ರಾಜಕೀಯ
ಸ್ವಾತಂತ್ರ್ಯದ ಮೇಲೆ ಪ್ರಹಾರಗಳು- ಈ ಆಗಸ್ಟ್ 15 ರಂದುಮೋದಿ-ಷಾ ಜೋಡಿಯ ಕಾಶ್ಮೀರ ಅತ್ಯಾಚಾರದ ಸಂದೇಶ
- ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೋದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ. ಇಂತಹ ಒಂದು ಸನ್ನಿವೇಶದಲ್ಲಿ, ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳ್ಳುವ ದೃಢನಿರ್ಧಾರ ಮಾಡುವ ದಿನವಾಗಿದೆ.
ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಚಿಂದಿ ಮಾಡಿರುವ, ಬೃಹತ್ ಪ್ರಮಾಣದಲ್ಲಿ ಕಣಿವೆಯ ಜನಗಳಿಗೆ ಬೀಗ ಜಡಿದಿರುವ ಮಬ್ಬಿನಲ್ಲಿ ನಡೆಯುತ್ತಿದೆ. ಕೆಂಪುಕೋಟೆಯಲ್ಲಿ ಈ ಆಗಸ್ಟ್ 15ರಂದು ನರೇಂದ್ರ ಮೋದಿ ತ್ರಿವರ್ಣ ಧ್ವಜವನ್ನು ಆರೋಹಿಸುವಾಗ, ಅತ್ತ ಲಕ್ಷಾಂತರ ಕಾಶ್ಮೀರಿಗಳು ಸತತವಾಗಿ ಹನ್ನೊಂದನೇ ದಿನ ತಮ್ಮ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಸಂಚರಿಸುವ, ತಮಗೆ ಬೇಕಾದವರನ್ನು ಸಂಪರ್ಕಿಸುವ, ಬದುಕು ನಡೆಸಲು ಕೆಲಸ ಮಾಡುವ, ಶಾಲೆಗೆ ಹೋಗುವ, ಆರೋಗ್ಯಪಾಲನೆ ಮತ್ತು ಔಷಧಿಗಳನ್ನು ಪಡೆಯುವ ಅವರ ಹಕ್ಕನ್ನು ಕಳಚಿ ಹಾಕಲಾಗಿದೆ. ಇವೆಲ್ಲವೂ ಸ್ವತಂತ್ರ ಭಾರತದ ನಾಗರಿಕರಾಗಿ ಇರುವ ಮೂಲಭೂತ ಹಕ್ಕುಗಳು.
ನೂರಾರು ಕಾಶ್ಮೀರಿ ರಾಜಕಾರಣಿಗಳು ಮತ್ತು ಕಾರ್ಯಕರ್ತರುಗಳು ಜೈಲುಗಳಲ್ಲಿದ್ದಾರೆ ಅಥವ ಗುಪ್ತಸ್ಥಳಗಳಲ್ಲಿ ಸ್ಥಾನಬದ್ಧತೆಯಲ್ಲಿದ್ದಾರೆ. ಹಲವರನ್ನು ಹೊರಗೊಯ್ದು ಆಗ್ರಾ, ಬರೇಲಿ, ಲಕ್ನೌ ಮುಂತಾದೆಡೆಗಳಲ್ಲಿ ಜೈಲುಗಳಲ್ಲಿ ಇಡಲಾಗಿದೆ. ಅವರೆಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ, ಅವರ ಕುಟುಂಬದವರು, ಸಂಬಂಧಿಕರು ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲವಾಗಿದೆ. ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ.
ಕಾಶ್ಮೀರಿಗಳಿಗೆ ಎಂತಹ ಅವಮಾನ ಮಾಡಲಾಗಿದೆ ಎಂಬುದು ಅವರನ್ನು ರಾಜಕೀಯ ಹಕ್ಕುಗಳನ್ನು ಕಸಿದುಕೊಂಡಿರುವ ರೀತಿಯಲ್ಲಿ ವ್ಯಕ್ತವಾಗುತ್ತದೆ. ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶದ ಮಟ್ಟಕ್ಕೆ ಇಳಿಸಿದ ನಂತರ, ಹೊಸ ವಿಧಾನಸಭೆ ಪುದುಚೇರಿಯ ಮಾದರಿಯಲ್ಲಿ ಇರುತ್ತದೆ, ಉಪರಾಜ್ಯಪಾಲರೆಂಬವರು ಹೇಳಿದ್ದೇ ಆಳ್ವಿಕೆಯಾಗುತ್ತದೆ. ಈ ಮೊಟಕುಗೊಳಿಸಿದ ವಿಧಾನ ಸಭೆಯ ಸಂಯೋಜನೆ ಕೂಡ ಬದಲಾಗಲಿದೆ. ಜಮ್ಮ ಮತ್ತು ಕಾಶ್ಮೀರ ಮರುಸಂಘಟನೆಯ ಮಸೂದೆ ಮತಕ್ಷೇತ್ರಗಳ ಮರುವಿಂಗಡಣೆಗೆ ಅವಕಾಶ ಕಲ್ಪಿಸಿದೆ. ಇದನ್ನು ಚುನಾವಣಾ ಆಯೋಗ ಮಾಡುತ್ತದೆ.
ಹಿಂದಿನ ವಿಧಾನಸಭೆಯ ಬಲ ಜಮ್ಮು ಮತ್ತು ಕಾಶ್ಮೀರ ವಿಭಾಗಗಳಿಂದ 83ಆಗಿತ್ತು. ಅದನ್ನು90ಕ್ಕೆ ಏರಿಸಲಾಗುತ್ತದೆ. ಈ ಮರುವಿಂಗಡಣೆಯ ಕಸರತ್ತಿನಲ್ಲಿ ಜಮ್ಮು ಭಾಗದ ಸೀಟುಗಳ ಸಂಖ್ಯೆ ಏರಲಿದೆ. ಹಿಂದಿನ ವಿಧಾನಸಭೆಯಲ್ಲಿ ಅದು37 ಇತ್ತು. ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸೀಟುಗಳನ್ನು ಪತ್ರ್ಯೇಕಿಸಿದಾಗ, ಕಾಶ್ಮೀರ ಕಣಿವೆಗೆ ಉಳಿಯುವ ಸೀಟುಗಳ ಸಂಖ್ಯೆಯಲ್ಲಿ (ಇದುವರೆಗೆ 46) ಕಡಿತವಾಗುತ್ತದೆ. ಈ ಮೂಲಕ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತದ ಆಶ್ವಾಸನೆ ಸಿಗುವಂತಾಗುತ್ತದೆ. ಉಪರಾಜ್ಯಪಾಲರು ಇಬ್ಬರು ಮಹಿಳಾ ಸದಸ್ಯರನ್ನು ನೇಮಿಸಲು ಅವಕಾಶ ಇರುವುದು ಅದನ್ನು ಇನ್ನಷ್ಟು ಖಾತ್ರಿಗೊಳಿಸುತ್ತದೆ.
ಇನ್ನೊಂದು ಕುಟಿಲ ನಡೆಯೆಂದರೆ, ಕಾಶ್ಮೀರ ಕಣಿವೆಯಲ್ಲಿ ಜನಸಂಖ್ಯಾ ಸಂಯೋಜನೆಯಲ್ಲಿ ಒಂದು ಬದಲಾವಣೆ ತರುವುದು. ಆರ್ಥಿಕ ಅಭಿವೃದ್ಧಿ ಮತ್ತು ಹೂಡಿಕೆಯ ಹೆಸರಲ್ಲಿ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಇರುವ ಜನಗಳು ಕಣಿವೆ ಪ್ರದೇಶಕ್ಕೆ ಬಂದು ಭೂಮಿ ಖರೀದಿಸಲು ಮತ್ತು ನೆಲೆಸಲು ಉತ್ತೇಜನೆ ನೀಡಲಾಗುವುದು. ಅದಾಗಲೇ 2016ರಲ್ಲಿ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಯೋಧರನ್ನು ವಸತಿ ಕಾಲೊನಿಗಳಲ್ಲಿ ನೆಲೆಗೊಳಿಸುವ ಒಂದು ಪ್ರಸ್ತಾವ ಇತ್ತು. ಅದಕ್ಕೆ ಭೂಮಿ ನೀಡುವ ಮಾತೂ ಇತ್ತು. ಕಾಶ್ಮೀರದ ಜನಸಂಖ್ಯಾ ಸಂಯೋಜನೆಯನ್ನು ಬದಲಾಯಿಸುವುದು ಅಥವ ಕಾಶ್ಮೀರಿ ಜನಗಳ ಅಸ್ಮಿತೆಯನ್ನು ದುರ್ಬಲಗೊಳಿಸುವುದು ಇದರ ಗುರಿ.
ಬಹಳ ಕಾಲದಿಂದ ಕಾಶ್ಮೀರಿ ಜನಗಳ ನಾಗರಿಕ ಸ್ವಾತಂತ್ರ್ಯಗಳ ದಮನ ಮತ್ತು ಪ್ರಭುತ್ವದ ದಬ್ಬಾಳಿಕೆ ರೂಢಿಯಾಗಿ ಬಿಟ್ಟಿರುವ ದೇಶದ ಇತರ ಭಾಗಗಳ ಜನರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸನ್ನಿವೇಶ ಹದಗೆಡುತ್ತಿರುವ ಸನ್ನಿವೇಶದ ಮತ್ತೊಂದು ಅಧ್ಯಾಯ ಮಾತ್ರ, ಅದನ್ನು ಕೇಂದ್ರ ಸರಕಾರ ದೃಢವಾಗಿ ನಿಭಾಯಿಸುತ್ತಿದೆ ಎಂದು ಕಾಣಬಹುದು.
ಆದರೆ ಹೀಗೆ ಭಾವಿಸುವುದು ಒಂದು ಪ್ರಮಾದವಾಗುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ-ಭಿನ್ನ ಅಭಿಪ್ರಾಯ ಇರುವವರನ್ನು, ಪ್ರತಿಪಕ್ಷಗಳಿಲ್ಲಿ ಇರುವವರನ್ನು, ಮತ್ತು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಯಾರನ್ನೂ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೊದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ.
ಸ್ವಾತಂತ್ರ್ಯ ದಿನದಂದು, ಕಳೆದ ಐದು ವರ್ಷಗಳ ಸರ್ವಾಧಿಕಾರಶಾಹಿ ಆಳ್ವಿಕೆ ಸಂವಿಧಾನದ ಅಡಿಯಲ್ಲಿರುವ ಎಲ್ಲ ಸಂಸ್ಥೆಗಳನ್ನು ಶಿಥಿಲಗೊಳಿಸುವ ದಾರಿಯಲ್ಲಿ ಸಾಗಿದೆ ಎಂಬುದನ್ನು ವೀಕ್ಷಿಸುವುದು ಕೂಡ ಉಚಿತವಾಗಿದೆ. ಇದರ ಒಂದು ಸಣ್ಣ ಉದಾಹರಣೆಯೆಂದರೆ, ಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಸ್ವಾತಂತ್ರ್ಯಗಳ ಮತ್ತು ಮೂಲಭೂತ ಹಕ್ಕುಗಳ ವ್ಯಾಪಕ ಪ್ರಮಾಣದ ಉಲ್ಲಂಘನೆಗಳನ್ನು ನಿಲ್ಲಿಸಲು ಮಧ್ಯಪ್ರವೇಶಿಸಲು ನಿರಾಕರಿಸಿರುವುದು.
ಇಂತಹ ಒಂದು ಸನ್ನಿವೇಶದಲ್ಲಿ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಜೀವನಾಧಾರದ ಹಕ್ಕೂ ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳುವ್ಳ ದೃಢನಿರ್ಧಾರ ಮಾಡುವ ದಿನವಾಗಿದೆ.
–ಪ್ರಕಾಶ ಕಾರಟ್
- ಕೃಪೆ : ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243