ರಾಜಕೀಯ
ಸಾಮಾಜಿಕ ಜಾಲತಾಣ ಅಭಿಯಾನ | ‘ನನ್ನ ಸಿಎಂ ಸತೀಶ ಜಾರಕಿಹೊಳಿ’
ಸುದ್ದಿದಿನ, ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ಕಾಂಗ್ರೆಸ್ ಶಾಸಕರು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆಗಳ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನಮ್ಮ ಸಿಎಂ ಸಿದ್ದರಾಮಯ್ಯ ಎಂದು ಬರೆದು ಹರಿಬಿಡುತ್ತಿದ್ದಾರೆ.
ಅದೇರೀತಿ ಈಗ ರಾಜ್ಯದ ಮತ್ತೋರ್ವ ಪ್ರಭಾವಿ ಸಚಿವ ಹಾಗೂ ಅಹಿಂದ ನಾಯಕರಾದ ಸತೀಶ್ಜಾರಕಿಹೊಳಿ ಅಭಿಮಾನಿಗಳು ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂದು ಫೇಸ್ಬುಕ್ ಪುಟಗಳಲ್ಲಿ ಬರೆದುಕೊಂಡು ಹರಿಬಿಟ್ಟು, ಜಾರಕಿಹೊಳಿ ಅಭಿಮಾನಿಗಳು ಸಹ ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದೇವೆ ಎಂಬ ಸಂದೇಹ ರವಾನಿಸಿದ್ದಾರೆ.
ಪ್ರಸ್ತುತ ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದಲ್ಲಿ ಪ್ರಬಲ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಸಾರುತ್ತಿದ್ದು, ಪರೋಕ್ಷವಾಗಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಸಮರ ಸಾರುತ್ತಿದ್ದಾರೆ.
https://m.facebook.com/story.php?story_fbid=424351171636910&id=100021860916158
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಗಳಿದರೆ ತಪ್ಪೇನು? ಎಂಬ ವಾದವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದು ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟವಾದರೆ, ಉತ್ತರ ಕರ್ನಾಟಕದ ಜನತೆಯ ಸಂದೇಶವೇ ಭಿನ್ನವಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಕ್ಷಕ ಎಂದೇ ಕರೆಸಿಕೊಳ್ಳುವ ಬೆಳಗಾವಿ ಸಾಹುಕಾರ್, ಸದ್ಯ ದೋಸ್ತಿ ಸರ್ಕಾರದ ಅರಣ್ಯ ಸಚಿವ ಸತೀಶ್ಜಾರಕಿಹೊಳಿ ಬೆಂಬಲಿಗರು ಸತೀಶ್ ಜಾರಕಿಹೊಳಿ ನನ್ನ ಸಿಎಂ ಎಂದು ಫೆಸ್ಬುಕ್ನಲ್ಲಿ ಬರೆದುಕೊಳ್ಳುತ್ತಿದ್ದಾರೆ.
https://m.facebook.com/story.php?story_fbid=105148150612593&id=100033522243207
ಈ ಮೂಲಕ ಉತ್ತರ ಕರ್ನಾಟಕದವರು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ ಎಂಬ ಖಡಕ್ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಿದ್ದಾರೆ.
ಸಚಿವ ಸತೀಶ್ಜಾರಕಿಹೊಳಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ವಿಷಯದ ಮೇಲೆ ಕೆಲ ದಿನಗಳ ಹಿಂದೆ ಚರ್ಚೆ ನಡೆದಾಗ ನಾನಿನ್ನು 10 ವರ್ಷಗಳ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಆಕಾಂಕ್ಷಿ ಎಂದು ಸ್ವತಃ ಸಚಿವರೇ ಸ್ಪಷ್ಟಪಡಿಸಿದ್ದರು.
ಇತ್ತೀಚಿಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಸಮಾರಂಭವೊಂದರಲ್ಲಿ ಅಧಿಕಾರ ಎಲ್ಲರಿಗೂ ಸಿಗಬೇಕು, ಸತೀಶ್ ಕೂಡಾ ಸಿಎಂ ಆಗಬೇಕು ಎಂದು ಹೇಳಿದ್ದರು. ಈ ಹಿಂದೆ ನನ್ನ ಸಹೋದರ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.
https://m.facebook.com/story.php?story_fbid=1912640958861486&id=100003468012703
ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂಬ ಆರೋಪವಿದೆ. ಆದ್ದರಿಂದ ಪ್ರತ್ಯೇಕ ರಾಜ್ಯದ ಕೂಗು ಕೂಡಾ ಕೇಳಿ ಬರುತ್ತಿದೆ. ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟಕ್ಕೆ ಉತ್ತರ ಕರ್ನಾಟಕದವರು ನನ್ನ ಸಿಎಂ ಸತೀಶ್ ಜಾರಕಿಹೊಳಿ ಎಂದು ಹೇಳುವ ಮೂಲಕ ನಮಗೂ ಒಂದು ಅವಕಾಶ ನೀಡಬೇಕೆಂಬ ಸಂದೇಶ ರವಾನಿಸಿದ್ದಾರೆ.
ನಾನು ಮುಖ್ಯಮಂತ್ರಿ ಆಗೋದಿಕ್ಕೆ ನಮ್ಮ ಪಕ್ಷ ಬೆಂಬಲವಿದೆ#ನಮ್ಮ ಸಿ.ಎಂ ಸತೀಶ್ ಜಾರಕಿಹೊಳಿನಮ್ಮ ಸಿ, ಎಂ "ಸತೀಶ್ ಜಾರಕಿಹೊಳಿ"…
Posted by ಕರ್ನಾಟಕ ಸತೀಶ್ ಜಾರಕಿಹೊಳಿ ಯುವ ಸೈನ್ಯ on Sunday, 3 February 2019
ಪೊಲಿಟಿಕಲ್ ಕಿಂಗ್ ಮೇಕರ್ ಹಾಗೂ ಮಾಸ್ಟರ್ ಮೈಂಡ್ ಎಂದೇ ತಮ್ಮ ನಡೆಯಿಂದ ಕರೆಸಿಕೊಳ್ಳುವ ಸತೀಶ್ ಜಾರಕಿಹೊಳಿ ಇಡೀ ರಾಜ್ಯದ ತುಂಬಾ ತಮ್ಮ ಬೆಂಬಲಿಗರನ್ನು ಹೊಂದಿದ್ದಾರೆ. ರಾಜ್ಯದ ಸಾಕಷ್ಟು ಮತಕ್ಷೇತ್ರಗಳಲ್ಲಿ ಇವರೇ ನಿರ್ಣಯಕ. ಎಲ್ಲಾ ಸಮುದಾಯಗಳ ಪರ ನಿಲ್ಲುವ ಅದರಲ್ಲಿಯೂ ವಾಲ್ಮೀಕಿ ನಾಯಕ ಸಮುದಾಯದ ಪ್ರಶ್ನಾತೀತ ನಾಯಕ ಎಂದರೆ ತಪ್ಪಾಗಲಾರದು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸಚಿವರ ಅಭಿಮಾನಿಗಳಿದ್ದು, ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂಬ ಅಭಿಯಾನದ ಕೂಗು ಹೆಚ್ಚಾಗಿ ತೀವ್ರ ಸ್ವರೂಪ ಪಡೆದುಕೊಂಡರು ಅಚ್ಚರಿಪಡಬೇಕಿಲ್ಲ.
https://m.facebook.com/story.php?story_fbid=2249690161910902&id=100006098199391
“ಸತೀಶ್ ಜಾರಕಿಹೊಳಿ ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ರಾಜ್ಯಾದ್ಯಂತ ಇದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಂತೆ ಸಚಿವರು ಸಹ ಅಹಿಂದ ನಾಯಕರಿದ್ದಾರೆ. ಅಲ್ಲದೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದವರು ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅದರಂತೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಮುಖ್ಯಮಂತ್ರಿ ಪಟ್ಟಾ ಸಿಗಬೇಕಿದೆ ಎಂಬುದು ಅವರೆಲ್ಲ ಅಭಿಮಾನಿಗಳ ಬಯಕೆ. ಪ್ರತಿಬಾರಿ ಅಸಮಾಧಾನಗೊಂಡಾಗಲೆಲ್ಲ ಮೂಗಿಗೆ ತುಪ್ಪ ಸವರುವ ಕೆಲಸ ಆಗುತ್ತಿದೆ. ತಕ್ಷಣಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕೆಂಬುದು ನಮ್ಮ ಅಭಿಪ್ರಾಯವಲ್ಲ. ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮೊದಲ ಆದ್ಯತೆ ನೀಡಬೇಕಿದೆ”.
|ರಾಘುದೊಡ್ಮನಿ,ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ದಾವಣಗೆರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243