂ ಚರ್ಚಿಸಿತು.

ಚುನಾವಣೆಗಳ ನಂತರ ಮುಂಬಯಿಯಲ್ಲಿ ಖ್ಯಾತ ಜಾತ್ಯತೀತಚಿಂತಕ ಡಾ. ರಾಮ್‍ ಪುನಿಯಾನಿಯವರಿಗೆ ಬೆದರಿಕೆಗಳು ಬರುತ್ತಿರುವುದನ್ನು ಕೇಂದ್ರಸಮಿತಿ ಖಂಡಿಸಿದೆ, ಹಾಗೂ ಚುನಾವಣಾ ಫಲಿತಾಂಶಗಳು ಪ್ರಕಟವಾಗುವ ಹಿಂದಿನ ದಿನವೇ ಜಾತಿಕಿರುಕುಳ-ದ್ವೇ಼ಷ ಪ್ರಚಾರಕ್ಕೆ ಬಲಿಯಾದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಪಾಯಲ್ ‍ ತಡ್ವಿ ಆತ್ಮಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿದೆ.

ಈ ಸಭೆಯನಂತರ ಪ್ರಕಟಿಸಿರುವ ಸಿಪಿಐ(ಎಂ) ಕೇಂದ್ರಸಮಿತಿಯ ಹೇಳಿಕೆಯ ಪೂರ್ಣಪಾಟವನ್ನು ಈ ಮುಂದೆಕೊಡಲಾಗಿದೆ.

ಲೋಕ ಸಭಾಚುನಾವಣೆಗಳ ಪ್ರಾಥಮಿಕ ಪರಾಮರ್ಶೆ

ಬಿಜೆಪಿ ವಿಜಯ

17ನೇ ಲೋಕಸಭಾಚುನಾವಣೆಗಳ ತೀರ್ಪು ಬಿಜೆಪಿ ನೇತೃತ್ವದ ಎನ್‍.ಡಿ.ಎ. ಗೆ 2014ರಲ್ಲಿ ಗೆದ್ದುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಮತ್ತು ಹೆಚ್ಚಿನ ಮತಗಳಿಕೆಯನ್ನು ಕೊಟ್ಟಿದೆ. ಇದು ಅವರ ಪರವಾದ ಒಂದು ನಿರ್ಣಾಯಕ ಜನಾದೇಶವಾಗಿದೆ. ಬಿಜೆಪಿ ಕಳೆದ ಐದುವರ್ಷಗಳಲ್ಲಿ ಹರಿಯಬಿಟ್ಟಿರುವ ಬಲಪಂಥೀಯ ದಾಳಿ ಈ ಜನಾದೇಶದೊಂದಿಗೆ ಕ್ರೋಡೀಕರಣಗೊಂಡಿದೆ.

ಪುಲ್ವಾಮ ಮತ್ತು ಬಾಲಾಕೋಟ್‍ ನಂತರ ಜನಗಳ ನಡುವೆ ಕಥನವನ್ನು ಕಳೆದ ಐದುವರ್ಷಗಳಲ್ಲಿ ಎನ್.ಡಿ.ಎ. ಸರಕಾರ ಹೇರಿದ ಹತ್ತು-ಹಲವು ಜೀವನಾಧಾರದ ಪ್ರಶ್ನೆಗಳಿಂದ ಪಲ್ಲಟಗೊಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸಂಕುಚಿತ ಕೋಮುವಾದಿ ರಾಷ್ಟ್ರವಾದಿ ಅಬ್ಬರದ ಹೊಸ ಕಥನಕ್ಕೆ ಹಲವಾರು ಅಂಶಗಳ ಮೂಲಕ ಮೋದಿಯ ವ್ಯಕ್ತಿತ್ವವನ್ನು ಕಟ್ಟಿದ್ದು ಇದಕ್ಕೆ ನೆರವಾಯಿತು. ಮಾಧ್ಯಮಗಳ ವಿಭಾಗಗಳು ಈ ಪ್ರಾಜೆಕ್ಟಿನಲ್ಲಿ ಪಾಲುದಾರರಾದವು. ಹಿಂದೆಂದೂ ಕಾಣದಂತಹ ಹಣಬಲದ ಬಳಕೆ ಈ ಚುನಾವಣೆಗಳಲ್ಲಿ ಕಂಡುಬಂತು. ಚುನಾವಣಾ ಬಾಂಡುಗಳ ಮೂಲಕ ಅಗಾಧ ಮೊತ್ತಗಳು ಬಿಜೆಪಿಗೆ ವರ್ಗಾಯಿಸಲ್ಪಟ್ಟವು. ಚುನಾವಣಾಆಯೋಗದ ಪಾತ್ರವೂತನ್ನಕೊಡುಗೆನೀಡಿತು.

ಪ್ರತಿಪಕ್ಷಗಳು

ಹೆಚ್ಚಿನ ಪ್ರತಿಪಕ್ಷಗಳು, ತಮಿಳುನಾಡು, ಆಂಧ್ರಪ್ರದೇಶ, ಇನ್ನು ಕೆಲವು ರಾಜ್ಯಗಳನ್ನು ಬಿಟ್ಟರೆ ಬೇರೆಡೆಗಳಲ್ಲಿ ದೊಡ್ಡ ನಷ್ಟವನ್ನು ಕಂಡಿವೆ. ಪ್ರತಿಪಕ್ಷಗಳು, ನಿರ್ದಿಷ್ಟವಾಗಿ ಕಾಂಗ್ರೆಸ್‍, ಚುನಾವಣೆಗಳ ಮೊದಲು ಮುಂದಿಟ್ಟ ಜಾತ್ಯತೀತ ಪ್ರತಿಪಕ್ಷಗಳ ಐಕ್ಯತೆಯನ್ನು ಪ್ರಸ್ತುತ ಪಡಿಸುವಲ್ಲಿ ವಿಫಲವಾದವು. ಕೋಮುವಾದಿದಾಳಿಗೆ ಎದುರಾಗಿ ಜಾತ್ಯತೀತತೆಯನ್ನು ರಕ್ಷಿಸಿಕೊಳ್ಳುವ ಒಂದು ಪ್ರಚಾರಾಂದೋಲನವನ್ನು ನಡೆಸಲಿಲ್ಲ. ಕಟ್ಟಾಹಿಂದುತ್ವಕ್ಕೆ ಮೆದುಹಿಂದುತ್ವ ಉತ್ತರವಲ್ಲ. ಹಿಂದುತ್ವ ಮತ್ತು ಜಾತ್ಯತೀತತೆಯ ನಡುವಿನ ಸೈದ್ಧಾಂತಿಕ ಸಮರವನ್ನು ಶಕ್ತಿಯುತವಾಗಿ ನಡೆಸಲಿಲ್ಲ.

ಸಿಪಿಐ(ಎಂ) ಮತ್ತು ಎಡಶಕ್ತಿಗಳಿಗೆ ತೀವ್ರಪರಾಭವ

ಸಿಪಿಐ(ಎಂ) ಮತ್ತು ಎಡಶಕ್ತಿಗಳು ಒಂದು ತೀವ್ರ ಹಿನ್ನಡೆಯನ್ನು, ವಿಶೇಷವಾಗಿ ಕೇರಳ, ಪಶ್ಚಿಮಬಂಗಾಲ ಮತ್ತು ತ್ರಿಪುರಾದಲ್ಲಿನ ತಮ್ಮ ಬಲಿಷ್ಟನೆಲೆಗಳಲ್ಲಿ, ಅನುಭವಿಸಿವೆ.ಪಶ್ಚಿಮಬಂಗಾಲ ಮತ್ತು ತ್ರಿಪುರಾ ಈ ಎರಡರಲ್ಲೂ ಚುನಾವಣೆಗಳು ತೀವ್ರಭಯೋತ್ಪಾದನೆ ಮತ್ತು ಹಿಂಸಾಚಾರದ ವಾತಾವರಣದಲ್ಲಿ ನಡೆದವು. ಇಂತಹ ಹಿಂಸಾಚಾರದಲ್ಲಿ ಪಶ್ಚಿಮಬಂಗಾಲದಲ್ಲಿ ಐವರು ಮತ್ತು ತ್ರಿಪುರಾದಲ್ಲಿ ಒಬ್ಬರು ಸಿಪಿಐ(ಎಂ) ಕಾರ್ಯಕರ್ತರು ಜೀವ ಕಳಕೊಂಡಿದ್ದಾರೆ.

ತ್ರಿಪುರಾ ಪಶ್ಚಿಮಕ್ಷೇತ್ರ ಮತ್ತು ಪಶ್ಚಿಮಬಂಗಾಲದ ಡೈಮಂಡ್‍ ಹಾರ್ಬರ್‍ ಕ್ಷೇತ್ರದಲ್ಲಿ ಬಹುಪಾಲು ಮತಗಟ್ಟೆಗಳಲ್ಲಿ ಚುನಾವಣಾ ಮೋಸನಡೆದಿದೆ, ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ದೂಷಿತಗೊಂಡಿದೆ. ಚುನಾವಣಾ ಆಯೋಗಕ್ಕೆ “ಮುಕ್ತ ಮತ್ತು ನ್ಯಾಯಯುತ ಮತದಾನ”ಗಳನ್ನು ನಡೆಸುವ ತನ್ನ ಆಶ್ವಾಸನೆಯನ್ನು ಜಾರಿಗೊಳಿಸಲು ಆಗಲಿಲ್ಲ.

ಈ ಮೂರು ರಾಜ್ಯಸಮಿತಿಗಳು ನಡೆಸಿರುವ ಪ್ರಾಥಮಿಕ ವಿಮರ್ಶೆಗಳನ್ನು ಕೇಂದ್ರಸಮಿತಿ ಚರ್ಚಿಸಿತು. ಒಂದು ವಿವರವಾದ ಮತಗಟ್ಟೆವಾರು ವಿಮರ್ಶೆ ನಡೆಯುತ್ತಿದ್ದು, ಅದರ ಆಧಾರದಲ್ಲಿ ಅಂತಿಮ ಅನುಭವಗಳ ಮೌಲ್ಯಮಾಪನ ಮಾಡಲಾಗುವುದು.

ಈ ಚುನಾವಣೆಗಳಲ್ಲಿ, ಬಿಜೆಪಿ ಮತ್ತು ಅದರ ಮಿತ್ರರನ್ನು ಸೋಲಿಸಬೇಕು, ಸಂಸತ್ತಿನಲ್ಲಿ ಎಡಪಕ್ಷಗಳ ಬಲವನ್ನು ಹೆಚ್ಚಿಸಬೇಕು ಮತ್ತು ಕೇಂದ್ರದಲ್ಲಿ ಒಂದು ಪರ್ಯಾಯ ಜಾತ್ಯತಿತ ಸರಕಾರವನ್ನು ಸ್ಥಾಪಿಸಲು ಅನುವುಮಾಡಿಕೊಡಬೇಕು ಎಂದು ಸಿಪಿಐ(ಎಂ) ಕರೆನೀಡಿತ್ತು. ಈ ಧ್ಯೇಯೋದ್ದೇಶಗಳನ್ನು ಈ ಜನಾದೇಶ ನಿರಾಕರಿಸಿದೆ.

ಕೇರಳದಲ್ಲಿ ಮತದಾರರು ಒಂದು ಪರ್ಯಾಯ ಜಾತ್ಯತೀತ ಸರಕಾರವನ್ನು ರಚಿಸುವಲ್ಲಿ ಕಾಂಗ್ರೆಸ್‍ ಗೇ ಸಾಧ್ಯತೆ ಹೆಚ್ಚು ಎಂದು ಭಾವಿಸಿದರು. ಇದರ ಫಲಿತಾಂಶವಾಗಿ ಜಾತ್ಯತೀತ ಒಲವಿನ ಜನಗಳು ಮತ್ತು ಅಲ್ಪಸಂಖ್ಯಾತರು ಅವರಿಗೆ ಮತ ನೀಡುವಂತಾಯಿತು. ಶಬರಿಮಲೆ ಕುರಿತ ಸುಪ್ರಿಂಕೋರ್ಟ್‍ ತೀರ್ಪನ್ನು ಜಾರಿಗೊಳಿಸಲು ಬದ್ಧವಾಗಿದ್ದ ಎಲ್‍.ಡಿ. ಎಫ್‍. ಸರಕಾರದ ಸರಿಯಾದ ನಿಲುವನ್ನು ಕುರಿತಂತೆ ಬಿಜೆಪಿ ಮತ್ತು ಯುಡಿಎಫ್ ಆಸ್ತಿಕ ಜನ ವಿಭಾಗಗಳಲ್ಲಿ ಹಲವರಲ್ಲಿ ತಪ್ಪುಕಲ್ಪನೆಗಳನ್ನು ಸೃಷ್ಟಿಸಿದವು. ಈ ವಿಭಾಗಗಳನ್ನು ಮತ್ತೆ ನಮ್ಮತೆಕ್ಕೆಗೆ ತರಲು ಪಕ್ಷವು ಸರ್ವಪ್ರಯತ್ನಗಳನ್ನು ನಡೆಸುತ್ತದೆ.

ಪಶ್ಚಿಮಬಂಗಾಲದಲ್ಲಿ ಚುನಾವಣೆಗಳು ಅತ್ಯಂತ ಧ್ರುವೀಕೃತ ವಾತಾವರಣದಲ್ಲಿ ನಡೆದಿವೆ. ಮಾಧ್ಯಮ ಒಂದು ಅವಳಿಕಥನವನ್ನು ಕಟ್ಟಿ ಟಿಎಂಸಿ ಮತ್ತು ಬಿಜೆಪಿ ನಡುವೆ ಇಂತಹ ಧ್ರುವೀಕರಣದಲ್ಲಿ ನೆರವಾಗುವಲ್ಲಿ ಒಂದು ದೊಡ್ಡಪಾತ್ರವನ್ನು ವಹಿಸಿತು. ಕೋಮುವಾದ ಪ್ರೇರಿತ ಪ್ರಚಾರವು ಮತದಾರರನ್ನು ಮತ್ತಷ್ಟು ಧ್ರುವೀಕರಿಸಿತು. ಟಿಎಂಸಿ ವಿರುದ್ಧ ಅಧಿಕಾರ ಸ್ಥ-ವಿರೋಧಿ ಭಾವನೆ ಬಹಳಗಟ್ಟಿಯಾಗಿತ್ತು. ಅದಕ್ಕೆ ಸಿಪಿಐ(ಎಂ) ಮತ್ತು ಎಡಶಕ್ತಿಗಳು ಪರ್ಯಾಯ ಎಂದು ಮತದಾರರು ಕಾಣಲಿಲ್ಲ, ಇದರಿಂದಾಗಿ ನಮ್ಮ ಪಾರಂಪರಿಕ ಬೆಂಬಲಿಗರಲ್ಲಿ ಒಂದು ವಿಭಾಗ ಪಲ್ಲಟಗೊಳ್ಳುವಂತಾಯಿತು. ಬಜೆಪಿ-ವಿರೋಧಿ, ಟಿಎಂಸಿ-ವಿರೋಧಿ ಮತಗಳನ್ನು ಗರಿಷ್ಟ ಪ್ರಮಾಣದಲ್ಲಿ ಕ್ರೋಡೀಕರಿಸುವ ಎಡಪಕ್ಷಗಳ ಪ್ರಸ್ತಾವವನ್ನು ಸ್ವೀಕರಿಸಲು ಕಾಂಗ್ರೆಸ್‍ ನಿರಾಕರಿಸಿದ್ದು ಈ ಅವಳಿ ಕಥನವನ್ನು ಗಟ್ಟಿಗೊಳಿಸಿತು.

ತ್ರಿಪುರಾದಲ್ಲಿ ಎರಡರಲ್ಲಿ ಒಂದು ಸ್ಥಾನದಲ್ಲಿ ಸುಮಾರಾಗಿ ಚುನಾವಣಾ ಮೋಸವೇ ನಡೆದಿದೆ. ಮೀಸಲು ಎಸ್‍.ಟಿ. ಕ್ಷೇತ್ರವನ್ನು ಬಿಜೆಪಿ ಗೆದ್ದಿದೆ, ಕಾಂಗ್ರೆಸ್‍ ಎರಡನೇ ಸ್ಥಾನಪಡೆದಿದೆ.

ಈ ಎರಡೂ ರಾಜ್ಯಗಳಲ್ಲಿ ಪಕ್ಷದಸಮಿತಿಗಳು ನಮ್ಮ ಪಾರಂಪರಿಕ ಬೆಂಬಲ ನೆಲೆಕುಗ್ಗುತ್ತಿರುವ ಬಗ್ಗೆ ಪ್ರಾಮಾಣಿಕ ಮೌಲ್ಯಮಾಪನ ನಡೆಸುತ್ತಿವೆ ಮತ್ತು ಈ ವಿಭಾಗಗಳನ್ನು ಮತ್ತೆ ನಮ್ಮತೆಕ್ಕೆಗೆ ತರಲು ತುರ್ತುಕ್ರಮಗಳನ್ನು ರೂಪಿಸಲಾಗುವುದು.

ಈ ಬಲಿಷ್ಟ ನೆಲೆಗಳ ಹೊರಗೆ, ಸಿಪಿಐ(ಎಂ) ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಚುನಾವಣಾ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿದ್ದ ಎರಡೂಸ್ಥಾನಗಳನ್ನು ಗೆದ್ದುಕೊಂಡಿದೆ. ಬೇರೆಲ್ಲ ರಾಜ್ಯಗಳಲ್ಲಿ ಸಿಪಿಐ(ಎಂ) ಸ್ವತಂತ್ರವಾಗಿ ಸ್ಪರ್ಧಿಸಿತ್ತು. ಈ ಸ್ಥಾನಗಳಲ್ಲಿ, ಮಹಾರಾಷ್ಟ್ರದ ದಿಂಡೋರಿ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ 1,09,570 ಮತಗಳನ್ನು ಪಡೆದಿದೆ. ಒಡಿಶಾ ವಿಧಾನಸಭೆಯ ಚುನಾವಣೆಗಳಲ್ಲಿ ಸಿಪಿಐ(ಎಂ) ತನ್ನ ಬೊನೈ ಕ್ಷೇತ್ರವನ್ನು, ಕಳೆದ ಬಾರಿಗಿಂತ 20,000 ಹೆಚ್ಚುಮತಗಳನ್ನು (34.67%) ಗಳಿಸಿ ಉಳಿಸಿಕೊಂಡಿದೆ.

ಪಕ್ಷದ ಸ್ವತಂತ್ರ ಶಕ್ತಿ ಮತ್ತು ರಾಜಕೀಯ ಮಧ್ಯಪ್ರವೇಶದ ಸಾಮರ್ಥ್ಯಗಳು ದುರ್ಬಲಗೊಳ್ಳುತ್ತಲೇ ಇವೆ ಎಂದು ಕೇಂದ್ರಸಮಿತಿ ಗಮನಿಸಿತು. ಇಂತಹ ಒಂದು ಪ್ರವೃತ್ತಿ ಆಳಗೊಳ್ಳಲು ಕಾರಣವಾಗಿರುವ ವಿವಿಧ ಅಂಶಗಳನ್ನು ಕೇಂದ್ರ ಸಮಿತಿ ಚರ್ಚಿಸಿತು. ಮತ್ತು ಈ ಅವನತಿಯನ್ನು ತಡೆಯಲು ಹಾಗೂ ತಿರುಗುಮುರುಗುಗೊಳಿಸಲು ಪಕ್ಷವುಕೈಗೊಳ್ಳುವ ತಕ್ಷಣದ ಸಂಘಟನಾತ್ಮಕ ಮತ್ತು ರಾಜಕೀಯ ಕ್ರಮಗಳನ್ನು ರೂಪಿಸಿತು.

ಚುನಾವಣೆಗಳ ನಂತರದ ಸವಾಲುಗಳು

ಈ ನಿರ್ಣಾಯಕ ಬಿಜೆಪಿ ವಿಜಯವು ಖಂಡಿತವಾಗಿಯೂ ಒಡ್ಡಲಿರುವ ಸವಾಲುಗಳನ್ನು ಎದುರಿಸಲು ದೇಶ ಮತ್ತು ಜನತೆ ಸಿದ್ಧರಾಗಬೇಕಾಗಿದೆ ಎಂಬ ತೀರ್ಮಾನಕ್ಕೆ ಕೇಂದ್ರಸಮಿತಿ ಬಂದಿದೆ. ಕೇಂದ್ರಸಮಿತಿ ಇಂತಹ ನಾಲ್ಕು ಸವಾಲುಗಳನ್ನು ಗಮನಿಸಿದೆ.

  1. ಬಿಜೆಪಿ ಈ ನಿರ್ಣಾಯಕ ವಿಜಯವನ್ನು ಅಭೂತಪೂರ್ವ ಹಣಬಲ ಮತ್ತು ಅಂತರ್ರಾಷ್ಟ್ರೀಯ ಹಾಗೂ ದೇಶೀಕಾರ್ಪೊರೇಟ್ಗಳ ಸಂಪೂರ್ಣ ಬೆಂಬಲದಿಂದ ಗೆದ್ದಿದೆ. ದೊಡ್ಡವ್ಯವಹಾರಸ್ಥರು ಮತ್ತು ಶ್ರೀಮಂತರಿಗೆ ಅನುಕೂಲಕರವಾದ ಜನ-ವಿರೋಧಿ ಆರ್ಥಿಕ ಸುಧಾರಣೆಗಳ ದಿಕ್ಪಥವನ್ನು ಅದು ಇನ್ನಷ್ಟು ತೀವ್ರಗೊಳಿಸಲು ಬಹುಪಾಲು ಜನತೆಯ ಮೇಲೆ ಮತ್ತಷ್ಟು ಹೆಚ್ಚಿನ ಸಂಕಟಗಳನ್ನು ಖಂಡಿತವಾಗಿಯೂ ಹೇರುತ್ತದೆ. ಇಂತಹ ಆರ್ಥಿಕ ಹೊಡೆತಗಳ ವಿರುದ್ಧ ಹೋರಾಟಗಳಲ್ಲಿ ಗರಿಷ್ಟ ಜನವಿಭಾಗಗಳನ್ನು ಅಣಿನೆರೆಸುವಲ್ಲಿ ಪಕ್ಷವು ನೇತೃತ್ವ ನೀಡುತ್ತದೆ.
  2. ಹಿಂದುತ್ವ ಕೋಮುವಾದಿ ಧ್ರುವೀಕರಣದ ಕ್ರೋಡೀಕರಣದಿಂದಾಗಿ ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಹೆಚ್ಚೆಚ್ಚು ಹಲ್ಲೆಗಳು ನಡೆಯಲಿವೆ, ಇದರಿಂದಾಗಿ, ಈ ಜನ ವಿಭಾಗಗಳ ಭದ್ರತೆ ಮತ್ತು ಜೀವನಾಧಾರ ಕುರಿತ ಆತಂಕಗಳು ಇನ್ನಷ್ಟು ಹದಗೆಡಲಿವೆ. ನಮ್ಮ ಸಂವಿಧಾನದಲ್ಲಿ ಪ್ರತಿಷ್ಟಾಪಿಸಿರುವ ಜಾತ್ಯತೀತತೆಯನ್ನು ರಕ್ಷಿಸುವ ಮತ್ತು ಬಲಪಡಿಸುವ ಕೆಲಸವನ್ನು ಪಕ್ಷವು ಈ ಹೋರಾಟಗಳಲ್ಲಿ ಸಾಕಷ್ಟು ವಿಶಾಲ ಪ್ರಮಾಣದಲ್ಲಿ ಜನವಿಭಾಗಗಳನ್ನು ಸೆಳೆದುಕೊಂಡು ಕೈಗೆತ್ತಿಕೊಳ್ಳುತ್ತದೆ.
  3. ಕಳೆದ ಐದುವರ್ಷಗಳಲ್ಲಿ ಎಲ್ಲಸಂವಿಧಾನಿಕ ಅಧಿಕಾರ ಪಡೆದಿರುವ ಸಂಸ್ಥೆಗಳಲ್ಲಿ ನಡೆದಿರುವ ಆರೆಸ್ಸೆಸ್‍ ನ ನುಸುಳಿಕೆ ಇನ್ನಷ್ಟು ತೀವ್ರಗೊಳ್ಳುವುದು ಖಂಡಿತ. ಇದು, ಸಂವಿಧಾನಿಕ ಗಣತಂತ್ರವನ್ನು ಆರೆಸ್ಸೆಸ್‍ ನ ಸೈದ್ಧಾಂತಿಕ ಯೋಜನೆಯಾದ ‘ಹಿಂದೂರಾಷ್ಟ್ರ’ವಾಗಿ ಪರಿವರ್ತಿಸಲು ಅನುವುಮಾಡಿಕೊಳ್ಳುವುದಕ್ಕಾಗಿ, ಇಂತಹ ಸಂವಿಧಾನಿಕ ಪ್ರಾಧಿಕಾರಗಳನ್ನು ಶಿಥಿಲಗೊಳಿಸುವ ದಿಕ್ಕಿನಲ್ಲಿ ಸಾಗಲಿದೆ. ಎಲ್ಲ ಸಂವಿಧಾನಿಕ ಪ್ರಾಧಿಕಾರಗಳನ್ನು ರಕ್ಷಿಸುವ ಮತ್ತು ಬಲಪಡಿಸುವ ಕೆಲಸವನ್ನು ಸಿಪಿಐ(ಎಂ) ಈ ಹೋರಾಟಗಳಲ್ಲಿ ಜತೆಗೂಡಲು ಸಿದ್ಧವಿರುವ ಇತರ ಎಲ್ಲ ಶಕ್ತಿಗಳೊಂದಿಗೆ ಪ್ರತಿಪಾದಿಸುತ್ತದೆ.
  4. ಬಿಜೆಪಿಯ ವಿಜಯವು ಭಾರತದಲ್ಲಿ ಒಂದು “ಭದ್ರತಾ’ ಪ್ರಭುತ್ವವನ್ನು ಸ್ಥಾಪಿಸುವ ಅಗತ್ಯವಿದೆಯೆಂಬುದರತ್ತ ಗಮನ ಕೇಂದ್ರೀಕರಿಸಿತ್ತು. ಇದರಿಂದಾಗಿ ವ್ಯಕ್ತಿಗಳ ಹಕ್ಕುಗಳನ್ನು, ನಿರ್ದಿಷ್ಟವಾಗಿ ಭಿನ್ನಾಭಿಪ್ರಾಯದ ಹಕ್ಕನ್ನುತೀವ್ರವಾಗಿ ಮೊಟಕುಗೊಳಿಸಲಾಗುತ್ತದೆ. ಈಗಾಗಲೇ ಅನಿಷ್ಟಕಾರಿ ಸಂಕೇತಗಳು ಕಾಣುತ್ತಿವೆ. ಒಂದಿಲ್ಲೊಂದುನೆ ಪದಲ್ಲಿ ದಲಿತರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಖಾಸಗಿಪಡೆಗಳ ಹಲ್ಲೆಗಳು ತೀವ್ರಗೊಳ್ಳಲಿವೆ. ದುಡಿಯುವ ಜನಗಳ ಮತ್ತು ಧಾರ್ಮಿಕ, ಭಾಷಿಕ ಅಲ್ಪಸಂಖ್ಯಾತರ ಹಕ್ಕುಗಳು ದಾಳಿಗೆ ಒಳಗಾಗಲಿವೆ, ಅವರ ಬೇಟೆ ನಡೆಯಲಿದೆ.

ಈ ಸವಾಲುಗಳನ್ನುನೇರವಾಗಿ ಎದುರಿಸಲು, ಪ್ರಜಾಪ್ರಭುತ್ವ ಮತ್ತು ನಾಗರಿಕ ಸ್ವಾತಂತ್ರ್ಯಗಳನ್ನು ನೆಚ್ಚಿಕೊಂಡಿರುವ ಸಾಧ್ಯವಾದಷ್ಟು ವಿಶಾಲವಾದ ಜನವಿಭಾಗಗಳನ್ನು ಅಣಿ ನೆರೆಸುವಲ್ಲಿ ಸಿಪಿಐ(ಎಂ) ನೇತೃತ್ವವಹಿಸುತ್ತದೆ.

ಕಾರ್ಯಭಾರಗಳು

ಪಕ್ಷಕ್ಕೆ ಈ ಹಿನ್ನಡೆಯಿಂದಾಗಿ ಉಂಟಾಗಿರುವ ಗಂಭೀರ ಸನ್ನಿವೇಶವನ್ನು ಎದುರಿಸಲು ಕೇಂದ್ರಸಮಿತಿ ಹಲವಾರು ಕ್ರಮಗಳನ್ನು ಮತ್ತು ಕಾರ್ಯಭಾರಗಳನ್ನು ಅಂಗೀಕರಿಸಿದೆ.

  1. ಜನಗಳೊಂದಿಗೆ ಸಂಪರ್ಕವನ್ನು ಆಳಗೊಳಿಸಲು ಮತ್ತು ವಿವಿಧರಂಗಗಳ ಚಟುವಟಿಕೆಗಳನ್ನು ಬಲಪಡಿಸಲು ನಿರ್ದಿಷ್ಟಕ್ರಮಗಳನ್ನು ನಿರ್ಧರಿಸಲಾಗಿದೆ. ಜೀವನಾಧಾರದ ಪ್ರಶ್ನೆಗಳನ್ನು ಕುರಿತ ಹೋರಾಟಗಳನ್ನು, ಪರಿಶಿಷ್ಟಜಾತಿಗಳು, ಪರಿಶಿಷ್ಟ ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಸಾಮಾಜಿಕ ದಮನದ ವಿರುದ್ಧ ಹೋರಾಟಗಳೊಂದಿಗೆ ಸಮಗ್ರೀಕರಿಸಲು ನಿರ್ದಿಷ್ಟ ಗಮನವನ್ನು ಕೊಡಲಾಗುವುದು.
  2. ಪಕ್ಷವು 2015ರಲ್ಲಿ ಕೊಲ್ಕತಾಪ್ಲೀನಂನಲ್ಲಿ ಅಂಗೀಕರಿಸಿದ ಪಕ್ಷದ ಸಂಘಟನೆ ಮತ್ತು ಅದರ ಕಾರ್ಯವೈಖರಿ ಕುರಿತ ಮಹತ್ವದ ನಿರ್ಣಯಗಳ ಜಾರಿಯ ಒಂದು ಪರಾಮರ್ಶೆಯನ್ನು ನಡೆಸುತ್ತದೆ. ಆಗಸ್ಟ್ಕೊನೆಯ ವೇಳೆಗೆ ರಾಜ್ಯಗಳು ಈ ಪರಾಮರ್ಶೆಯನ್ನು ಪೂರ್ಣಗೊಳಿಸಲಿದ್ದು, ಇದರ ಆಧಾರದಲ್ಲಿ ಪಕ್ಷವನ್ನು ಬಲಿಷ್ಟಗೊಳಿಸುವ ಮತ್ತು ನಮ್ಮ ಕಾರ್ಯಕರ್ತರಲ್ಲಿ ಹುರುಪು ತುಂಬುವ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
  3. ಈ ಚುನಾವಣೆಗಳ ಅನುಭವವು ವ್ಯಾಪಕವಾದ ಚುನಾವಣಾ ಸುಧಾರಣೆಗಳ ಅಗತ್ಯವನ್ನು, ಚುನಾವಣಾ ಆಯೋಗವನ್ನು ಸುಧಾರಿಸಬೇಕಾದ ತುರ್ತನ್ನು ತೋರಿದೆ. ಚುನಾವಣಾ ಆಯುಕ್ತರುಗಳನ್ನು ತತ್ಕಾಲೀನ ಸರಕಾರ ನೇಮಿಸುವ ಬದಲು ಭಾರತದ ರಾಷ್ಟ್ರಪತಿಗಳ ನೇತೃತ್ವದ ಒಂದು ವ್ಯವಸ್ಥೆಯ ಮೂಲಕ ನೇಮಿಸುವಂತೆ ಮಾಡಲು, ಇದನ್ನು ಒಪ್ಪುವ ಎಲ್ಲ ರಾಜಕಿಯ ಅಭಿಪ್ರಾಯದವರನ್ನು ಸಿಪಿಐ(ಎಂ) ಅಣಿನೆರೆಸುತ್ತದೆ.
  4. ಇಲೆಕ್ಟ್ರಾನಿಕ್ಮತಯಂತ್ರ(ಇವಿಎಂ)ಗಳ ತಟಸ್ಥತೆಯ ಕುರಿತಂತೆ ಇರುವ ವಿವಿಧ ದೂರುಗಳು ಮತ್ತು ಈ ಯಂತ್ರಗಳಲ್ಲಿ ಕೈಯಾಡಿಸುವ ಸಾಧ್ಯತೆಯ ಬಗ್ಗೆ ಎದ್ದಿರುವ ಸಂದೇಹಗಳನ್ನು ಕುರಿತ ವರದಿಗಳ ಒಂದು ಅಧ್ಯಯನವನ್ನು ಸಿಪಿಐ(ಎಂ) ನಡೆಸುತ್ತದೆ ಮತ್ತು ಇತರ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸುತ್ತದೆ.

ಜಾತ್ಯತೀತ ಚಿಂತಕ ಡಾ. ರಾಮ್‍ ಪುನಿಯಾನಿಯವರಿಗೆ ಚುನಾವಣೆಗಳ ನಂತರ ಬೆದರಿಕೆಯ ಕರೆಗಳನ್ನು ಮಾಡಿರುವುದನ್ನು ಕೇಂದ್ರ ಸಮಿತಿ ಖಂಡಿಸಿದೆ.ಒಬ್ಬ ಯುವಪರಿಶಿಷ್ಟ ಬುಡಕಟ್ಟಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಡಾ. ಪಾಯಲ್‍ ತಡ್ವಿಯ ಆತ್ಮಹತ್ಯೆಯ ಬಗ್ಗೆ ಕೇಂದ್ರ ಸಮಿತಿ ತನ್ನ ದುಃಖವನ್ನು ವ್ಯಕ್ತಪಡಿಸಿದೆ. ಜಾತಿ ಕಿರುಕುಳಗಳು ಆಕೆಯನ್ನು ಆತ್ಮಹತ್ಯೆಯ ತ್ತತಳ್ಳಿದವು. ಮಹಾರಾಷ್ಟ್ರ ರಾಜ್ಯ ಸರಕಾರ ಅಪರಾಧಿಗಳ ವಿರುದ್ಧ ಮತ್ತು ಇಂತಹ ದ್ವೇಷಪ್ರಚಾರಗಳನ್ನು ಹುಟ್ಟಿಹಾಕುವವರ ವಿರುದ್ಧ ದೃಢವಾದ ಕ್ರಮವನ್ನು ಕೈಗೊಳ್ಳಬೇಕು.

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್| 9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 week ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ2 weeks ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending