ರಾಜಕೀಯ
ಹಿಂದುತ್ವ ಮತ್ತು ಬಿಜೆಪಿ
ಪ್ರಗ್ಯಾ ಸಿಂಗ್ ಠಾಕೂರ್ ಅನ್ನು ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿದ್ದು ನನಗೆ ತೀರಾ ಆಶ್ಚರ್ಯವಾಗಿಯೇನೂ ಕಾಣುತ್ತಿಲ್ಲ. ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೇಟು ನಿರಾಕರಿಸಿದ್ದು ಕೂಡ ದೊಡ್ಡ ಆಶ್ಚರ್ಯವೇನಲ್ಲ. ಇದು ಸಂಘ ಪರಿವಾರದಲ್ಲಿ ಸುಮಾರು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಯೋಜನಾ ಪ್ರಕ್ರಿಯೆ ಮತ್ತು ಅನುಷ್ಠಾನ.
ಜನಸಾಮಾನ್ಯ ಹಿಂದುತ್ವವಾದ ಮತ್ತು ಹಿಂದೂರಾಷ್ಟ್ರದ ಕಲ್ಪನೆಯನ್ನು ಪರಿಗಣಿಸುವಂತೆ ಮಾಡುವುದು ಅವರ ಮೊದಲ ಹಂತದ ಕೆಲಸವಾಗಿತ್ತು. ಸ್ವಾತಂತ್ರ್ಯದ ನಂತರದ ದಶಕಗಳಲ್ಲಿ ಅದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ. ಎಲ್ಲರನ್ನೂ ಒಳಗೊಳ್ಳುವ ಸಂವಿಧಾನ ಪ್ರೇರಿತ ರಾಷ್ಟ್ರೀಯತೆ ಬಹುಸಂಖ್ಯಾತ ಜನರಲ್ಲಿ ಸಾಮಾನ್ಯವಾಗಿಯೇ ಇತ್ತು. ಇಂಥಾ ವಾತಾವರಣದಲ್ಲಿ ವಾಜಪೇಯಿ, ಆಡ್ವಾಣಿ ಮತ್ತು ಜೋಷಿ ಸಾಕಷ್ಟು ಜಾಗರೂಕತೆಯಿಂದಲೇ ಕೆಲಸ ಮಾಡಬೇಕಿತ್ತು. ಇಲ್ಲದಿದ್ದರೆ ಅವರನ್ನಾಗಲೀ, ಅವರ ಸಿದ್ಧಾಂತವನ್ನಾಗಲೀ ಈಗ ಒಪ್ಪಿರುವವರೂ ಒಪ್ಪುವುದು ಕಷ್ಟವಿತ್ತು. ಈ ತಂಡ ಅದನ್ನು ಸಾಕಷ್ಟೂ ಯಶಸ್ವಿಯಾಗಿ ಮಾಡಿದ್ದಲ್ಲದೇ, ಬಲಪಂಥೀಯ ಸರ್ಕಾರಕ್ಕೂ ಕೂಡ ಒಂದು ಗಟ್ಟಿ ತಳಹದಿಯನ್ನು ಹಾಕಿಕೊಟ್ಟಿತು.
ಈ ತಳಹದಿ ದೊರೆತ ಮೇಲೆ ಹಿಂದುತ್ವವಾದವನ್ನು ಇನ್ನಷ್ಟು ನೆಲ-ಮನಕ್ಕಿಳಿಸಲು ಆ ತಲೆಮಾರಿಗಿಂತ ಹೆಚ್ಚು ಆಗ್ರಹಪೂರ್ವಕವಾಗಿ ಕೆಲಸ ಮಾಡುವ ತಲೆಮಾರಿನ ಅಗತ್ಯ ಕಾಣಿಸಿತು. ಹೀಗಾಗಿ ಮೋದಿಯನ್ನು ಮುನ್ನೆಲೆಗೆ ತರಲಾಯಿತು. ಜೋಷಿ, ಆಡ್ವಾಣಿಯವರನ್ನು ಬದಿಗೆ ಸರಿಸಿದ್ದು ಈ ಪ್ರಕ್ರಿಯೆಯೇ. ಮೋದಿಯವರ ಆಡಳಿತದಲ್ಲಿ ಪರಿವಾರ ಈ ಗುರಿಯತ್ತ ಸಾಕಷ್ಟು ದೂರ ಕ್ರಮಿಸುವುದು ಸಾಧ್ಯವಾಯಿತು ಎನ್ನುವುದನ್ನು ನಾವೆಲ್ಲ ಕಳೆದ ಐದು ವರ್ಷಗಳಲ್ಲಿ ಚೆನ್ನಾಗಿಯೇ ನೋಡಿದ್ದೇವೆ. ರಾಷ್ಟ್ರೀಯತೆಯ ವ್ಯಾಖ್ಯಾನವನ್ನು ಬದಲಿಸುವುದು, ದೇಶದ್ರೋಹವನ್ನು ಮರುವ್ಯಾಖ್ಯಾನಿಸುವುದು, ವಿಶ್ವವಿದ್ಯಾಲಯಗಳ ಮೇಲೆ, ವಿದ್ಯಾರ್ಥಿಗಳ ಮೇಲೆ ವೈಚಾರಿಕ ನಿರ್ಬಂಧ ಹೇರಿ, ತಮ್ಮದನ್ನು ಹೇರಲು ಮಾಡಿದಂಥಾ ಪ್ರಯತ್ನಗಳು, ದೇಶದ ಆಹಾರ ಪದ್ಧತಿಗಳ ಮೇಲೆ ಆದಂತಹ ಹಲ್ಲೆಗಳು, ಸಂವಿಧಾನವನ್ನು ನಿಕಶಕ್ಕೆ ಒಡ್ಡುವುದು, ಇನ್ನೂ ಮುಂತಾದವು ಕೇವಲ stray incidents ಅಲ್ಲ.
ಈಗ ಮೋದಿಯವರ “ಯಶಸ್ವೀ” ಪಾತ್ರವೂ ಕೊನೆಯ ಹಂತದಲ್ಲಿರುವಾಗ ಹಿಂದುತ್ವವಾದವನ್ನು ಅವರಿಗಿಂತ ಹೆಚ್ಚು ಭಾವೋದ್ವೇಗದಿಂದ ಹೇರುವ, ನಾಟಿಸುವ ತಲೆಮಾರಿನ ಅವಶ್ಯಕತೆ ಪರಿವಾರಕ್ಕೆ ಇದೆ. ಈ ಹಂತದಲ್ಲಿ ಬೌದ್ಧಿಕ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಭಾವನಾತ್ಮಕ ಸಾಮರ್ಥ್ಯದ ಅಗತ್ಯವಿದೆ. ಒಂದು ರೀತಿಯ ಮಿಲಿಟೆನ್ಸಿಯ ಅಗತ್ಯವೂ ಇದೆ. ಹೀಗಾಗಿಯೇ ಯಾರೂ ಊಹಿಸದ, ಆದರೆ ಅಂಥಾ ಉದ್ದೇಶಕ್ಕಾಗಿಯೇ ತರಬೇತಾಗಿರುವ ಯೋಗಿ, ಮಣಿಪುರ ಮತ್ತು ತ್ರಿಪುರಾದ ಮುಖ್ಯಮಂತ್ರಿಗಳು ಮುನ್ನೆಲೆಗೆ ಬಂದಿದ್ದು. ಅವರ ಕಾಲಾಳುಗಳಾಗಿ ದೇಶದ ತುಂಬಾ ಲಕ್ಷಾಂತರ ಯುವಕರು ತಯಾರಾಗಿದ್ದಾರೆ.
ಅವರಲ್ಲಿನ ಅನೇಕ ಮುಂದಾಳುಗಳಲ್ಲಿ ಒಬ್ಬ ಸೂರ್ಯ. ಆತನಿಗೆ ಇಂದು ಪ್ರವೇಶ ದೊರೆತಿದೆ. ಅದೇ ಪ್ರಕ್ರಿಯೆಯ ಭಾಗವಾಗಿಯೇ ಪ್ರಗ್ಯಾ ಸಿಂಗ್ ಠಾಕೂರ್ ಅನ್ನು ಕೂಡ ತರಲಾಗಿದೆ. ಒಂದು ವೇಳೆ ಇಂದು ಅನಂತಕುಮಾರ್ ಬದುಕಿದ್ದು, ಅವರನ್ನೂ ಈ ಚುನಾವಣೆಯಲ್ಲಿ ಬದಿಗೆ ಸರಿಸಿದ್ದರೂ ಕೂಡ ಆಶ್ಚರ್ಯವಾಗುತ್ತಿರಲಿಲ್ಲ. ಅದು ಕೂಡ ಆ ಕಾರ್ಯಕ್ರಮದ ಭಾಗವೇ ಆಗಿರುತ್ತಿತ್ತು. ಒಂದೆರಡು ದಿನಗಳ ಪ್ರತಿರೋಧದ ನಂತರ ಪರಿವಾರದೊಳಗೆ ಎಲ್ಲವೂ ತಣ್ಣಗಾಗುತ್ತಿತ್ತು. ಬಹುಶಃ ಈ ಚುನಾವಣೆಯಲ್ಲೇ ಹಾಗಾಗುತ್ತಿರಲಿಲ್ಲ ಎಂದುಕೊಳ್ಳುವುದು ಅವರ ಹತ್ತಿರದವರಿಗೆ ಸಮಾಧಾನ ತರಬಹುದು.
ಬಲಪಂಥೀಯತೆಯನ್ನು ಇಷ್ಟು ಕರಾರುವಾಕ್ಕಾಗಿ ಪಸರಿಸುತ್ತಿರುವ ಈ ಧೀರ್ಘಕಾಲೀನ ಕಾರ್ಯಕ್ರಮಕ್ಕೆ ತತ್ಸಮವಾಗಿ ಎದುರು ನಿಲ್ಲುವಂಥಾ ಮಾನವೀಯ ಕಾರ್ಯಕ್ರಮವೊಂದು ನಮ್ಮ ದೇಶದಲ್ಲಿ ಇನ್ನೂ ಗಟ್ಟಿಗೊಳ್ಳದಿರುವುದು ಶೋಚನೀಯ. ನಮ್ಮ ಯುವಪೀಳಿಗೆಗೆ ಇದನ್ನು ಮನದಟ್ಟು ಮಾಡಿಸುವ ಜವಾಬ್ದಾರಿ ನಮ್ಮ ಮೇಲಿದೆ.
–ಕೇಸರಿ ಹರವು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243